AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಮುಂಬೈ ಇಂಡಿಯನ್ಸ್ ಆಟಗಾರನ ಬ್ಯಾನ್ ಮಾಡಿದ ಪಾಕಿಸ್ತಾನ್

IPL 2025 vs PSL 2025: IPL 2025: ಸೌತ್ ಆಫ್ರಿಕಾ ವೇಗಿ ಕಾರ್ಬಿನ್ ಬಾಷ್ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ಬದಲಿ ಆಟಗಾರನಾಗಿ ಎಂಬುದು ವಿಶೇಷ. ಆದರೆ ಇದಕ್ಕೂ ಮುನ್ನ ಪಾಕಿಸ್ತಾನ್ ಸೂಪರ್ ಲೀಗ್ ಆಡಲು ಸಹಿ ಮಾಡಿಕೊಂಡಿದ್ದಾರೆ. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚಾನ್ಸ್ ಸಿಗುತ್ತಿದ್ದಂತೆ ಕಾರ್ಬಿನ್ ಬಾಷ್ ಪಿಎಸ್​ಎಲ್​ಗೆ ಕೈ ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on:Apr 12, 2025 | 9:06 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಕಾರ್ಬಿನ್ ಬಾಷ್ (Corbin Bosch) ಅವರನ್ನು ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಒಂದು ವರ್ಷ ಬ್ಯಾನ್ ಮಾಡಲಾಗಿದೆ. ಇದಕ್ಕೆ ಮುಖ್ಯ ಕಾರಣ ಬಾಷ್ PSL 2025 ಕ್ಕೆ ಕೈ ಕೊಟ್ಟಿರುವುದು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಕಾರ್ಬಿನ್ ಬಾಷ್ (Corbin Bosch) ಅವರನ್ನು ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಒಂದು ವರ್ಷ ಬ್ಯಾನ್ ಮಾಡಲಾಗಿದೆ. ಇದಕ್ಕೆ ಮುಖ್ಯ ಕಾರಣ ಬಾಷ್ PSL 2025 ಕ್ಕೆ ಕೈ ಕೊಟ್ಟಿರುವುದು.

1 / 5
ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬಾಷ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಹೀಗಾಗಿ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್​ಗೆ ಹೆಸರು ನೀಡಿದ್ದರು. ಅದರಂತೆ ಪಿಎಸ್​ಎಲ್​ನ ಪೇಶಾವರ್ ಝಲ್ಮಿ ಫ್ರಾಂಚೈಸಿಯು ಬಾಷ್ ಅವರನ್ನು ಮುಂಬರುವ ಟೂರ್ನಿಗೆ ಆಯ್ಕೆ ಮಾಡಿಕೊಂಡಿದ್ದರು.

ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬಾಷ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಹೀಗಾಗಿ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್​ಗೆ ಹೆಸರು ನೀಡಿದ್ದರು. ಅದರಂತೆ ಪಿಎಸ್​ಎಲ್​ನ ಪೇಶಾವರ್ ಝಲ್ಮಿ ಫ್ರಾಂಚೈಸಿಯು ಬಾಷ್ ಅವರನ್ನು ಮುಂಬರುವ ಟೂರ್ನಿಗೆ ಆಯ್ಕೆ ಮಾಡಿಕೊಂಡಿದ್ದರು.

2 / 5
ಇದರ ನಡುವೆ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಸೌತ್ ಆಫ್ರಿಕಾ ವೇಗಿ ಲಿಝಾಡ್ ವಿಲಿಯಮ್ಸ್ ಮೊಣಕಾಲಿನ ಗಾಯದ ಕಾರಣ ಈ ಬಾರಿಯ ಐಪಿಎಲ್​ನಿಂದ ಹಿಂದೆ ಸರಿದಿದ್ದರು. ಹೀಗಾಗಿ ಅವರ ಬದಲಿಯಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕಾರ್ಬಿನ್ ಬಾಷ್ ಅವರನ್ನು ಆಯ್ಕೆ ಮಾಡಿಕೊಂಡಿತು.

ಇದರ ನಡುವೆ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಸೌತ್ ಆಫ್ರಿಕಾ ವೇಗಿ ಲಿಝಾಡ್ ವಿಲಿಯಮ್ಸ್ ಮೊಣಕಾಲಿನ ಗಾಯದ ಕಾರಣ ಈ ಬಾರಿಯ ಐಪಿಎಲ್​ನಿಂದ ಹಿಂದೆ ಸರಿದಿದ್ದರು. ಹೀಗಾಗಿ ಅವರ ಬದಲಿಯಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕಾರ್ಬಿನ್ ಬಾಷ್ ಅವರನ್ನು ಆಯ್ಕೆ ಮಾಡಿಕೊಂಡಿತು.

3 / 5
ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚಾನ್ಸ್ ಸಿಕ್ಕಿದ್ದೇ ತಡ, ಕಾರ್ಬಿನ್ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಹೀಗೆ ಪಿಎಸ್​ಎಲ್​ ಒಪ್ಪಂದ ನಿಯಮವನ್ನು ಉಲ್ಲಂಘಿಸಿದಕ್ಕಾಗಿ ಇದೀಗ ಕಾರ್ಬಿನ್ ಬಾಷ್ ವಿರುದ್ಧ ಒಂದು ವರ್ಷದ ಅವಧಿಗೆ ನಿಷೇಧ ಹೇರಲಾಗಿದೆ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಿಳಿಸಿದೆ.

ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚಾನ್ಸ್ ಸಿಕ್ಕಿದ್ದೇ ತಡ, ಕಾರ್ಬಿನ್ ಬಾಷ್ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಹೀಗೆ ಪಿಎಸ್​ಎಲ್​ ಒಪ್ಪಂದ ನಿಯಮವನ್ನು ಉಲ್ಲಂಘಿಸಿದಕ್ಕಾಗಿ ಇದೀಗ ಕಾರ್ಬಿನ್ ಬಾಷ್ ವಿರುದ್ಧ ಒಂದು ವರ್ಷದ ಅವಧಿಗೆ ನಿಷೇಧ ಹೇರಲಾಗಿದೆ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಿಳಿಸಿದೆ.

4 / 5
ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್ 2026 ರಲ್ಲಿ ಕಾರ್ಬಿನ್ ಬಾಷ್​ಗೆ ಅವಕಾಶ ದೊರೆಯುವುದಿಲ್ಲ. ಇತ್ತ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಕಾರ್ಬಿನ್ ಬಾಷ್, ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಒಡೆತನದ ಎಂಐ ಕೇಪ್​ಟೌನ್ ಪರ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಪಿಎಸ್​ಎಲ್​ನ ಬ್ಯಾನ್​ ಸೌತ್ ಆಫ್ರಿಕಾ ವೇಗಿಯ ಮೇಲೆ ದೊಡ್ಡ ಪರಿಣಾಮ ಬೀರುವುದಿಲ್ಲ ಎಂದೇ ಹೇಳಬಹುದು.

ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್ 2026 ರಲ್ಲಿ ಕಾರ್ಬಿನ್ ಬಾಷ್​ಗೆ ಅವಕಾಶ ದೊರೆಯುವುದಿಲ್ಲ. ಇತ್ತ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿರುವ ಕಾರ್ಬಿನ್ ಬಾಷ್, ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಒಡೆತನದ ಎಂಐ ಕೇಪ್​ಟೌನ್ ಪರ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಪಿಎಸ್​ಎಲ್​ನ ಬ್ಯಾನ್​ ಸೌತ್ ಆಫ್ರಿಕಾ ವೇಗಿಯ ಮೇಲೆ ದೊಡ್ಡ ಪರಿಣಾಮ ಬೀರುವುದಿಲ್ಲ ಎಂದೇ ಹೇಳಬಹುದು.

5 / 5

Published On - 9:04 am, Sat, 12 April 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!