AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಯುಎಸ್​ಎ ಟಿ20 ವಿಶ್ವಕಪ್ ತಂಡದಲ್ಲಿ ಕನ್ನಡಿಗ..!

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 2 ರಿಂದ ಶುರುವಾಗಲಿದೆ. ಯುಎಸ್​ಎ-ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸುತ್ತಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿದೆ. ಈ ಟೂರ್ನಿಗಾಗಿ ಇದೀಗ ಆತಿಥೇಯ ಯುಎಸ್​ಎ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಕರ್ನಾಟಕ ಮೂಲದ ಆಟಗಾರರೊಬ್ಬರು ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on:May 04, 2024 | 11:09 AM

Share
T20 World Cup 2024: ಟಿ20 ವಿಶ್ವಕಪ್​ಗಾಗಿ ಯುಎಸ್​ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗದಲ್ಲಿ ಕರುನಾಡ ಕುವರ ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಟಿ20 ವಿಶ್ವಕಪ್​ನಲ್ಲಿ ಯುಎಸ್​ಎ ಪರ ಕನ್ನಡಿಗನೋರ್ವ ಕೂಡ ಕಣಕ್ಕಿಳಿಯಲಿದ್ದಾರೆ.

T20 World Cup 2024: ಟಿ20 ವಿಶ್ವಕಪ್​ಗಾಗಿ ಯುಎಸ್​ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗದಲ್ಲಿ ಕರುನಾಡ ಕುವರ ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಟಿ20 ವಿಶ್ವಕಪ್​ನಲ್ಲಿ ಯುಎಸ್​ಎ ಪರ ಕನ್ನಡಿಗನೋರ್ವ ಕೂಡ ಕಣಕ್ಕಿಳಿಯಲಿದ್ದಾರೆ.

1 / 6
ಹೌದು, ಯುಎಸ್​ಎ ಟಿ20 ವಿಶ್ವಕಪ್​ ತಂಡದಲ್ಲಿ ಚಿಕ್ಕಮಗಳೂರಿನ ನೋಸ್ತುಶ್ ಕೆಂಜಿಗೆ ಆಯ್ಕೆಯಾಗಿದ್ದಾರೆ. 2019 ರಲ್ಲಿ ಯುಎಸ್​ಎ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ನೋಸ್ತುಶ್ ಇದೀಗ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು, ಯುಎಸ್​ಎ ಟಿ20 ವಿಶ್ವಕಪ್​ ತಂಡದಲ್ಲಿ ಚಿಕ್ಕಮಗಳೂರಿನ ನೋಸ್ತುಶ್ ಕೆಂಜಿಗೆ ಆಯ್ಕೆಯಾಗಿದ್ದಾರೆ. 2019 ರಲ್ಲಿ ಯುಎಸ್​ಎ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ನೋಸ್ತುಶ್ ಇದೀಗ ಟಿ20 ವಿಶ್ವಕಪ್​ ತಂಡದಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2 / 6
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಂಜಿಗೆ ಗ್ರಾಮದವಾರದ ನೋಸ್ತುಶ್ ಈ ಹಿಂದೆ ಬೆಂಗಳೂರಿನಲ್ಲಿ ಕ್ಲಬ್ ಕ್ರಿಕೆಟ್ ಆಡಿದ್ದರು. ಟೀಮ್ ಇಂಡಿಯಾ ಆಟಗಾರರಾದ ಮಯಾಂಕ್ ಆಗರ್ವಾಲ್, ಕರುಣ್ ನಾಯರ್, ಶ್ರೇಯಸ್ ಅಯ್ಯರ್ ಜೊತೆ ಕ್ಲಬ್ ತಂಡವನ್ನು ಪ್ರತಿನಿಧಿಸಿದ್ದರು.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಂಜಿಗೆ ಗ್ರಾಮದವಾರದ ನೋಸ್ತುಶ್ ಈ ಹಿಂದೆ ಬೆಂಗಳೂರಿನಲ್ಲಿ ಕ್ಲಬ್ ಕ್ರಿಕೆಟ್ ಆಡಿದ್ದರು. ಟೀಮ್ ಇಂಡಿಯಾ ಆಟಗಾರರಾದ ಮಯಾಂಕ್ ಆಗರ್ವಾಲ್, ಕರುಣ್ ನಾಯರ್, ಶ್ರೇಯಸ್ ಅಯ್ಯರ್ ಜೊತೆ ಕ್ಲಬ್ ತಂಡವನ್ನು ಪ್ರತಿನಿಧಿಸಿದ್ದರು.

3 / 6
ಆದರೆ ಹೆಚ್ಚಿನ ಅವಕಾಶ ಸಿಗದಿದ್ದ ಕಾರಣ ಅವರು ಅಮೆರಿಕದತ್ತ ಮುಖ ಮಾಡಿದ್ದರು. ಅಲ್ಲದೆ ಯುಎಸ್​ಎ ಪರ ಆಲ್​ರೌಂಡರ್ ಆಟದೊಂದಿಗೆ ಮಿಂಚಿದ ನೋಸ್ತುಶ್ ಕೆಂಜಿಗೆ ಇದೀಗ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ.

ಆದರೆ ಹೆಚ್ಚಿನ ಅವಕಾಶ ಸಿಗದಿದ್ದ ಕಾರಣ ಅವರು ಅಮೆರಿಕದತ್ತ ಮುಖ ಮಾಡಿದ್ದರು. ಅಲ್ಲದೆ ಯುಎಸ್​ಎ ಪರ ಆಲ್​ರೌಂಡರ್ ಆಟದೊಂದಿಗೆ ಮಿಂಚಿದ ನೋಸ್ತುಶ್ ಕೆಂಜಿಗೆ ಇದೀಗ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯುವ ವಿಶ್ವಾಸದಲ್ಲಿದ್ದಾರೆ.

4 / 6
ಎಡಗೈ ಸ್ಪಿನ್ನರ್-ಬಲಗೈ ಬ್ಯಾಟರ್ ಆಗಿ ಕಣಕ್ಕಿಳಿಯುವ ನೋಸ್ತುಶ್ ಕೆಂಜಿಗೆ ಈಗಾಗಲೇ ಯುಎಸ್​ಎ ಪರ 40 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 38 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇನ್ನು 4 ಟಿ20 ಪಂದ್ಯಗಳಿಂದ ನಾಲ್ಕು ವಿಕೆಟ್ ಪಡೆದಿದ್ದಾರೆ. ಹಾಗೆಯೇ ಒಟ್ಟು 357 ರನ್ ಕಲೆಹಾಕಿದ್ದಾರೆ.

ಎಡಗೈ ಸ್ಪಿನ್ನರ್-ಬಲಗೈ ಬ್ಯಾಟರ್ ಆಗಿ ಕಣಕ್ಕಿಳಿಯುವ ನೋಸ್ತುಶ್ ಕೆಂಜಿಗೆ ಈಗಾಗಲೇ ಯುಎಸ್​ಎ ಪರ 40 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 38 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇನ್ನು 4 ಟಿ20 ಪಂದ್ಯಗಳಿಂದ ನಾಲ್ಕು ವಿಕೆಟ್ ಪಡೆದಿದ್ದಾರೆ. ಹಾಗೆಯೇ ಒಟ್ಟು 357 ರನ್ ಕಲೆಹಾಕಿದ್ದಾರೆ.

5 / 6
ಯುಎಸ್​ಎ ಟಿ20 ವಿಶ್ವಕಪ್ ತಂಡ: ಮೊನಾಂಕ್ ಪಟೇಲ್ (ನಾಯಕ), ಆರೋನ್ ಜೋನ್ಸ್ (ಉಪನಾಯಕ), ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಸ್ತುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಶಾಲ್ಕ್ವಿಕ್ , ಸ್ಟೀವನ್ ಟೇಲರ್, ಶಯಾನ್ ಜಹಾಂಗೀರ್.

ಯುಎಸ್​ಎ ಟಿ20 ವಿಶ್ವಕಪ್ ತಂಡ: ಮೊನಾಂಕ್ ಪಟೇಲ್ (ನಾಯಕ), ಆರೋನ್ ಜೋನ್ಸ್ (ಉಪನಾಯಕ), ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಸ್ತುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಶಾಲ್ಕ್ವಿಕ್ , ಸ್ಟೀವನ್ ಟೇಲರ್, ಶಯಾನ್ ಜಹಾಂಗೀರ್.

6 / 6

Published On - 11:07 am, Sat, 4 May 24

Follow Us
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ