- Kannada News Photo gallery Cricket photos ODI World Cup 2023: 3 Good news for India ahead of the World Cup
ODI World Cup 2023: ಏಕದಿನ ವಿಶ್ವಕಪ್ಗೂ ಮುನ್ನ ಟೀಮ್ ಇಂಡಿಯಾಗೆ 3 ಗುಡ್ ನ್ಯೂಸ್
ODI World Cup 2023: ಐಪಿಎಲ್ಗೂ ಮುನ್ನ ಶ್ರೇಯಸ್ ಅಯ್ಯರ್ ಕೂಡ ಗಾಯಗೊಂಡಿದ್ದರು. ಹೀಗಾಗಿಯೇ ಅವರು ಐಪಿಎಲ್ನಲ್ಲಿ ಕಾಣಿಸಿಕೊಂಡಿರಲಿಲ್ಲ.
Updated on: Jul 16, 2023 | 8:30 PM

ODI World Cup 2023: ಏಕದಿನ ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ 3 ತಿಂಗಳು ಮಾತ್ರ. ಇದರ ನಡುವೆ ಟೀಮ್ ಇಂಡಿಯಾ ಹಲವು ಸರಣಿಗಳನ್ನು ಆಡಬೇಕಿದೆ. ಈ ಮೂಲಕ ಏಕದಿನ ವಿಶ್ವಕಪ್ಗಾಗಿ ಭರ್ಜರಿ ತಯಾರಿಗಳನ್ನು ನಡೆಸಬೇಕಿದೆ. ಅದಕ್ಕೂ ಮುನ್ನವೇ ಇದೀಗ ಟೀಮ್ ಇಂಡಿಯಾಗೆ 3 ಗುಡ್ ನ್ಯೂಸ್ ಲಭಿಸಿದೆ. ಈ ಶುಭ ಸುದ್ದಿಯ ಮಾಹಿತಿ ಈ ಕೆಳಗಿನಂತಿದೆ...

ಸುಮಾರು ಒಂದೂವರೆ ವರ್ಷಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇದೀಗ ಶೀಘ್ರದಲ್ಲೇ ಕಂಬ್ಯಾಕ್ ಮಾಡಲಿದ್ದಾರೆ. ಈಗಾಗಲೇ ನೆಟ್ಸ್ನಲ್ಲಿ ಅಭ್ಯಾಸವನ್ನು ಆರಂಭಿಸಿರುವ ಬುಮ್ರಾ, ಪ್ರತಿದಿನ ಸುಮಾರು 8 ರಿಂದ 10 ಓವರ್ಗಳವರೆಗೆ ಬೌಲಿಂಗ್ ಮಾಡುತ್ತಿದ್ದಾರೆ. ಸದ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿರುವ ಅವರು ಶೀಘ್ರದಲ್ಲೇ ಸಂಪೂರ್ಣ ಫಿಟ್ನೆಸ್ನೊಂದಿಗೆ ತಂಡಕ್ಕೆ ಮರಳಲಿದ್ದಾರೆ.

ಕಳೆದ ವರ್ಷ ಏಷ್ಯಾಕಪ್ ಮತ್ತು ಟಿ20 ವಿಶ್ವಕಪ್ನಲ್ಲಿ ಜಸ್ಪ್ರೀತ್ ಬುಮ್ರಾ ಅವರ ಅಲಭ್ಯತೆಯು ಟೀಮ್ ಇಂಡಿಯಾಗೆ ಹಿನ್ನಡೆಯನ್ನುಂಟು ಮಾಡಿತ್ತು. ಹಾಗೆಯೇ ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಲ್ಲೂ ಬುಮ್ರಾ ಅನುಪಸ್ಥಿತಿಯು ಟೀಮ್ ಇಂಡಿಯಾದ ಫಲಿತಾಂಶದ ಪರಿಣಾಮ ಬೀರಿತ್ತು. ಇದೀಗ ಏಕದಿನ ವಿಶ್ವಕಪ್ಗೂ ಮುನ್ನವೇ ಬುಮ್ರಾ ಅವರ ಕಂಬ್ಯಾಕ್ ಸುದ್ದಿಯು ಭಾರತ ತಂಡದ ಪಾಲಿಗೆ ಶುಭ ಸುದ್ದಿ ಎನ್ನಬಹುದು.

ಮತ್ತೊಂದೆಡೆ ಐಪಿಎಲ್ಗೂ ಮುನ್ನ ಶ್ರೇಯಸ್ ಅಯ್ಯರ್ ಕೂಡ ಗಾಯಗೊಂಡಿದ್ದರು. ಹೀಗಾಗಿಯೇ ಅವರು ಐಪಿಎಲ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಗಾಯದಿಂದ ಚೇತರಿಸಿಕೊಂಡಿರುವ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ ಏಕದಿನ ವಿಶ್ವಕಪ್ಗೂ ಮುನ್ನ ಅಯ್ಯರ್ ಕೂಡ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಕಳೆದ ಕೆಲವು ತಿಂಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಇದೀಗ ಚೇತರಿಸಿಕೊಂಡಿದ್ದಾರೆ. ಅಲ್ಲದೆ ನೆಟ್ಸ್್ನಲ್ಲಿ ನಿರಂತರ ಬೌಲಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಏಕದಿನ ವಿಶ್ವಕಪ್ಗೂ ನಡೆಯಲಿರುವ ಕೆಲ ಸರಣಿಗಳಲ್ಲಿ ಪ್ರಸಿದ್ಧ್ ಕೃಷ್ಣ ಕೂಡ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಒಂದು ವೇಳೆ ಅವರು ಮಿಂಚಿದರೆ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಖಚಿತ.



















