AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ನಿರ್ಮಾಣ

Cricket World Record: ಅಂತಾರಾಷ್ಟ್ರೀಯ ಕ್ರಿಕೆಟ್​​​ನಲ್ಲಿ ತಂದೆ ಮತ್ತು ಮಗ ಒಂದೇ ದೇಶದ ಪರ ಆಡಿದ ಹಲವು ನಿದರ್ಶನಗಳಿವೆ. ಅಷ್ಟೇ ಅಲ್ಲದೆ ವಿವಿಧ ಲೀಗ್​​​ಗಳಲ್ಲಿ ಹಾಗೂ ದೇಶೀಯ ಟೂರ್ನಿಗಳಲ್ಲಿ ತಂದೆ ಮತ್ತು ಮಗ ಪರಸ್ಪರ ಎದುರಾಳಿಗಳಾಗಿ ಕಣಕ್ಕಿಳಿದ ಉದಾಹರಣೆಗಳಿವೆ. ಆದರೆ ಇದೇ ಮೊದಲ ಬಾರಿಗೆ ತಂಡವೊಂದರ ಪರ ತಂದೆ-ಮಗ ಜೊತೆಯಾಗಿ ಕಣಕ್ಕಿಳಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 10, 2025 | 7:09 AM

Share
ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ (New World Record) ನಿರ್ಮಾಣವಾಗಿದೆ. ಅದು ಕೂಡ ಹಿಂದೆಂದೂ ಕಂಡರಿಯದ ಮತ್ತು ಕೇಳರಿಯದ ವರ್ಲ್ಡ್​ ರೆಕಾರ್ಡ್​. ಇಂತಹದೊಂದು ದಾಖಲೆ ನಿರ್ಮಿಸಿರುವುದು ಸುಹೇಲ್ ಸತ್ತಾರ್ ಮತ್ತು ಯಹಿಯಾ ಸುಹೇಲ್.

ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ (New World Record) ನಿರ್ಮಾಣವಾಗಿದೆ. ಅದು ಕೂಡ ಹಿಂದೆಂದೂ ಕಂಡರಿಯದ ಮತ್ತು ಕೇಳರಿಯದ ವರ್ಲ್ಡ್​ ರೆಕಾರ್ಡ್​. ಇಂತಹದೊಂದು ದಾಖಲೆ ನಿರ್ಮಿಸಿರುವುದು ಸುಹೇಲ್ ಸತ್ತಾರ್ ಮತ್ತು ಯಹಿಯಾ ಸುಹೇಲ್.

1 / 5
ಸುಹೇಲ್ ಸತ್ತಾರ್ ಮತ್ತು ಯಹಿಯಾ ಸುಹೇಲ್ ಜೊತೆಯಾಗಿ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದರಲ್ಲೇನು ವಿಶೇಷ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ತಂದೆ ಮತ್ತು ಮಗ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ತಂದೆ ಮತ್ತು ಮಗ ಜೊತೆಯಾಗಿ ಒಂದೇ ತಂಡದ ಪರ ಕಣಕ್ಕಿಳಿದಿದ್ದಾರೆ.

ಸುಹೇಲ್ ಸತ್ತಾರ್ ಮತ್ತು ಯಹಿಯಾ ಸುಹೇಲ್ ಜೊತೆಯಾಗಿ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದರಲ್ಲೇನು ವಿಶೇಷ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ತಂದೆ ಮತ್ತು ಮಗ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ತಂದೆ ಮತ್ತು ಮಗ ಜೊತೆಯಾಗಿ ಒಂದೇ ತಂಡದ ಪರ ಕಣಕ್ಕಿಳಿದಿದ್ದಾರೆ.

2 / 5
ಅಂತಾರಾಷ್ಟ್ರೀಯ ಕ್ರಿಕೆಟ್ ಶುರುವಾಗಿ ಬರೋಬ್ಬರಿ 148 ವರ್ಷಗಳಾಗಿವೆ. ಈ ನೂರ ನಲ್ವತ್ತೆಂಟು ವರ್ಷಗಳಲ್ಲಿ ಯಾವುದೇ ತಂಡದ ಪರ ತಂದೆ ಮತ್ತು ಮಗ ಜೊತೆಯಾಗಿ ಅಂತಾರಾಷ್ಟ್ರೀಯ ಪಂದ್ಯವಾಡಿರಲಿಲ್ಲ. ಆದರೀಗ ಟಿಮೋರ್-ಲೆಸ್ಟೆ (ಆಗ್ನೇಯ ಏಷ್ಯಾ ರಾಷ್ಟ್ರ) ದೇಶದ ಪರ ಕಣಕ್ಕಿಳಿಯುವ ಮೂಲಕ ಸುಹೇಲ್ ಸತ್ತಾರ್ ಮತ್ತು ಯಹಿಯಾ ಸುಹೇಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಶುರುವಾಗಿ ಬರೋಬ್ಬರಿ 148 ವರ್ಷಗಳಾಗಿವೆ. ಈ ನೂರ ನಲ್ವತ್ತೆಂಟು ವರ್ಷಗಳಲ್ಲಿ ಯಾವುದೇ ತಂಡದ ಪರ ತಂದೆ ಮತ್ತು ಮಗ ಜೊತೆಯಾಗಿ ಅಂತಾರಾಷ್ಟ್ರೀಯ ಪಂದ್ಯವಾಡಿರಲಿಲ್ಲ. ಆದರೀಗ ಟಿಮೋರ್-ಲೆಸ್ಟೆ (ಆಗ್ನೇಯ ಏಷ್ಯಾ ರಾಷ್ಟ್ರ) ದೇಶದ ಪರ ಕಣಕ್ಕಿಳಿಯುವ ಮೂಲಕ ಸುಹೇಲ್ ಸತ್ತಾರ್ ಮತ್ತು ಯಹಿಯಾ ಸುಹೇಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

3 / 5
ಇಂಡೋನೇಷ್ಯಾ ವಿರುದ್ಧದ ಪಂದ್ಯದಲ್ಲಿ ಟಿಮೋರ್-ಲೆಸ್ಟೆ ಪರ 50 ವರ್ಷದ ಸುಹೇಲ್ ಸತ್ತಾರ್ ಹಾಗೂ 17 ವರ್ಷದ ಯಹಿಯಾ ಸುಹೇಲ್ ಕಣಕ್ಕಿಳಿದಿದ್ದಾರೆ. ಅಷ್ಟೇ ಅಲ್ಲದೆ ಇಬ್ಬರು ಸಹ ಜೊತೆಯಾಗಿ ಬ್ಯಾಟಿಂಗ್ ಸಹ ಮಾಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಜೊತೆಯಾಗಿ ಆಡಿದ ತಂದೆ-ಮಗ ಎನಿಸಿಕೊಂಡಿದ್ದಾರೆ.

ಇಂಡೋನೇಷ್ಯಾ ವಿರುದ್ಧದ ಪಂದ್ಯದಲ್ಲಿ ಟಿಮೋರ್-ಲೆಸ್ಟೆ ಪರ 50 ವರ್ಷದ ಸುಹೇಲ್ ಸತ್ತಾರ್ ಹಾಗೂ 17 ವರ್ಷದ ಯಹಿಯಾ ಸುಹೇಲ್ ಕಣಕ್ಕಿಳಿದಿದ್ದಾರೆ. ಅಷ್ಟೇ ಅಲ್ಲದೆ ಇಬ್ಬರು ಸಹ ಜೊತೆಯಾಗಿ ಬ್ಯಾಟಿಂಗ್ ಸಹ ಮಾಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಜೊತೆಯಾಗಿ ಆಡಿದ ತಂದೆ-ಮಗ ಎನಿಸಿಕೊಂಡಿದ್ದಾರೆ.

4 / 5
ಇನ್ನು ಬಾಲಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸುಹೇಲ್ ಸತ್ತಾರ್ 14 ರನ್​​ಗಳಿಸಿದರೆ, ಯಹಿಯಾ ಸುಹೇಲ್ ಕೇವಲ 1 ರನ್​​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಟಿಮೋರ್-ಲೆಸ್ಟೆ ತಂಡ 19 ಓವರ್​​​ಗಳಲ್ಲಿ 61 ರನ್​​ಗಳಿಸಿ ಆಲೌಟ್ ಆಗಿತ್ತು.ಈ ಗುರಿಯನ್ನು ನಾಲ್ಕು ಓವರ್​​​ಗಳಲ್ಲಿ ಚೇಸ್ ಮಾಡಿ ಇಂಡೋನೇಷ್ಯಾ ತಂಡ 10 ವಿಕೆಟ್​​​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಬಾಲಿಯಲ್ಲಿ ನಡೆದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸುಹೇಲ್ ಸತ್ತಾರ್ 14 ರನ್​​ಗಳಿಸಿದರೆ, ಯಹಿಯಾ ಸುಹೇಲ್ ಕೇವಲ 1 ರನ್​​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಟಿಮೋರ್-ಲೆಸ್ಟೆ ತಂಡ 19 ಓವರ್​​​ಗಳಲ್ಲಿ 61 ರನ್​​ಗಳಿಸಿ ಆಲೌಟ್ ಆಗಿತ್ತು.ಈ ಗುರಿಯನ್ನು ನಾಲ್ಕು ಓವರ್​​​ಗಳಲ್ಲಿ ಚೇಸ್ ಮಾಡಿ ಇಂಡೋನೇಷ್ಯಾ ತಂಡ 10 ವಿಕೆಟ್​​​ಗಳ ಭರ್ಜರಿ ಜಯ ಸಾಧಿಸಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ