AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!

Muhammad Abbas Record: ಪಾಕಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ 344 ರನ್ ಕಲೆಹಾಕಿದರೆ, ಪಾಕಿಸ್ತಾನ್ 271 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಕಿವೀಸ್ ಪಡೆ 73 ರನ್​ಗಳ ಗೆಲುವು ದಾಖಲಿಸಿದೆ. ಇನ್ನು ಈ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ ಮುಹಮ್ಮದ್ ಅಬ್ಬಾಸ್ ಭರ್ಜರಿ ದಾಖಲೆಯನ್ನು ನಿರ್ಮಿಸಿ ಮಿಂಚಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 29, 2025 | 1:54 PM

Share
ನೇಪಿಯರ್​ನ ಮೆಕ್​ಲೀನ್ ಪಾರ್ಕ್ ಮೈದಾನದಲ್ಲಿ ನಡೆದ ಪಾಕಿಸ್ತಾನ್ (Pakistan) ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಬಾರಿಸಿ ಮುಹಮ್ಮದ್ ಅಬ್ಬಾಸ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಪಾದಾರ್ಪಣೆ ಪಂದ್ಯದಲ್ಲಿ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಎಂಬುದು ವಿಶೇಷ.

ನೇಪಿಯರ್​ನ ಮೆಕ್​ಲೀನ್ ಪಾರ್ಕ್ ಮೈದಾನದಲ್ಲಿ ನಡೆದ ಪಾಕಿಸ್ತಾನ್ (Pakistan) ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಬಾರಿಸಿ ಮುಹಮ್ಮದ್ ಅಬ್ಬಾಸ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಪಾದಾರ್ಪಣೆ ಪಂದ್ಯದಲ್ಲಿ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಎಂಬುದು ವಿಶೇಷ.

1 / 5
ಪಾಕಿಸ್ತಾನ್ ವಿರುದ್ಧದ ಈ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಮುಹಮ್ಮದ್ ಅಬ್ಬಾಸ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಚೊಚ್ಚಲ ಏಕದಿನ ಪಂದ್ಯದಲ್ಲೇ ಅತೀ ಕಡಿಮೆ ಎಸೆತದಲ್ಲಿ ಅರ್ಧಶತಕ ಬಾರಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಪಾಕಿಸ್ತಾನ್ ವಿರುದ್ಧದ ಈ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಮುಹಮ್ಮದ್ ಅಬ್ಬಾಸ್ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಚೊಚ್ಚಲ ಏಕದಿನ ಪಂದ್ಯದಲ್ಲೇ ಅತೀ ಕಡಿಮೆ ಎಸೆತದಲ್ಲಿ ಅರ್ಧಶತಕ ಬಾರಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

2 / 5
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಕೃನಾಲ್ ಪಾಂಡ್ಯ ಹೆಸರಿನಲ್ಲಿತ್ತು. 2021 ರಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಪಾಂಡ್ಯ ಕೇವಲ 26 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಮುಹಮ್ಮದ್ ಅಬ್ಬಾಸ್ ಈ ದಾಖಲೆ ಮುರಿದಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಕೃನಾಲ್ ಪಾಂಡ್ಯ ಹೆಸರಿನಲ್ಲಿತ್ತು. 2021 ರಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಪಾಂಡ್ಯ ಕೇವಲ 26 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಮುಹಮ್ಮದ್ ಅಬ್ಬಾಸ್ ಈ ದಾಖಲೆ ಮುರಿದಿದ್ದಾರೆ.

3 / 5
ಪಾಕಿಸ್ತಾನ್ ವಿರುದ್ಧ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಚೊಚ್ಚಲ ಏಕದಿನ ಪಂದ್ಯದಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಮುಹಮ್ಮದ್ ಅಬ್ಬಾಸ್ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ 26 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 52 ರನ್ ಬಾರಿಸಿ ಮಿಂಚಿದರು.

Abbasಪಾಕಿಸ್ತಾನ್ ವಿರುದ್ಧ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಚೊಚ್ಚಲ ಏಕದಿನ ಪಂದ್ಯದಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಮುಹಮ್ಮದ್ ಅಬ್ಬಾಸ್ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ 26 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 52 ರನ್ ಬಾರಿಸಿ ಮಿಂಚಿದರು.

4 / 5
ವಿಶೇಷ ಎಂದರೆ ಮುಹಮ್ಮದ್ ಅಬ್ಬಾಸ್ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಝರ್ ಅಬ್ಬಾಸ್ ಅವರ ಸುಪುತ್ರ. 90ರ ದಶಕದಲ್ಲಿ ಪಾಕ್​ನಲ್ಲಿ ಆಡಿದ್ದ ಅಝರ್ ಆ ಬಳಿಕ ನ್ಯೂಝಿಲೆಂಡ್​ಗೆ ವಲಸೆ ಹೋಗಿದ್ದರು. ಅಲ್ಲಿನ ಪೌರತ್ವವನ್ನು ಪಡೆದಿದ್ದರು. ಇದೀಗ ಅಝರ್ ಅಬ್ಬಾಸ್ ಅವರ ಪುತ್ರ ಮುಹಮ್ಮದ್ ಅಬ್ಬಾಸ್ ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ನ್ಯೂಝಿಲೆಂಡ್ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದಾರೆ. ಅದು ಕೂಡ ವಿಶ್ವ ದಾಖಲೆಯೊಂದಿಗೆ ಎಂಬುದು ವಿಶೇಷ.

ವಿಶೇಷ ಎಂದರೆ ಮುಹಮ್ಮದ್ ಅಬ್ಬಾಸ್ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಝರ್ ಅಬ್ಬಾಸ್ ಅವರ ಸುಪುತ್ರ. 90ರ ದಶಕದಲ್ಲಿ ಪಾಕ್​ನಲ್ಲಿ ಆಡಿದ್ದ ಅಝರ್ ಆ ಬಳಿಕ ನ್ಯೂಝಿಲೆಂಡ್​ಗೆ ವಲಸೆ ಹೋಗಿದ್ದರು. ಅಲ್ಲಿನ ಪೌರತ್ವವನ್ನು ಪಡೆದಿದ್ದರು. ಇದೀಗ ಅಝರ್ ಅಬ್ಬಾಸ್ ಅವರ ಪುತ್ರ ಮುಹಮ್ಮದ್ ಅಬ್ಬಾಸ್ ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ನ್ಯೂಝಿಲೆಂಡ್ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದಾರೆ. ಅದು ಕೂಡ ವಿಶ್ವ ದಾಖಲೆಯೊಂದಿಗೆ ಎಂಬುದು ವಿಶೇಷ.

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್