AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ನಾಲ್ವರಲ್ಲಿ ಯಾರಿಗೆ ಸಿಗಲಿದೆ ಚಾನ್ಸ್

Asia Cup 2025: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಭಾರತ, ಪಾಕಿಸ್ತಾನ್, ಒಮಾನ್ ಮತ್ತು ಯುಎಇ ಗ್ರೂಪ್ ಎ ನಲ್ಲಿದ್ದರೆ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಹಾಂಗ್​ ಕಾಂಗ್ ಹಾಗೂ ಶ್ರೀಲಂಕಾ ಬಿ ಗ್ರೂಪ್​ನಲ್ಲಿದೆ. ಅದರಂತೆ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ್, ಒಮಾನ್ ಹಾಗೂ ಯುಎಇ ವಿರುದ್ಧ ಕಣಕ್ಕಿಳಿಯಲಿದೆ.

ಝಾಹಿರ್ ಯೂಸುಫ್
|

Updated on:Aug 19, 2025 | 9:04 AM

Share
ಏಷ್ಯಾಕಪ್​ಗಾಗಿ ಬಲಿಷ್ಠ ಭಾರತ ತಂಡವನ್ನು ಇಂದು (ಆಗಸ್ಟ್ 19) ಘೋಷಿಸಲಾಗುತ್ತದೆ. ಅದಕ್ಕೂ ಮುನ್ನ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್, ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಸಭೆ ಸೇರಲಿದ್ದಾರೆ. ಈ ಸಭೆಯ ನಡುವೆ ನಾಲ್ವರ ಏಷ್ಯಾಕಪ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.

ಏಷ್ಯಾಕಪ್​ಗಾಗಿ ಬಲಿಷ್ಠ ಭಾರತ ತಂಡವನ್ನು ಇಂದು (ಆಗಸ್ಟ್ 19) ಘೋಷಿಸಲಾಗುತ್ತದೆ. ಅದಕ್ಕೂ ಮುನ್ನ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್, ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಸಭೆ ಸೇರಲಿದ್ದಾರೆ. ಈ ಸಭೆಯ ನಡುವೆ ನಾಲ್ವರ ಏಷ್ಯಾಕಪ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.

1 / 6
ಅಂದರೆ ಏಷ್ಯಾಕಪ್​ಗಾಗಿ ಭಾರತ ತಂಡವು ಬಹುತೇಕ ಫೈನಲ್ ಆಗಿದ್ದು, ಇದಾಗ್ಯೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ಆಯ್ಕೆ ವಿಷಯದಲ್ಲಿ ಗೊಂದಲಗಳು ಏರ್ಪಟ್ಟಿವೆ ಎಂದು ವರದಿಯಾಗಿದೆ. ಇದಕ್ಕೆ ಮುಖ್ಯ ಕಾರಣ ಮಧ್ಯಮ ಕ್ರಮಾಂಕದಲ್ಲಿ ನಾಲ್ವರು ಆಟಗಾರರ ನಡುವೆ ಪೈಪೋಟಿ ಏರ್ಪಟ್ಟಿರುವುದು. ಆ ನಾಲ್ವರು ಆಟಗಾರರು ಯಾರೆಂದರೆ....

ಅಂದರೆ ಏಷ್ಯಾಕಪ್​ಗಾಗಿ ಭಾರತ ತಂಡವು ಬಹುತೇಕ ಫೈನಲ್ ಆಗಿದ್ದು, ಇದಾಗ್ಯೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ಆಯ್ಕೆ ವಿಷಯದಲ್ಲಿ ಗೊಂದಲಗಳು ಏರ್ಪಟ್ಟಿವೆ ಎಂದು ವರದಿಯಾಗಿದೆ. ಇದಕ್ಕೆ ಮುಖ್ಯ ಕಾರಣ ಮಧ್ಯಮ ಕ್ರಮಾಂಕದಲ್ಲಿ ನಾಲ್ವರು ಆಟಗಾರರ ನಡುವೆ ಪೈಪೋಟಿ ಏರ್ಪಟ್ಟಿರುವುದು. ಆ ನಾಲ್ವರು ಆಟಗಾರರು ಯಾರೆಂದರೆ....

2 / 6
ಶ್ರೇಯಸ್ ಅಯ್ಯರ್: 2023ರ ಏಕದಿನ ವಿಶ್ವಕಪ್ ಬಳಿಕ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾ ಪರ ಒಂದೇ ಒಂದು ಟಿ20 ಪಂದ್ಯವಾಡಿಲ್ಲ. ಇದಾಗ್ಯೂ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿ (345 ರನ್ಸ್​) ಹಾಗೂ ಐಪಿಎಲ್​ನಲ್ಲಿ (604) ಅಯ್ಯರ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಈ ಬಾರಿ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

ಶ್ರೇಯಸ್ ಅಯ್ಯರ್: 2023ರ ಏಕದಿನ ವಿಶ್ವಕಪ್ ಬಳಿಕ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾ ಪರ ಒಂದೇ ಒಂದು ಟಿ20 ಪಂದ್ಯವಾಡಿಲ್ಲ. ಇದಾಗ್ಯೂ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿ (345 ರನ್ಸ್​) ಹಾಗೂ ಐಪಿಎಲ್​ನಲ್ಲಿ (604) ಅಯ್ಯರ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಈ ಬಾರಿ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.

3 / 6
ರಿಯಾನ್ ಪರಾಗ್: ಟೀಮ್ ಇಂಡಿಯಾ ಪರ ರಿಯಾನ್ ಪರಾಗ್ 9 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 70 ರನ್​ಗಳು ಮಾತ್ರ. ಇನ್ನು ಪಡೆದಿರುವ ವಿಕೆಟ್​ಗಳ ಸಂಖ್ಯೆ 4. ಇದಾಗ್ಯೂ ಆಲ್​ರೌಂಡರ್​ಗಳ ಪಟ್ಟಿಯಲ್ಲಿರುವ ರಿಯಾನ್ ಭಾರತ ಟಿ20 ತಂಡದ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದಾರೆ.

ರಿಯಾನ್ ಪರಾಗ್: ಟೀಮ್ ಇಂಡಿಯಾ ಪರ ರಿಯಾನ್ ಪರಾಗ್ 9 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 70 ರನ್​ಗಳು ಮಾತ್ರ. ಇನ್ನು ಪಡೆದಿರುವ ವಿಕೆಟ್​ಗಳ ಸಂಖ್ಯೆ 4. ಇದಾಗ್ಯೂ ಆಲ್​ರೌಂಡರ್​ಗಳ ಪಟ್ಟಿಯಲ್ಲಿರುವ ರಿಯಾನ್ ಭಾರತ ಟಿ20 ತಂಡದ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದಾರೆ.

4 / 6
ರಿಂಕು ಸಿಂಗ್: ಟೀಮ್ ಇಂಡಿಯಾ ಪರ ಫಿನಿಶರ್ ಪಾತ್ರದಲ್ಲಿ ಕಣಕ್ಕಿಳಿಯುತ್ತಿದ್ದ ರಿಂಕು ಸಿಂಗ್ ಕಳಪೆ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಏಷ್ಯಾಕಪ್​ಗಾಗಿ ಅವರನ್ನು ಆಯ್ಕೆ ಮಾಡಬೇಕೇ ಅಥವಾ ಕೈ ಬಿಡಬೇಕೇ ಎಂಬ ಚರ್ಚೆಗಳು ಮುಂದುವರೆದಿದೆ. ಇದೇ ಕಾರಣದಿಂದಾಗಿ ರಿಂಕು ಸಿಂಗ್ ಅವರ ಆಯ್ಕೆ ಕೂಡ ಇನ್ನೂ ಸಹ ಖಚಿತವಾಗಿಲ್ಲ.

ರಿಂಕು ಸಿಂಗ್: ಟೀಮ್ ಇಂಡಿಯಾ ಪರ ಫಿನಿಶರ್ ಪಾತ್ರದಲ್ಲಿ ಕಣಕ್ಕಿಳಿಯುತ್ತಿದ್ದ ರಿಂಕು ಸಿಂಗ್ ಕಳಪೆ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಏಷ್ಯಾಕಪ್​ಗಾಗಿ ಅವರನ್ನು ಆಯ್ಕೆ ಮಾಡಬೇಕೇ ಅಥವಾ ಕೈ ಬಿಡಬೇಕೇ ಎಂಬ ಚರ್ಚೆಗಳು ಮುಂದುವರೆದಿದೆ. ಇದೇ ಕಾರಣದಿಂದಾಗಿ ರಿಂಕು ಸಿಂಗ್ ಅವರ ಆಯ್ಕೆ ಕೂಡ ಇನ್ನೂ ಸಹ ಖಚಿತವಾಗಿಲ್ಲ.

5 / 6
ವಾಷಿಂಗ್ಟನ್ ಸುಂದರ್: ಟೀಮ್ ಇಂಡಿಯಾ ಪರ 54 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಾಷಿಂಗ್ಟ್ ಸುಂದರ್ 22 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 192 ರನ್​ಗಳು ಮಾತ್ರ. ಇದಾಗ್ಯೂ 48 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಸುಂದರ್​ ಅವರನ್ನು ಹೆಚ್ಚುವರಿ ಆಲ್​ರೌಂಡರ್ ಆಗಿ ಆಯ್ಕೆ ಮಾಡುವ ಬಗ್ಗೆ ಚರ್ಚೆ ಮುಂದುವರೆದಿದೆ.

ವಾಷಿಂಗ್ಟನ್ ಸುಂದರ್: ಟೀಮ್ ಇಂಡಿಯಾ ಪರ 54 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಾಷಿಂಗ್ಟ್ ಸುಂದರ್ 22 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 192 ರನ್​ಗಳು ಮಾತ್ರ. ಇದಾಗ್ಯೂ 48 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಸುಂದರ್​ ಅವರನ್ನು ಹೆಚ್ಚುವರಿ ಆಲ್​ರೌಂಡರ್ ಆಗಿ ಆಯ್ಕೆ ಮಾಡುವ ಬಗ್ಗೆ ಚರ್ಚೆ ಮುಂದುವರೆದಿದೆ.

6 / 6

Published On - 9:04 am, Tue, 19 August 25

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ