AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗಾಂಡ ದಾಖಲೆ ಸೇಫ್… ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಪಾಕಿಸ್ತಾನ್

Pakistan Records: ಶ್ರೀಲಂಕಾ ಹಾಗೂ ಝಿಂಬಾಬ್ವೆ ವಿರುದ್ಧ ತ್ರಿಕೋನ ಸರಣಿಯ ಫೈನಲ್​ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಜಯಗಳಿಸಿದೆ. ರಾವಲ್ಪಿಂಡಿಯಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಪಾಕಿಸ್ತಾನ್ ತಂಡ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಗೆಲುವಿನೊಂದಿಗೆ ಪಾಕಿಸ್ತಾನ್ ತಂಡ ಟಿ20 ಕ್ರಿಕೆಟ್​​ನಲ್ಲಿ ಹೊಸ ಮೈಲುಗಲ್ಲನ್ನು ಮುಟ್ಟಿದೆ.

ಝಾಹಿರ್ ಯೂಸುಫ್
|

Updated on: Dec 01, 2025 | 7:54 AM

Share
ಟಿ20 ಕ್ರಿಕೆಟ್​​ನಲ್ಲಿ ಪಾಕಿಸ್ತಾನ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಒಂದೇ ವರ್ಷದಲ್ಲಿ ಅತೀ ಹೆಚ್ಚು ಗೆಲುವುಗಳನ್ನು ದಾಖಲಿಸುವ ಮೂಲಕ. ಅಂದರೆ ಪಾಕಿಸ್ತಾನ್ ತಂಡವು ಇದೇ ಮೊದಲ ಬಾರಿಗೆ ಒಂದೇ ವರ್ಷದೊಳಗೆ 20ಕ್ಕಿಂತ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದುಕೊಂಡಿದೆ.

ಟಿ20 ಕ್ರಿಕೆಟ್​​ನಲ್ಲಿ ಪಾಕಿಸ್ತಾನ್ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಒಂದೇ ವರ್ಷದಲ್ಲಿ ಅತೀ ಹೆಚ್ಚು ಗೆಲುವುಗಳನ್ನು ದಾಖಲಿಸುವ ಮೂಲಕ. ಅಂದರೆ ಪಾಕಿಸ್ತಾನ್ ತಂಡವು ಇದೇ ಮೊದಲ ಬಾರಿಗೆ ಒಂದೇ ವರ್ಷದೊಳಗೆ 20ಕ್ಕಿಂತ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದುಕೊಂಡಿದೆ.

1 / 5
ಶ್ರೀಲಂಕಾ, ಝಿಂಬಾಬ್ವೆ ವಿರುದ್ಧದ ತ್ರಿಕೋನ ಸರಣಿಯ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸುವ ಮೂಲಕ ಪಾಕಿಸ್ತಾನ್ ತಂಡವು ಟಿ20 ಕ್ರಿಕೆಟ್​​ನಲ್ಲಿ ವಿಶೇಷ ಮೈಲುಗಲ್ಲು ದಾಟಿದೆ. ಈ ವರ್ಷ ಪಾಕ್ ತಂಡ ಆಡಿದ 34 ಟಿ20 ಪಂದ್ಯಗಳಲ್ಲಿ ಬರೋಬ್ಬರಿ 21 ಮ್ಯಾಚ್​​​ಗಳಲ್ಲಿ ಗೆಲುವು ದಾಖಲಿಸಿದೆ.

ಶ್ರೀಲಂಕಾ, ಝಿಂಬಾಬ್ವೆ ವಿರುದ್ಧದ ತ್ರಿಕೋನ ಸರಣಿಯ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸುವ ಮೂಲಕ ಪಾಕಿಸ್ತಾನ್ ತಂಡವು ಟಿ20 ಕ್ರಿಕೆಟ್​​ನಲ್ಲಿ ವಿಶೇಷ ಮೈಲುಗಲ್ಲು ದಾಟಿದೆ. ಈ ವರ್ಷ ಪಾಕ್ ತಂಡ ಆಡಿದ 34 ಟಿ20 ಪಂದ್ಯಗಳಲ್ಲಿ ಬರೋಬ್ಬರಿ 21 ಮ್ಯಾಚ್​​​ಗಳಲ್ಲಿ ಗೆಲುವು ದಾಖಲಿಸಿದೆ.

2 / 5
ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಪಾಕಿಸ್ತಾನ್ ತಂಡವು ಇದೇ ಮೊದಲ ಬಾರಿಗೆ 21 ಮ್ಯಾಚ್​​ಗಳನ್ನು ಗೆದ್ದ ಸಾಧನೆ ಮಾಡಿದೆ. ಇದಕ್ಕೂ ಮುನ್ನ 2021 ರಲ್ಲಿ ಆಡಿದ 29 ಪಂದ್ಯಗಳಲ್ಲಿ 20 ಮ್ಯಾಚ್​ ಗೆದ್ದಿದ್ದು ಶ್ರೇಷ್ಠ ಸಾಧನೆಯಾಗಿತ್ತು. ಈ ಬಾರಿ ಈ ದಾಖಲೆಯನ್ನು ಮುರಿದು ಪಾಕ್ ಪಡೆ ಮುನ್ನುಗ್ಗಿದೆ.

ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಪಾಕಿಸ್ತಾನ್ ತಂಡವು ಇದೇ ಮೊದಲ ಬಾರಿಗೆ 21 ಮ್ಯಾಚ್​​ಗಳನ್ನು ಗೆದ್ದ ಸಾಧನೆ ಮಾಡಿದೆ. ಇದಕ್ಕೂ ಮುನ್ನ 2021 ರಲ್ಲಿ ಆಡಿದ 29 ಪಂದ್ಯಗಳಲ್ಲಿ 20 ಮ್ಯಾಚ್​ ಗೆದ್ದಿದ್ದು ಶ್ರೇಷ್ಠ ಸಾಧನೆಯಾಗಿತ್ತು. ಈ ಬಾರಿ ಈ ದಾಖಲೆಯನ್ನು ಮುರಿದು ಪಾಕ್ ಪಡೆ ಮುನ್ನುಗ್ಗಿದೆ.

3 / 5
ಇದಾಗ್ಯೂ ಉಗಾಂಡ ತಂಡದ ಹೆಸರಿನಲ್ಲಿರುವ ವಿಶ್ವ ದಾಖಲೆ ಮುರಿಯಲು ಸಾಧ್ಯವಾಗುವುದಿಲ್ಲ. ಏಕೆಂದರೆ ಪಾಕಿಸ್ತಾನ್ ತಂಡವು ಡಿಸೆಂಬರ್​​ ತಿಂಗಳಲ್ಲಿ ಯಾವುದೇ ಟಿ20 ಸರಣಿ ಆಡುತ್ತಿಲ್ಲ. ಅಲ್ಲದೆ ಮುಂದಿನ ಸರಣಿ ಇರುವುದು ಜನವರಿ ತಿಂಗಳಲ್ಲಿ. ಹೀಗಾಗಿ ಒಂದೇ ವರ್ಷ ಅತ್ಯಧಿಕ ಟಿ20 ಪಂದ್ಯಗಳನ್ನು ಗೆದ್ದ ಉಗಾಂಡ ತಂಡದ ದಾಖಲೆಯನ್ನು ಮುರಿಯಲು ಪಾಕ್ ತಂಡಕ್ಕೆ ಸಾಧ್ಯವಾಗುವುದಿಲ್ಲ.

ಇದಾಗ್ಯೂ ಉಗಾಂಡ ತಂಡದ ಹೆಸರಿನಲ್ಲಿರುವ ವಿಶ್ವ ದಾಖಲೆ ಮುರಿಯಲು ಸಾಧ್ಯವಾಗುವುದಿಲ್ಲ. ಏಕೆಂದರೆ ಪಾಕಿಸ್ತಾನ್ ತಂಡವು ಡಿಸೆಂಬರ್​​ ತಿಂಗಳಲ್ಲಿ ಯಾವುದೇ ಟಿ20 ಸರಣಿ ಆಡುತ್ತಿಲ್ಲ. ಅಲ್ಲದೆ ಮುಂದಿನ ಸರಣಿ ಇರುವುದು ಜನವರಿ ತಿಂಗಳಲ್ಲಿ. ಹೀಗಾಗಿ ಒಂದೇ ವರ್ಷ ಅತ್ಯಧಿಕ ಟಿ20 ಪಂದ್ಯಗಳನ್ನು ಗೆದ್ದ ಉಗಾಂಡ ತಂಡದ ದಾಖಲೆಯನ್ನು ಮುರಿಯಲು ಪಾಕ್ ತಂಡಕ್ಕೆ ಸಾಧ್ಯವಾಗುವುದಿಲ್ಲ.

4 / 5
ಉಗಾಂಡ ತಂಡವು 2023 ರಲ್ಲಿ ಆಡಿದ 33 ಮ್ಯಾಚ್​​ಗಳಲ್ಲಿ ಬರೋಬ್ಬರಿ 29 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಟಿ20 ಇತಿಹಾಸದಲ್ಲೇ ಒಂದೇ ವರ್ಷ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ವಿಶ್ವ ದಾಖಲೆ ನಿರ್ಮಿಸಿದೆ. ಉಗಾಂಡ ಹೆಸರಿನಲ್ಲಿರುವ ಈ ವಿಶೇಷ ವಿಶ್ವ ದಾಖಲೆಯನ್ನು 2026 ರಲ್ಲಿ ಯಾರು ಮುರಿಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಉಗಾಂಡ ತಂಡವು 2023 ರಲ್ಲಿ ಆಡಿದ 33 ಮ್ಯಾಚ್​​ಗಳಲ್ಲಿ ಬರೋಬ್ಬರಿ 29 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಟಿ20 ಇತಿಹಾಸದಲ್ಲೇ ಒಂದೇ ವರ್ಷ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ವಿಶ್ವ ದಾಖಲೆ ನಿರ್ಮಿಸಿದೆ. ಉಗಾಂಡ ಹೆಸರಿನಲ್ಲಿರುವ ಈ ವಿಶೇಷ ವಿಶ್ವ ದಾಖಲೆಯನ್ನು 2026 ರಲ್ಲಿ ಯಾರು ಮುರಿಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ