AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಸೆಂಚುರಿ ಸಿಡಿಸಿದ ನಿತೀಶ್ ಕುಮಾರ್ ರೆಡ್ಡಿ

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 474 ರನ್​​ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ ಪರ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿದ್ದು, ಈ ಮೂಲಕ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ದಿಟ್ಟ ಹೋರಾಟವನ್ನೇ ಪ್ರದರ್ಶಿಸಿದೆ.

ಝಾಹಿರ್ ಯೂಸುಫ್
|

Updated on: Dec 28, 2024 | 11:52 AM

Share
ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ 171 ಎಸೆತಗಳಲ್ಲಿ ಚೊಚ್ಚಲ ಶತಕ ಪೂರೈಸಿದರು.

ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ 171 ಎಸೆತಗಳಲ್ಲಿ ಚೊಚ್ಚಲ ಶತಕ ಪೂರೈಸಿದರು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 3 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 24 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 3 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 24 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

2 / 5
ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಯಶಸ್ವಿ ಜೈಸ್ವಾಲ್ ಶತಕದ ಜೊತೆಯಾಟ ಪ್ರದರ್ಶಿಸಿದರು. ಆದರೆ ತಂಡದ ಮೊತ್ತ 153 ರನ್ ಆಗಿದ್ದ ವೇಳೆ ರನ್​ ಕದಿಯುವ ಯತ್ನದಲ್ಲಿ ಯಶಸ್ವಿ ಜೈಸ್ವಾಲ್ (82) ರನೌಟ್ ಆಗಿ ಹೊರ ನಡೆದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (36) ಸಹ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಆಕಾಶ್ ದೀಪ್ (0) ಶೂನ್ಯಕ್ಕೆ ಔಟಾದರೆ, ರಿಷಭ್ ಪಂತ್ 28 ರನ್​ಗಳಿಸಲಷ್ಟೇ ಶಕ್ತರಾದರು.

ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಯಶಸ್ವಿ ಜೈಸ್ವಾಲ್ ಶತಕದ ಜೊತೆಯಾಟ ಪ್ರದರ್ಶಿಸಿದರು. ಆದರೆ ತಂಡದ ಮೊತ್ತ 153 ರನ್ ಆಗಿದ್ದ ವೇಳೆ ರನ್​ ಕದಿಯುವ ಯತ್ನದಲ್ಲಿ ಯಶಸ್ವಿ ಜೈಸ್ವಾಲ್ (82) ರನೌಟ್ ಆಗಿ ಹೊರ ನಡೆದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (36) ಸಹ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಆಕಾಶ್ ದೀಪ್ (0) ಶೂನ್ಯಕ್ಕೆ ಔಟಾದರೆ, ರಿಷಭ್ ಪಂತ್ 28 ರನ್​ಗಳಿಸಲಷ್ಟೇ ಶಕ್ತರಾದರು.

3 / 5
ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ಕುಮಾರ್ ರೆಡ್ಡಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯೊಂದಿಗೆ ರನ್ ಗಳಿಸುತ್ತಾ ಸಾಗಿದ ನಿತೀಶ್ 81 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿಯ ಬಳಿಕ ಆಸೀಸ್ ಬೌಲರ್​​ಗಳನ್ನು ಕಾಡಿದ ಯುವ ದಾಂಡಿಗ ಟೀಮ್ ಇಂಡಿಯಾ ಮೊತ್ತವನ್ನು 300ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ಕುಮಾರ್ ರೆಡ್ಡಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಎಚ್ಚರಿಕೆಯೊಂದಿಗೆ ರನ್ ಗಳಿಸುತ್ತಾ ಸಾಗಿದ ನಿತೀಶ್ 81 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿಯ ಬಳಿಕ ಆಸೀಸ್ ಬೌಲರ್​​ಗಳನ್ನು ಕಾಡಿದ ಯುವ ದಾಂಡಿಗ ಟೀಮ್ ಇಂಡಿಯಾ ಮೊತ್ತವನ್ನು 300ರ ಗಡಿದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

4 / 5
ಅಲ್ಲದೆ 171 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್​​ಗಳೊಂದಿಗೆ ಭರ್ಜರಿ ಶತಕ ಸಿಡಿಸಿದರು. ನಿತೀಶ್ ಕುಮಾರ್ ರೆಡ್ಡಿ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ 115 ಓವರ್​ಗಳ ಮುಕ್ತಾಯದ ವೇಳೆಗೆ 9 ವಿಕೆಟ್ ಕಳೆದುಕೊಂಡು 354 ರನ್ ಕಲೆಹಾಕಿದೆ.

ಅಲ್ಲದೆ 150 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​​ಗಳೊಂದಿಗೆ ಭರ್ಜರಿ ಶತಕ ಸಿಡಿಸಿದರು. ನಿತೀಶ್ ಕುಮಾರ್ ರೆಡ್ಡಿ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ 110 ಓವರ್​ಗಳ ಮುಕ್ತಾಯದ ವೇಳೆಗೆ 7 ವಿಕೆಟ್ ಕಳೆದುಕೊಂಡು 350 ರನ್ ಕಲೆಹಾಕಿದೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ