AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nathan Lyon: ಎಲ್ಲರನ್ನು ಹಿಂದಿಕ್ಕಿ ಐತಿಹಾಸಿಕ ದಾಖಲೆ ಬರೆದ ನಾಥನ್ ಲಿಯಾನ್

Nathan Lyon Records: 1996 ರಿಂದ 2008 ರವರೆಗೆ ಆಸ್ಟ್ರೇಲಿಯಾ ವಿರುದ್ಧ 20 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಈ ವೇಳೆ ಎಸೆದ 1086 ಓವರ್​ಗಳಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಒಟ್ಟು 111 ವಿಕೆಟ್​ಗಳನ್ನು ಕಬಳಿಸಿದ್ದರು.

TV9 Web
| Edited By: |

Updated on:Mar 04, 2023 | 6:09 PM

Share
ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ರುವಾರಿ ಆಸೀಸ್ ಸ್ಪಿನ್ನರ್ ನಾಥನ್ ಲಿಯಾನ್. ಏಕೆಂದರೆ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸಿ ಮಿಂಚಿದ್ದ ಲಿಯಾನ್ ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ತಂಡದ 8 ಮಂದಿಯನ್ನು ಪೆವಿಲಿಯನ್​ಗಟ್ಟಿದ್ದರು.

ಇಂದೋರ್​ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನ ರುವಾರಿ ಆಸೀಸ್ ಸ್ಪಿನ್ನರ್ ನಾಥನ್ ಲಿಯಾನ್. ಏಕೆಂದರೆ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸಿ ಮಿಂಚಿದ್ದ ಲಿಯಾನ್ ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ತಂಡದ 8 ಮಂದಿಯನ್ನು ಪೆವಿಲಿಯನ್​ಗಟ್ಟಿದ್ದರು.

1 / 8
ಈ 11 ವಿಕೆಟ್​ಗಳೊಂದಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅತ್ಯಂತ ಯಶಸ್ವಿ ಬೌಲರ್ ಎಂಬ ದಾಖಲೆಯು ನಾಥನ್ ಲಿಯಾನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಹೆಸರಿನಲ್ಲಿತ್ತು.

ಈ 11 ವಿಕೆಟ್​ಗಳೊಂದಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅತ್ಯಂತ ಯಶಸ್ವಿ ಬೌಲರ್ ಎಂಬ ದಾಖಲೆಯು ನಾಥನ್ ಲಿಯಾನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಹೆಸರಿನಲ್ಲಿತ್ತು.

2 / 8
ಅನಿಲ್ ಕುಂಬ್ಳೆ 1996 ರಿಂದ 2008 ರವರೆಗೆ ಆಸ್ಟ್ರೇಲಿಯಾ ವಿರುದ್ಧ 20 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಈ ವೇಳೆ ಎಸೆದ 1086 ಓವರ್​ಗಳಲ್ಲಿ ಕುಂಬ್ಳೆ ಒಟ್ಟು 111 ವಿಕೆಟ್​ಗಳನ್ನು ಕಬಳಿಸಿದ್ದರು. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ದಾಖಲೆ ನಿರ್ಮಿಸಿದ್ದರು.

ಅನಿಲ್ ಕುಂಬ್ಳೆ 1996 ರಿಂದ 2008 ರವರೆಗೆ ಆಸ್ಟ್ರೇಲಿಯಾ ವಿರುದ್ಧ 20 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಈ ವೇಳೆ ಎಸೆದ 1086 ಓವರ್​ಗಳಲ್ಲಿ ಕುಂಬ್ಳೆ ಒಟ್ಟು 111 ವಿಕೆಟ್​ಗಳನ್ನು ಕಬಳಿಸಿದ್ದರು. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ದಾಖಲೆ ನಿರ್ಮಿಸಿದ್ದರು.

3 / 8
ಇದೀಗ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 25 ಪಂದ್ಯಗಳಲ್ಲಿ 1164.4 ಓವರ್​ಗಳನ್ನು ಎಸೆದಿರುವ ನಾಥನ್ ಲಿಯಾನ್ ಒಟ್ಟು 113 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಅನಿಲ್ ಕುಂಬ್ಳೆ ಹೆಸರಿನಲ್ಲಿದ್ದ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ್ದಾರೆ.

ಇದೀಗ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 25 ಪಂದ್ಯಗಳಲ್ಲಿ 1164.4 ಓವರ್​ಗಳನ್ನು ಎಸೆದಿರುವ ನಾಥನ್ ಲಿಯಾನ್ ಒಟ್ಟು 113 ವಿಕೆಟ್​ಗಳನ್ನು ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಅನಿಲ್ ಕುಂಬ್ಳೆ ಹೆಸರಿನಲ್ಲಿದ್ದ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ್ದಾರೆ.

4 / 8
ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ರವಿಚಂದ್ರನ್ ಅಶ್ವಿನ್. ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ ಒಟ್ಟು 1122.3 ಓವರ್​ಗಳನ್ನು ಎಸೆದಿರುವ ಅಶ್ವಿನ್ 107 ವಿಕೆಟ್ ಉರುಳಿಸಿದ್ದಾರೆ. ಇದೀಗ ಅಗ್ರಸ್ಥಾನದಲ್ಲಿರುವ ಲಿಯಾನ್ ದಾಖಲೆ ಮುರಿಯಲು ಅಶ್ವಿನ್​​ಗೆ ಕೇವಲ 7 ವಿಕೆಟ್​ಗಳ ಅವಶ್ಯಕತೆಯಿದೆ.

ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ರವಿಚಂದ್ರನ್ ಅಶ್ವಿನ್. ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ ಒಟ್ಟು 1122.3 ಓವರ್​ಗಳನ್ನು ಎಸೆದಿರುವ ಅಶ್ವಿನ್ 107 ವಿಕೆಟ್ ಉರುಳಿಸಿದ್ದಾರೆ. ಇದೀಗ ಅಗ್ರಸ್ಥಾನದಲ್ಲಿರುವ ಲಿಯಾನ್ ದಾಖಲೆ ಮುರಿಯಲು ಅಶ್ವಿನ್​​ಗೆ ಕೇವಲ 7 ವಿಕೆಟ್​ಗಳ ಅವಶ್ಯಕತೆಯಿದೆ.

5 / 8
ಇಲ್ಲಿ ಮತ್ತೊಂದು ವಿಶೇಷತೆ ಎಂದರೆ ಅನಿಲ್ ಕುಂಬ್ಳೆ, ನಾಥನ್ ಲಿಯಾನ್ ಹಾಗೂ ಅಶ್ವಿನ್ ಅವರನ್ನು ಹೊರತುಪಡಿಸಿದರೆ, ಯಾವುದೇ ಬೌಲರ್ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ 100 ಅಥವಾ ನೂರಕ್ಕಿಂತ ಹೆಚ್ಚು ವಿಕೆಟ್ ಪಡೆದಿಲ್ಲ. ಇದೀಗ ಟಾಪ್-3 ನಲ್ಲಿರುವ ನಾಥನ್ ಲಿಯಾನ್ ಹಾಗೂ ಅಶ್ವಿನ್ ನಡುವೆ ಅಗ್ರಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿರುವುದು ವಿಶೇಷ.

ಇಲ್ಲಿ ಮತ್ತೊಂದು ವಿಶೇಷತೆ ಎಂದರೆ ಅನಿಲ್ ಕುಂಬ್ಳೆ, ನಾಥನ್ ಲಿಯಾನ್ ಹಾಗೂ ಅಶ್ವಿನ್ ಅವರನ್ನು ಹೊರತುಪಡಿಸಿದರೆ, ಯಾವುದೇ ಬೌಲರ್ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ 100 ಅಥವಾ ನೂರಕ್ಕಿಂತ ಹೆಚ್ಚು ವಿಕೆಟ್ ಪಡೆದಿಲ್ಲ. ಇದೀಗ ಟಾಪ್-3 ನಲ್ಲಿರುವ ನಾಥನ್ ಲಿಯಾನ್ ಹಾಗೂ ಅಶ್ವಿನ್ ನಡುವೆ ಅಗ್ರಸ್ಥಾನಕ್ಕಾಗಿ ಪೈಪೋಟಿ ಏರ್ಪಟ್ಟಿರುವುದು ವಿಶೇಷ.

6 / 8
ಇನ್ನು ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ 4ನೇ ಸ್ಥಾನದಲ್ಲಿದ್ದು, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 18 ಪಂದ್ಯಗಳಿಂದ ಒಟ್ಟು 95 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ 4ನೇ ಸ್ಥಾನದಲ್ಲಿದ್ದು, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 18 ಪಂದ್ಯಗಳಿಂದ ಒಟ್ಟು 95 ವಿಕೆಟ್​ಗಳನ್ನು ಕಬಳಿಸಿದ್ದಾರೆ.

7 / 8
ಹಾಗೆಯೇ ಐದನೇ ಸ್ಥಾನದಲ್ಲಿರುವ ಭಾರತ ತಂಡದ ಆಲ್​ರೌಂಡರ್ ರವೀಂದ್ರ ಜಡೇಜಾ 15 ಪಂದ್ಯಗಳಿಂದ ಒಟ್ಟು 84 ವಿಕೆಟ್​ಗಳನ್ನು ಪಡೆದಿದ್ದಾರೆ.

ಹಾಗೆಯೇ ಐದನೇ ಸ್ಥಾನದಲ್ಲಿರುವ ಭಾರತ ತಂಡದ ಆಲ್​ರೌಂಡರ್ ರವೀಂದ್ರ ಜಡೇಜಾ 15 ಪಂದ್ಯಗಳಿಂದ ಒಟ್ಟು 84 ವಿಕೆಟ್​ಗಳನ್ನು ಪಡೆದಿದ್ದಾರೆ.

8 / 8

Published On - 6:09 pm, Sat, 4 March 23

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ