AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕರುಣ್, ಪ್ರಸಿದ್ಧ್​ಗೆ ಕೊನೆಯ ಅವಕಾಶ; ಕುಲ್ದೀಪ್​ಗೆ ಒಲಿಯದ ಅದೃಷ್ಟ

India vs England Oval Test: ಓವಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಕೊನೆಯ ಟೆಸ್ಟ್ ಪಂದ್ಯ ಆರಂಭವಾಗಿದೆ. ಗಾಯದಿಂದಾಗಿ ರಿಷಭ್ ಪಂತ್ ಹೊರಗುಳಿದಿದ್ದು, ಧ್ರುವ್ ಜುರೆಲ್ ಅವರಿಗೆ ಅವಕಾಶ ದೊರೆತಿದೆ. ಜಸ್ಪ್ರೀತ್ ಬುಮ್ರಾ ಬದಲಿಗೆ ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್ ಬದಲಿಗೆ ಕರುಣ್ ನಾಯರ್ ಮತ್ತು ಅನ್ಶುಲ್ ಕಾಂಬೋಜ್ ಬದಲಿಗೆ ಆಕಾಶ್ ದೀಪ್ ಆಡುತ್ತಿದ್ದಾರೆ. ಈ ಪಂದ್ಯ ಕರುಣ್ ಮತ್ತು ಪ್ರಸಿದ್ಧ್‌ಗೆ ತಮ್ಮ ವೃತ್ತಿಜೀವನವನ್ನು ಉಳಿಸಿಕೊಳ್ಳುವ ಅವಕಾಶವಾಗಿದೆ.

ಪೃಥ್ವಿಶಂಕರ
|

Updated on: Jul 31, 2025 | 4:02 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಿನ ಕೊನೆಯ ಟೆಸ್ಟ್ ಪಂದ್ಯ ಓವಲ್ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ನಾಲ್ಕು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಗಾಯಗೊಂಡ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಬದಲಿಗೆ ಧ್ರುವ್ ಜುರೆಲ್​ಗೆ ಅವಕಾಶ ಸಿಕ್ಕಿದೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬದಲಿಗೆ ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್ ಬದಲಿಗೆ ಕರುಣ್ ನಾಯರ್, ಅನ್ಶುಲ್ ಕಾಂಬೋಜ್ ಬದಲಿಗೆ ಆಕಾಶ್ ದೀಪ್​ಗೆ ಅವಕಾಶ ನೀಡಲಾಗಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಕೊನೆಯ ಟೆಸ್ಟ್ ಪಂದ್ಯ ಓವಲ್ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ನಾಲ್ಕು ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ಗಾಯಗೊಂಡ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಬದಲಿಗೆ ಧ್ರುವ್ ಜುರೆಲ್​ಗೆ ಅವಕಾಶ ಸಿಕ್ಕಿದೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬದಲಿಗೆ ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್ ಬದಲಿಗೆ ಕರುಣ್ ನಾಯರ್, ಅನ್ಶುಲ್ ಕಾಂಬೋಜ್ ಬದಲಿಗೆ ಆಕಾಶ್ ದೀಪ್​ಗೆ ಅವಕಾಶ ನೀಡಲಾಗಿದೆ.

1 / 6
ಕನ್ನಡಿಗ ಕರುಣ್ ನಾಯರ್​ಗೆ ಕೊನೆಯ ಅವಕಾಶ ಸಿಕ್ಕಿದೆ. ಇಡೀ ಸರಣಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ಕರುಣ್​ರನ್ನು 4ನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿತ್ತು. ಇದೀಗ ಶಾರ್ದೂಲ್ ಠಾಕೂರ್ ಬದಲಿಗೆ ಕರುಣ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಹೀಗಾಗಿ ತನ್ನ ವೃತ್ತಿಜೀವನದ ಉಳಿವಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿರುವ ಓವಲ್ ಟೆಸ್ಟ್ ಪಂದ್ಯದಲ್ಲಿ ಕರುಣ್ ಮಿಂಚಲೇ ಬೇಕಾಗಿದೆ.

ಕನ್ನಡಿಗ ಕರುಣ್ ನಾಯರ್​ಗೆ ಕೊನೆಯ ಅವಕಾಶ ಸಿಕ್ಕಿದೆ. ಇಡೀ ಸರಣಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ಕರುಣ್​ರನ್ನು 4ನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿತ್ತು. ಇದೀಗ ಶಾರ್ದೂಲ್ ಠಾಕೂರ್ ಬದಲಿಗೆ ಕರುಣ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಹೀಗಾಗಿ ತನ್ನ ವೃತ್ತಿಜೀವನದ ಉಳಿವಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿರುವ ಓವಲ್ ಟೆಸ್ಟ್ ಪಂದ್ಯದಲ್ಲಿ ಕರುಣ್ ಮಿಂಚಲೇ ಬೇಕಾಗಿದೆ.

2 / 6
ಕೆಲಸದ ಹೊಣೆ ನಿರ್ಣಹಣೆಯ ಕಾರಣ ನೀಡಿ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಅವರ ಬದಲಿಗೆ ಪ್ರಸಿದ್ಧ್ ಕೃಷ್ಣ ಅವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡಲಾಗಿದೆ. ಪ್ರಸಿದ್ಧ್ ಕೂಡ ಇಡೀ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅವರನ್ನು ಸಹ ತಂಡದಿಂದ ಕೈಬಿಡಲಾಗಿತ್ತು. ಆದರೀಗ ಕೊನೆಯ ಟೆಸ್ಟ್​​ನಲ್ಲಿ ಪ್ರಸಿದ್ಧ್​ಗೆ ಕೊನೆಯ ಅವಕಾಶ ನೀಡಲಾಗಿದೆ.

ಕೆಲಸದ ಹೊಣೆ ನಿರ್ಣಹಣೆಯ ಕಾರಣ ನೀಡಿ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಅವರ ಬದಲಿಗೆ ಪ್ರಸಿದ್ಧ್ ಕೃಷ್ಣ ಅವರಿಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡಲಾಗಿದೆ. ಪ್ರಸಿದ್ಧ್ ಕೂಡ ಇಡೀ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅವರನ್ನು ಸಹ ತಂಡದಿಂದ ಕೈಬಿಡಲಾಗಿತ್ತು. ಆದರೀಗ ಕೊನೆಯ ಟೆಸ್ಟ್​​ನಲ್ಲಿ ಪ್ರಸಿದ್ಧ್​ಗೆ ಕೊನೆಯ ಅವಕಾಶ ನೀಡಲಾಗಿದೆ.

3 / 6
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಗಾಯಗೊಂಡಿರುವುದರಿಂದ ಅವರನ್ನು ಕೊನೆಯ ಟೆಸ್ಟ್​​ನಿಂದ ಹೊರಗಿಡಲಾಗಿದೆ. ಹೀಗಾಗಿ ಧ್ರುವ್ ಜುರೆಲ್‌ಗೆ ಅವಕಾಶ ಸಿಕ್ಕಿದೆ. ಈ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ಉತ್ತಮ ಫಾರ್ಮ್‌ನಲ್ಲಿದ್ದರು, ಆದರೆ ಗಾಯದಿಂದಾಗಿ ಅವರು ತಂಡದಿಂದ ಹೊರಗುಳಿದಿದ್ದಾರೆ. ಈಗ ತಂಡದಲ್ಲಿ ಸ್ಥಾನ ಪಡೆದಿರುವ ಧ್ರುವ್ ಜುರೆಲ್ ಉತ್ತಮ ಪ್ರದರ್ಶನ ನೀಡಬೇಕಾಗುತ್ತದೆ.

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಗಾಯಗೊಂಡಿರುವುದರಿಂದ ಅವರನ್ನು ಕೊನೆಯ ಟೆಸ್ಟ್​​ನಿಂದ ಹೊರಗಿಡಲಾಗಿದೆ. ಹೀಗಾಗಿ ಧ್ರುವ್ ಜುರೆಲ್‌ಗೆ ಅವಕಾಶ ಸಿಕ್ಕಿದೆ. ಈ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ಉತ್ತಮ ಫಾರ್ಮ್‌ನಲ್ಲಿದ್ದರು, ಆದರೆ ಗಾಯದಿಂದಾಗಿ ಅವರು ತಂಡದಿಂದ ಹೊರಗುಳಿದಿದ್ದಾರೆ. ಈಗ ತಂಡದಲ್ಲಿ ಸ್ಥಾನ ಪಡೆದಿರುವ ಧ್ರುವ್ ಜುರೆಲ್ ಉತ್ತಮ ಪ್ರದರ್ಶನ ನೀಡಬೇಕಾಗುತ್ತದೆ.

4 / 6
ಇಡೀ ಸರಣಿಯಲ್ಲಿ ಒಂದೇ ಒಂದು ಅವಕಾಶ ಪಡೆಯದ ಕೆಲವೇ ಕೆಲವು ಆಟಗಾರರಲ್ಲಿ ಕುಲ್ದೀಪ್ ಕೂಡ ಒಬ್ಬರು. ಪ್ರಮುಖ ಸ್ಪಿನ್ನರ್ ಆಗಿ ತಂಡದೊಂದಿಗೆ ಇಂಗ್ಲೆಂಡ್​ಗೆ ಬಂದಿದ್ದ ಕುಲ್ದೀಪ್ ಬೆಂಚ್ ಕಾಯುವುದನ್ನು ಬಿಟ್ಟು ಬೇರೇನು ಮಾಡಲು ಸಾಧ್ಯವಾಗಲಿಲ್ಲ. ಇವರೊಂದಿಗೆ ಅಭಿಮನ್ಯು ಈಶ್ವರನ್, ಅರ್ಷದೀಪ್ ಸಿಂಗ್ ಕೂಡ ಅವಕಾಶ ಸಿಗದೆ ಬೆಂಚ್ ಮೇಲೆ ಕುಳಿತುಕೊಳ್ಳಬೇಕಾಯಿತು.

ಇಡೀ ಸರಣಿಯಲ್ಲಿ ಒಂದೇ ಒಂದು ಅವಕಾಶ ಪಡೆಯದ ಕೆಲವೇ ಕೆಲವು ಆಟಗಾರರಲ್ಲಿ ಕುಲ್ದೀಪ್ ಕೂಡ ಒಬ್ಬರು. ಪ್ರಮುಖ ಸ್ಪಿನ್ನರ್ ಆಗಿ ತಂಡದೊಂದಿಗೆ ಇಂಗ್ಲೆಂಡ್​ಗೆ ಬಂದಿದ್ದ ಕುಲ್ದೀಪ್ ಬೆಂಚ್ ಕಾಯುವುದನ್ನು ಬಿಟ್ಟು ಬೇರೇನು ಮಾಡಲು ಸಾಧ್ಯವಾಗಲಿಲ್ಲ. ಇವರೊಂದಿಗೆ ಅಭಿಮನ್ಯು ಈಶ್ವರನ್, ಅರ್ಷದೀಪ್ ಸಿಂಗ್ ಕೂಡ ಅವಕಾಶ ಸಿಗದೆ ಬೆಂಚ್ ಮೇಲೆ ಕುಳಿತುಕೊಳ್ಳಬೇಕಾಯಿತು.

5 / 6
ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಕರುಣ್ ನಾಯರ್, ಕೆಎಲ್ ರಾಹುಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಕರುಣ್ ನಾಯರ್, ಕೆಎಲ್ ರಾಹುಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ