AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma Fit: ಖುಷಿಯಲ್ಲಿದ್ದ ಆರ್​ಸಿಬಿಗೆ ಶಾಕ್: ಮುಂಬೈ ಇಂಡಿಯನ್ಸ್ ಸ್ಫೋಟಕ ಬ್ಯಾಟರ್ ಸಂಪೂರ್ಣ ಫಿಟ್

RCB vs MI, IPL 2023: ಭಾನುವಾರ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿ ಆಗಲಿದೆ. ಇದೀಗ ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ತಂಡಕ್ಕೆ ಶುಭ ಸುದ್ದಿಯೊಂದು ಸಿಕ್ಕಿದೆ.

Vinay Bhat
|

Updated on: Apr 01, 2023 | 12:47 PM

Share
16ನೇ ಅವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಚಾಲನೆ ಸಿಕ್ಕಿದ್ದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್​ಗೆ ಸೋಲುಣಿಸಿ ಶುಭಾರಂಭ ಮಾಡಿದೆ. ಇಂದು ಶನಿವಾರ ಎರಡು ಪಂದ್ಯಗಳು ನಡೆಯಲಿದೆ. ನಾಳೆ ಕೂಡ ಭಾನುವಾರ ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ.

16ನೇ ಅವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಚಾಲನೆ ಸಿಕ್ಕಿದ್ದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್​ಗೆ ಸೋಲುಣಿಸಿ ಶುಭಾರಂಭ ಮಾಡಿದೆ. ಇಂದು ಶನಿವಾರ ಎರಡು ಪಂದ್ಯಗಳು ನಡೆಯಲಿದೆ. ನಾಳೆ ಕೂಡ ಭಾನುವಾರ ಎರಡು ಪಂದ್ಯಗಳನ್ನು ಆಯೋಜಿಸಲಾಗಿದೆ.

1 / 7
ಭಾನುವಾರ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಫಾಪ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದಾಖಲೆಯ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿ ಆಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ಏರ್ಪಡಿಸಲಾಗಿದೆ.

ಭಾನುವಾರ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಫಾಪ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದಾಖಲೆಯ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿ ಆಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ಏರ್ಪಡಿಸಲಾಗಿದೆ.

2 / 7
ಇದೀಗ ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ತಂಡಕ್ಕೆ ಶುಭ ಸುದ್ದಿಯೊಂದು ಸಿಕ್ಕಿದೆ. ಇತ್ತ ಆರ್​ಸಿಬಿಗೆ ಶಾಕ್ ಆಗಿದೆ. ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗಿದ್ದ ನಾಯಕ ರೋಹಿತ್ ಶರ್ಮಾ ಸಂಪೂರ್ಣ ಫಿಟ್ ಆಗಿದ್ದು, ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರಂತೆ.

ಇದೀಗ ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ತಂಡಕ್ಕೆ ಶುಭ ಸುದ್ದಿಯೊಂದು ಸಿಕ್ಕಿದೆ. ಇತ್ತ ಆರ್​ಸಿಬಿಗೆ ಶಾಕ್ ಆಗಿದೆ. ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗಿದ್ದ ನಾಯಕ ರೋಹಿತ್ ಶರ್ಮಾ ಸಂಪೂರ್ಣ ಫಿಟ್ ಆಗಿದ್ದು, ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರಂತೆ.

3 / 7
ಆರೋಗ್ಯ ಸರಿ ಇಲ್ಲದ ಕಾರಣ ರೋಹಿತ್ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಸೂರ್ಯಕುಮಾರ್ ಯಾದವ್ ನಾಯಕನ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಈ ಹಿಂದೆ ವರದಿ ಅಗಿತ್ತು. ಅಲ್ಲದೆ ಹಿಟ್​ಮ್ಯಾನ್ ಐಪಿಎಲ್​ ನಾಯಕರುಗಳ ಫೋಟೋಶೂಟ್​ಗೆ ಆಗಮಿಸಲಿಲ್ಲ. ಇದೀಗ ರೋಹಿತ್ ಸಂಪೂರ್ಣ ಫಿಟ್ ಆಗಿದ್ದಾರಂತೆ.

ಆರೋಗ್ಯ ಸರಿ ಇಲ್ಲದ ಕಾರಣ ರೋಹಿತ್ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಸೂರ್ಯಕುಮಾರ್ ಯಾದವ್ ನಾಯಕನ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಈ ಹಿಂದೆ ವರದಿ ಅಗಿತ್ತು. ಅಲ್ಲದೆ ಹಿಟ್​ಮ್ಯಾನ್ ಐಪಿಎಲ್​ ನಾಯಕರುಗಳ ಫೋಟೋಶೂಟ್​ಗೆ ಆಗಮಿಸಲಿಲ್ಲ. ಇದೀಗ ರೋಹಿತ್ ಸಂಪೂರ್ಣ ಫಿಟ್ ಆಗಿದ್ದಾರಂತೆ.

4 / 7
ಈ ಬಗ್ಗೆ ಮಾಹಿತಿ ನೀಡಿರುವ ಮುಂಬೈ ಇಂಡಿಯನ್ಸ್ ಮೂಲಗಳು, ಆರೋಗ್ಯ ಸರಿಯಿಲ್ಲದ ಕಾರಣ ರೋಹಿತ್ ಅಹ್ಮದಾಬಾದ್​ಗೆ ನಾಯಕರ ಫೋಟೋಶೂಟ್​ಗೆ ಪ್ರಯಾಣ ಬೆಳೆಸಿಲ್ಲ. ಆದರೆ, ಏಪ್ರಿಲ್ 2 ರಂದು ನಡೆಯಲಿರುವ ಆರ್​ಸಿಬಿ ವಿರುದ್ಧದ ಮೊದಲ ಪಂದ್ಯಕ್ಕೆ ಲಭ್ಯರಿದ್ದಾರೆ ಎಂದು ಹೇಳಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮುಂಬೈ ಇಂಡಿಯನ್ಸ್ ಮೂಲಗಳು, ಆರೋಗ್ಯ ಸರಿಯಿಲ್ಲದ ಕಾರಣ ರೋಹಿತ್ ಅಹ್ಮದಾಬಾದ್​ಗೆ ನಾಯಕರ ಫೋಟೋಶೂಟ್​ಗೆ ಪ್ರಯಾಣ ಬೆಳೆಸಿಲ್ಲ. ಆದರೆ, ಏಪ್ರಿಲ್ 2 ರಂದು ನಡೆಯಲಿರುವ ಆರ್​ಸಿಬಿ ವಿರುದ್ಧದ ಮೊದಲ ಪಂದ್ಯಕ್ಕೆ ಲಭ್ಯರಿದ್ದಾರೆ ಎಂದು ಹೇಳಿದೆ.

5 / 7
ಇದರ ಜೊತೆಗೆ ಮುಂಬೈಗೆ ಬೌಲಿಂಗ್​ನಲ್ಲಿ ಆನೆಬಲ ಬಂದಿದೆ. ಇಂಜುರಿಯಿಂದಾಗಿ ಐಪಿಎಲ್ 2022 ರಿಂದ ಸಂಪೂರ್ಣ ಹೊರಬಿದ್ದಿದ್ದ ಜೋಫ್ರಾ ಆರ್ಚರ್ ಇದೀಗ ಎಂಐ ಪರ ಕಣಕ್ಕಿಳಿಯಲು ತಯಾರಾಗಿದ್ದಾರೆ. ಬುಮ್ರಾ ಅಲಭ್ಯತೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸಲಿದ್ದಾರೆ.

ಇದರ ಜೊತೆಗೆ ಮುಂಬೈಗೆ ಬೌಲಿಂಗ್​ನಲ್ಲಿ ಆನೆಬಲ ಬಂದಿದೆ. ಇಂಜುರಿಯಿಂದಾಗಿ ಐಪಿಎಲ್ 2022 ರಿಂದ ಸಂಪೂರ್ಣ ಹೊರಬಿದ್ದಿದ್ದ ಜೋಫ್ರಾ ಆರ್ಚರ್ ಇದೀಗ ಎಂಐ ಪರ ಕಣಕ್ಕಿಳಿಯಲು ತಯಾರಾಗಿದ್ದಾರೆ. ಬುಮ್ರಾ ಅಲಭ್ಯತೆಯಲ್ಲಿ ಇವರು ಪ್ರಮುಖ ಪಾತ್ರ ವಹಿಸಲಿದ್ದಾರೆ.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಏಪ್ರಿಲ್ 2 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಸಂಜೆ 7:30 ಕ್ಕೆ ಪಂದ್ಯ ಶುರುವಾಗಲಿದ್ದು ಹೈವೋಲ್ಟೇಜ್ ಮ್ಯಾಚ್ ಆಗುವ ನಿರೀಕ್ಷೆ ಇದೆ. ಈಗಾಗಲೇ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಏಪ್ರಿಲ್ 2 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಸಂಜೆ 7:30 ಕ್ಕೆ ಪಂದ್ಯ ಶುರುವಾಗಲಿದ್ದು ಹೈವೋಲ್ಟೇಜ್ ಮ್ಯಾಚ್ ಆಗುವ ನಿರೀಕ್ಷೆ ಇದೆ. ಈಗಾಗಲೇ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದೆ.

7 / 7
Follow Us
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ