AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರ್ ನಿವೃತ್ತಿ ಘೋಷಿಸಿದ ನಿಕೋಲಸ್ ಪೂರನ್..!

Nicholas Pooran retirement: ವೆಸ್ಟ್ ಇಂಡೀಸ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ನಿಕೋಲಸ್ ಪೂರನ್ 29ನೇ ವಯಸ್ಸಿನಲ್ಲಿ ಇಂಟರ್​ನ್ಯಾಷನಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ಇದಾಗ್ಯೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೇರಿದಂತೆ ವಿಶ್ವದ ಪ್ರಮುಖ ಲೀಗ್​ಗಳಲ್ಲಿ ಮುಂದುವರೆಯುವುದಾಗಿ ಅವರು ತಿಳಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 10, 2025 | 8:01 AM

ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ದಾಂಡಿಗ ನಿಕೋಲಸ್ ಪೂರನ್ (Nicholas Pooran) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಅದು ಕೂಡ ತಮ್ಮ 29ನೇ ವಯಸ್ಸಿನಲ್ಲಿ ಎಂಬುದೇ ಅಚ್ಚರಿ. 2016 ರಲ್ಲಿ ವಿಂಡೀಸ್ ಪರ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಪೂರನ್ ಕೇವಲ 9 ವರ್ಷಗಳಲ್ಲೇ ಇಂಟರ್​ನ್ಯಾಷನಲ್ ಕೆರಿಯರ್ ಅಂತ್ಯಗೊಳಿಸಿದ್ದಾರೆ.

ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ದಾಂಡಿಗ ನಿಕೋಲಸ್ ಪೂರನ್ (Nicholas Pooran) ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಅದು ಕೂಡ ತಮ್ಮ 29ನೇ ವಯಸ್ಸಿನಲ್ಲಿ ಎಂಬುದೇ ಅಚ್ಚರಿ. 2016 ರಲ್ಲಿ ವಿಂಡೀಸ್ ಪರ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಪೂರನ್ ಕೇವಲ 9 ವರ್ಷಗಳಲ್ಲೇ ಇಂಟರ್​ನ್ಯಾಷನಲ್ ಕೆರಿಯರ್ ಅಂತ್ಯಗೊಳಿಸಿದ್ದಾರೆ.

1 / 5
ಈ ಬಗ್ಗೆ ಸೋಷಿಯಲ್ ಮೀಡಿಯಾದ ಪೋಸ್ಟ್ ಹಂಚಿಕೊಂಡಿರುವ ನಿಕೋಲಸ್ ಪೂರನ್, ಬಹಳ ಯೋಚಿಸಿದ ನಂತರ, ನಾನು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ನಾವು ಪ್ರೀತಿಸುವ ಈ ಆಟ ನಮಗೆ ತುಂಬಾ ನೀಡಿದೆ ಮತ್ತು ಮುಂದೆಯೂ ನೀಡುತ್ತದೆ. ಸಂತೋಷ, ಉದ್ದೇಶ, ಅನೇಕ ನೆನಪುಗಳು ಮತ್ತು ವೆಸ್ಟ್ ಇಂಡೀಸ್ ತಂಡವನ್ನು ಪ್ರತಿನಿಧಿಸುವ ಅವಕಾಶ. ಮೆರೂನ್ ಜೆರ್ಸಿ ಧರಿಸುವುದು, ರಾಷ್ಟ್ರಗೀತೆಗಾಗಿ ನಿಲ್ಲುವುದು ಮತ್ತು ನೀವು ಪ್ರತಿ ಬಾರಿ ಮೈದಾನಕ್ಕೆ ಕಾಲಿಡುವಾಗ ಎಲ್ಲವನ್ನೂ ನೀಡುವುದು... ಇವುಗಳನ್ನು ಪದಗಳಲ್ಲಿ ಹೇಳುವುದು ಕಷ್ಟ.

ಈ ಬಗ್ಗೆ ಸೋಷಿಯಲ್ ಮೀಡಿಯಾದ ಪೋಸ್ಟ್ ಹಂಚಿಕೊಂಡಿರುವ ನಿಕೋಲಸ್ ಪೂರನ್, ಬಹಳ ಯೋಚಿಸಿದ ನಂತರ, ನಾನು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ನಾವು ಪ್ರೀತಿಸುವ ಈ ಆಟ ನಮಗೆ ತುಂಬಾ ನೀಡಿದೆ ಮತ್ತು ಮುಂದೆಯೂ ನೀಡುತ್ತದೆ. ಸಂತೋಷ, ಉದ್ದೇಶ, ಅನೇಕ ನೆನಪುಗಳು ಮತ್ತು ವೆಸ್ಟ್ ಇಂಡೀಸ್ ತಂಡವನ್ನು ಪ್ರತಿನಿಧಿಸುವ ಅವಕಾಶ. ಮೆರೂನ್ ಜೆರ್ಸಿ ಧರಿಸುವುದು, ರಾಷ್ಟ್ರಗೀತೆಗಾಗಿ ನಿಲ್ಲುವುದು ಮತ್ತು ನೀವು ಪ್ರತಿ ಬಾರಿ ಮೈದಾನಕ್ಕೆ ಕಾಲಿಡುವಾಗ ಎಲ್ಲವನ್ನೂ ನೀಡುವುದು... ಇವುಗಳನ್ನು ಪದಗಳಲ್ಲಿ ಹೇಳುವುದು ಕಷ್ಟ.

2 / 5
ಇವೆಲ್ಲದರ ನಡುವೆ ನಾಯಕನಾಗಿ ವೆಸ್ಟ್ ಇಂಡೀಸ್ ತಂಡವನ್ನು ಮುನ್ನಡೆಸುವ ಗೌರವ ಕೂಡ ಸಿಕ್ಕಿದೆ. ಅಭಿಮಾನಿಗಳ ಅಚಲ ಪ್ರೀತಿಗೆ ಧನ್ಯವಾದಗಳು. ನೀವು ಕಷ್ಟದ ಕ್ಷಣಗಳಲ್ಲಿ ನನ್ನನ್ನು ಬೆಂಬಲಿಸಿದ್ದೀರಿ ಮತ್ತು ಉತ್ತಮ ಕ್ಷಣಗಳನ್ನು ಅಪ್ರತಿಮ ಉತ್ಸಾಹದಿಂದ ಆಚರಿಸಿದ್ದೀರಿ. ನನ್ನೊಂದಿಗೆ ಈ ಪ್ರಯಾಣವನ್ನು ನಡೆಸಿದ್ದಕ್ಕಾಗಿ ನನ್ನ ಕುಟುಂಬ, ಸ್ನೇಹಿತರು ಮತ್ತು ತಂಡದ ಸದಸ್ಯರಿಗೆ ಧನ್ಯವಾದಗಳು ಎಂದು ನಿಕೋಲಸ್ ಪೂರನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇವೆಲ್ಲದರ ನಡುವೆ ನಾಯಕನಾಗಿ ವೆಸ್ಟ್ ಇಂಡೀಸ್ ತಂಡವನ್ನು ಮುನ್ನಡೆಸುವ ಗೌರವ ಕೂಡ ಸಿಕ್ಕಿದೆ. ಅಭಿಮಾನಿಗಳ ಅಚಲ ಪ್ರೀತಿಗೆ ಧನ್ಯವಾದಗಳು. ನೀವು ಕಷ್ಟದ ಕ್ಷಣಗಳಲ್ಲಿ ನನ್ನನ್ನು ಬೆಂಬಲಿಸಿದ್ದೀರಿ ಮತ್ತು ಉತ್ತಮ ಕ್ಷಣಗಳನ್ನು ಅಪ್ರತಿಮ ಉತ್ಸಾಹದಿಂದ ಆಚರಿಸಿದ್ದೀರಿ. ನನ್ನೊಂದಿಗೆ ಈ ಪ್ರಯಾಣವನ್ನು ನಡೆಸಿದ್ದಕ್ಕಾಗಿ ನನ್ನ ಕುಟುಂಬ, ಸ್ನೇಹಿತರು ಮತ್ತು ತಂಡದ ಸದಸ್ಯರಿಗೆ ಧನ್ಯವಾದಗಳು ಎಂದು ನಿಕೋಲಸ್ ಪೂರನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

3 / 5
ನಿಕೋಲಸ್ ಪೂರನ್ ವೆಸ್ಟ್ ಇಂಡೀಸ್ ಪರ 61 ಏಕದಿನ ಪಂದ್ಯಗಳನ್ನಾಡಿದ್ದು, ಈ ವೇಳೆ 39.66 ಸರಾಸರಿಯಲ್ಲಿ 1983 ರನ್ ಗಳಿಸಿದ್ದಾರೆ. ಇದರಲ್ಲಿ 3 ಶತಕಗಳು ಮತ್ತು 11 ಅರ್ಧಶತಕಗಳು ಸೇರಿವೆ. ಹಾಗೆಯೇ ವಿಂಡೀಸ್ ಪರ 106 ಟಿ20 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಪೂರನ್ ಒಟ್ಟು 2275 ರನ್ ಗಳಿಸಿದ್ದಾರೆ. ಈ ವೇಳೆ 13 ಅರ್ಧಶತಕಗಳನ್ನು ಬಾರಿಸಿದ್ದಾರೆ.

ನಿಕೋಲಸ್ ಪೂರನ್ ವೆಸ್ಟ್ ಇಂಡೀಸ್ ಪರ 61 ಏಕದಿನ ಪಂದ್ಯಗಳನ್ನಾಡಿದ್ದು, ಈ ವೇಳೆ 39.66 ಸರಾಸರಿಯಲ್ಲಿ 1983 ರನ್ ಗಳಿಸಿದ್ದಾರೆ. ಇದರಲ್ಲಿ 3 ಶತಕಗಳು ಮತ್ತು 11 ಅರ್ಧಶತಕಗಳು ಸೇರಿವೆ. ಹಾಗೆಯೇ ವಿಂಡೀಸ್ ಪರ 106 ಟಿ20 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಪೂರನ್ ಒಟ್ಟು 2275 ರನ್ ಗಳಿಸಿದ್ದಾರೆ. ಈ ವೇಳೆ 13 ಅರ್ಧಶತಕಗಳನ್ನು ಬಾರಿಸಿದ್ದಾರೆ.

4 / 5
ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ಸ್ಫೋಟಕ ದಾಂಡಿಗನಾಗಿ ಗುರುತಿಸಿಕೊಂಡಿದ್ದ ಪೂರನ್​ಗೆ ವೆಸ್ಟ್ ಇಂಡೀಸ್ ಪರ ಟೆಸ್ಟ್ ಪಂದ್ಯವಾಡುವ ಅವಕಾಶ ದೊರೆತಿರಲಿಲ್ಲ. ಈ ಅವಕಾಶಕ್ಕೂ ಮುನ್ನವೇ ಅವರು ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಅವರು ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ಸ್ಫೋಟಕ ದಾಂಡಿಗನಾಗಿ ಗುರುತಿಸಿಕೊಂಡಿದ್ದ ಪೂರನ್​ಗೆ ವೆಸ್ಟ್ ಇಂಡೀಸ್ ಪರ ಟೆಸ್ಟ್ ಪಂದ್ಯವಾಡುವ ಅವಕಾಶ ದೊರೆತಿರಲಿಲ್ಲ. ಈ ಅವಕಾಶಕ್ಕೂ ಮುನ್ನವೇ ಅವರು ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಅವರು ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

5 / 5

Published On - 8:00 am, Tue, 10 June 25

Follow us
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ