AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Musheer Khan: ಭರ್ಜರಿ ಶತಕದೊಂದಿಗೆ ಸಚಿನ್ ದಾಖಲೆ ಮುರಿದ ಮುಶೀರ್ ಖಾನ್

Musheer Khan: ರಣಜಿ ಟೂರ್ನಿಯಲ್ಲಿ ಸರ್ಫರಾಝ್ ಖಾನ್ ಅವರ ಕಿರಿಯ ಸಹೋದರ ಮುಶೀರ್ ಖಾನ್ ಅವರ ಅಬ್ಬರ ಮುಂದುವರೆದಿದೆ. ಕ್ವಾರ್ಟರ್ ಫೈನಲ್​ನಲ್ಲಿ ದ್ವಿಶತಕ ಸಿಡಿಸುವ ಮೂಲಕ ಮುಂಬೈ ತಂಡದ ಗೆಲುವಿಗೆ ಕಾರಣರಾಗಿದ್ದ ಮುಶೀರ್ ಇದೀಗ ಫೈನಲ್ ಪಂದ್ಯದಲ್ಲಿ ಆಕರ್ಷಕ ಸೆಂಚುರಿ ಸಿಡಿಸಿದ್ದಾರೆ. ಈ ಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.

TV9 Web
| Edited By: |

Updated on: Mar 12, 2024 | 2:22 PM

Share
ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ತಂಡದ ಯುವ ಬ್ಯಾಟರ್ ಮುಶೀರ್ ಖಾನ್ (Musheer Khan) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ವಿದರ್ಭ ವಿರುದ್ಧದ ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮುಶೀರ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ತಂಡದ ಯುವ ಬ್ಯಾಟರ್ ಮುಶೀರ್ ಖಾನ್ (Musheer Khan) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ವಿದರ್ಭ ವಿರುದ್ಧದ ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮುಶೀರ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

1 / 8
ರಕ್ಷಣಾತ್ಮಕ ಆಟದೊಂದಿಗೆ ಇನಿಂಗ್ಸ್ ಕಟ್ಟಿದ ಮುಶೀರ್ ಖಾನ್ 255 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನೂ ಕೂಡ ಯುವ ದಾಂಡಿಗ ತಮ್ಮದಾಗಿಸಿಕೊಂಡಿದ್ದಾರೆ.

ರಕ್ಷಣಾತ್ಮಕ ಆಟದೊಂದಿಗೆ ಇನಿಂಗ್ಸ್ ಕಟ್ಟಿದ ಮುಶೀರ್ ಖಾನ್ 255 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನೂ ಕೂಡ ಯುವ ದಾಂಡಿಗ ತಮ್ಮದಾಗಿಸಿಕೊಂಡಿದ್ದಾರೆ.

2 / 8
ಇದಕ್ಕೂ ಮುನ್ನ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ಪರ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 1994-95 ರಲ್ಲಿ ಪಂಜಾಬ್ ವಿರುದ್ಧದ ಫೈನಲ್ ಪಂದ್ಯದಲ್ಲಿ 21 ವರ್ಷ ಸಚಿನ್ ತೆಂಡೂಲ್ಕರ್ ಶತಕ ಬಾರಿಸಿ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ಪರ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. 1994-95 ರಲ್ಲಿ ಪಂಜಾಬ್ ವಿರುದ್ಧದ ಫೈನಲ್ ಪಂದ್ಯದಲ್ಲಿ 21 ವರ್ಷ ಸಚಿನ್ ತೆಂಡೂಲ್ಕರ್ ಶತಕ ಬಾರಿಸಿ ದಾಖಲೆ ಬರೆದಿದ್ದರು.

3 / 8
ಇದೀಗ 19 ವರ್ಷದ ಮುಶೀರ್ ಖಾನ್ ನಿರ್ಣಾಯಕ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ 30 ವರ್ಷಗಳ ಹಳೆಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ 19 ವರ್ಷದ ಮುಶೀರ್ ಖಾನ್ ನಿರ್ಣಾಯಕ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ 30 ವರ್ಷಗಳ ಹಳೆಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 8
ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್​ನ 102ನೇ ಓವರ್​ ವೇಳೆ ಮುಕ್ತಾಯದ ವೇಳೆಗೆ ಮುಂಬೈ ತಂಡವು 4 ವಿಕೆಟ್ ಕಳೆದುಕೊಂಡು 332 ರನ್ ಕಲೆಹಾಕಿದೆ. 129 ರನ್ ಬಾರಿಸಿರುವ ಮುಶೀರ್ ಖಾನ್ ಹಾಗೂ ಹಾರ್ದಿಕ್ ತಾಮೋರೆ ಬ್ಯಾಟಿಂಗ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್​ನ 102ನೇ ಓವರ್​ ವೇಳೆ ಮುಕ್ತಾಯದ ವೇಳೆಗೆ ಮುಂಬೈ ತಂಡವು 4 ವಿಕೆಟ್ ಕಳೆದುಕೊಂಡು 332 ರನ್ ಕಲೆಹಾಕಿದೆ. 129 ರನ್ ಬಾರಿಸಿರುವ ಮುಶೀರ್ ಖಾನ್ ಹಾಗೂ ಹಾರ್ದಿಕ್ ತಾಮೋರೆ ಬ್ಯಾಟಿಂಗ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

5 / 8
ವಿಶೇಷ ಎಂದರೆ ಈ ಬಾರಿಯ ರಣಜಿ ಟೂರ್ನಿಗೆ ಮುಶೀರ್ ಖಾನ್ ಆಯ್ಕೆಯಾಗಿರಲಿಲ್ಲ. ಆದರೆ ಮುಂಬೈ ಆಟಗಾರ ಶಿವಂ ದುಬೆ ಗಾಯಗೊಂಡಿದ್ದ ಕಾರಣ ಅವರನ್ನು ಕ್ವಾರ್ಟರ್ ಫೈನಲ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿತ್ತು. ಹೀಗೆ ಸಿಕ್ಕ ಅವಕಾಶದಲ್ಲಿ ಮುಶೀರ್ ಖಾನ್ ಅಬ್ಬರಿಸಿದ್ದಾರೆ.

ವಿಶೇಷ ಎಂದರೆ ಈ ಬಾರಿಯ ರಣಜಿ ಟೂರ್ನಿಗೆ ಮುಶೀರ್ ಖಾನ್ ಆಯ್ಕೆಯಾಗಿರಲಿಲ್ಲ. ಆದರೆ ಮುಂಬೈ ಆಟಗಾರ ಶಿವಂ ದುಬೆ ಗಾಯಗೊಂಡಿದ್ದ ಕಾರಣ ಅವರನ್ನು ಕ್ವಾರ್ಟರ್ ಫೈನಲ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿತ್ತು. ಹೀಗೆ ಸಿಕ್ಕ ಅವಕಾಶದಲ್ಲಿ ಮುಶೀರ್ ಖಾನ್ ಅಬ್ಬರಿಸಿದ್ದಾರೆ.

6 / 8
ಕ್ವಾರ್ಟರ್​ ಫೈನಲ್​ನಲ್ಲಿ ದ್ವಿಶತಕ ಬಾರಿಸಿದ್ದ ಮುಶೀರ್, ಸೆಮಿಫೈನಲ್​ನಲ್ಲಿ ಅರ್ಧಶತಕದ ಕೊಡುಗೆ ನೀಡಿದ್ದರು. ಇದೀಗ ಫೈನಲ್ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ 19ರ ಹರೆಯದ ಯುವ ದಾಂಡಿಗ ಹೊಸ ಇತಿಹಾಸ ಬರೆದಿದ್ದಾರೆ.

ಕ್ವಾರ್ಟರ್​ ಫೈನಲ್​ನಲ್ಲಿ ದ್ವಿಶತಕ ಬಾರಿಸಿದ್ದ ಮುಶೀರ್, ಸೆಮಿಫೈನಲ್​ನಲ್ಲಿ ಅರ್ಧಶತಕದ ಕೊಡುಗೆ ನೀಡಿದ್ದರು. ಇದೀಗ ಫೈನಲ್ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ 19ರ ಹರೆಯದ ಯುವ ದಾಂಡಿಗ ಹೊಸ ಇತಿಹಾಸ ಬರೆದಿದ್ದಾರೆ.

7 / 8
ಅಂದಹಾಗೆ ಮುಶೀರ್ ಖಾನ್ ಟೀಮ್ ಇಂಡಿಯಾ ಆಟಗಾರ ಸರ್ಫರಾಝ್ ಖಾನ್ ಅವರ ಸಹೋದರ. ಅಣ್ಣ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಮಿಂಚಿದರೆ, ತಮ್ಮ ರಣಜಿ ಟೂರ್ನಿಯಲ್ಲಿ ದ್ವಿಶತಕ,ಶತಕ ಸಿಡಿಸುವ ಮೂಲಕ ಅಬ್ಬರಿಸಿದ್ದಾರೆ.

ಅಂದಹಾಗೆ ಮುಶೀರ್ ಖಾನ್ ಟೀಮ್ ಇಂಡಿಯಾ ಆಟಗಾರ ಸರ್ಫರಾಝ್ ಖಾನ್ ಅವರ ಸಹೋದರ. ಅಣ್ಣ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಮಿಂಚಿದರೆ, ತಮ್ಮ ರಣಜಿ ಟೂರ್ನಿಯಲ್ಲಿ ದ್ವಿಶತಕ,ಶತಕ ಸಿಡಿಸುವ ಮೂಲಕ ಅಬ್ಬರಿಸಿದ್ದಾರೆ.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ