AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nathan Lyon: ಟೀಮ್ ಇಂಡಿಯಾ ವಿರುದ್ಧ ಹೊಸ ದಾಖಲೆ ಬರೆದ ನಾಥನ್ ಲಿಯಾನ್

Nathan Lyon Records: ಸ್ಪಿನ್ ಮೋಡಿ ಮಾಡಿದ ನಾಥನ್ ಲಿಯಾನ್ ಕೆಎಲ್ ರಾಹುಲ್ (17) ಅವರ ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು.

TV9 Web
| Edited By: |

Updated on: Feb 18, 2023 | 3:59 PM

Share
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯದ ಮೂಲಕ ಆಸೀಸ್ ಸ್ಪಿನ್ನರ್ ನಾಥನ್ ಲಿಯಾನ್ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಇದುವರೆಗೆ ಆಸ್ಟ್ರೇಲಿಯಾದ ಯಾವೊಬ್ಬ ಬೌಲರ್​ ನಿರ್ಮಿಸದ ದಾಖಲೆ ಎಂಬುದೇ ವಿಶೇಷ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯದ ಮೂಲಕ ಆಸೀಸ್ ಸ್ಪಿನ್ನರ್ ನಾಥನ್ ಲಿಯಾನ್ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಇದುವರೆಗೆ ಆಸ್ಟ್ರೇಲಿಯಾದ ಯಾವೊಬ್ಬ ಬೌಲರ್​ ನಿರ್ಮಿಸದ ದಾಖಲೆ ಎಂಬುದೇ ವಿಶೇಷ.

1 / 9
ಬಾರ್ಡರ್-ಗವಾಸ್ಕರ್ ಸರಣಿಯ 2ನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಮೊಹಮ್ಮದ್ ಶಮಿ (4 ವಿಕೆಟ್) ಅವರ ಕರಾರುವಾಕ್ ದಾಳಿಗೆ ತತ್ತರಿಸಿದ ಆಸೀಸ್ ಪಡೆ ಕೇವಲ 263 ರನ್​ಗಳಿಗೆ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಅದಕ್ಕೆ ಸ್ಪಿನ್ ಮೋಡಿಗಾರ ನಾಥನ್ ಲಿಯಾನ್ ಅವಕಾಶವನ್ನೇ ಕಲ್ಪಿಸಿರಲಿಲ್ಲ.

ಬಾರ್ಡರ್-ಗವಾಸ್ಕರ್ ಸರಣಿಯ 2ನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಮೊಹಮ್ಮದ್ ಶಮಿ (4 ವಿಕೆಟ್) ಅವರ ಕರಾರುವಾಕ್ ದಾಳಿಗೆ ತತ್ತರಿಸಿದ ಆಸೀಸ್ ಪಡೆ ಕೇವಲ 263 ರನ್​ಗಳಿಗೆ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಅದಕ್ಕೆ ಸ್ಪಿನ್ ಮೋಡಿಗಾರ ನಾಥನ್ ಲಿಯಾನ್ ಅವಕಾಶವನ್ನೇ ಕಲ್ಪಿಸಿರಲಿಲ್ಲ.

2 / 9
2ನೇ ದಿನದಾಟದಲ್ಲಿ ಸ್ಪಿನ್ ಮೋಡಿ ಮಾಡಿದ ನಾಥನ್ ಲಿಯಾನ್ ಕೆಎಲ್ ರಾಹುಲ್ (17) ಅವರ ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ರೋಹಿತ್ ಶರ್ಮಾ (32) ರನ್ನು ಕ್ಲೀನ್ ಬೌಲ್ಡ್ ಮಾಡಿದರು.

2ನೇ ದಿನದಾಟದಲ್ಲಿ ಸ್ಪಿನ್ ಮೋಡಿ ಮಾಡಿದ ನಾಥನ್ ಲಿಯಾನ್ ಕೆಎಲ್ ರಾಹುಲ್ (17) ಅವರ ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ರೋಹಿತ್ ಶರ್ಮಾ (32) ರನ್ನು ಕ್ಲೀನ್ ಬೌಲ್ಡ್ ಮಾಡಿದರು.

3 / 9
ಆ ಬಳಿಕ 100ನೇ ಟೆಸ್ಟ್ ಪಂದ್ಯವಾಡುತ್ತಿರುವ ಚೇತೇಶ್ವರ ಪೂಜಾರರನ್ನು ಶೂನ್ಯಕ್ಕೆ ಔಟ್ ಮಾಡಿ ಸಂಭ್ರಮಿಸಿದರು. ಇನ್ನು ನಾಥನ್ ಲಿಯಾನ್ ಅವರ ನಾಲ್ಕನೇ ಬಲಿ ಶ್ರೇಯಸ್ ಅಯ್ಯರ್ (4). ಇದಾದ ಬಳಿಕ ಕೆಎಸ್ ಭರತ್ (6) ಅವರನ್ನು ಔಟ್ ಮಾಡುವ ಮೂಲಕ ನಾಥನ್ ಲಿಯಾನ್ 5 ವಿಕೆಟ್​ಗಳ ಸಾಧನೆ ಮಾಡಿದರು.

ಆ ಬಳಿಕ 100ನೇ ಟೆಸ್ಟ್ ಪಂದ್ಯವಾಡುತ್ತಿರುವ ಚೇತೇಶ್ವರ ಪೂಜಾರರನ್ನು ಶೂನ್ಯಕ್ಕೆ ಔಟ್ ಮಾಡಿ ಸಂಭ್ರಮಿಸಿದರು. ಇನ್ನು ನಾಥನ್ ಲಿಯಾನ್ ಅವರ ನಾಲ್ಕನೇ ಬಲಿ ಶ್ರೇಯಸ್ ಅಯ್ಯರ್ (4). ಇದಾದ ಬಳಿಕ ಕೆಎಸ್ ಭರತ್ (6) ಅವರನ್ನು ಔಟ್ ಮಾಡುವ ಮೂಲಕ ನಾಥನ್ ಲಿಯಾನ್ 5 ವಿಕೆಟ್​ಗಳ ಸಾಧನೆ ಮಾಡಿದರು.

4 / 9
ವಿಶೇಷ ಎಂದರೆ ಈ 5 ವಿಕೆಟ್​ಗಳೊಂದಿಗೆ ನಾಥನ್ ಲಿಯಾನ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 100 ವಿಕೆಟ್ ಕಬಳಿಸಿದ ಮೊದಲ ಆಸ್ಟ್ರೇಲಿಯಾ ಬೌಲರ್ ಎನಿಸಿಕೊಂಡರು. ಅಲ್ಲದೆ ಭಾರತದ ವಿರುದ್ಧ ಟೆಸ್ಟ್​ ಕ್ರಿಕೆಟ್​ನಲ್ಲಿ ನೂರು ವಿಕೆಟ್ ಉರುಳಿಸಿದ ವಿಶ್ವದ ಮೂರನೇ ಬೌಲರ್​ ಎಂಬ ದಾಖಲೆಯನ್ನೂ ಕೂಡ ಬರೆದರು.

ವಿಶೇಷ ಎಂದರೆ ಈ 5 ವಿಕೆಟ್​ಗಳೊಂದಿಗೆ ನಾಥನ್ ಲಿಯಾನ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 100 ವಿಕೆಟ್ ಕಬಳಿಸಿದ ಮೊದಲ ಆಸ್ಟ್ರೇಲಿಯಾ ಬೌಲರ್ ಎನಿಸಿಕೊಂಡರು. ಅಲ್ಲದೆ ಭಾರತದ ವಿರುದ್ಧ ಟೆಸ್ಟ್​ ಕ್ರಿಕೆಟ್​ನಲ್ಲಿ ನೂರು ವಿಕೆಟ್ ಉರುಳಿಸಿದ ವಿಶ್ವದ ಮೂರನೇ ಬೌಲರ್​ ಎಂಬ ದಾಖಲೆಯನ್ನೂ ಕೂಡ ಬರೆದರು.

5 / 9
ಇದಕ್ಕೂ ಮುನ್ನ ಇಂಗ್ಲೆಂಡ್​ನ ಜೇಮ್ಸ್ ಅ್ಯಂಡರ್ಸನ್ ಹಾಗೂ ಮುತ್ತಯ್ಯ ಮುರಳೀಧರನ್ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ ಕ್ರಿಕೆಟ್​ನಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇನ್ನು ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ 100 ವಿಕೆಟ್ ಪಡೆದ ಮೂರನೇ ಬೌಲರ್​ ಎಂಬ ಹೆಗ್ಗಳಿಕೆಗೂ ನಾಥನ್ ಲಿಯಾನ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆಯನ್ನು ಅನಿಲ್ ಕುಂಬ್ಳೆ ಹಾಗೂ ಅಶ್ವಿನ್ ನಿರ್ಮಿಸಿದ್ದರು.

ಇದಕ್ಕೂ ಮುನ್ನ ಇಂಗ್ಲೆಂಡ್​ನ ಜೇಮ್ಸ್ ಅ್ಯಂಡರ್ಸನ್ ಹಾಗೂ ಮುತ್ತಯ್ಯ ಮುರಳೀಧರನ್ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ ಕ್ರಿಕೆಟ್​ನಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇನ್ನು ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ 100 ವಿಕೆಟ್ ಪಡೆದ ಮೂರನೇ ಬೌಲರ್​ ಎಂಬ ಹೆಗ್ಗಳಿಕೆಗೂ ನಾಥನ್ ಲಿಯಾನ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆಯನ್ನು ಅನಿಲ್ ಕುಂಬ್ಳೆ ಹಾಗೂ ಅಶ್ವಿನ್ ನಿರ್ಮಿಸಿದ್ದರು.

6 / 9
ಅನಿಲ್ ಕುಂಬ್ಳೆ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 38 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅನಿಲ್ ಕುಂಬ್ಳೆ ಒಟ್ಟು 111 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಭಾರತ-ಆಸ್ಟ್ರೇಲಿಯಾ ನಡುವಣ ಟೆಸ್ಟ್​​ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಅನಿಲ್ ಕುಂಬ್ಳೆ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 38 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅನಿಲ್ ಕುಂಬ್ಳೆ ಒಟ್ಟು 111 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಭಾರತ-ಆಸ್ಟ್ರೇಲಿಯಾ ನಡುವಣ ಟೆಸ್ಟ್​​ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

7 / 9
ರವಿಚಂದ್ರನ್ ಅಶ್ವಿನ್: ಅನಿಲ್ ಕುಂಬ್ಳೆ ಬಳಿಕ ಈ ಸಾಧನೆ ಮಾಡಿದ 2ನೇ ಬೌಲರ್ ಎಂಬ ಹೆಗ್ಗಳಿಕೆಗೆ ಅಶ್ವಿನ್ ಪಾತ್ರರಾಗಿದ್ದಾರೆ. ದೆಹಲಿ ಟೆಸ್ಟ್​ನ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸುವ ಮೂಲಕ ಅಶ್ವಿನ್ ಈ ಸಾಧನೆ ಮಾಡಿದರು. ಬಾರ್ಡರ್​-ಗವಾಸ್ಕರ್ ಸರಣಿಯಲ್ಲಿ 37 ಇನಿಂಗ್ಸ್​ನಲ್ಲಿ ಚೆಂಡೆಸೆದಿರುವ ಅಶ್ವಿನ್ ಒಟ್ಟು 100* ವಿಕೆಟ್ ಕಬಳಿಸಿದ್ದಾರೆ.

ರವಿಚಂದ್ರನ್ ಅಶ್ವಿನ್: ಅನಿಲ್ ಕುಂಬ್ಳೆ ಬಳಿಕ ಈ ಸಾಧನೆ ಮಾಡಿದ 2ನೇ ಬೌಲರ್ ಎಂಬ ಹೆಗ್ಗಳಿಕೆಗೆ ಅಶ್ವಿನ್ ಪಾತ್ರರಾಗಿದ್ದಾರೆ. ದೆಹಲಿ ಟೆಸ್ಟ್​ನ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸುವ ಮೂಲಕ ಅಶ್ವಿನ್ ಈ ಸಾಧನೆ ಮಾಡಿದರು. ಬಾರ್ಡರ್​-ಗವಾಸ್ಕರ್ ಸರಣಿಯಲ್ಲಿ 37 ಇನಿಂಗ್ಸ್​ನಲ್ಲಿ ಚೆಂಡೆಸೆದಿರುವ ಅಶ್ವಿನ್ ಒಟ್ಟು 100* ವಿಕೆಟ್ ಕಬಳಿಸಿದ್ದಾರೆ.

8 / 9
ನಾಥನ್ ಲಿಯಾನ್: ಟೀಮ್ ಇಂಡಿಯಾ ವಿರುದ್ಧ ದೆಹಲಿ ಟೆಸ್ಟ್​ನಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಈ ಸಾಧನೆ ಮಾಡಿದ 3ನೇ ಬೌಲರ್​ ಎಂಬ ಹಿರಿಮೆಗೆ ಲಿಯಾನ್ ಪಾತ್ರರಾಗಿದ್ದಾರೆ. ಬಾರ್ಡರ್-ಗವಾಸ್ಕರ್ ಟೆಸ್ಟ್​​ ಸರಣಿಯಲ್ಲಿ ಇದುವರೆಗೆ 43 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿರುವ ನಾಥನ್ ಲಿಯಾನ್ ಒಟ್ಟು 100* ಪಡೆದು ವಿಕೆಟ್ ಬೇಟೆ ಮುಂದುವರೆಸಿದ್ದಾರೆ.

ನಾಥನ್ ಲಿಯಾನ್: ಟೀಮ್ ಇಂಡಿಯಾ ವಿರುದ್ಧ ದೆಹಲಿ ಟೆಸ್ಟ್​ನಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಈ ಸಾಧನೆ ಮಾಡಿದ 3ನೇ ಬೌಲರ್​ ಎಂಬ ಹಿರಿಮೆಗೆ ಲಿಯಾನ್ ಪಾತ್ರರಾಗಿದ್ದಾರೆ. ಬಾರ್ಡರ್-ಗವಾಸ್ಕರ್ ಟೆಸ್ಟ್​​ ಸರಣಿಯಲ್ಲಿ ಇದುವರೆಗೆ 43 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿರುವ ನಾಥನ್ ಲಿಯಾನ್ ಒಟ್ಟು 100* ಪಡೆದು ವಿಕೆಟ್ ಬೇಟೆ ಮುಂದುವರೆಸಿದ್ದಾರೆ.

9 / 9
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?