AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಸ್ಟರಿ… ಹಿಸ್ಟರಿ… ಹಿಸ್ಟರಿ… ಹೊಸ ಇತಿಹಾಸ ನಿರ್ಮಿಸಿದ ಪಾಕಿಸ್ತಾನ್ ಚಾಂಪಿಯನ್ಸ್

WCL 2025: ವರ್ಲ್ಡ್ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿದಿದ್ದವು. ಈ ಆರು ತಂಡಗಳಲ್ಲಿ ಇಂಡಿಯಾ ಚಾಂಪಿಯನ್ಸ್, ಪಾಕಿಸ್ತಾನ್ ಚಾಂಪಿಯನ್ಸ್, ಆಸ್ಟ್ರೇಲಿಯಾ ಚಾಂಪಿಯನ್ಸ್ ಹಾಗೂ ಸೌತ್ ಆಫ್ರಿಕಾ ಚಾಂಪಿಯನ್ಸ್ ತಂಡಗಳು ಸೆಮಿಫೈನಲ್​ಗೇರಿದ್ದವು. ಆದರೀಗ ಪಾಕ್ ವಿರುದ್ಧದ ಸೆಮಿಫೈನಲ್​ನಿಂದ ಭಾರತ ತಂಡ ಹಿಂದೆ ಸರಿದಿದೆ.

ಝಾಹಿರ್ ಯೂಸುಫ್
|

Updated on:Jul 31, 2025 | 7:33 AM

Share
ವರ್ಲ್ಡ್‌ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ (WCL 2025) ಟೂರ್ನಿಯ ದ್ವಿತೀಯ ಸೀಸನ್‌ನಲ್ಲೂ ಪಾಕಿಸ್ತಾನ್ ಚಾಂಪಿಯನ್ಸ್ (Pakistan Champions) ಫೈನಲ್‌ಗೆ ಪ್ರವೇಶಿಸಿದೆ. ಈ ಬಾರಿ ಫೈನಲ್‌ಗೆ ಎಂಟ್ರಿ ಕೊಟ್ಟಿರುವುದು ಸೆಮಿಫೈನಲ್ ಆಡದೇ ಎಂಬುದು ವಿಶೇಷ. ಇದರೊಂದಿಗೆ ವಿಶೇಷ ದಾಖಲೆಯೊಂದು ಪಾಕಿಸ್ತಾನ್ ಚಾಂಪಿಯನ್ಸ್ ತಂಡದ ಪಾಲಾಗಿದೆ.

ವರ್ಲ್ಡ್‌ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ (WCL 2025) ಟೂರ್ನಿಯ ದ್ವಿತೀಯ ಸೀಸನ್‌ನಲ್ಲೂ ಪಾಕಿಸ್ತಾನ್ ಚಾಂಪಿಯನ್ಸ್ (Pakistan Champions) ಫೈನಲ್‌ಗೆ ಪ್ರವೇಶಿಸಿದೆ. ಈ ಬಾರಿ ಫೈನಲ್‌ಗೆ ಎಂಟ್ರಿ ಕೊಟ್ಟಿರುವುದು ಸೆಮಿಫೈನಲ್ ಆಡದೇ ಎಂಬುದು ವಿಶೇಷ. ಇದರೊಂದಿಗೆ ವಿಶೇಷ ದಾಖಲೆಯೊಂದು ಪಾಕಿಸ್ತಾನ್ ಚಾಂಪಿಯನ್ಸ್ ತಂಡದ ಪಾಲಾಗಿದೆ.

1 / 5
ಇಂದು (ಜುಲೈ 31) ನಡೆಯಬೇಕಿದ್ದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್ ಹಾಗೂ ಇಂಡಿಯಾ ಚಾಂಪಿಯನ್ಸ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಈ ನಿರ್ಣಾಯಕ ಪಂದ್ಯದಿಂದ ಇಂಡಿಯಾ ಚಾಂಪಿಯನ್ಸ್ ಹಿಂದೆ ಸರಿದಿದೆ. ಇದರಿಂದಾಗಿ ಮೊದಲ ಸೆಮಿಫೈನಲ್ ಪಂದ್ಯ ಕೂಡ ರದ್ದಾಗಿದೆ.

ಇಂದು (ಜುಲೈ 31) ನಡೆಯಬೇಕಿದ್ದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ಚಾಂಪಿಯನ್ಸ್ ಹಾಗೂ ಇಂಡಿಯಾ ಚಾಂಪಿಯನ್ಸ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಈ ನಿರ್ಣಾಯಕ ಪಂದ್ಯದಿಂದ ಇಂಡಿಯಾ ಚಾಂಪಿಯನ್ಸ್ ಹಿಂದೆ ಸರಿದಿದೆ. ಇದರಿಂದಾಗಿ ಮೊದಲ ಸೆಮಿಫೈನಲ್ ಪಂದ್ಯ ಕೂಡ ರದ್ದಾಗಿದೆ.

2 / 5
ಸೆಮಿಫೈನಲ್ ಪಂದ್ಯದಿಂದ ಇಂಡಿಯಾ ಚಾಂಪಿಯನ್ಸ್ ಹಿಂದೆ ಸರಿದ ಕಾರಣ ಪಾಕಿಸ್ತಾನ್ ಚಾಂಪಿಯನ್ಸ್ ತಂಡವು ನೇರವಾಗಿ ಫೈನಲ್‌ಗೆ ಪ್ರವೇಶಿಸಿದೆ. ಈ ಮೂಲಕ ಸೆಮಿಫೈನಲ್ ಅಥವಾ ನಾಕೌಟ್ ಪಂದ್ಯವಾಡದೇ ಫೈನಲ್‌ಗೆ ಪ್ರವೇಶಿಸಿದ ವಿಶ್ವದ ಮೊದಲ ತಂಡ ಎಂಬ ದಾಖಲೆಯನ್ನು ಪಾಕಿಸ್ತಾನ್ ಚಾಂಪಿಯನ್ಸ್ ತನ್ನದಾಗಿಸಿಕೊಂಡಿದೆ.

ಸೆಮಿಫೈನಲ್ ಪಂದ್ಯದಿಂದ ಇಂಡಿಯಾ ಚಾಂಪಿಯನ್ಸ್ ಹಿಂದೆ ಸರಿದ ಕಾರಣ ಪಾಕಿಸ್ತಾನ್ ಚಾಂಪಿಯನ್ಸ್ ತಂಡವು ನೇರವಾಗಿ ಫೈನಲ್‌ಗೆ ಪ್ರವೇಶಿಸಿದೆ. ಈ ಮೂಲಕ ಸೆಮಿಫೈನಲ್ ಅಥವಾ ನಾಕೌಟ್ ಪಂದ್ಯವಾಡದೇ ಫೈನಲ್‌ಗೆ ಪ್ರವೇಶಿಸಿದ ವಿಶ್ವದ ಮೊದಲ ತಂಡ ಎಂಬ ದಾಖಲೆಯನ್ನು ಪಾಕಿಸ್ತಾನ್ ಚಾಂಪಿಯನ್ಸ್ ತನ್ನದಾಗಿಸಿಕೊಂಡಿದೆ.

3 / 5
ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ತಂಡ ಸೆಮಿಫೈನಲ್ ಅಥವಾ ನಾಕೌಟ್ ಮ್ಯಾಚ್ ಆಡದೇ ನೇರವಾಗಿ ಫೈನಲ್ ಪ್ರವೇಶಿಸಿಲ್ಲ. ಆದರೆ ಭಾರತೀಯ ಆಟಗಾರರು ಪಾಕ್ ವಿರುದ್ಧ ಕಣಕ್ಕಿಳಿಯಲು ನಿರಾಕರಿಸಿದ್ದರಿಂದ ಇದೀಗ ಪಾಕಿಸ್ತಾನ್ ಚಾಂಪಿಯನ್ಸ್ ಅಂತಿಮ ಸುತ್ತಿಗೆ ಎಂಟ್ರಿ ಕೊಟ್ಟಿದೆ. ಈ ಮೂಲಕ ಸೆಮಿಫೈನಲ್ ಆಡದೇ ಟಿ20 ಟೂರ್ನಿಯಲ್ಲಿ ಫೈನಲ್ ಆಡಲಿರುವ ವಿಶ್ವದ ಮೊದಲ ತಂಡ ಎನಿಸಿಕೊಂಡಿದೆ.

ಟಿ20 ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ತಂಡ ಸೆಮಿಫೈನಲ್ ಅಥವಾ ನಾಕೌಟ್ ಮ್ಯಾಚ್ ಆಡದೇ ನೇರವಾಗಿ ಫೈನಲ್ ಪ್ರವೇಶಿಸಿಲ್ಲ. ಆದರೆ ಭಾರತೀಯ ಆಟಗಾರರು ಪಾಕ್ ವಿರುದ್ಧ ಕಣಕ್ಕಿಳಿಯಲು ನಿರಾಕರಿಸಿದ್ದರಿಂದ ಇದೀಗ ಪಾಕಿಸ್ತಾನ್ ಚಾಂಪಿಯನ್ಸ್ ಅಂತಿಮ ಸುತ್ತಿಗೆ ಎಂಟ್ರಿ ಕೊಟ್ಟಿದೆ. ಈ ಮೂಲಕ ಸೆಮಿಫೈನಲ್ ಆಡದೇ ಟಿ20 ಟೂರ್ನಿಯಲ್ಲಿ ಫೈನಲ್ ಆಡಲಿರುವ ವಿಶ್ವದ ಮೊದಲ ತಂಡ ಎನಿಸಿಕೊಂಡಿದೆ.

4 / 5
ಇನ್ನು ಇಂದು ನಡೆಯಲಿರುವ ವರ್ಲ್ಡ್ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ಸ್ ಹಾಗೂ ಸೌತ್ ಆಫ್ರಿಕಾ ಚಾಂಪಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬರ್ಮಿಂಗ್ಹ್ಯಾಮ್‌ನ ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧ ಫೈನಲ್ ಆಡಲಿದೆ.

ಇನ್ನು ಇಂದು ನಡೆಯಲಿರುವ ವರ್ಲ್ಡ್ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ ಟೂರ್ನಿಯ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ಸ್ ಹಾಗೂ ಸೌತ್ ಆಫ್ರಿಕಾ ಚಾಂಪಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಬರ್ಮಿಂಗ್ಹ್ಯಾಮ್‌ನ ಎಡ್ಜ್ ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಪಾಕಿಸ್ತಾನ್ ಚಾಂಪಿಯನ್ಸ್ ವಿರುದ್ಧ ಫೈನಲ್ ಆಡಲಿದೆ.

5 / 5

Published On - 7:32 am, Thu, 31 July 25

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!