AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NZ vs AUS: ನ್ಯೂಝಿಲೆಂಡ್​ನ ಬಗ್ಗು ಬಡಿದು ವಿಶ್ವ ದಾಖಲೆ ಬರೆದ ಆಸ್ಟ್ರೇಲಿಯಾ

New Zealand vs Australia, 3rd T20I: ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 100 ಗೆಲುವು ದಾಖಲಿಸಿದ ವಿಶೇಷ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ಬರೆದಿದೆ. ಅಲ್ಲದೆ ಈ ಸಾಧನೆ ಮಾಡಿದ 4ನೇ ತಂಡ ಎನಿಸಿಕೊಂಡಿದೆ.

TV9 Web
| Edited By: |

Updated on: Feb 25, 2024 | 12:59 PM

Share
ಆಕ್ಲೆಂಡ್​ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಮಳೆಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 10.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 118 ರನ್​ ಕಲೆಹಾಕಿತು.

ಆಕ್ಲೆಂಡ್​ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಮಳೆಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 10.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 118 ರನ್​ ಕಲೆಹಾಕಿತು.

1 / 6
ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಇದಾದ ಬಳಿಕ ಡಕ್​ವರ್ಥ್ ಲೂಯಿಸ್ ನಿಯಮದ ಪ್ರಕಾರ ನ್ಯೂಝಿಲೆಂಡ್ ತಂಡಕ್ಕೆ 10 ಓವರ್​ಗಳಲ್ಲಿ 126 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 3 ವಿಕೆಟ್ ಕಳೆದುಕೊಂಡು 98 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 27 ರನ್​ಗಳ ಜಯ ಸಾಧಿಸಿದೆ.

ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಇದಾದ ಬಳಿಕ ಡಕ್​ವರ್ಥ್ ಲೂಯಿಸ್ ನಿಯಮದ ಪ್ರಕಾರ ನ್ಯೂಝಿಲೆಂಡ್ ತಂಡಕ್ಕೆ 10 ಓವರ್​ಗಳಲ್ಲಿ 126 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 3 ವಿಕೆಟ್ ಕಳೆದುಕೊಂಡು 98 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 27 ರನ್​ಗಳ ಜಯ ಸಾಧಿಸಿದೆ.

2 / 6
ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನು ಗೆದ್ದ ವಿಶೇಷ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ಬರೆದಿದೆ. ಇದಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ ಕೇವಲ 3 ತಂಡಗಳು ಮಾತ್ರ ನೂರಕ್ಕಿಂತ ಹೆಚ್ಚಿನ ಪಂದ್ಯಗಳಲ್ಲಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ನಲ್ಲಿ 100 ಪಂದ್ಯಗಳನ್ನು ಗೆದ್ದ ವಿಶೇಷ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ಬರೆದಿದೆ. ಇದಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ ಕೇವಲ 3 ತಂಡಗಳು ಮಾತ್ರ ನೂರಕ್ಕಿಂತ ಹೆಚ್ಚಿನ ಪಂದ್ಯಗಳಲ್ಲಿ ಜಯ ಸಾಧಿಸಿದೆ.

3 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾ. 219 ಟಿ20 ಪಂದ್ಯಗಳನ್ನಾಡಿರುವ ಭಾರತ ತಂಡವು ಒಟ್ಟು 140 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾ. 219 ಟಿ20 ಪಂದ್ಯಗಳನ್ನಾಡಿರುವ ಭಾರತ ತಂಡವು ಒಟ್ಟು 140 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

4 / 6
ಹಾಗೆಯೇ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಪಾಕಿಸ್ತಾನ್ ತಂಡ 231 ಪಂದ್ಯಗಳಲ್ಲಿ 136 ರಲ್ಲಿ ಜಯ ಸಾಧಿಸಿದೆ. ಮೂರನೇ ಸ್ಥಾನದಲ್ಲಿ ನ್ಯೂಝಿಲೆಂಡ್ ತಂಡವಿದ್ದು, ಕಿವೀಸ್ ಪಡೆ 211 ಪಂದ್ಯಗಳಲ್ಲಿ 107 ಮ್ಯಾಚ್​ಗಳಲ್ಲಿ ಗೆಲುವು ಸಾಧಿಸಿದೆ.

ಹಾಗೆಯೇ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಪಾಕಿಸ್ತಾನ್ ತಂಡ 231 ಪಂದ್ಯಗಳಲ್ಲಿ 136 ರಲ್ಲಿ ಜಯ ಸಾಧಿಸಿದೆ. ಮೂರನೇ ಸ್ಥಾನದಲ್ಲಿ ನ್ಯೂಝಿಲೆಂಡ್ ತಂಡವಿದ್ದು, ಕಿವೀಸ್ ಪಡೆ 211 ಪಂದ್ಯಗಳಲ್ಲಿ 107 ಮ್ಯಾಚ್​ಗಳಲ್ಲಿ ಗೆಲುವು ಸಾಧಿಸಿದೆ.

5 / 6
ಇದೀಗ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯನ್ನು 3-0 ಅಂತರದಿಂದ ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡ 100ನೇ ಗೆಲುವು ದಾಖಲಿಸಿದೆ. ಇದುವರೆಗೆ 188 ಟಿ20 ಪಂದ್ಯಗಳನ್ನಾಡಿರುವ ಆಸೀಸ್ ಪಡೆ, ಇದೀಗ ನೂರನೇ ಗೆಲುವು ದಾಖಲಿಸಿ ಟಿ20 ಕ್ರಿಕೆಟ್​ನಲ್ಲಿ 100 ಪಂದ್ಯಗಳಲ್ಲಿ ಜಯ ಸಾಧಿಸಿದ ವಿಶ್ವದ 4ನೇ ತಂಡವಾಗಿ ಹೊರಹೊಮ್ಮಿದೆ.

ಇದೀಗ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯನ್ನು 3-0 ಅಂತರದಿಂದ ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡ 100ನೇ ಗೆಲುವು ದಾಖಲಿಸಿದೆ. ಇದುವರೆಗೆ 188 ಟಿ20 ಪಂದ್ಯಗಳನ್ನಾಡಿರುವ ಆಸೀಸ್ ಪಡೆ, ಇದೀಗ ನೂರನೇ ಗೆಲುವು ದಾಖಲಿಸಿ ಟಿ20 ಕ್ರಿಕೆಟ್​ನಲ್ಲಿ 100 ಪಂದ್ಯಗಳಲ್ಲಿ ಜಯ ಸಾಧಿಸಿದ ವಿಶ್ವದ 4ನೇ ತಂಡವಾಗಿ ಹೊರಹೊಮ್ಮಿದೆ.

6 / 6
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು