AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಯಾರಿಂದಲೂ ಗುಣವಾಗಿಲ್ಲ, ಕೊನೆಗೆ ಹಳ್ಳಿ ವೈದ್ಯರ ಮೊರೆ ಹೋದ ಧೋನಿ..!

Ms Dhoni: ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ.

TV9 Web
| Edited By: |

Updated on:Jun 30, 2022 | 2:34 PM

Share
ಐಪಿಎಲ್ ಸೀಸನ್ 15 ಬಳಿಕ ಎಂಎಸ್ ಧೋನಿ ತಮ್ಮ ಹುಟ್ಟೂರು ರಾಂಚಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತಮ್ಮ  ಹಳೆಯ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದ ಧೋನಿ, ಇದೀಗ ಚಿಕಿತ್ಸೆ ಪಡೆಯುತ್ತಿರುವ ವಿಚಾರದಿಂದ ಸುದ್ದಿಯಾಗಿದ್ದಾರೆ.

ಐಪಿಎಲ್ ಸೀಸನ್ 15 ಬಳಿಕ ಎಂಎಸ್ ಧೋನಿ ತಮ್ಮ ಹುಟ್ಟೂರು ರಾಂಚಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತಮ್ಮ ಹಳೆಯ ಸ್ನೇಹಿತರೊಂದಿಗೆ ಕಾಣಿಸಿಕೊಂಡಿದ್ದ ಧೋನಿ, ಇದೀಗ ಚಿಕಿತ್ಸೆ ಪಡೆಯುತ್ತಿರುವ ವಿಚಾರದಿಂದ ಸುದ್ದಿಯಾಗಿದ್ದಾರೆ.

1 / 5
ಧೋನಿಯು ಕಳೆದ ಕೆಲ ವರ್ಷಗಳಿಂದ ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಾಣಲು ಯಾವುದೇ ದೊಡ್ಡ ವೈದ್ಯರು ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬದಲು ಸಾಮಾನ್ಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ವಿಶೇಷ.

ಧೋನಿಯು ಕಳೆದ ಕೆಲ ವರ್ಷಗಳಿಂದ ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕಾಣಲು ಯಾವುದೇ ದೊಡ್ಡ ವೈದ್ಯರು ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬದಲು ಸಾಮಾನ್ಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದು ವಿಶೇಷ.

2 / 5
ಮೊಣಕಾಲು ನೋವಿನ ಚಿಕಿತ್ಸೆಗಾಗಿ ಧೋನಿ ಪ್ರತಿ 4 ದಿನಗಳಿಗೊಮ್ಮೆ ಹಳ್ಳಿ ವೈದ್ಯರನ್ನು ಭೇಟಿ ಮಾಡುತ್ತಿದ್ದಾರೆ.  ವಿಶೇಷ ಎಂದರೆ ಆ ವೈದ್ಯರು ಧೋನಿಯ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತ ಕೇವಲ 40 ರೂ. ಮಾತ್ರ. ಅಂದರೆ 40 ರೂ. ವೈದ್ಯ ಎಂದೇ ಖ್ಯಾತಿ ಪಡೆದಿರುವ ವೈದ್ಯರು, ಕೋಟ್ಯಧಿಪತಿ ಧೋನಿ ಅವರಿಂದಲೂ ಅಷ್ಟೇ ಶುಲ್ಕ ಪಡೆಯುತ್ತಿದ್ದಾರೆ.

ಮೊಣಕಾಲು ನೋವಿನ ಚಿಕಿತ್ಸೆಗಾಗಿ ಧೋನಿ ಪ್ರತಿ 4 ದಿನಗಳಿಗೊಮ್ಮೆ ಹಳ್ಳಿ ವೈದ್ಯರನ್ನು ಭೇಟಿ ಮಾಡುತ್ತಿದ್ದಾರೆ. ವಿಶೇಷ ಎಂದರೆ ಆ ವೈದ್ಯರು ಧೋನಿಯ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತ ಕೇವಲ 40 ರೂ. ಮಾತ್ರ. ಅಂದರೆ 40 ರೂ. ವೈದ್ಯ ಎಂದೇ ಖ್ಯಾತಿ ಪಡೆದಿರುವ ವೈದ್ಯರು, ಕೋಟ್ಯಧಿಪತಿ ಧೋನಿ ಅವರಿಂದಲೂ ಅಷ್ಟೇ ಶುಲ್ಕ ಪಡೆಯುತ್ತಿದ್ದಾರೆ.

3 / 5
ರಾಂಚಿಯಿಂದ ಸುಮಾರು 70 ಕಿಮೀ ದೂರದಲ್ಲಿರುವ ಲಪುಂಗ್‌ನ ಕಟಿಂಗ್‌ಕೆಲಾದ ಬಾಬಾ ಗಲ್ಗಾಲಿ ಧಾಮ್‌ನಲ್ಲಿರುವ ವಂದನ್ ಸಿಂಗ್ ಖೇರ್ವಾರ್ ಅವರಿಂದ ಧೋನಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕಳೆದ 1 ತಿಂಗಳಿನಿಂದ ಧೋನಿ ಪ್ರತಿ 4 ದಿನಗಳಿಗೊಮ್ಮೆ ತಮ್ಮ ಬಳಿಗೆ ಬರುತ್ತಾರೆ. ಅಲ್ಲದೆ ಗಿಡಮೂಲಿಕೆ ಔಷಧಿಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಂದನ್ ಅವರು ತಿಳಿಸಿದ್ದಾರೆ.

ರಾಂಚಿಯಿಂದ ಸುಮಾರು 70 ಕಿಮೀ ದೂರದಲ್ಲಿರುವ ಲಪುಂಗ್‌ನ ಕಟಿಂಗ್‌ಕೆಲಾದ ಬಾಬಾ ಗಲ್ಗಾಲಿ ಧಾಮ್‌ನಲ್ಲಿರುವ ವಂದನ್ ಸಿಂಗ್ ಖೇರ್ವಾರ್ ಅವರಿಂದ ಧೋನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 1 ತಿಂಗಳಿನಿಂದ ಧೋನಿ ಪ್ರತಿ 4 ದಿನಗಳಿಗೊಮ್ಮೆ ತಮ್ಮ ಬಳಿಗೆ ಬರುತ್ತಾರೆ. ಅಲ್ಲದೆ ಗಿಡಮೂಲಿಕೆ ಔಷಧಿಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಂದನ್ ಅವರು ತಿಳಿಸಿದ್ದಾರೆ.

4 / 5
 ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ 2023 ರ ಮೊದಲು ತಮ್ಮ ಮೊಣಕಾಲಿನ ನೋವಿನ ಸಮಸ್ಯೆಯನ್ನು ಹೋಗಲಾಡಿಸಲು ಹಳ್ಳಿ ವೈದ್ಯರ ಮೊರೆ ಹೋಗಿದ್ದಾರೆ. ಅದು ಕೂಡ 40 ರೂ. ನೀಡುವ ಮೂಲಕ ಎಂಬುದು ವಿಶೇಷ.

ಎಂಎಸ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಐಪಿಎಲ್‌ನಲ್ಲಿ ಇನ್ನೂ ಕೂಡ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಐಪಿಎಲ್ 2023 ರ ಮೊದಲು ತಮ್ಮ ಮೊಣಕಾಲಿನ ನೋವಿನ ಸಮಸ್ಯೆಯನ್ನು ಹೋಗಲಾಡಿಸಲು ಹಳ್ಳಿ ವೈದ್ಯರ ಮೊರೆ ಹೋಗಿದ್ದಾರೆ. ಅದು ಕೂಡ 40 ರೂ. ನೀಡುವ ಮೂಲಕ ಎಂಬುದು ವಿಶೇಷ.

5 / 5

Published On - 2:22 pm, Thu, 30 June 22

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ