AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KAR vs NAM: ನಮೀಬಿಯಾ ವಿರುದ್ಧ ಕನ್ನಡಿಗನ ಸಿಡಿಲಬ್ಬರದ ಶತಕ..!

Namibia vs Karnataka: ವಿಶೇಷ ಎಂದರೆ ಇದು ನಮೀಬಿಯಾ ವಿರುದ್ಧ ಎಲ್​ಆರ್​ ಚೇತನ್ ಅವರ 2ನೇ ಶತಕ. ಇದಕ್ಕೂ ಮುನ್ನ 2ನೇ ಏಕದಿನ ಪಂದ್ಯದಲ್ಲಿ ಕರುನಾಡ ಕುವರ 147 ಎಸೆತಗಳಲ್ಲಿ 169 ಬಾರಿಸಿ ಮಿಂಚಿದ್ದರು.

TV9 Web
| Edited By: |

Updated on: Jun 07, 2023 | 6:47 PM

Share
Namibia vs Karnataka: ವಿಂಡ್​ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ನಮೀಬಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕರ್ನಾಟಕದ ಯುವ ದಾಂಡಿಗ ಎಲ್​ಆರ್​ ಚೇತನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರವಿಕುಮಾರ್ ಸಮರ್ಥ್ ಫೀಲ್ಡಿಂಗ್ ಆಯ್ದುಕೊಂಡಿದ್ದರು.

Namibia vs Karnataka: ವಿಂಡ್​ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ನಮೀಬಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕರ್ನಾಟಕದ ಯುವ ದಾಂಡಿಗ ಎಲ್​ಆರ್​ ಚೇತನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರವಿಕುಮಾರ್ ಸಮರ್ಥ್ ಫೀಲ್ಡಿಂಗ್ ಆಯ್ದುಕೊಂಡಿದ್ದರು.

1 / 7
ಅದರಂತೆ ಮೊದಲು ಬ್ಯಾಟ್ ಮಾಡಿದ ನಮೀಬಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶಾನ್ ಫೌಷೆಯನ್ನು ಹಾಗೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೈಕೆಲ್ ವ್ಯಾನ್​ ಲಿಂಗನ್​ರನ್ನು 6ನೇ ಓವರ್​ನಲ್ಲಿ ವಿಜಯಕುಮಾರ್ ವೈಶಾಕ್ ಔಟ್ ಮಾಡಿ ಕರ್ನಾಟಕಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟರು.

ಅದರಂತೆ ಮೊದಲು ಬ್ಯಾಟ್ ಮಾಡಿದ ನಮೀಬಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶಾನ್ ಫೌಷೆಯನ್ನು ಹಾಗೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೈಕೆಲ್ ವ್ಯಾನ್​ ಲಿಂಗನ್​ರನ್ನು 6ನೇ ಓವರ್​ನಲ್ಲಿ ವಿಜಯಕುಮಾರ್ ವೈಶಾಕ್ ಔಟ್ ಮಾಡಿ ಕರ್ನಾಟಕಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟರು.

2 / 7
ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಝೇನ್ ಗ್ರೀನ್ 72 ಎಸೆತಗಳಲ್ಲಿ 3 ಫೋರ್ ಹಾಗೂ 2 ಸಿಕ್ಸ್​ನೊಂದಿಗೆ ಅಜೇಯ 65 ರನ್ ಬಾರಿಸಿದರು. ಇನ್ನು ಗ್ರೀನ್​ಗೆ ಸಾಥ್ ನೀಡಿದ ಬೆರ್ನಾಡ್ 6 ಭರ್ಜರಿ ಸಿಕ್ಸ್​ನೊಂದಿಗೆ 49 ಎಸೆತಗಳಲ್ಲಿ 59 ರನ್ ಸಿಡಿಸಿದರು. ಇದಾಗ್ಯೂ ಕೆಲ ಕ್ರಮಾಂಕದಲ್ಲಿ ಕುಸಿತ ಕಂಡ ನಮೀಬಿಯಾ ತಂಡವು 45.1 ಓವರ್​ಗಳಲ್ಲಿ 226 ರನ್​ಗಳಿಸಿ ಸರ್ವಪತನ ಕಂಡಿತು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಝೇನ್ ಗ್ರೀನ್ 72 ಎಸೆತಗಳಲ್ಲಿ 3 ಫೋರ್ ಹಾಗೂ 2 ಸಿಕ್ಸ್​ನೊಂದಿಗೆ ಅಜೇಯ 65 ರನ್ ಬಾರಿಸಿದರು. ಇನ್ನು ಗ್ರೀನ್​ಗೆ ಸಾಥ್ ನೀಡಿದ ಬೆರ್ನಾಡ್ 6 ಭರ್ಜರಿ ಸಿಕ್ಸ್​ನೊಂದಿಗೆ 49 ಎಸೆತಗಳಲ್ಲಿ 59 ರನ್ ಸಿಡಿಸಿದರು. ಇದಾಗ್ಯೂ ಕೆಲ ಕ್ರಮಾಂಕದಲ್ಲಿ ಕುಸಿತ ಕಂಡ ನಮೀಬಿಯಾ ತಂಡವು 45.1 ಓವರ್​ಗಳಲ್ಲಿ 226 ರನ್​ಗಳಿಸಿ ಸರ್ವಪತನ ಕಂಡಿತು.

3 / 7
ಕರ್ನಾಟಕ ಪರ ಶುಭಾಂಗ್ ಹೆಗ್ಡೆ 10 ಓವರ್​ಗಳಲ್ಲಿ 44 ರನ್ ನೀಡಿ 3 ವಿಕೆಟ್ ಪಡೆದರೆ, ವಿಜಯಕುಮಾರ್ ವೈಶಾಕ್ 2 ವಿಕೆಟ್ ಕಬಳಿಸಿದರು. ಇನ್ನು ನಿಕಿನ್ ಜೋಸ್ ಹಾಗೂ ರಿಷಿ ಬೋಪಣ್ಣ ತಲಾ 1 ವಿಕೆಟ್ ಪಡೆದರು.

ಕರ್ನಾಟಕ ಪರ ಶುಭಾಂಗ್ ಹೆಗ್ಡೆ 10 ಓವರ್​ಗಳಲ್ಲಿ 44 ರನ್ ನೀಡಿ 3 ವಿಕೆಟ್ ಪಡೆದರೆ, ವಿಜಯಕುಮಾರ್ ವೈಶಾಕ್ 2 ವಿಕೆಟ್ ಕಬಳಿಸಿದರು. ಇನ್ನು ನಿಕಿನ್ ಜೋಸ್ ಹಾಗೂ ರಿಷಿ ಬೋಪಣ್ಣ ತಲಾ 1 ವಿಕೆಟ್ ಪಡೆದರು.

4 / 7
ಈ ಮೊತ್ತವನ್ನು ಬೆನ್ನತ್ತಿದ ಕರ್ನಾಟಕ ತಂಡಕ್ಕೆ ಎಲ್​ಆರ್ ಚೇತನ್ ಸಿಡಿಲಬ್ಬರದ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಯುವ ದಾಂಡಿಗ ನಮೀಬಿಯಾ ಬೌಲರ್​ಗಳ ಬೆಂಡೆತ್ತಿದರು.

ಈ ಮೊತ್ತವನ್ನು ಬೆನ್ನತ್ತಿದ ಕರ್ನಾಟಕ ತಂಡಕ್ಕೆ ಎಲ್​ಆರ್ ಚೇತನ್ ಸಿಡಿಲಬ್ಬರದ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಯುವ ದಾಂಡಿಗ ನಮೀಬಿಯಾ ಬೌಲರ್​ಗಳ ಬೆಂಡೆತ್ತಿದರು.

5 / 7
ಪರಿಣಾಮ 25 ಓವರ್​ ವೇಳೆಗೆ ಕರ್ನಾಟಕ ತಂಡದ ಮೊತ್ತ 150 ರ ಗಡಿ ತಲುಪಿತು. ಇತ್ತ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಚೇತನ್ 15 ಫೋರ್ ಹಾಗೂ 1 ಭರ್ಜರಿ ಸಿಕ್ಸ್ ಸಿಡಿಸಿದರು. ಈ ಮೂಲಕ ಕೇವಲ 92 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದರು.

ಪರಿಣಾಮ 25 ಓವರ್​ ವೇಳೆಗೆ ಕರ್ನಾಟಕ ತಂಡದ ಮೊತ್ತ 150 ರ ಗಡಿ ತಲುಪಿತು. ಇತ್ತ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಚೇತನ್ 15 ಫೋರ್ ಹಾಗೂ 1 ಭರ್ಜರಿ ಸಿಕ್ಸ್ ಸಿಡಿಸಿದರು. ಈ ಮೂಲಕ ಕೇವಲ 92 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದರು.

6 / 7
ವಿಶೇಷ ಎಂದರೆ ಇದು ನಮೀಬಿಯಾ ವಿರುದ್ಧ ಎಲ್​ಆರ್​ ಚೇತನ್ ಅವರ 2ನೇ ಶತಕ. ಇದಕ್ಕೂ ಮುನ್ನ 2ನೇ ಏಕದಿನ ಪಂದ್ಯದಲ್ಲಿ ಕರುನಾಡ ಕುವರ  147 ಎಸೆತಗಳಲ್ಲಿ 169 ಬಾರಿಸಿ ಮಿಂಚಿದ್ದರು.

ವಿಶೇಷ ಎಂದರೆ ಇದು ನಮೀಬಿಯಾ ವಿರುದ್ಧ ಎಲ್​ಆರ್​ ಚೇತನ್ ಅವರ 2ನೇ ಶತಕ. ಇದಕ್ಕೂ ಮುನ್ನ 2ನೇ ಏಕದಿನ ಪಂದ್ಯದಲ್ಲಿ ಕರುನಾಡ ಕುವರ 147 ಎಸೆತಗಳಲ್ಲಿ 169 ಬಾರಿಸಿ ಮಿಂಚಿದ್ದರು.

7 / 7
Web contact
Web contact

TV9 Kannada

Read More
Follow Us
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ