AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ವಿಶ್ವಕಪ್ ತಂಡದಿಂದ 7 ಆಟಗಾರರು ಔಟ್..!

ODI World Cup 2023: ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಹಾಗೆಯೇ ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Aug 15, 2023 | 8:36 PM

Share
ಏಕದಿನ ವಿಶ್ವಕಪ್​ಗೆ ಕೌಂಟ್ ಡೌನ್ ಶುರುವಾಗಿದೆ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಕ್ರಿಕೆಟ್ ಮಹಾಸಮರಕ್ಕಾಗಿ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗುತ್ತದೆ. ಆದರೆ ಈ ಬಾರಿ ತಂಡದಲ್ಲಿ 7 ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

ಏಕದಿನ ವಿಶ್ವಕಪ್​ಗೆ ಕೌಂಟ್ ಡೌನ್ ಶುರುವಾಗಿದೆ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಕ್ರಿಕೆಟ್ ಮಹಾಸಮರಕ್ಕಾಗಿ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗುತ್ತದೆ. ಆದರೆ ಈ ಬಾರಿ ತಂಡದಲ್ಲಿ 7 ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

1 / 9
ಅಂದರೆ 2019 ರ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದ 7 ಆಟಗಾರರು ಈ ಬಾರಿ ಸ್ಥಾನ ಪಡೆಯುವುದಿಲ್ಲ. ಇವರಲ್ಲಿ ಓರ್ವ ಆಟಗಾರ ನಿವೃತ್ತಿ ಘೋಷಿಸಿದರೆ, 6 ಆಟಗಾರರು ರೇಸ್​ನಿಂದ ಹೊರಬಿದ್ದಿದ್ದಾರೆ. ಹಾಗಿದ್ರೆ 2019 ರಲ್ಲಿ ಕಣಕ್ಕಿಳಿದು ಈ ಬಾರಿ ಅವಕಾಶ ವಂಚಿತರಾಗಲಿರುವ 7 ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಅಂದರೆ 2019 ರ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದ 7 ಆಟಗಾರರು ಈ ಬಾರಿ ಸ್ಥಾನ ಪಡೆಯುವುದಿಲ್ಲ. ಇವರಲ್ಲಿ ಓರ್ವ ಆಟಗಾರ ನಿವೃತ್ತಿ ಘೋಷಿಸಿದರೆ, 6 ಆಟಗಾರರು ರೇಸ್​ನಿಂದ ಹೊರಬಿದ್ದಿದ್ದಾರೆ. ಹಾಗಿದ್ರೆ 2019 ರಲ್ಲಿ ಕಣಕ್ಕಿಳಿದು ಈ ಬಾರಿ ಅವಕಾಶ ವಂಚಿತರಾಗಲಿರುವ 7 ಆಟಗಾರರು ಯಾರೆಲ್ಲಾ ಎಂದು ನೋಡೋಣ...

2 / 9
1- ಮಹೇಂದ್ರ ಸಿಂಗ್ ಧೋನಿ: 2019 ರಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್​ ಆಗಿ ಕಾಣಿಸಿಕೊಂಡಿದ್ದ ಧೋನಿ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಅವರು ಈ ಬಾರಿಯ ಏಕದಿನ ವಿಶ್ವಕಪ್​ ತಂಡದಲ್ಲಿ ಇರುವುದಿಲ್ಲ.

1- ಮಹೇಂದ್ರ ಸಿಂಗ್ ಧೋನಿ: 2019 ರಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್​ ಆಗಿ ಕಾಣಿಸಿಕೊಂಡಿದ್ದ ಧೋನಿ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಅವರು ಈ ಬಾರಿಯ ಏಕದಿನ ವಿಶ್ವಕಪ್​ ತಂಡದಲ್ಲಿ ಇರುವುದಿಲ್ಲ.

3 / 9
2- ಶಿಖರ್ ಧವನ್: ಕಳೆದ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ 2 ಪಂದ್ಯಗಳನ್ನಾಡಿದ್ದ ಧವನ್ ಒಟ್ಟು 125 ರನ್ ಬಾರಿಸಿದ್ದರು. ಆದರೆ ಗಾಯದ ಕಾರಣ ಉಳಿದ ಪಂದ್ಯಗಳಿಂದ ಹೊರಗುಳಿಯಬೇಕಾಯಿತು. ಇನ್ನು ಈ ಬಾರಿ 37 ವರ್ಷದ ಧವನ್ ಅವರನ್ನು ಆಯ್ಕೆಗೆ ಪರಿಗಣಿಸುವುದಿಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ.

2- ಶಿಖರ್ ಧವನ್: ಕಳೆದ ಬಾರಿಯ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ 2 ಪಂದ್ಯಗಳನ್ನಾಡಿದ್ದ ಧವನ್ ಒಟ್ಟು 125 ರನ್ ಬಾರಿಸಿದ್ದರು. ಆದರೆ ಗಾಯದ ಕಾರಣ ಉಳಿದ ಪಂದ್ಯಗಳಿಂದ ಹೊರಗುಳಿಯಬೇಕಾಯಿತು. ಇನ್ನು ಈ ಬಾರಿ 37 ವರ್ಷದ ಧವನ್ ಅವರನ್ನು ಆಯ್ಕೆಗೆ ಪರಿಗಣಿಸುವುದಿಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ.

4 / 9
3- ವಿಜಯ್ ಶಂಕರ್: 2019ರ ಏಕದಿನ ವಿಶ್ವಕಪ್​ ತಂಡಕ್ಕೆ ಅಚ್ಚರಿಯ ಆಯ್ಕೆಯಾಗಿದ್ದ ವಿಜಯ್ ಶಂಕರ್​ 3 ಇನಿಂಗ್ಸ್​ಗಳಲ್ಲಿ ಕೇವಲ 58 ರನ್​ ಕಲೆಹಾಕಿದ್ದರು. ಇದಾದ ಬಳಿಕ ತಂಡದಿಂದ ಹೊರಬಿದ್ದ ಶಂಕರ್​ಗೆ ಈಗಾಗಲೇ ಟೀಮ್ ಇಂಡಿಯಾ ಬಾಗಿಲು ಬಂದ್ ಆಗಿದೆ.

3- ವಿಜಯ್ ಶಂಕರ್: 2019ರ ಏಕದಿನ ವಿಶ್ವಕಪ್​ ತಂಡಕ್ಕೆ ಅಚ್ಚರಿಯ ಆಯ್ಕೆಯಾಗಿದ್ದ ವಿಜಯ್ ಶಂಕರ್​ 3 ಇನಿಂಗ್ಸ್​ಗಳಲ್ಲಿ ಕೇವಲ 58 ರನ್​ ಕಲೆಹಾಕಿದ್ದರು. ಇದಾದ ಬಳಿಕ ತಂಡದಿಂದ ಹೊರಬಿದ್ದ ಶಂಕರ್​ಗೆ ಈಗಾಗಲೇ ಟೀಮ್ ಇಂಡಿಯಾ ಬಾಗಿಲು ಬಂದ್ ಆಗಿದೆ.

5 / 9
4- ಕೇದರ್ ಜಾಧವ್: 2019 ರ ಏಕದಿನ ವಿಶ್ವಕಪ್​ನ ಮತ್ತೊಂದು ಅಚ್ಚರಿಯ ಆಯ್ಕೆ ಎಂದರೆ ಕೇದರ್ ಜಾಧವ್. 5 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಜಾಧವ್ ಕಲೆಹಾಕಿದ್ದು ಕೇವಲ 80 ರನ್ ಮಾತ್ರ. ಅಲ್ಲದೆ ಆ ವಿಶ್ವಕಪ್​ ಬಳಿಕ ಜಾಧವ್ ಅವರನ್ನು ಕೂಡ ಟೀಮ್ ಇಂಡಿಯಾದಿಂದ ಕೈ ಬಿಡಲಾಗಿದೆ.

4- ಕೇದರ್ ಜಾಧವ್: 2019 ರ ಏಕದಿನ ವಿಶ್ವಕಪ್​ನ ಮತ್ತೊಂದು ಅಚ್ಚರಿಯ ಆಯ್ಕೆ ಎಂದರೆ ಕೇದರ್ ಜಾಧವ್. 5 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಜಾಧವ್ ಕಲೆಹಾಕಿದ್ದು ಕೇವಲ 80 ರನ್ ಮಾತ್ರ. ಅಲ್ಲದೆ ಆ ವಿಶ್ವಕಪ್​ ಬಳಿಕ ಜಾಧವ್ ಅವರನ್ನು ಕೂಡ ಟೀಮ್ ಇಂಡಿಯಾದಿಂದ ಕೈ ಬಿಡಲಾಗಿದೆ.

6 / 9
5- ಭುವನೇಶ್ವರ್ ಕುಮಾರ್: ಕಳೆದ ಬಾರಿಯ ಏಕದಿನ ವಿಶ್ವಕಪ್​ನಲ್ಲಿ 6 ಪಂದ್ಯಗಳನ್ನಾಡಿದ್ದ ವೇಗಿ ಭುವನೇಶ್ವರ್ ಕುಮಾರ್ 10 ವಿಕೆಟ್ ಪಡೆದಿದ್ದರು. ಆದರೆ ಪ್ರಸ್ತುತ ಏಕದಿನ ತಂಡದಲ್ಲಿ ಅವರಿಗೆ ಅವಕಾಶ ನೀಡಲಾಗುತ್ತಿಲ್ಲ. ಹೀಗಾಗಿ 2023 ರ ಏಕದಿನ ವಿಶ್ವಕಪ್ ತಂಡದಲ್ಲಿ ಭುವಿಗೂ ಚಾನ್ಸ್ ಸಿಗುವುದಿಲ್ಲ ಎನ್ನಬಹುದು.

5- ಭುವನೇಶ್ವರ್ ಕುಮಾರ್: ಕಳೆದ ಬಾರಿಯ ಏಕದಿನ ವಿಶ್ವಕಪ್​ನಲ್ಲಿ 6 ಪಂದ್ಯಗಳನ್ನಾಡಿದ್ದ ವೇಗಿ ಭುವನೇಶ್ವರ್ ಕುಮಾರ್ 10 ವಿಕೆಟ್ ಪಡೆದಿದ್ದರು. ಆದರೆ ಪ್ರಸ್ತುತ ಏಕದಿನ ತಂಡದಲ್ಲಿ ಅವರಿಗೆ ಅವಕಾಶ ನೀಡಲಾಗುತ್ತಿಲ್ಲ. ಹೀಗಾಗಿ 2023 ರ ಏಕದಿನ ವಿಶ್ವಕಪ್ ತಂಡದಲ್ಲಿ ಭುವಿಗೂ ಚಾನ್ಸ್ ಸಿಗುವುದಿಲ್ಲ ಎನ್ನಬಹುದು.

7 / 9
6- ರಿಷಭ್ ಪಂತ್: 2019 ರ ಏಕದಿನ ವಿಶ್ವಕಪ್​ನಲ್ಲಿ 4 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಪಂತ್ ಒಟ್ಟು 116 ರನ್ ಕಲೆಹಾಕಿದ್ದರು. 2022 ರಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪಂತ್ ಇನ್ನೂ ಕೂಡ ಚೇತರಿಸಿಕೊಳ್ಳದ ಕಾರಣ ಈ ಬಾರಿ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯುವುದಿಲ್ಲ.

6- ರಿಷಭ್ ಪಂತ್: 2019 ರ ಏಕದಿನ ವಿಶ್ವಕಪ್​ನಲ್ಲಿ 4 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಪಂತ್ ಒಟ್ಟು 116 ರನ್ ಕಲೆಹಾಕಿದ್ದರು. 2022 ರಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪಂತ್ ಇನ್ನೂ ಕೂಡ ಚೇತರಿಸಿಕೊಳ್ಳದ ಕಾರಣ ಈ ಬಾರಿ ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯುವುದಿಲ್ಲ.

8 / 9
7- ದಿನೇಶ್ ಕಾರ್ತಿಕ್: 2019 ರ ಏಕದಿನ ವಿಶ್ವಕಪ್​ನಲ್ಲಿ 2 ಇನಿಂಗ್ಸ್ ಆಡಿದ್ದ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 14 ರನ್ ಮಾತ್ರ. ಇದಾದ ಬಳಿಕ ತಂಡದಿಂದ ಹೊರಬಿದ್ದಿದ್ದ ಡಿಕೆ ಆ ಬಳಿಕ ಟಿ20 ವಿಶ್ವಕಪ್ ಟೀಮ್​ನಲ್ಲಿ ಸ್ಥಾನ ಪಡೆದಿದ್ದರು. ಆದರೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಹೀಗಾಗಿ ಈ ಬಾರಿ ದಿನೇಶ್ ಕಾರ್ತಿಕ್​ಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಗುವುದಿಲ್ಲ ಎನ್ನಬಹುದು.

7- ದಿನೇಶ್ ಕಾರ್ತಿಕ್: 2019 ರ ಏಕದಿನ ವಿಶ್ವಕಪ್​ನಲ್ಲಿ 2 ಇನಿಂಗ್ಸ್ ಆಡಿದ್ದ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 14 ರನ್ ಮಾತ್ರ. ಇದಾದ ಬಳಿಕ ತಂಡದಿಂದ ಹೊರಬಿದ್ದಿದ್ದ ಡಿಕೆ ಆ ಬಳಿಕ ಟಿ20 ವಿಶ್ವಕಪ್ ಟೀಮ್​ನಲ್ಲಿ ಸ್ಥಾನ ಪಡೆದಿದ್ದರು. ಆದರೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಹೀಗಾಗಿ ಈ ಬಾರಿ ದಿನೇಶ್ ಕಾರ್ತಿಕ್​ಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಸಿಗುವುದಿಲ್ಲ ಎನ್ನಬಹುದು.

9 / 9
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ