AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಈ ಮೂರು ಮೈದಾನಗಳಲ್ಲಿ ನಡೆಯುವ ಪಂದ್ಯಗಳೇ ಭಾರತಕ್ಕೆ ಪ್ರಮುಖ ಸವಾಲು..!

ODI World Cup 2023: ವಿಶ್ವಕಪ್ ವೇಳಾಪಟ್ಟಿಯ ಪ್ರಕಾ ಭಾರತ ತಂಡವು ಅಕ್ಟೋಬರ್ 8 ರಿಂದ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಟೀಂ ಇಂಡಿಯಾ ಒಂಬತ್ತು ತಂಡಗಳ ವಿರುದ್ಧ ಒಂಬತ್ತು ವಿವಿಧ ಮೈದಾನಗಳಲ್ಲಿ ಪಂದ್ಯಗಳನ್ನು ಆಡಲಿದೆ.

ಪೃಥ್ವಿಶಂಕರ
|

Updated on:Jun 29, 2023 | 8:22 AM

Share
2011 ರ ನಂತರ ಟೀಂ ಇಂಡಿಯಾ ಮೊದಲ ಬಾರಿಗೆ ತವರಿನಲ್ಲಿ ಏಕದಿನ ವಿಶ್ವಕಪ್ ಆಡಲಿದೆ. ವಿಶ್ವಕಪ್ ವೇಳಾಪಟ್ಟಿಯ ಪ್ರಕಾರ ಭಾರತ ತಂಡವು ಅಕ್ಟೋಬರ್ 8 ರಿಂದ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಟೀಂ ಇಂಡಿಯಾ ಒಂಬತ್ತು ತಂಡಗಳ ವಿರುದ್ಧ ಒಂಬತ್ತು ವಿವಿಧ ಮೈದಾನಗಳಲ್ಲಿ ಪಂದ್ಯಗಳನ್ನು ಆಡಲಿದೆ.

2011 ರ ನಂತರ ಟೀಂ ಇಂಡಿಯಾ ಮೊದಲ ಬಾರಿಗೆ ತವರಿನಲ್ಲಿ ಏಕದಿನ ವಿಶ್ವಕಪ್ ಆಡಲಿದೆ. ವಿಶ್ವಕಪ್ ವೇಳಾಪಟ್ಟಿಯ ಪ್ರಕಾರ ಭಾರತ ತಂಡವು ಅಕ್ಟೋಬರ್ 8 ರಿಂದ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಟೀಂ ಇಂಡಿಯಾ ಒಂಬತ್ತು ತಂಡಗಳ ವಿರುದ್ಧ ಒಂಬತ್ತು ವಿವಿಧ ಮೈದಾನಗಳಲ್ಲಿ ಪಂದ್ಯಗಳನ್ನು ಆಡಲಿದೆ.

1 / 12
ಭಾರತ ಈ ಬಾರಿಯ ವಿಶ್ವಕಪ್ ಅನ್ನು ತವರಿನಲ್ಲಿ ಆಡುತ್ತಿರುವುದರಿಂದ ವಿಶ್ವಕಪ್ ಗೆಲುವಿಗೆ ಪ್ರಬಲ ಸ್ಪರ್ಧಿಯಾಗಿದೆ. ಆದರೆ ಭಾರತ ವಿಶ್ವಚಾಂಪಿಯನ್ ಆಗುವ ಹಾದಿ ಅಷ್ಟು ಸುಲಭವಾಗಿಲ್ಲ. ಈ ವಿಶ್ವಕಪ್ ಪ್ರಯಾಣದಲ್ಲಿ ಭಾರತ ಬಲಿಷ್ಠ ತಂಡಗಳನ್ನು ಎದುರಿಸಬೇಕಿದೆ. ಅದರಲ್ಲೂ ಈ ಮೂರು ಪಂದ್ಯಗಳು ಭಾರತದ ವಿಶ್ವಕಪ್ ಕನಸನ್ನು ನಿರ್ಧರಿಸಲಿವೆ.

ಭಾರತ ಈ ಬಾರಿಯ ವಿಶ್ವಕಪ್ ಅನ್ನು ತವರಿನಲ್ಲಿ ಆಡುತ್ತಿರುವುದರಿಂದ ವಿಶ್ವಕಪ್ ಗೆಲುವಿಗೆ ಪ್ರಬಲ ಸ್ಪರ್ಧಿಯಾಗಿದೆ. ಆದರೆ ಭಾರತ ವಿಶ್ವಚಾಂಪಿಯನ್ ಆಗುವ ಹಾದಿ ಅಷ್ಟು ಸುಲಭವಾಗಿಲ್ಲ. ಈ ವಿಶ್ವಕಪ್ ಪ್ರಯಾಣದಲ್ಲಿ ಭಾರತ ಬಲಿಷ್ಠ ತಂಡಗಳನ್ನು ಎದುರಿಸಬೇಕಿದೆ. ಅದರಲ್ಲೂ ಈ ಮೂರು ಪಂದ್ಯಗಳು ಭಾರತದ ವಿಶ್ವಕಪ್ ಕನಸನ್ನು ನಿರ್ಧರಿಸಲಿವೆ.

2 / 12
ವಾಸ್ತವವಾಗಿ ಟೀಂ ಇಂಡಿಯಾ ಈ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್​ನಂತಹ ಬಲಿಷ್ಠ ತಂಡಗಳನ್ನು ಎದುರಿಸಬೇಕಿದೆ. ಈ ಮೂರು ತಂಡಗಳು ಪ್ರಸ್ತುತ ವಿಶ್ವ ಕ್ರಿಕೆಟ್‌ನಲ್ಲಿ ಬಲಿಷ್ಠ ತಂಡಗಳೆಂದು ಪರಿಗಣಿಸಲ್ಪಟ್ಟಿವೆ.

ವಾಸ್ತವವಾಗಿ ಟೀಂ ಇಂಡಿಯಾ ಈ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್​ನಂತಹ ಬಲಿಷ್ಠ ತಂಡಗಳನ್ನು ಎದುರಿಸಬೇಕಿದೆ. ಈ ಮೂರು ತಂಡಗಳು ಪ್ರಸ್ತುತ ವಿಶ್ವ ಕ್ರಿಕೆಟ್‌ನಲ್ಲಿ ಬಲಿಷ್ಠ ತಂಡಗಳೆಂದು ಪರಿಗಣಿಸಲ್ಪಟ್ಟಿವೆ.

3 / 12
ಒಂದು ಕಡೆ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಇಂಗ್ಲೆಂಡ್ ಈ ವಿಶ್ವಕಪ್‌ಗೆ ಎಂಟ್ರಿಕೊಡುತ್ತಿದೆ. ಮತ್ತೊಂದೆಡೆ, ನ್ಯೂಜಿಲೆಂಡ್ ಸತತ ಎರಡು ವಿಶ್ವಕಪ್‌ಗಳ ಫೈನಲ್ ಸೋತಿರುವುದರಿಂದ ಈ ಬಾರಿಯ ವಿಶ್ವಕಪ್ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಐದು ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಕೂಡ ವಿಶ್ವಕಪ್​ ಗೆಲುವಿನ ಪ್ರಮುಖ ಸ್ಪರ್ಧಿಯಾಗಿದೆ.

ಒಂದು ಕಡೆ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಇಂಗ್ಲೆಂಡ್ ಈ ವಿಶ್ವಕಪ್‌ಗೆ ಎಂಟ್ರಿಕೊಡುತ್ತಿದೆ. ಮತ್ತೊಂದೆಡೆ, ನ್ಯೂಜಿಲೆಂಡ್ ಸತತ ಎರಡು ವಿಶ್ವಕಪ್‌ಗಳ ಫೈನಲ್ ಸೋತಿರುವುದರಿಂದ ಈ ಬಾರಿಯ ವಿಶ್ವಕಪ್ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಐದು ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಕೂಡ ವಿಶ್ವಕಪ್​ ಗೆಲುವಿನ ಪ್ರಮುಖ ಸ್ಪರ್ಧಿಯಾಗಿದೆ.

4 / 12
ಅಲ್ಲದೆ ಈ ಮೂರು ತಂಡಗಳ ವಿರುದ್ಧ ಟೀಂ ಇಂಡಿಯಾ ಆಡುತ್ತಿರುವ ಮೈದಾನ ಕೂಡ ಇದೀಗ ಟೀಂ ಇಂಡಿಯಾ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ. ಹಾಗಿದ್ದರೆ ಭಾರತ ಈ ಮೂರು ತಂಡಗಳ ವಿರುದ್ಧ ಯಾವ ಮೈದಾನದಲ್ಲಿ ಕಣಕ್ಕಿಳಿಯುತ್ತದೆ. ಈ ಮೈದಾನದಲ್ಲಿ ಟೀಂ ಇಂಡಿಯಾದ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

ಅಲ್ಲದೆ ಈ ಮೂರು ತಂಡಗಳ ವಿರುದ್ಧ ಟೀಂ ಇಂಡಿಯಾ ಆಡುತ್ತಿರುವ ಮೈದಾನ ಕೂಡ ಇದೀಗ ಟೀಂ ಇಂಡಿಯಾ ಅಭಿಮಾನಿಗಳನ್ನು ಚಿಂತೆಗೀಡು ಮಾಡಿದೆ. ಹಾಗಿದ್ದರೆ ಭಾರತ ಈ ಮೂರು ತಂಡಗಳ ವಿರುದ್ಧ ಯಾವ ಮೈದಾನದಲ್ಲಿ ಕಣಕ್ಕಿಳಿಯುತ್ತದೆ. ಈ ಮೈದಾನದಲ್ಲಿ ಟೀಂ ಇಂಡಿಯಾದ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

5 / 12
ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಆಡಬೇಕಾಗಿದೆ. ಇಲ್ಲಿನ ಪಿಚ್ ನಿಧಾನವಾಗಿದ್ದು ಸ್ಪಿನ್ನರ್‌ಗಳಿಗೆ ಸಹಾಯಕವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡದಲ್ಲಿ ಉತ್ತಮ ಸ್ಪಿನ್ನರ್‌ಗಳಿದ್ದು, ತಂಡದ ಬ್ಯಾಟ್ಸ್‌ಮನ್‌ಗಳು ಸಹ ಸ್ಪಿನ್ನರ್‌ಗಳನ್ನು ಉತ್ತಮವಾಗಿ ಆಡುವುದರಿಂದ ಇಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಸುಲಭವಾಗಿ ಸೋಲಿಸುತ್ತದೆ ಎಂಬುದು ಎಲ್ಲರ ಮನಸ್ಸಿನಲ್ಲಿದೆ.

ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಆಡಬೇಕಾಗಿದೆ. ಇಲ್ಲಿನ ಪಿಚ್ ನಿಧಾನವಾಗಿದ್ದು ಸ್ಪಿನ್ನರ್‌ಗಳಿಗೆ ಸಹಾಯಕವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡದಲ್ಲಿ ಉತ್ತಮ ಸ್ಪಿನ್ನರ್‌ಗಳಿದ್ದು, ತಂಡದ ಬ್ಯಾಟ್ಸ್‌ಮನ್‌ಗಳು ಸಹ ಸ್ಪಿನ್ನರ್‌ಗಳನ್ನು ಉತ್ತಮವಾಗಿ ಆಡುವುದರಿಂದ ಇಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಸುಲಭವಾಗಿ ಸೋಲಿಸುತ್ತದೆ ಎಂಬುದು ಎಲ್ಲರ ಮನಸ್ಸಿನಲ್ಲಿದೆ.

6 / 12
ಆದರೆ ಆಸ್ಟ್ರೇಲಿಯಾ ಕೂಡ ಈ ಪಿಚ್​ಗೆ ಅನುಗುಣವಾಗಿ ತಂಡವನ್ನು ಕಟ್ಟುವ ಸಾಮಥ್ಯ್ರ ಹೊಂದಿದೆ. ಕಾಂಗರೂ ತಂಡದಲ್ಲೂ ಚೆನ್ನೈ ಪಿಚ್​ಗೆ ಬೇಕಾದ ಆಟಗಾರರ ದಂಡೆ ಇದೆ. ಇನ್ನು ಕಳೆದ ಮಾರ್ಚ್‌ನಲ್ಲಿ ಇದೇ ಮೈದಾನದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು 21 ರನ್‌ಗಳಿಂದ ಸೋಲಿಸಿತ್ತು.

ಆದರೆ ಆಸ್ಟ್ರೇಲಿಯಾ ಕೂಡ ಈ ಪಿಚ್​ಗೆ ಅನುಗುಣವಾಗಿ ತಂಡವನ್ನು ಕಟ್ಟುವ ಸಾಮಥ್ಯ್ರ ಹೊಂದಿದೆ. ಕಾಂಗರೂ ತಂಡದಲ್ಲೂ ಚೆನ್ನೈ ಪಿಚ್​ಗೆ ಬೇಕಾದ ಆಟಗಾರರ ದಂಡೆ ಇದೆ. ಇನ್ನು ಕಳೆದ ಮಾರ್ಚ್‌ನಲ್ಲಿ ಇದೇ ಮೈದಾನದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು 21 ರನ್‌ಗಳಿಂದ ಸೋಲಿಸಿತ್ತು.

7 / 12
ಇದರ ನಂತರ, ಅಕ್ಟೋಬರ್ 22 ರಂದು ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತದ ಮುಂದಿನ ಕಠಿಣ ಪಂದ್ಯ ನಡೆಯಲಿದೆ. ಧರ್ಮಶಾಲಾ ಪಿಚ್ ಬೌನ್ಸ್ ಮತ್ತು ವೇಗದ ಬೌಲರ್​ಗೆ ಹೆಚ್ಚು ನೆರವಾಗಲಿದೆ. ಇದು ನ್ಯೂಜಿಲೆಂಡ್ ಬೌಲರ್‌ಗಳಿಗೆ ಹೇಳಿ ಮಾಡಿಸಿದ ಪಿಚ್​ನಂತಿದೆ.

ಇದರ ನಂತರ, ಅಕ್ಟೋಬರ್ 22 ರಂದು ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತದ ಮುಂದಿನ ಕಠಿಣ ಪಂದ್ಯ ನಡೆಯಲಿದೆ. ಧರ್ಮಶಾಲಾ ಪಿಚ್ ಬೌನ್ಸ್ ಮತ್ತು ವೇಗದ ಬೌಲರ್​ಗೆ ಹೆಚ್ಚು ನೆರವಾಗಲಿದೆ. ಇದು ನ್ಯೂಜಿಲೆಂಡ್ ಬೌಲರ್‌ಗಳಿಗೆ ಹೇಳಿ ಮಾಡಿಸಿದ ಪಿಚ್​ನಂತಿದೆ.

8 / 12
ಕಿವೀಸ್ ತಂಡದಲ್ಲಿರುವ ಟ್ರೆಂಟ್ ಬೌಲ್ಟ್, ಲಾಕಿ ಫರ್ಗುಸನ್, ಟಿಮ್ ಸೌಥಿ ಅವರಂತಹ ಬೌಲರ್‌ಗಳು ಇಂತಹ ಪಿಚ್​ನ ಲಾಭ ಪಡೆಯುವುದರಲ್ಲಿ ನಿಸ್ಸೀಮರು. ಇದಕ್ಕೆ ತದ್ವೀರುದ್ಧವಾಗಿ ಬೌನ್ಸಿ ಮತ್ತು ವೇಗದ ಪಿಚ್‌ಗಳಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳ ದೌರ್ಬಲ್ಯ ಎಲ್ಲರಿಗೂ ತಿಳಿದಿರುವ ಕಾರಣ ಇಲ್ಲಿ ನ್ಯೂಜಿಲೆಂಡ್ ಕೂಡ ಭಾರತದ ಮೇಲೆ ಪ್ರಾಬಲ್ಯ ಸಾಧಿಸಿದರೆ ಆಶ್ಚರ್ಯಪಡಬೇಕಾಗಿಲ್ಲ.

ಕಿವೀಸ್ ತಂಡದಲ್ಲಿರುವ ಟ್ರೆಂಟ್ ಬೌಲ್ಟ್, ಲಾಕಿ ಫರ್ಗುಸನ್, ಟಿಮ್ ಸೌಥಿ ಅವರಂತಹ ಬೌಲರ್‌ಗಳು ಇಂತಹ ಪಿಚ್​ನ ಲಾಭ ಪಡೆಯುವುದರಲ್ಲಿ ನಿಸ್ಸೀಮರು. ಇದಕ್ಕೆ ತದ್ವೀರುದ್ಧವಾಗಿ ಬೌನ್ಸಿ ಮತ್ತು ವೇಗದ ಪಿಚ್‌ಗಳಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳ ದೌರ್ಬಲ್ಯ ಎಲ್ಲರಿಗೂ ತಿಳಿದಿರುವ ಕಾರಣ ಇಲ್ಲಿ ನ್ಯೂಜಿಲೆಂಡ್ ಕೂಡ ಭಾರತದ ಮೇಲೆ ಪ್ರಾಬಲ್ಯ ಸಾಧಿಸಿದರೆ ಆಶ್ಚರ್ಯಪಡಬೇಕಾಗಿಲ್ಲ.

9 / 12
ಹಾಲಿ ಚಾಂಪಿಯನ್ ಇಂಗ್ಲೆಂಡ್, ಟೀಂ ಇಂಡಿಯಾ ವಿರುದ್ಧ ಅಕ್ಟೋಬರ್ 29 ರಂದು ಲಕ್ನೋದಲ್ಲಿ ಪಂದ್ಯವನ್ನಾಡಲಿದೆ. ಲಕ್ನೋದ ಏಕಾನಾ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಇತ್ತೀಚೆಗೆ ಈ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನಲ್ಲಿ, ಈ ಪಿಚ್ ಕೂಡ ನಿಧಾನವಾಗಿದ್ದು ಸ್ಪಿನ್ನರ್‌ಗಳಿಗೆ ನೆರವಾಗುತ್ತಿರುವುದು ಕಂಡುಬಂತು.

ಹಾಲಿ ಚಾಂಪಿಯನ್ ಇಂಗ್ಲೆಂಡ್, ಟೀಂ ಇಂಡಿಯಾ ವಿರುದ್ಧ ಅಕ್ಟೋಬರ್ 29 ರಂದು ಲಕ್ನೋದಲ್ಲಿ ಪಂದ್ಯವನ್ನಾಡಲಿದೆ. ಲಕ್ನೋದ ಏಕಾನಾ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಇತ್ತೀಚೆಗೆ ಈ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನಲ್ಲಿ, ಈ ಪಿಚ್ ಕೂಡ ನಿಧಾನವಾಗಿದ್ದು ಸ್ಪಿನ್ನರ್‌ಗಳಿಗೆ ನೆರವಾಗುತ್ತಿರುವುದು ಕಂಡುಬಂತು.

10 / 12
ಇಂಗ್ಲೆಂಡ್ ಈಗಿನ ಕಾಲದ ಅತ್ಯುತ್ತಮ ಲೆಗ್ ಸ್ಪಿನ್ನರ್‌ಗಳಲ್ಲಿ ಒಬ್ಬರಾದ ಆದಿಲ್ ರಶೀದ್ ಅವರನ್ನು ಹೊಂದಿದ್ದರೆ, ಈ ತಂಡದಲ್ಲಿ ಅತ್ಯುತ್ತಮ ಆಫ್ ಸ್ಪಿನ್ನರ್ ಮೊಯಿನ್ ಅಲಿ ಕೂಡ ಇದ್ದಾರೆ. ಇವರಿಬ್ಬರನ್ನು ಹೊರತುಪಡಿಸಿ, ಇಂಗ್ಲೆಂಡ್‌ಗೆ ಲಿಯಾಮ್ ಲಿವಿಂಗ್‌ಸ್ಟನ್ ರೂಪದಲ್ಲಿ ಮತ್ತೊಬ್ಬ ಪಾರ್ಟ್‌ಟೈಮ್ ಸ್ಪಿನ್ನರ್ ಕೂಡ ಇದ್ದಾರೆ.

ಇಂಗ್ಲೆಂಡ್ ಈಗಿನ ಕಾಲದ ಅತ್ಯುತ್ತಮ ಲೆಗ್ ಸ್ಪಿನ್ನರ್‌ಗಳಲ್ಲಿ ಒಬ್ಬರಾದ ಆದಿಲ್ ರಶೀದ್ ಅವರನ್ನು ಹೊಂದಿದ್ದರೆ, ಈ ತಂಡದಲ್ಲಿ ಅತ್ಯುತ್ತಮ ಆಫ್ ಸ್ಪಿನ್ನರ್ ಮೊಯಿನ್ ಅಲಿ ಕೂಡ ಇದ್ದಾರೆ. ಇವರಿಬ್ಬರನ್ನು ಹೊರತುಪಡಿಸಿ, ಇಂಗ್ಲೆಂಡ್‌ಗೆ ಲಿಯಾಮ್ ಲಿವಿಂಗ್‌ಸ್ಟನ್ ರೂಪದಲ್ಲಿ ಮತ್ತೊಬ್ಬ ಪಾರ್ಟ್‌ಟೈಮ್ ಸ್ಪಿನ್ನರ್ ಕೂಡ ಇದ್ದಾರೆ.

11 / 12
ಇತ್ತೀಚಿನ ದಿನಗಳಲ್ಲಿ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾದ ಹಲವು ಆಟಗಾರರು ಸ್ಪಿನ್ನರ್​ಗಳಿಗೆ ಆಡುವುದಕ್ಕೆ ಕಷ್ಟಪಡುತ್ತಿರುವುದನ್ನು ನಾವು ನೋಡಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ಇಂಗ್ಲೆಂಡ್ ತನ್ನ ಸ್ಪಿನ್ನರ್‌ಗಳ ಆಧಾರದ ಮೇಲೆ ಇಲ್ಲಿ ಭಾರತವನ್ನು ಸೋಲಿಸುವ ಸಾಮರ್ಥ್ಯ ಹೊಂದಿದೆ.

ಇತ್ತೀಚಿನ ದಿನಗಳಲ್ಲಿ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾದ ಹಲವು ಆಟಗಾರರು ಸ್ಪಿನ್ನರ್​ಗಳಿಗೆ ಆಡುವುದಕ್ಕೆ ಕಷ್ಟಪಡುತ್ತಿರುವುದನ್ನು ನಾವು ನೋಡಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ಇಂಗ್ಲೆಂಡ್ ತನ್ನ ಸ್ಪಿನ್ನರ್‌ಗಳ ಆಧಾರದ ಮೇಲೆ ಇಲ್ಲಿ ಭಾರತವನ್ನು ಸೋಲಿಸುವ ಸಾಮರ್ಥ್ಯ ಹೊಂದಿದೆ.

12 / 12

Published On - 8:19 am, Thu, 29 June 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​