AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nathan Lyon: ಸ್ಪಿನ್ ದಿಗ್ಗಜರ ವಿಶ್ವ ದಾಖಲೆ ಸರಿಗಟ್ಟಿದ ನಾಥನ್ ಲಿಯಾನ್

Nathan Lyon Records: ಟೆಸ್ಟ್ ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಲೆಜೆಂಡ್ ಸ್ಪಿನ್ನರ್​ಗಳಾದ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹಾಗೂ ಆಸ್ಟ್ರೇಲಿಯಾದ ಶೇನ್ ವಾರ್ನ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

TV9 Web
| Edited By: |

Updated on:Mar 04, 2024 | 9:30 AM

Share
ವೆಲ್ಲಿಂಗ್ಟನ್​ನಲ್ಲಿ ನಡೆದ ಆತಿಥೇಯ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ (Nathan Lyon) ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಲಿಯಾನ್, ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಉರುಳಿಸಿದ್ದರು. ಈ ಮೂಲಕ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡರು.

ವೆಲ್ಲಿಂಗ್ಟನ್​ನಲ್ಲಿ ನಡೆದ ಆತಿಥೇಯ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ನಾಥನ್ ಲಿಯಾನ್ (Nathan Lyon) ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಲಿಯಾನ್, ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಉರುಳಿಸಿದ್ದರು. ಈ ಮೂಲಕ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡರು.

1 / 6
ಈ ದಾಖಲೆಗಳ ಮೂಲಕ ಸ್ಪಿನ್ ದಿಗ್ಗಜರಾದ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹಾಗೂ ಆಸ್ಟ್ರೇಲಿಯಾದ ಶೇನ್ ವಾರ್ನ್ ಅವರ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಕೂಡ ಸರಿಗಟ್ಟಿದರು. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಈ ದಾಖಲೆಗಳ ಮೂಲಕ ಸ್ಪಿನ್ ದಿಗ್ಗಜರಾದ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹಾಗೂ ಆಸ್ಟ್ರೇಲಿಯಾದ ಶೇನ್ ವಾರ್ನ್ ಅವರ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಕೂಡ ಸರಿಗಟ್ಟಿದರು. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

2 / 6
ಟೆಸ್ಟ್ ಕ್ರಿಕೆಟ್​ ಆಡುವ 9 ದೇಶಗಳಲ್ಲಿ 5 ವಿಕೆಟ್ ಕಬಳಿಸಿದ ವಿಶೇಷ ವಿಶ್ವ ದಾಕಲೆಯನ್ನು ನಾಥನ್ ಲಿಯಾನ್ ನಿರ್ಮಿಸಿದ್ದಾರೆ. ಲಿಯಾನ್ ಆಸ್ಟ್ರೇಲಿಯಾ, ಭಾರತ, ಶ್ರೀಲಂಕಾ, ಇಂಗ್ಲೆಂಡ್, ಬಾಂಗ್ಲಾದೇಶ್, ಪಾಕಿಸ್ತಾನ್, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ನ್ಯೂಝಿಲೆಂಡ್​ನಲ್ಲಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಟೆಸ್ಟ್ ಕ್ರಿಕೆಟ್​ ಆಡುವ 9 ದೇಶಗಳಲ್ಲಿ 5 ವಿಕೆಟ್ ಕಬಳಿಸಿದ ವಿಶೇಷ ವಿಶ್ವ ದಾಕಲೆಯನ್ನು ನಾಥನ್ ಲಿಯಾನ್ ನಿರ್ಮಿಸಿದ್ದಾರೆ. ಲಿಯಾನ್ ಆಸ್ಟ್ರೇಲಿಯಾ, ಭಾರತ, ಶ್ರೀಲಂಕಾ, ಇಂಗ್ಲೆಂಡ್, ಬಾಂಗ್ಲಾದೇಶ್, ಪಾಕಿಸ್ತಾನ್, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ನ್ಯೂಝಿಲೆಂಡ್​ನಲ್ಲಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

3 / 6
ಇದಕ್ಕೂ ಮುನ್ನ ಟೆಸ್ಟ್ ಕ್ರಿಕೆಟ್​ನಲ್ಲಿ ಇಂತಹದೊಂದು ಸಾಧನೆ ಮಾಡಿದ್ದು ಸ್ಪಿನ್ ದಿಗ್ಗಜರಾದ ಶೇನ್ ವಾರ್ನ್ ಹಾಗೂ ಮುತ್ತಯ್ಯ ಮುರಳೀಧರನ್. ಈ ಇಬ್ಬರು ಸ್ಪಿನ್ ಮಾಂತ್ರಿಕರು ಆಸ್ಟ್ರೇಲಿಯಾ, ಭಾರತ, ಶ್ರೀಲಂಕಾ, ಇಂಗ್ಲೆಂಡ್, ಬಾಂಗ್ಲಾದೇಶ್, ಪಾಕಿಸ್ತಾನ್, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ನ್ಯೂಝಿಲೆಂಡ್​ನಲ್ಲಿ 5 ವಿಕೆಟ್​ಗಳ ಸಾಧನೆ ಮಾಡಿ ವಿಶ್ವ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಟೆಸ್ಟ್ ಕ್ರಿಕೆಟ್​ನಲ್ಲಿ ಇಂತಹದೊಂದು ಸಾಧನೆ ಮಾಡಿದ್ದು ಸ್ಪಿನ್ ದಿಗ್ಗಜರಾದ ಶೇನ್ ವಾರ್ನ್ ಹಾಗೂ ಮುತ್ತಯ್ಯ ಮುರಳೀಧರನ್. ಈ ಇಬ್ಬರು ಸ್ಪಿನ್ ಮಾಂತ್ರಿಕರು ಆಸ್ಟ್ರೇಲಿಯಾ, ಭಾರತ, ಶ್ರೀಲಂಕಾ, ಇಂಗ್ಲೆಂಡ್, ಬಾಂಗ್ಲಾದೇಶ್, ಪಾಕಿಸ್ತಾನ್, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ನ್ಯೂಝಿಲೆಂಡ್​ನಲ್ಲಿ 5 ವಿಕೆಟ್​ಗಳ ಸಾಧನೆ ಮಾಡಿ ವಿಶ್ವ ದಾಖಲೆ ಬರೆದಿದ್ದರು.

4 / 6
ಇದೀಗ ನ್ಯೂಝಿಲೆಂಡ್ ವಿರುದ್ಧ ವೆಲ್ಲಿಂಗ್ಟನ್​ನಲ್ಲಿ 6 ವಿಕೆಟ್ ಕಬಳಿಸುವ ಮೂಲಕ ನಾಥನ್ ಲಿಯಾನ್ ಈ ಸಾಧನೆ ಮಾಡಿದ ವಿಶ್ವದ 3ನೇ ಬೌಲರ್ ಎನಿಸಿಕೊಂಡಿದ್ದಾರೆ. ಈ ಮೂಲಕ ಸ್ಪಿನ್ ದಿಗ್ಗಜರ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

ಇದೀಗ ನ್ಯೂಝಿಲೆಂಡ್ ವಿರುದ್ಧ ವೆಲ್ಲಿಂಗ್ಟನ್​ನಲ್ಲಿ 6 ವಿಕೆಟ್ ಕಬಳಿಸುವ ಮೂಲಕ ನಾಥನ್ ಲಿಯಾನ್ ಈ ಸಾಧನೆ ಮಾಡಿದ ವಿಶ್ವದ 3ನೇ ಬೌಲರ್ ಎನಿಸಿಕೊಂಡಿದ್ದಾರೆ. ಈ ಮೂಲಕ ಸ್ಪಿನ್ ದಿಗ್ಗಜರ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

5 / 6
ಇದಲ್ಲದೆ ಈ ಪಂದ್ಯದಲ್ಲಿ 10 ವಿಕೆಟ್ ಪಡೆಯುವುದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ನಾಥನ್ ಲಿಯಾನ್ 7ನೇ ಸ್ಥಾನಕ್ಕೇರಿದ್ದಾರೆ. 128 ಟೆಸ್ಟ್ ಪಂದ್ಯಗಳನ್ನಾಡಿರುವ ಲಿಯಾನ್ ಇದುವರೆಗೆ 527 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಇದಲ್ಲದೆ ಈ ಪಂದ್ಯದಲ್ಲಿ 10 ವಿಕೆಟ್ ಪಡೆಯುವುದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ನಾಥನ್ ಲಿಯಾನ್ 7ನೇ ಸ್ಥಾನಕ್ಕೇರಿದ್ದಾರೆ. 128 ಟೆಸ್ಟ್ ಪಂದ್ಯಗಳನ್ನಾಡಿರುವ ಲಿಯಾನ್ ಇದುವರೆಗೆ 527 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

6 / 6

Published On - 9:29 am, Mon, 4 March 24

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು