AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ನಲ್ಲಿ ಹೊಸ ಇತಿಹಾಸ ರಚಿಸಿದ ಮುಂಬೈ ಇಂಡಿಯನ್ಸ್

IPL 2025 MI vs LSG: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 45ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 215 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 161 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Apr 28, 2025 | 10:24 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​​ನ 45ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಮುಂಬೈ ಇಂಡಿಯನ್ಸ್ (MI) ತಂಡ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​​ನ 45ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಮುಂಬೈ ಇಂಡಿಯನ್ಸ್ (MI) ತಂಡ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 7
ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ಆರಂಭಿಕ ದಾಂಡಿಗ ರಯಾನ್ ರಿಕೆಲ್ಟನ್ (58) ಅರ್ಧಶತಕ ಬಾರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 54 ರನ್​ ಚಚ್ಚಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 20 ಓವರ್​ಗಳಲ್ಲಿ 215 ರನ್ ಕಲೆಹಾಕಿತು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ಆರಂಭಿಕ ದಾಂಡಿಗ ರಯಾನ್ ರಿಕೆಲ್ಟನ್ (58) ಅರ್ಧಶತಕ ಬಾರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ 28 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 54 ರನ್​ ಚಚ್ಚಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 20 ಓವರ್​ಗಳಲ್ಲಿ 215 ರನ್ ಕಲೆಹಾಕಿತು.

2 / 7
ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಎಲ್​ಎಸ್​ಜಿ ಪಡೆ 10 ಓವರ್​ಗಳಲ್ಲಿ 100 ರನ್​ಗಳ ಗಡಿ ತಲುಪಿತ್ತು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಲಕ್ನೋ ಸೂಪರ್ ಜೈಂಟ್ಸ್ ತಂಡವು 161 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 54 ರನ್​ಗಳ ಜಯ ಸಾಧಿಸಿದೆ.

ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಇದಾಗ್ಯೂ ಎಲ್​ಎಸ್​ಜಿ ಪಡೆ 10 ಓವರ್​ಗಳಲ್ಲಿ 100 ರನ್​ಗಳ ಗಡಿ ತಲುಪಿತ್ತು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಲಕ್ನೋ ಸೂಪರ್ ಜೈಂಟ್ಸ್ ತಂಡವು 161 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ 54 ರನ್​ಗಳ ಜಯ ಸಾಧಿಸಿದೆ.

3 / 7
ಈ ಗೆಲುವಿನೊಂದಿಗೆ ಐಪಿಎಲ್​​ ಇತಿಹಾಸದಲ್ಲಿ 150 ಪಂದ್ಯಗಳಲ್ಲಿ ಜಯ ಸಾಧಿಸಿದ ಮೊದಲ ತಂಡವೆಂಬ ಕೀರ್ತಿಯನ್ನು ಮುಂಬೈ ಇಂಡಿಯನ್ಸ್ ತನ್ನದಾಗಿಸಿಕೊಂಡಿದೆ. ಮುಂಬೈ ಪಡೆ ಐಪಿಎಲ್​ನಲ್ಲಿ ಈವರೆಗೆ 271 ಪಂದ್ಯಗಳನ್ನಾಡಿದ್ದು, ಈ ವೇಳೆ 150 ಪಂದ್ಯಗಳಲ್ಲಿ ಗೆಲುವು ಹಾಗೂ 119 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ.

ಈ ಗೆಲುವಿನೊಂದಿಗೆ ಐಪಿಎಲ್​​ ಇತಿಹಾಸದಲ್ಲಿ 150 ಪಂದ್ಯಗಳಲ್ಲಿ ಜಯ ಸಾಧಿಸಿದ ಮೊದಲ ತಂಡವೆಂಬ ಕೀರ್ತಿಯನ್ನು ಮುಂಬೈ ಇಂಡಿಯನ್ಸ್ ತನ್ನದಾಗಿಸಿಕೊಂಡಿದೆ. ಮುಂಬೈ ಪಡೆ ಐಪಿಎಲ್​ನಲ್ಲಿ ಈವರೆಗೆ 271 ಪಂದ್ಯಗಳನ್ನಾಡಿದ್ದು, ಈ ವೇಳೆ 150 ಪಂದ್ಯಗಳಲ್ಲಿ ಗೆಲುವು ಹಾಗೂ 119 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ.

4 / 7
ಇನ್ನು ಐಪಿಎಲ್​ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್. ಸಿಎಸ್​ಕೆ ತಂಡವು ಈವರೆಗೆ 248 ಪಂದ್ಯಗಳನ್ನಾಡಿದ್ದು, ಈ ವೇಳೆ 140 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 105 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ.

ಇನ್ನು ಐಪಿಎಲ್​ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಚೆನ್ನೈ ಸೂಪರ್ ಕಿಂಗ್ಸ್. ಸಿಎಸ್​ಕೆ ತಂಡವು ಈವರೆಗೆ 248 ಪಂದ್ಯಗಳನ್ನಾಡಿದ್ದು, ಈ ವೇಳೆ 140 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 105 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ.

5 / 7
ಹಾಗೆಯೇ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ. ಕೆಕೆಆರ್ ತಂಡವು ಈವರೆಗೆ 261 ಪಂದ್ಯಗಳನ್ನಾಡಿದ್ದು, ಈ ವೇಳೆ 134 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 122 ಪಂದ್ಯಗಳಲ್ಲಿ ಸೋಲನುಭವಿಸಿದೆ. 

ಹಾಗೆಯೇ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ. ಕೆಕೆಆರ್ ತಂಡವು ಈವರೆಗೆ 261 ಪಂದ್ಯಗಳನ್ನಾಡಿದ್ದು, ಈ ವೇಳೆ 134 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 122 ಪಂದ್ಯಗಳಲ್ಲಿ ಸೋಲನುಭವಿಸಿದೆ. 

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿದೆ. ಆರ್​ಸಿಬಿ ತಂಡ ಈವರೆಗೆ 266 ಪಂದ್ಯಗಳನ್ನಾಡಿದ್ದು, ಈ ವೇಳೆ 129 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 131 ಮ್ಯಾಚ್​ಗಳಲ್ಲಿ ಪರಾಜಯಗೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿದೆ. ಆರ್​ಸಿಬಿ ತಂಡ ಈವರೆಗೆ 266 ಪಂದ್ಯಗಳನ್ನಾಡಿದ್ದು, ಈ ವೇಳೆ 129 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 131 ಮ್ಯಾಚ್​ಗಳಲ್ಲಿ ಪರಾಜಯಗೊಂಡಿದೆ.

7 / 7
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ