AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಯುಎಸ್​ಎ ಟಿ20 ವಿಶ್ವಕಪ್ ತಂಡದಲ್ಲಿ ಕನ್ನಡಿಗ..!

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಯುಎಸ್​ಎ-ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿದೆ. ಈ ಟೂರ್ನಿಗಾಗಿ ಇದೀಗ ಆತಿಥೇಯ ಯುಎಸ್​ಎ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಕರ್ನಾಟಕ ಮೂಲದ ಆಟಗಾರರೊಬ್ಬರು ಕಾಣಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on:May 04, 2024 | 11:09 AM

Share
T20 World Cup 2024: ಟಿ20 ವಿಶ್ವಕಪ್​ಗಾಗಿ ಯುಎಸ್​ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗದಲ್ಲಿ ಕರುನಾಡ ಕುವರ ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಟಿ20 ವಿಶ್ವಕಪ್​ನಲ್ಲಿ ಯುಎಸ್​ಎ ಪರ ಕನ್ನಡಿಗನೋರ್ವ ಕೂಡ ಕಣಕ್ಕಿಳಿಯಲಿದ್ದಾರೆ.

T20 World Cup 2024: ಟಿ20 ವಿಶ್ವಕಪ್​ಗಾಗಿ ಯುಎಸ್​ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗದಲ್ಲಿ ಕರುನಾಡ ಕುವರ ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಟಿ20 ವಿಶ್ವಕಪ್​ನಲ್ಲಿ ಯುಎಸ್​ಎ ಪರ ಕನ್ನಡಿಗನೋರ್ವ ಕೂಡ ಕಣಕ್ಕಿಳಿಯಲಿದ್ದಾರೆ.

1 / 6
ಹೌದು, ಯುಎಸ್​ಎ ಟಿ20 ವಿಶ್ವಕಪ್​ ತಂಡದಲ್ಲಿ ಚಿಕ್ಕಮಗಳೂರಿನ ನೋಸ್ತುಶ್ ಕೆಂಜಿಗೆ ಆಯ್ಕೆಯಾಗಿದ್ದಾರೆ. 2019 ರಲ್ಲಿ ಯುಎಸ್​ಎ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ನೋಸ್ತುಶ್ ಇದೀಗ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು, ಯುಎಸ್​ಎ ಟಿ20 ವಿಶ್ವಕಪ್​ ತಂಡದಲ್ಲಿ ಚಿಕ್ಕಮಗಳೂರಿನ ನೋಸ್ತುಶ್ ಕೆಂಜಿಗೆ ಆಯ್ಕೆಯಾಗಿದ್ದಾರೆ. 2019 ರಲ್ಲಿ ಯುಎಸ್​ಎ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ನೋಸ್ತುಶ್ ಇದೀಗ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2 / 6
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಂಜಿಗೆ ಗ್ರಾಮದವಾರದ ನೋಸ್ತುಶ್ ಈ ಹಿಂದೆ ಬೆಂಗಳೂರಿನಲ್ಲಿ ಕ್ಲಬ್ ಕ್ರಿಕೆಟ್ ಆಡಿದ್ದರು. ಟೀಮ್ ಇಂಡಿಯಾ ಆಟಗಾರರಾದ ಮಯಾಂಕ್ ಆಗರ್ವಾಲ್, ಕರುಣ್ ನಾಯರ್, ಶ್ರೇಯಸ್ ಅಯ್ಯರ್ ಜೊತೆ ಕ್ಲಬ್ ತಂಡವನ್ನು ಪ್ರತಿನಿಧಿಸಿದ್ದರು.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಂಜಿಗೆ ಗ್ರಾಮದವಾರದ ನೋಸ್ತುಶ್ ಈ ಹಿಂದೆ ಬೆಂಗಳೂರಿನಲ್ಲಿ ಕ್ಲಬ್ ಕ್ರಿಕೆಟ್ ಆಡಿದ್ದರು. ಟೀಮ್ ಇಂಡಿಯಾ ಆಟಗಾರರಾದ ಮಯಾಂಕ್ ಆಗರ್ವಾಲ್, ಕರುಣ್ ನಾಯರ್, ಶ್ರೇಯಸ್ ಅಯ್ಯರ್ ಜೊತೆ ಕ್ಲಬ್ ತಂಡವನ್ನು ಪ್ರತಿನಿಧಿಸಿದ್ದರು.

3 / 6
ಆದರೆ ಹೆಚ್ಚಿನ ಅವಕಾಶ ಸಿಗದಿದ್ದ ಕಾರಣ ಅವರು ಅಮೆರಿಕದತ್ತ ಮುಖ ಮಾಡಿದ್ದರು. ಅಲ್ಲದೆ ಯುಎಸ್​ಎ ಪರ ಆಲ್​ರೌಂಡರ್ ಆಟದೊಂದಿಗೆ ಮಿಂಚಿದ ನೋಸ್ತುಶ್ ಕೆಂಜಿಗೆ ಇದೀಗ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ.

ಆದರೆ ಹೆಚ್ಚಿನ ಅವಕಾಶ ಸಿಗದಿದ್ದ ಕಾರಣ ಅವರು ಅಮೆರಿಕದತ್ತ ಮುಖ ಮಾಡಿದ್ದರು. ಅಲ್ಲದೆ ಯುಎಸ್​ಎ ಪರ ಆಲ್​ರೌಂಡರ್ ಆಟದೊಂದಿಗೆ ಮಿಂಚಿದ ನೋಸ್ತುಶ್ ಕೆಂಜಿಗೆ ಇದೀಗ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ.

4 / 6
ಎಡಗೈ ಸ್ಪಿನ್ನರ್-ಬಲಗೈ ಬ್ಯಾಟರ್ ಆಗಿ ಕಣಕ್ಕಿಳಿಯುವ ನೋಸ್ತುಶ್ ಕೆಂಜಿಗೆ ಈಗಾಗಲೇ ಯುಎಸ್​ಎ ಪರ 40 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 38 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇನ್ನು 4 ಟಿ20 ಪಂದ್ಯಗಳಿಂದ ನಾಲ್ಕು ವಿಕೆಟ್ ಪಡೆದಿದ್ದಾರೆ. ಹಾಗೆಯೇ ಒಟ್ಟು 357 ರನ್ ಕಲೆಹಾಕಿದ್ದಾರೆ.

ಎಡಗೈ ಸ್ಪಿನ್ನರ್-ಬಲಗೈ ಬ್ಯಾಟರ್ ಆಗಿ ಕಣಕ್ಕಿಳಿಯುವ ನೋಸ್ತುಶ್ ಕೆಂಜಿಗೆ ಈಗಾಗಲೇ ಯುಎಸ್​ಎ ಪರ 40 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 38 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇನ್ನು 4 ಟಿ20 ಪಂದ್ಯಗಳಿಂದ ನಾಲ್ಕು ವಿಕೆಟ್ ಪಡೆದಿದ್ದಾರೆ. ಹಾಗೆಯೇ ಒಟ್ಟು 357 ರನ್ ಕಲೆಹಾಕಿದ್ದಾರೆ.

5 / 6
ಯುಎಸ್​ಎ ಟಿ20 ವಿಶ್ವಕಪ್ ತಂಡ: ಮೊನಾಂಕ್ ಪಟೇಲ್ (ನಾಯಕ), ಆರೋನ್ ಜೋನ್ಸ್ (ಉಪನಾಯಕ), ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಸ್ತುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಶಾಲ್ಕ್ವಿಕ್ , ಸ್ಟೀವನ್ ಟೇಲರ್, ಶಯಾನ್ ಜಹಾಂಗೀರ್.

ಯುಎಸ್​ಎ ಟಿ20 ವಿಶ್ವಕಪ್ ತಂಡ: ಮೊನಾಂಕ್ ಪಟೇಲ್ (ನಾಯಕ), ಆರೋನ್ ಜೋನ್ಸ್ (ಉಪನಾಯಕ), ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಸ್ತುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಶಾಲ್ಕ್ವಿಕ್ , ಸ್ಟೀವನ್ ಟೇಲರ್, ಶಯಾನ್ ಜಹಾಂಗೀರ್.

6 / 6

Published On - 11:07 am, Sat, 4 May 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!