AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಸೆಂಚುರಿ ಸಿಡಿಸಿದ ನಿತೀಶ್ ಕುಮಾರ್ ರೆಡ್ಡಿ

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 474 ರನ್​​ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಪರ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿದ್ದು, ಈ ಮೂಲಕ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ದಿಟ್ಟ ಹೋರಾಟವನ್ನೇ ಪ್ರದರ್ಶಿಸಿದೆ.

ಝಾಹಿರ್ ಯೂಸುಫ್
|

Updated on: Dec 28, 2024 | 11:52 AM

Share
ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ 171 ಎಸೆತಗಳಲ್ಲಿ ಚೊಚ್ಚಲ ಶತಕ ಪೂರೈಸಿದರು.

ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ 171 ಎಸೆತಗಳಲ್ಲಿ ಚೊಚ್ಚಲ ಶತಕ ಪೂರೈಸಿದರು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 3 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 24 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 3 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 24 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

2 / 5
ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಯಶಸ್ವಿ ಜೈಸ್ವಾಲ್ ಶತಕದ ಜೊತೆಯಾಟ ಪ್ರದರ್ಶಿಸಿದರು. ಆದರೆ ತಂಡದ ಮೊತ್ತ 153 ರನ್ ಆಗಿದ್ದ ವೇಳೆ ರನ್​ ಕದಿಯುವ ಯತ್ನದಲ್ಲಿ ಯಶಸ್ವಿ ಜೈಸ್ವಾಲ್ (82) ರನೌಟ್ ಆಗಿ ಹೊರ ನಡೆದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (36) ಸಹ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಆಕಾಶ್ ದೀಪ್ (0) ಶೂನ್ಯಕ್ಕೆ ಔಟಾದರೆ, ರಿಷಭ್ ಪಂತ್ 28 ರನ್​ಗಳಿಸಲಷ್ಟೇ ಶಕ್ತರಾದರು.

ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಯಶಸ್ವಿ ಜೈಸ್ವಾಲ್ ಶತಕದ ಜೊತೆಯಾಟ ಪ್ರದರ್ಶಿಸಿದರು. ಆದರೆ ತಂಡದ ಮೊತ್ತ 153 ರನ್ ಆಗಿದ್ದ ವೇಳೆ ರನ್​ ಕದಿಯುವ ಯತ್ನದಲ್ಲಿ ಯಶಸ್ವಿ ಜೈಸ್ವಾಲ್ (82) ರನೌಟ್ ಆಗಿ ಹೊರ ನಡೆದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (36) ಸಹ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಆಕಾಶ್ ದೀಪ್ (0) ಶೂನ್ಯಕ್ಕೆ ಔಟಾದರೆ, ರಿಷಭ್ ಪಂತ್ 28 ರನ್​ಗಳಿಸಲಷ್ಟೇ ಶಕ್ತರಾದರು.

3 / 5
ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ಕುಮಾರ್ ರೆಡ್ಡಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯೊಂದಿಗೆ ರನ್ ಗಳಿಸುತ್ತಾ ಸಾಗಿದ ನಿತೀಶ್ 81 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿಯ ಬಳಿಕ ಆಸೀಸ್ ಬೌಲರ್​​ಗಳನ್ನು ಕಾಡಿದ ಯುವ ದಾಂಡಿಗ ಟೀಮ್ ಇಂಡಿಯಾ ಮೊತ್ತವನ್ನು 300ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ಕುಮಾರ್ ರೆಡ್ಡಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯೊಂದಿಗೆ ರನ್ ಗಳಿಸುತ್ತಾ ಸಾಗಿದ ನಿತೀಶ್ 81 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿಯ ಬಳಿಕ ಆಸೀಸ್ ಬೌಲರ್​​ಗಳನ್ನು ಕಾಡಿದ ಯುವ ದಾಂಡಿಗ ಟೀಮ್ ಇಂಡಿಯಾ ಮೊತ್ತವನ್ನು 300ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

4 / 5
ಅಲ್ಲದೆ 171 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್​​ಗಳೊಂದಿಗೆ ಭರ್ಜರಿ ಶತಕ ಸಿಡಿಸಿದರು. ನಿತೀಶ್ ಕುಮಾರ್ ರೆಡ್ಡಿ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ 115 ಓವರ್​ಗಳ ಮುಕ್ತಾಯದ ವೇಳೆಗೆ 9 ವಿಕೆಟ್ ಕಳೆದುಕೊಂಡು 354 ರನ್ ಕಲೆಹಾಕಿದೆ.

ಅಲ್ಲದೆ 150 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​​ಗಳೊಂದಿಗೆ ಭರ್ಜರಿ ಶತಕ ಸಿಡಿಸಿದರು. ನಿತೀಶ್ ಕುಮಾರ್ ರೆಡ್ಡಿ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ 110 ಓವರ್​ಗಳ ಮುಕ್ತಾಯದ ವೇಳೆಗೆ 7 ವಿಕೆಟ್ ಕಳೆದುಕೊಂಡು 350 ರನ್ ಕಲೆಹಾಕಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ