AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namibia vs Karnataka: ಕರ್ನಾಟಕ ವಿರುದ್ಧ ನಮೀಬಿಯಾಗೆ ರೋಚಕ ಜಯ..!

Namibia vs Karnataka: ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ನಮೀಬಿಯಾ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ಪರ ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್​ (5) ಬೇಗನೆ ವಿಕೆಟ್ ಒಪ್ಪಿಸಿದರು

TV9 Web
| Updated By: ಝಾಹಿರ್ ಯೂಸುಫ್

Updated on: Jun 04, 2023 | 10:07 PM

Namibia vs Karnataka: ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಆತಿಥೇಯ ನಮೀಬಿಯಾ ತಂಡವು ರೋಚಕ ಜಯ ಸಾಧಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ನಮೀಬಿಯಾ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡಿದ್ದರು.

Namibia vs Karnataka: ವಿಂಡ್‌ಹೋಕ್​ನ ವಾಂಡರರ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಆತಿಥೇಯ ನಮೀಬಿಯಾ ತಂಡವು ರೋಚಕ ಜಯ ಸಾಧಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ನಮೀಬಿಯಾ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡಿದ್ದರು.

1 / 8
ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ಪರ ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್​ (5) ಬೇಗನೆ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಎಲ್​ಆರ್​ ಚೇತನ್ ಹಾಗೂ ನಿಕಿನ್ ಜೋಸ್ ಇನಿಂಗ್ಸ್​ ಕಟ್ಟುವ ಜವಾಬ್ದಾರಿ ಹೆಗಲೇರಿಸಿಕೊಂಡರು. ಪರಿಣಾಮ ಕರ್ನಾಟಕ ತಂಡವು ಆರಂಭಿಕ ಆಘಾತದಿಂದ ಪಾರಾಯಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ಪರ ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್​ (5) ಬೇಗನೆ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಎಲ್​ಆರ್​ ಚೇತನ್ ಹಾಗೂ ನಿಕಿನ್ ಜೋಸ್ ಇನಿಂಗ್ಸ್​ ಕಟ್ಟುವ ಜವಾಬ್ದಾರಿ ಹೆಗಲೇರಿಸಿಕೊಂಡರು. ಪರಿಣಾಮ ಕರ್ನಾಟಕ ತಂಡವು ಆರಂಭಿಕ ಆಘಾತದಿಂದ ಪಾರಾಯಿತು.

2 / 8
ಇನ್ನು ತಂಡದ ಮೊತ್ತದ 100ರ ಗಡಿದಾಟುತ್ತಿದ್ದಂತೆ ಬಿರುಸಿನ ಆಟಕ್ಕೆ ಒತ್ತು ನೀಡಿದ ಚೇತನ್-ನಿಕಿನ್ ಜೋಡಿ ರನ್​ಗಳಿಕೆ ವೇಗವನ್ನು ಹೆಚ್ಚಿಸಿದರು. ಅದರಲ್ಲೂ ಅರ್ಧಶತಕದ ಬಳಿಕ ಭರ್ಜರಿಯಾಗಿ ಬ್ಯಾಟ್ ಬೀಸಿದ ಎಲ್​ಆರ್​ ಚೇತನ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಅದರಂತೆ ಒಟ್ಟು 8 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ ಒಳಗೊಂಡಂತೆ 147 ಎಸೆತಗಳಲ್ಲಿ 169 ರನ್​ ಬಾರಿಸಿದ ಚೇತನ್ ಜಾನ್ ಫೈಲಿಂಕ್​ಗೆ ವಿಕೆಟ್​ ಒಪ್ಪಿಸಿದರು.

ಇನ್ನು ತಂಡದ ಮೊತ್ತದ 100ರ ಗಡಿದಾಟುತ್ತಿದ್ದಂತೆ ಬಿರುಸಿನ ಆಟಕ್ಕೆ ಒತ್ತು ನೀಡಿದ ಚೇತನ್-ನಿಕಿನ್ ಜೋಡಿ ರನ್​ಗಳಿಕೆ ವೇಗವನ್ನು ಹೆಚ್ಚಿಸಿದರು. ಅದರಲ್ಲೂ ಅರ್ಧಶತಕದ ಬಳಿಕ ಭರ್ಜರಿಯಾಗಿ ಬ್ಯಾಟ್ ಬೀಸಿದ ಎಲ್​ಆರ್​ ಚೇತನ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಅದರಂತೆ ಒಟ್ಟು 8 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ ಒಳಗೊಂಡಂತೆ 147 ಎಸೆತಗಳಲ್ಲಿ 169 ರನ್​ ಬಾರಿಸಿದ ಚೇತನ್ ಜಾನ್ ಫೈಲಿಂಕ್​ಗೆ ವಿಕೆಟ್​ ಒಪ್ಪಿಸಿದರು.

3 / 8
ಇನ್ನು ಚೇತನ್​ಗೆ ಉತ್ತಮ ಸಾಥ್ ನೀಡಿದ ನಿಕಿನ್ ಜೋಸ್ ಕೂಡ ಅದ್ಭುತ ಇನಿಂಗ್ಸ್ ಆಡಿದರು. ನಮೀಬಿಯಾದ ಅನುಭವಿ ಬೌಲರ್​ಗಳನ್ನು ದಿಟ್ಟತನದಿಂದಲೇ ಎದುರಿಸಿದ ನಿಕಿನ್ 109 ಎಸೆತಗಳಲ್ಲಿ 103 ರನ್​ ಬಾರಿಸಿ ಮಿಂಚಿದರು. ಪರಿಣಾಮ ನಿಗದಿತ 50 ಓವರ್​ಗಳಲ್ಲಿ ಕರ್ನಾಟಕ ತಂಡವು 4 ವಿಕೆಟ್ ನಷ್ಟಕ್ಕೆ 360 ರನ್​ ಕಲೆಹಾಕಿತು.

ಇನ್ನು ಚೇತನ್​ಗೆ ಉತ್ತಮ ಸಾಥ್ ನೀಡಿದ ನಿಕಿನ್ ಜೋಸ್ ಕೂಡ ಅದ್ಭುತ ಇನಿಂಗ್ಸ್ ಆಡಿದರು. ನಮೀಬಿಯಾದ ಅನುಭವಿ ಬೌಲರ್​ಗಳನ್ನು ದಿಟ್ಟತನದಿಂದಲೇ ಎದುರಿಸಿದ ನಿಕಿನ್ 109 ಎಸೆತಗಳಲ್ಲಿ 103 ರನ್​ ಬಾರಿಸಿ ಮಿಂಚಿದರು. ಪರಿಣಾಮ ನಿಗದಿತ 50 ಓವರ್​ಗಳಲ್ಲಿ ಕರ್ನಾಟಕ ತಂಡವು 4 ವಿಕೆಟ್ ನಷ್ಟಕ್ಕೆ 360 ರನ್​ ಕಲೆಹಾಕಿತು.

4 / 8
361 ರನ್​ಗಳ ಬೃಹತ್ ಗುರಿ ಪಡೆದ ನಮೀಬಿಯಾ ತಂಡವು ಸ್ಪೋಟಕ ಆರಂಭ ಪಡೆಯಿತು. ಆರಂಭಿಕರಾದ ಸ್ಟೀಫನ್ ಬಾರ್ಡ್ (57) ಹಾಗೂ ನಿಕೋಲಸ್ ಡಾವಿನ್ (70) ಮೊದಲ ವಿಕೆಟ್​ಗೆ 119 ರನ್​ಗಳ ಜೊತೆಯಾಟವಾಡಿದರು.

361 ರನ್​ಗಳ ಬೃಹತ್ ಗುರಿ ಪಡೆದ ನಮೀಬಿಯಾ ತಂಡವು ಸ್ಪೋಟಕ ಆರಂಭ ಪಡೆಯಿತು. ಆರಂಭಿಕರಾದ ಸ್ಟೀಫನ್ ಬಾರ್ಡ್ (57) ಹಾಗೂ ನಿಕೋಲಸ್ ಡಾವಿನ್ (70) ಮೊದಲ ವಿಕೆಟ್​ಗೆ 119 ರನ್​ಗಳ ಜೊತೆಯಾಟವಾಡಿದರು.

5 / 8
ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೈಕೆಲ್ ವ್ಯಾನ್ ಲಿಂಗನ್ ಕರ್ನಾಟಕದ ಬೌಲರ್​ಗಳ ಬೆಂಡೆತ್ತಿದರು. ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಲಿಂಗನ್ 85 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಸ್ಪೋಟಕ ಸೆಂಚುರಿ ಸಿಡಿಸಿದರು. ಪರಿಣಾಮ 44 ಓವರ್​ಗಳಾಗುವಷ್ಟರಲ್ಲಿ ನಮೀಬಿಯಾ ತಂಡದ ಸ್ಕೋರ್ 300 ರ ಗಡಿದಾಟಿತು.

ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೈಕೆಲ್ ವ್ಯಾನ್ ಲಿಂಗನ್ ಕರ್ನಾಟಕದ ಬೌಲರ್​ಗಳ ಬೆಂಡೆತ್ತಿದರು. ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಲಿಂಗನ್ 85 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಸ್ಪೋಟಕ ಸೆಂಚುರಿ ಸಿಡಿಸಿದರು. ಪರಿಣಾಮ 44 ಓವರ್​ಗಳಾಗುವಷ್ಟರಲ್ಲಿ ನಮೀಬಿಯಾ ತಂಡದ ಸ್ಕೋರ್ 300 ರ ಗಡಿದಾಟಿತು.

6 / 8
ಮತ್ತೊಂದೆಡೆ ಮೈಕೆಲ್ ವ್ಯಾನ್​ ಲಿಂಗನ್​ಗೆ ಸಾಥ್ ನೀಡಿದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಅಕ್ಷರಶಃ ಅಬ್ಬರಿಸಿದ್ದರು. ಕೇವಲ 67 ಎಸೆತಗಳನ್ನು ಎದುರಿಸಿದ ಎರಾಸ್ಮಸ್ 2 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 91 ರನ್ ಬಾರಿಸಿ ವಿಜಯಕುಮಾರ್ ವೈಶಾಕ್​ಗೆ ವಿಕೆಟ್ ಒಪ್ಪಿಸಿದರು.

ಮತ್ತೊಂದೆಡೆ ಮೈಕೆಲ್ ವ್ಯಾನ್​ ಲಿಂಗನ್​ಗೆ ಸಾಥ್ ನೀಡಿದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಅಕ್ಷರಶಃ ಅಬ್ಬರಿಸಿದ್ದರು. ಕೇವಲ 67 ಎಸೆತಗಳನ್ನು ಎದುರಿಸಿದ ಎರಾಸ್ಮಸ್ 2 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 91 ರನ್ ಬಾರಿಸಿ ವಿಜಯಕುಮಾರ್ ವೈಶಾಕ್​ಗೆ ವಿಕೆಟ್ ಒಪ್ಪಿಸಿದರು.

7 / 8
ಅಷ್ಟರಲ್ಲಾಗಲೇ ನಮೀಬಿಯಾ ತಂಡವು ಗೆಲುವಿನತ್ತ ಮುಖ ಮಾಡಿತ್ತು. ಇದಾಗ್ಯೂ ಕೊನೆಯ ಓವರ್​ನಲ್ಲಿ 7 ರನ್​ಗಳ ಗುರಿ ಪಡೆದಿದ್ದ ಆತಿಥೇಯರನ್ನು ನಿಯಂತ್ರಿಸುವಲ್ಲಿ ಆದಿತ್ಯ ಗೋಯಲ್ ಯಶಸ್ವಿಯಾಗಿದ್ದರು. ಆದರೆ 5ನೇ ಎಸೆತದಲ್ಲಿ ಫೋರ್​ ಬಾರಿಸುವ ಮೂಲಕ ಜಾನ್ ಫ್ರೈಲಿಂಗ್ ನಮೀಬಿಯಾ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು. ಸದ್ಯ 5 ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಬಲ ಹೊಂದಿದ್ದು, ಇನ್ನೂ 3 ಪಂದ್ಯಗಳು ಬಾಕಿಯಿವೆ.

ಅಷ್ಟರಲ್ಲಾಗಲೇ ನಮೀಬಿಯಾ ತಂಡವು ಗೆಲುವಿನತ್ತ ಮುಖ ಮಾಡಿತ್ತು. ಇದಾಗ್ಯೂ ಕೊನೆಯ ಓವರ್​ನಲ್ಲಿ 7 ರನ್​ಗಳ ಗುರಿ ಪಡೆದಿದ್ದ ಆತಿಥೇಯರನ್ನು ನಿಯಂತ್ರಿಸುವಲ್ಲಿ ಆದಿತ್ಯ ಗೋಯಲ್ ಯಶಸ್ವಿಯಾಗಿದ್ದರು. ಆದರೆ 5ನೇ ಎಸೆತದಲ್ಲಿ ಫೋರ್​ ಬಾರಿಸುವ ಮೂಲಕ ಜಾನ್ ಫ್ರೈಲಿಂಗ್ ನಮೀಬಿಯಾ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು. ಸದ್ಯ 5 ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಬಲ ಹೊಂದಿದ್ದು, ಇನ್ನೂ 3 ಪಂದ್ಯಗಳು ಬಾಕಿಯಿವೆ.

8 / 8
Follow us
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್