AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ 3 ಪಂದ್ಯಗಳಲ್ಲಿ ಸೋಲು, ಆದರೂ 2ನೇ ಸ್ಥಾನದಲ್ಲಿ ಮುಂಬೈ ಇಂಡಿಯನ್ಸ್​

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ 13 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಅಷ್ಟೇ ಅಲ್ಲದೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಇನ್ನುಳಿದ 2 ಸ್ಥಾನಗಳಿಗಾಗಿ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್ ಹಾಗೂ ಗುಜರಾತ್ ಜೈಂಟ್ಸ್ ನಡುವೆ ಪೈಪೋಟಿ ಮುಂದುವರೆದಿದೆ.

ಝಾಹಿರ್ ಯೂಸುಫ್
|

Updated on: Jan 21, 2026 | 9:53 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ ಸೀಸನ್ 4 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲುಗಳ ಹೊರತಾಗಿಯೂ ಹರ್ಮನ್ ಪ್ರೀತ್ ಕೌರ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲೇ ಉಳಿದುಕೊಂಡಿದೆ.

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್‌ ಸೀಸನ್ 4 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ಮುಂಬೈ ಇಂಡಿಯನ್ಸ್ ಇದೀಗ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲುಗಳ ಹೊರತಾಗಿಯೂ ಹರ್ಮನ್ ಪ್ರೀತ್ ಕೌರ್ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲೇ ಉಳಿದುಕೊಂಡಿದೆ.

1 / 6
ಈ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಪರಾಜಯಗೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಪರ ಭರ್ಜರಿ ಜಯ ಸಾಧಿಸಿ ಒಟ್ಟು ನಾಲ್ಕು ಅಂಕಗಳನ್ನು ಪಡೆದುಕೊಂಡಿದ್ದರು.

ಈ ಬಾರಿಯ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಪರಾಜಯಗೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ಪರ ಭರ್ಜರಿ ಜಯ ಸಾಧಿಸಿ ಒಟ್ಟು ನಾಲ್ಕು ಅಂಕಗಳನ್ನು ಪಡೆದುಕೊಂಡಿದ್ದರು.

2 / 6
ಈ ಎರಡು ಗೆಲುವುಗಳ ಬಳಿಕ ಮುಂಬೈ ಇಂಡಿಯನ್ಸ್ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಯುಪಿ ವಾರಿಯರ್ಸ್ ವಿರುದ್ಧ ಎರಡೂ ಪಂದ್ಯಗಳಲ್ಲೂ ಸೋತಿದ್ದ ಮುಂಬೈ ಇಂಡಿಯನ್ಸ್ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಮುಗ್ಗರಿಸಿದೆ.

ಈ ಎರಡು ಗೆಲುವುಗಳ ಬಳಿಕ ಮುಂಬೈ ಇಂಡಿಯನ್ಸ್ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಯುಪಿ ವಾರಿಯರ್ಸ್ ವಿರುದ್ಧ ಎರಡೂ ಪಂದ್ಯಗಳಲ್ಲೂ ಸೋತಿದ್ದ ಮುಂಬೈ ಇಂಡಿಯನ್ಸ್ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಮುಗ್ಗರಿಸಿದೆ.

3 / 6
ಅಂದರೆ ಮುಂಬೈ ಇಂಡಿಯನ್ಸ್ ಆಡಿದ 6 ಪಂದ್ಯಗಳಲ್ಲಿ 4ರಲ್ಲಿ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಮುಂಬೈ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಇದಕ್ಕೆ ಮುಖ್ಯ ಕಾರಣ ಉಳಿದ ಮೂರು ತಂಡಗಳ ನೆಟ್​ ರನ್​ ರೇಟ್ ಮೈನಸ್​ನಲ್ಲಿರುವುದು.

ಅಂದರೆ ಮುಂಬೈ ಇಂಡಿಯನ್ಸ್ ಆಡಿದ 6 ಪಂದ್ಯಗಳಲ್ಲಿ 4ರಲ್ಲಿ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಮುಂಬೈ ಪಡೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಇದಕ್ಕೆ ಮುಖ್ಯ ಕಾರಣ ಉಳಿದ ಮೂರು ತಂಡಗಳ ನೆಟ್​ ರನ್​ ರೇಟ್ ಮೈನಸ್​ನಲ್ಲಿರುವುದು.

4 / 6
ಅಂದರೆ ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್, ಗುಜರಾತ್ ಜೈಂಟ್ಸ್ ತಲಾ 2 ಮ್ಯಾಚ್ ಗಳಲ್ಲಿ ಮಾತ್ರ ಜಯ ಸಾಧಿಸಿದೆ. ಈ ಎರಡು ಗೆಲುವುಗಳ ಹೊರತಾಗಿಯೂ ಈ ತಂಡಗಳ ನೆಟ್ ರನ್ ರೇಟ್ ಮೈನಸ್ ನಲ್ಲಿದೆ. ಇಲ್ಲಿ ಯುಪಿ ವಾರಿಯರ್ಸ್ -0.483 ನೆಟ್ ರನ್ ರೇಟ್ ಹೊಂದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ -0.586 ನೆಟ್​ನಲ್ಲೇ ಉಳಿದಿದೆ. ಇನ್ನು ಗುಜರಾತ್ ಜೈಂಟ್ಸ್ ಹೊಂದಿರುವ ನೆಟ್ ರನ್ ರೇಟ್ -0.864.

ಅಂದರೆ ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್, ಗುಜರಾತ್ ಜೈಂಟ್ಸ್ ತಲಾ 2 ಮ್ಯಾಚ್ ಗಳಲ್ಲಿ ಮಾತ್ರ ಜಯ ಸಾಧಿಸಿದೆ. ಈ ಎರಡು ಗೆಲುವುಗಳ ಹೊರತಾಗಿಯೂ ಈ ತಂಡಗಳ ನೆಟ್ ರನ್ ರೇಟ್ ಮೈನಸ್ ನಲ್ಲಿದೆ. ಇಲ್ಲಿ ಯುಪಿ ವಾರಿಯರ್ಸ್ -0.483 ನೆಟ್ ರನ್ ರೇಟ್ ಹೊಂದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ -0.586 ನೆಟ್​ನಲ್ಲೇ ಉಳಿದಿದೆ. ಇನ್ನು ಗುಜರಾತ್ ಜೈಂಟ್ಸ್ ಹೊಂದಿರುವ ನೆಟ್ ರನ್ ರೇಟ್ -0.864.

5 / 6
ಆದರೆ ಇತ್ತ ಎರಡು ಪಂದ್ಯಗಳಲ್ಲಿ ಮಾತ್ರ ಗೆದ್ದಿರುವ ಮುಂಬೈ ಇಂಡಿಯನ್ಸ್ +0.046 ನೆಟ್ ರನ್ ರೇಟ್ ಹೊಂದಿದೆ. ಇದೇ ಕಾರಣದಿಂದಾಗಿ ಹ್ಯಾಟ್ರಿಕ್ ಸೋಲುಗಳ ಹೊರತಾಗಿಯೂ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಕಾಯ್ದುಕೊಳ್ಳುವಲ್ಲಿ ಹರ್ಮನ್​ಪ್ರೀತ್ ಕೌರ್ ಪಡೆ ಯಶಸ್ವಿಯಾಗಿದೆ.

ಆದರೆ ಇತ್ತ ಎರಡು ಪಂದ್ಯಗಳಲ್ಲಿ ಮಾತ್ರ ಗೆದ್ದಿರುವ ಮುಂಬೈ ಇಂಡಿಯನ್ಸ್ +0.046 ನೆಟ್ ರನ್ ರೇಟ್ ಹೊಂದಿದೆ. ಇದೇ ಕಾರಣದಿಂದಾಗಿ ಹ್ಯಾಟ್ರಿಕ್ ಸೋಲುಗಳ ಹೊರತಾಗಿಯೂ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಕಾಯ್ದುಕೊಳ್ಳುವಲ್ಲಿ ಹರ್ಮನ್​ಪ್ರೀತ್ ಕೌರ್ ಪಡೆ ಯಶಸ್ವಿಯಾಗಿದೆ.

6 / 6
Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು