AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitish Rana: ಗೆದ್ದ ಕೆಕೆಆರ್​ಗೆ ಆಘಾತ: ನಿತೀಶ್ ರಾಣಾ ಮೇಲೆ ಕಠಿಣ ಕ್ರಮ ಕೈಗೊಂಡ ಬಿಸಿಸಿಐ

KKR vs PBKS, IPL 2023: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದ ಕೋಲ್ಕತ್ತಾಕ್ಕೆ ಆಘಾತ ಉಂಟಾಗಿದೆ. ತಂಡದ ನಾಯಕ ನಿತೀಶ್ ರಾಣ ಅವರಿಗೆ ದಂಡ ವಿಧಿಸಲಾಗಿದೆ. ಸ್ಲೋ ಓವರ್ ರೇಟ್‌ಗಾಗಿ ಪಂದ್ಯದ ಶುಲ್ಕದಿಂದ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

Vinay Bhat
|

Updated on: May 09, 2023 | 11:26 AM

Share
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಡೆಯುತ್ತಿರುವ ಎಲ್ಲ ಪಂದ್ಯಗಳು ಸಾಕಷ್ಟು ರೋಚಕತೆ ಸೃಷ್ಟಿಸುತ್ತಿದೆ. ಸೋಮವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಡೆಯುತ್ತಿರುವ ಎಲ್ಲ ಪಂದ್ಯಗಳು ಸಾಕಷ್ಟು ರೋಚಕತೆ ಸೃಷ್ಟಿಸುತ್ತಿದೆ. ಸೋಮವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಣ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು.

1 / 7
ಕೊನೆಯ 6 ಎಸೆತಗಳಲ್ಲಿ ಕೆಕೆಆರ್​ಗೆ ಗೆಲ್ಲಲು 6 ರನ್​ಗಳ ಅವಶ್ಯಕತೆಯಿತ್ತು. ಕೊನೆಯ ಎಸೆತದಲ್ಲಿ 2 ರನ್​ಗಳು ಬೇಕಾಗಿದ್ದವು. ಈ ಸಂದರ್ಭ ರಿಂಕು ಸಿಂಗ್ ಚೆಂಡನ್ನು ಬೌಂಡರಿಗೆ ಅಟ್ಟಿ ರೋಚಕ ಜಯ ತಂದಿಟ್ಟರು.

ಕೊನೆಯ 6 ಎಸೆತಗಳಲ್ಲಿ ಕೆಕೆಆರ್​ಗೆ ಗೆಲ್ಲಲು 6 ರನ್​ಗಳ ಅವಶ್ಯಕತೆಯಿತ್ತು. ಕೊನೆಯ ಎಸೆತದಲ್ಲಿ 2 ರನ್​ಗಳು ಬೇಕಾಗಿದ್ದವು. ಈ ಸಂದರ್ಭ ರಿಂಕು ಸಿಂಗ್ ಚೆಂಡನ್ನು ಬೌಂಡರಿಗೆ ಅಟ್ಟಿ ರೋಚಕ ಜಯ ತಂದಿಟ್ಟರು.

2 / 7
ಇದೀಗ ಗೆದ್ದ ಕೋಲ್ಕತ್ತಾಕ್ಕೆ ಆಘಾತ ಉಂಟಾಗಿದೆ. ತಂಡದ ನಾಯಕ ನಿತೀಶ್ ರಾಣ ಅವರಿಗೆ ದಂಡ ವಿಧಿಸಲಾಗಿದೆ. ಸ್ಲೋ ಓವರ್ ರೇಟ್‌ಗಾಗಿ ಪಂದ್ಯದ ಶುಲ್ಕದಿಂದ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಇದೀಗ ಗೆದ್ದ ಕೋಲ್ಕತ್ತಾಕ್ಕೆ ಆಘಾತ ಉಂಟಾಗಿದೆ. ತಂಡದ ನಾಯಕ ನಿತೀಶ್ ರಾಣ ಅವರಿಗೆ ದಂಡ ವಿಧಿಸಲಾಗಿದೆ. ಸ್ಲೋ ಓವರ್ ರೇಟ್‌ಗಾಗಿ ಪಂದ್ಯದ ಶುಲ್ಕದಿಂದ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

3 / 7
ಐಪಿಎಲ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಸೋಮವಾರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನಿಧಾನಗತಿಯ ಓವರಿಗಾಗಿ ದಂಡ ವಿಧಿಸಲಾಗಿದೆ. ನಾಯಕ ನಿತೀಶ್ ರಾಣ ಐಪಿಎಲ್ ನೀತಿ ಸಂಹಿತೆಯ ಪ್ರಕಾರ ರೂ. 12 ಲಕ್ಷ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ತಿಳಿಸಿದೆ.

ಐಪಿಎಲ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಸೋಮವಾರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ನಿಧಾನಗತಿಯ ಓವರಿಗಾಗಿ ದಂಡ ವಿಧಿಸಲಾಗಿದೆ. ನಾಯಕ ನಿತೀಶ್ ರಾಣ ಐಪಿಎಲ್ ನೀತಿ ಸಂಹಿತೆಯ ಪ್ರಕಾರ ರೂ. 12 ಲಕ್ಷ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ತಿಳಿಸಿದೆ.

4 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್​​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಕಲೆಹಾಕಿತು. ನಾಯಕ ಶಿಖರ್ ಧವನ್ 47 ಎಸೆತಗಳಲ್ಲಿ 57 ರನ್ ಗಳಿಸಿದರೆ, ಶಾರುಖ್ ಖಾನ್ ಅಂತಿಮ ಹಂತದಲ್ಲಿ 8 ಎಸೆತಗಳಲ್ಲಿ ಅಜೇಯ 21 ರನ್ ಸಿಡಿಸಿದರು. ಕೆಕೆಆರ್ ಪರ ವರುಣ್ ಚಕ್ರವರ್ತಿ 3 ವಿಕೆಟ್ ಪಡೆದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್​​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 179 ರನ್ ಕಲೆಹಾಕಿತು. ನಾಯಕ ಶಿಖರ್ ಧವನ್ 47 ಎಸೆತಗಳಲ್ಲಿ 57 ರನ್ ಗಳಿಸಿದರೆ, ಶಾರುಖ್ ಖಾನ್ ಅಂತಿಮ ಹಂತದಲ್ಲಿ 8 ಎಸೆತಗಳಲ್ಲಿ ಅಜೇಯ 21 ರನ್ ಸಿಡಿಸಿದರು. ಕೆಕೆಆರ್ ಪರ ವರುಣ್ ಚಕ್ರವರ್ತಿ 3 ವಿಕೆಟ್ ಪಡೆದರು.

5 / 7
ಟಾರ್ಗೆಟ್ ಬೆನ್ನಟ್ಟಿದ ಕೆಕೆಆರ್ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಬಾರಿಸಿ ರೋಚಕ ಗೆಲುವು ಸಾಧಿಸಿತು. ತಂಡದ ಪರ ನಾಯಕ ನಿತೀಶ್ ರಾಣ 38 ಎಸೆತಗಳಲ್ಲಿ 51 ರನ್ ಬಾರಿಸಿದರೆ, ಆಂಡ್ರೆ ರಸೆಲ್ 23 ಎಸೆತಗಳಲ್ಲಿ 42, ಜೇಸನ್ ರಾಯ್ 38 ರನ್​ಗಳ ಕೊಡುಗೆ ನೀಡಿದರು. ಪಂಜಾಬ್ ಪರ ರಾಹುಲ್ ಚಹರ್ 2 ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ಕೆಕೆಆರ್ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಬಾರಿಸಿ ರೋಚಕ ಗೆಲುವು ಸಾಧಿಸಿತು. ತಂಡದ ಪರ ನಾಯಕ ನಿತೀಶ್ ರಾಣ 38 ಎಸೆತಗಳಲ್ಲಿ 51 ರನ್ ಬಾರಿಸಿದರೆ, ಆಂಡ್ರೆ ರಸೆಲ್ 23 ಎಸೆತಗಳಲ್ಲಿ 42, ಜೇಸನ್ ರಾಯ್ 38 ರನ್​ಗಳ ಕೊಡುಗೆ ನೀಡಿದರು. ಪಂಜಾಬ್ ಪರ ರಾಹುಲ್ ಚಹರ್ 2 ವಿಕೆಟ್ ಪಡೆದರು.

6 / 7
ಈ ಗೆಲುವಿನ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಎಂಟನೇ ಸ್ಥಾನದಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಐದನೇ ಸ್ಥಾನಕ್ಕೆ ಜಿಗಿದಿದೆ. ಆಡಿದ 11 ಪಂದ್ಯಗಳಲ್ಲಿ ಐದು ಗೆಲುವು, ಆರರಲ್ಲಿ ಸೋಲುಂಡು -0.079 ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.

ಈ ಗೆಲುವಿನ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಎಂಟನೇ ಸ್ಥಾನದಲ್ಲಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಐದನೇ ಸ್ಥಾನಕ್ಕೆ ಜಿಗಿದಿದೆ. ಆಡಿದ 11 ಪಂದ್ಯಗಳಲ್ಲಿ ಐದು ಗೆಲುವು, ಆರರಲ್ಲಿ ಸೋಲುಂಡು -0.079 ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.

7 / 7
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ