AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

34085 ಎಸೆತಗಳಲ್ಲಿ ಹೊಸ ಮೈಲುಗಲ್ಲು ದಾಟಿದ ನಾಥನ್ ಲಿಯಾನ್

Nathan Lyon Record: ಟೆಸ್ಟ್​ ಕ್ರಿಕೆಟ್​ನಲ್ಲಿ ಈವರೆಗೆ 253 ಇನಿಂಗ್ಸ್ ಆಡಿರುವ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ 34085* ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 24 ಬಾರಿ 5 ವಿಕೆಟ್ ಪಡೆದರೆ, 25 ಬಾರಿ 4 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಒಟ್ಟು 552* ವಿಕೆಟ್ ಉರುಳಿಸಿ ಟೆಸ್ಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಏಳನೇ ಬೌಲರ್ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 09, 2025 | 9:04 AM

Share
ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ 6* ವಿಕೆಟ್ ಕಬಳಿಸಿದ್ದಾರೆ. ಗಾಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಜರುಗುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಪಡೆದಿದ್ದ ಲಿಯಾನ್ ಇದೀಗ ದ್ವಿತೀಯ ಇನಿಂಗ್ಸ್​ನಲ್ಲೂ ಮೂರು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ 6* ವಿಕೆಟ್ ಕಬಳಿಸಿದ್ದಾರೆ. ಗಾಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಜರುಗುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಪಡೆದಿದ್ದ ಲಿಯಾನ್ ಇದೀಗ ದ್ವಿತೀಯ ಇನಿಂಗ್ಸ್​ನಲ್ಲೂ ಮೂರು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

1 / 5
ಈ ಆರು ವಿಕೆಟ್​ಗಳೊಂದಿಗೆ ಲಿಯಾನ್ ಟೆಸ್ಟ್​ ಕ್ರಿಕೆಟ್​ನಲ್ಲಿ 550 ವಿಕೆಟ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ ಮೂರನೇ ಹಾಗೂ ವಿಶ್ವದ 7ನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾ ಪರ ಇದಕ್ಕೂ ಮುನ್ನ ಶೇನ್ ವಾರ್ನ್ ಹಾಗೂ ಗ್ಲೆನ್ ಮೆಕ್​ಗ್ರಾಥ್ ಮಾತ್ರ ಈ ಸಾಧನೆ ಮಾಡಿದ್ದರು.

ಈ ಆರು ವಿಕೆಟ್​ಗಳೊಂದಿಗೆ ಲಿಯಾನ್ ಟೆಸ್ಟ್​ ಕ್ರಿಕೆಟ್​ನಲ್ಲಿ 550 ವಿಕೆಟ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ ಮೂರನೇ ಹಾಗೂ ವಿಶ್ವದ 7ನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾ ಪರ ಇದಕ್ಕೂ ಮುನ್ನ ಶೇನ್ ವಾರ್ನ್ ಹಾಗೂ ಗ್ಲೆನ್ ಮೆಕ್​ಗ್ರಾಥ್ ಮಾತ್ರ ಈ ಸಾಧನೆ ಮಾಡಿದ್ದರು.

2 / 5
ವಿಶೇಷ ಎಂದರೆ ನಾಥನ್ ಲಿಯಾನ್ ತಮ್ಮ ಟೆಸ್ಟ್ ಕೆರಿಯರ್​ನ ಮೊದಲ ವಿಕೆಟ್​ ಅನ್ನು ಶ್ರೀಲಂಕಾದ ಗಾಲೆ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲೇ ಪಡೆದಿದ್ದರು. ಇದೀಗ ಇದೇ ಮೈದಾನದಲ್ಲಿ 550ನೇ ವಿಕೆಟ್​ ಕಬಳಿಸಿ ವಿಶೇಷ ಮೈಲುಗಲ್ಲನ್ನು ದಾಟಿದ್ದಾರೆ. ಈ ಮೂಲಕ ಟೆಸ್ಟ್​ನಲ್ಲಿ 550+ ವಿಕೆಟ್ ಪಡೆದ ವಿಶ್ವದ 4ನೇ ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ವಿಶೇಷ ಎಂದರೆ ನಾಥನ್ ಲಿಯಾನ್ ತಮ್ಮ ಟೆಸ್ಟ್ ಕೆರಿಯರ್​ನ ಮೊದಲ ವಿಕೆಟ್​ ಅನ್ನು ಶ್ರೀಲಂಕಾದ ಗಾಲೆ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲೇ ಪಡೆದಿದ್ದರು. ಇದೀಗ ಇದೇ ಮೈದಾನದಲ್ಲಿ 550ನೇ ವಿಕೆಟ್​ ಕಬಳಿಸಿ ವಿಶೇಷ ಮೈಲುಗಲ್ಲನ್ನು ದಾಟಿದ್ದಾರೆ. ಈ ಮೂಲಕ ಟೆಸ್ಟ್​ನಲ್ಲಿ 550+ ವಿಕೆಟ್ ಪಡೆದ ವಿಶ್ವದ 4ನೇ ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

3 / 5
ಈವರೆಗೆ 136* ಟೆಸ್ಟ್ ಪಂದ್ಯಗಳನ್ನಾಡಿರುವ ನಾಥನ್ ಲಿಯಾನ್ 253 ಇನಿಂಗ್ಸ್​ಗಳಲ್ಲಿ 5680.5 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ ಒಟ್ಟು 552* ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ವಿಕೆಟ್ ಸರದಾರರ ಪಟ್ಟಿಯಲ್ಲಿ ಸದ್ಯ 7ನೇ ಸ್ಥಾನಕ್ಕೇರಿದ್ದಾರೆ.

ಈವರೆಗೆ 136* ಟೆಸ್ಟ್ ಪಂದ್ಯಗಳನ್ನಾಡಿರುವ ನಾಥನ್ ಲಿಯಾನ್ 253 ಇನಿಂಗ್ಸ್​ಗಳಲ್ಲಿ 5680.5 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ ಒಟ್ಟು 552* ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ವಿಕೆಟ್ ಸರದಾರರ ಪಟ್ಟಿಯಲ್ಲಿ ಸದ್ಯ 7ನೇ ಸ್ಥಾನಕ್ಕೇರಿದ್ದಾರೆ.

4 / 5
ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. 133 ಟೆಸ್ಟ್ ಪಂದ್ಯಗಳ 230 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಮುರಳೀಧರನ್ 7339.5 ಓವರ್​ಗಳಲ್ಲಿ ಒಟ್ಟು 800 ವಿಕೆಟ್ ಕಬಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ವಿಶ್ವ ದಾಖಲೆ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿದೆ. 133 ಟೆಸ್ಟ್ ಪಂದ್ಯಗಳ 230 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಮುರಳೀಧರನ್ 7339.5 ಓವರ್​ಗಳಲ್ಲಿ ಒಟ್ಟು 800 ವಿಕೆಟ್ ಕಬಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ