AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024 Final: ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್..!

Ranji Trophy 2024 Final: ರಣಜಿ ಟ್ರೋಫಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿರುವ ಸರ್ಫರಾಜ್ ಖಾನ್ ಸಹೋದರ ಮುಶೀರ್ ಖಾನ್, ವಿದರ್ಭ ವಿರುದ್ಧದ ಫೈನಲ್ ಪಂದ್ಯದ 2ನೇ ಇನ್ನಿಂಗ್ಸ್​ನಲ್ಲಿ 326 ಎಸೆತಗಳಲ್ಲಿ 10 ಬೌಂಡರಿ ಸಹಿತ 136 ರನ್​ಗಳ ಅಮೋಘ ಇನ್ನಿಂಗ್ಸ್ ಆಡಿದರು. ಈ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದರು.

ಪೃಥ್ವಿಶಂಕರ
|

Updated on: Mar 13, 2024 | 5:36 PM

Share
ಅಂಡರ್-19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ಅಮೋಘ ಪ್ರದರ್ಶನ ನೀಡಿದ್ದ ಯುವ ಆಲ್​ರೌಂಡರ್ ಮುಶೀರ್ ಖಾನ್, ಇದೀಗ ರಣಜಿ ಟ್ರೋಫಿಯಲ್ಲೂ ತಮ್ಮ ಅದ್ಭುತ ಫಾರ್ಮ್​ ಮುಂದುವರೆಸಿದ್ದಾರೆ. ಮುಂಬೈ ಮತ್ತು ವಿದರ್ಭ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿರುವ ಮುಶೀರ್ ಖಾನ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ 29 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

ಅಂಡರ್-19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ಅಮೋಘ ಪ್ರದರ್ಶನ ನೀಡಿದ್ದ ಯುವ ಆಲ್​ರೌಂಡರ್ ಮುಶೀರ್ ಖಾನ್, ಇದೀಗ ರಣಜಿ ಟ್ರೋಫಿಯಲ್ಲೂ ತಮ್ಮ ಅದ್ಭುತ ಫಾರ್ಮ್​ ಮುಂದುವರೆಸಿದ್ದಾರೆ. ಮುಂಬೈ ಮತ್ತು ವಿದರ್ಭ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿರುವ ಮುಶೀರ್ ಖಾನ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ 29 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

1 / 6
ರಣಜಿ ಟ್ರೋಫಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿರುವ ಸರ್ಫರಾಜ್ ಖಾನ್ ಸಹೋದರ ಮುಶೀರ್ ಖಾನ್, ವಿದರ್ಭ ವಿರುದ್ಧದ ಫೈನಲ್ ಪಂದ್ಯದ 2ನೇ ಇನ್ನಿಂಗ್ಸ್​ನಲ್ಲಿ 326 ಎಸೆತಗಳಲ್ಲಿ 10 ಬೌಂಡರಿ ಸಹಿತ 136 ರನ್​ಗಳ ಅಮೋಘ ಇನ್ನಿಂಗ್ಸ್ ಆಡಿದರು. ಈ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದರು.

ರಣಜಿ ಟ್ರೋಫಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿರುವ ಸರ್ಫರಾಜ್ ಖಾನ್ ಸಹೋದರ ಮುಶೀರ್ ಖಾನ್, ವಿದರ್ಭ ವಿರುದ್ಧದ ಫೈನಲ್ ಪಂದ್ಯದ 2ನೇ ಇನ್ನಿಂಗ್ಸ್​ನಲ್ಲಿ 326 ಎಸೆತಗಳಲ್ಲಿ 10 ಬೌಂಡರಿ ಸಹಿತ 136 ರನ್​ಗಳ ಅಮೋಘ ಇನ್ನಿಂಗ್ಸ್ ಆಡಿದರು. ಈ ಮೂಲಕ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದರು.

2 / 6
ಫೈನಲ್ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದ ಮುಶೀರ್ ಖಾನ್​ಗೆ ಪ್ರಸಕ್ತ ರಣಜಿಯಲ್ಲಿ ಇದು ಎರಡನೇ ಶತಕವಾಗಿದೆ. ಇದಕ್ಕೂ ಮುನ್ನ ಬರೋಡಾ ವಿರುದ್ಧದ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಮುಶೀರ್ ದ್ವಿಶತಕದ ಇನ್ನಿಂಗ್ಸ್ ಆಡಿದ್ದರು.

ಫೈನಲ್ ಪಂದ್ಯದಲ್ಲಿ ಶತಕದ ಇನ್ನಿಂಗ್ಸ್ ಆಡಿದ ಮುಶೀರ್ ಖಾನ್​ಗೆ ಪ್ರಸಕ್ತ ರಣಜಿಯಲ್ಲಿ ಇದು ಎರಡನೇ ಶತಕವಾಗಿದೆ. ಇದಕ್ಕೂ ಮುನ್ನ ಬರೋಡಾ ವಿರುದ್ಧದ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಮುಶೀರ್ ದ್ವಿಶತಕದ ಇನ್ನಿಂಗ್ಸ್ ಆಡಿದ್ದರು.

3 / 6
ಈ ಮೂಲಕ ಮುಶೀರ್ ಅತಿ ಕಡಿಮೆ ವಯಸ್ಸಿನಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ.  1994-95 ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ 21ನೇ ವಯಸ್ಸಿನಲ್ಲಿ ಪಂಜಾಬ್ ವಿರುದ್ಧ 140 ರನ್​ಗಳ ಇನ್ನಿಂಗ್ಸ್ ಆಡಿದ್ದರು.

ಈ ಮೂಲಕ ಮುಶೀರ್ ಅತಿ ಕಡಿಮೆ ವಯಸ್ಸಿನಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. 1994-95 ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ 21ನೇ ವಯಸ್ಸಿನಲ್ಲಿ ಪಂಜಾಬ್ ವಿರುದ್ಧ 140 ರನ್​ಗಳ ಇನ್ನಿಂಗ್ಸ್ ಆಡಿದ್ದರು.

4 / 6
ಇದೀಗ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿರುವ ಮುಶೀರ್ 19 ವರ್ಷ 14 ದಿನಗಳಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿ, ರಣಜಿ ಫೈನಲ್​ನಲ್ಲಿ ಶತಕ ಬಾರಿಸಿದ ಅತೀ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

ಇದೀಗ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿರುವ ಮುಶೀರ್ 19 ವರ್ಷ 14 ದಿನಗಳಲ್ಲಿ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಶತಕ ಬಾರಿಸಿ, ರಣಜಿ ಫೈನಲ್​ನಲ್ಲಿ ಶತಕ ಬಾರಿಸಿದ ಅತೀ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.

5 / 6
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಪಂದ್ಯದಲ್ಲಿ ಇಲ್ಲಿಯವರೆಗೆ ಮುಂಬೈ ಮೇಲುಗೈ ಸಾಧಿಸಿದೆ. ವಿದರ್ಭ ಗೆಲುವಿಗೆ ಮುಂಬೈ 538 ರನ್​ಗಳ ಗುರಿ ನೀಡಿದ್ದು, ಈ ಗುರಿ ಬೆನ್ನಟ್ಟಿರುವ ವಿದರ್ಭ ತಂಡ 4ನೇ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 248 ರನ್ ಕಲೆಹಾಕಿದೆ. ಕೊನೆಯ ದಿನದಲ್ಲಿ ವಿದರ್ಭ ತಂಡ 90 ಓವರ್​ಗಳಲ್ಲಿ 290 ರನ್ ಕಲೆಹಾಕಬೇಕಿದೆ.

ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ.. ಪಂದ್ಯದಲ್ಲಿ ಇಲ್ಲಿಯವರೆಗೆ ಮುಂಬೈ ಮೇಲುಗೈ ಸಾಧಿಸಿದೆ. ವಿದರ್ಭ ಗೆಲುವಿಗೆ ಮುಂಬೈ 538 ರನ್​ಗಳ ಗುರಿ ನೀಡಿದ್ದು, ಈ ಗುರಿ ಬೆನ್ನಟ್ಟಿರುವ ವಿದರ್ಭ ತಂಡ 4ನೇ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 248 ರನ್ ಕಲೆಹಾಕಿದೆ. ಕೊನೆಯ ದಿನದಲ್ಲಿ ವಿದರ್ಭ ತಂಡ 90 ಓವರ್​ಗಳಲ್ಲಿ 290 ರನ್ ಕಲೆಹಾಕಬೇಕಿದೆ.

6 / 6
Follow Us
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ