AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK, CWC23: ಏಳು ವರ್ಷಗಳ ಬಳಿಕ ಭಾರತದ ಮಣ್ಣಿಗೆ ಕಾಲಿಡುತ್ತಿದೆ ಪಾಕಿಸ್ತಾನ: ಬೆಂಗಳೂರಿಗೂ ಬರಲಿದೆ ಬಾಬರ್ ಪಡೆ

ICC ODI World Cup 2023 schedule: ಪಾಕಿಸ್ತಾನ ತಂಡ ಕೊನೆಯದಾಗಿ 2016ರ ಟಿ20 ವಿಶ್ವಕಪ್​ಗಾಗಿ ಭಾರತಕ್ಕೆ ಬಂದಿತ್ತು. ಆಗ ಕೋಲ್ಕತ್ತಾಡ ಈಡನ್ ಗಾರ್ಡನ್ಸ್​ನಲ್ಲಿ ಭಾರತ ವಿರುದ್ಧ ಸೆಣೆಸಾಟ ನಡೆಸಿತ್ತು. ಆ ಬಳಿಕ ಪಾಕ್ ಭಾರತದ ನಾಡಿಗೆ ಬಂದಿರಲಿಲ್ಲ. ಇದೀಗ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

Vinay Bhat
|

Updated on: Jun 27, 2023 | 1:05 PM

Share
ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಭಾರತದಲ್ಲಿ ಈ ವರ್ಷ ನಡೆಯಲಿರುವ ಪುರುಷರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ಬಿಸಿಸಿಐ ಹಾಗೂ ಐಸಿಸಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಭಾರತದಲ್ಲಿ ಈ ವರ್ಷ ನಡೆಯಲಿರುವ ಪುರುಷರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ಬಿಸಿಸಿಐ ಹಾಗೂ ಐಸಿಸಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ.

1 / 7
ಅಕ್ಟೋಬರ್‌ 5 ರಂದು ಏಕದಿನ ವಿಶ್ವಕಪ್​ಗೆ ಚಾಲನೆ ಸಿಗಲಿದ್ದು ನವೆಂಬರ್‌ 19 ರವರೆಗೆ ನಡೆಯಲಿದೆ. ಸೆಮಿಫೈನಲ್ ಪಂದ್ಯಗಳು ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನವೆಂಬರ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಅಂತಿಮ ಫೈನಲ್ ಪಂದ್ಯವು ಅಹಮದಾಬಾದ್​ನಲ್ಲಿ ನವೆಂಬರ್ 19 ರಂದು ನಡೆಯಲಿದೆ.

ಅಕ್ಟೋಬರ್‌ 5 ರಂದು ಏಕದಿನ ವಿಶ್ವಕಪ್​ಗೆ ಚಾಲನೆ ಸಿಗಲಿದ್ದು ನವೆಂಬರ್‌ 19 ರವರೆಗೆ ನಡೆಯಲಿದೆ. ಸೆಮಿಫೈನಲ್ ಪಂದ್ಯಗಳು ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನವೆಂಬರ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಅಂತಿಮ ಫೈನಲ್ ಪಂದ್ಯವು ಅಹಮದಾಬಾದ್​ನಲ್ಲಿ ನವೆಂಬರ್ 19 ರಂದು ನಡೆಯಲಿದೆ.

2 / 7
ಇಡೀ ವಿಶ್ವವೇ ಕಾದು ಕುಳಿತಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಪಾಕ್ ತಂಡ ಬರೋಬ್ಬರಿ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

ಇಡೀ ವಿಶ್ವವೇ ಕಾದು ಕುಳಿತಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 15 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಮೂಲಕ ಪಾಕ್ ತಂಡ ಬರೋಬ್ಬರಿ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

3 / 7
ಪಾಕಿಸ್ತಾನ ತಂಡ ಕೊನೆಯದಾಗಿ 2016ರ ಟಿ20 ವಿಶ್ವಕಪ್​ಗಾಗಿ ಭಾರತಕ್ಕೆ ಬಂದಿತ್ತು. ಆಗ ಕೋಲ್ಕತ್ತಾಡ ಈಡನ್ ಗಾರ್ಡನ್ಸ್​ನಲ್ಲಿ ಭಾರತ ವಿರುದ್ಧ ಸೆಣೆಸಾಟ ನಡೆಸಿತ್ತು. ಆ ಬಳಿಕ ಪಾಕ್ ಭಾರತದ ನಾಡಿಗೆ ಬಂದಿರಲಿಲ್ಲ. ಇದೀಗ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

ಪಾಕಿಸ್ತಾನ ತಂಡ ಕೊನೆಯದಾಗಿ 2016ರ ಟಿ20 ವಿಶ್ವಕಪ್​ಗಾಗಿ ಭಾರತಕ್ಕೆ ಬಂದಿತ್ತು. ಆಗ ಕೋಲ್ಕತ್ತಾಡ ಈಡನ್ ಗಾರ್ಡನ್ಸ್​ನಲ್ಲಿ ಭಾರತ ವಿರುದ್ಧ ಸೆಣೆಸಾಟ ನಡೆಸಿತ್ತು. ಆ ಬಳಿಕ ಪಾಕ್ ಭಾರತದ ನಾಡಿಗೆ ಬಂದಿರಲಿಲ್ಲ. ಇದೀಗ ಏಳು ವರ್ಷಗಳ ಬಳಿಕ ಭಾರತಕ್ಕೆ ಕಾಲಿಡುತ್ತಿದೆ.

4 / 7
ಪಾಕಿಸ್ತಾನ ತಂಡ ಅಕ್ಟೋಬರ್ 6 ರಂದು ಕ್ವಾಲಿಫೈಯರ್ 1 ತಂಡದ ವಿರುದ್ಧ ಹೈದರಾಬಾದ್​ನಲ್ಲಿ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.  ಭಾರತದ ಹೈದರಾಬಾದ್, ಅಹ್ಮದಾಬಾದ್, ಬೆಂಗಳೂರು, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಪಾಕ್ ವಿಶ್ವಕಪ್ ಆಡಲಿದೆ.

ಪಾಕಿಸ್ತಾನ ತಂಡ ಅಕ್ಟೋಬರ್ 6 ರಂದು ಕ್ವಾಲಿಫೈಯರ್ 1 ತಂಡದ ವಿರುದ್ಧ ಹೈದರಾಬಾದ್​ನಲ್ಲಿ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಭಾರತದ ಹೈದರಾಬಾದ್, ಅಹ್ಮದಾಬಾದ್, ಬೆಂಗಳೂರು, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಪಾಕ್ ವಿಶ್ವಕಪ್ ಆಡಲಿದೆ.

5 / 7
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ಒಟ್ಟು ಎರಡು ಪಂದ್ಯಗಳನ್ನು ಆಡಲಿದೆ. ಮೊದಲಿಗೆ ಅಕ್ಟೋಬರ್ 20 ರಂದು ಆಸ್ಟ್ರೇಲಿಯಾ ವಿರುದ್ಧ ಮತ್ತು ನವೆಂಬರ್ 4 ರಂದು ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ಒಟ್ಟು ಎರಡು ಪಂದ್ಯಗಳನ್ನು ಆಡಲಿದೆ. ಮೊದಲಿಗೆ ಅಕ್ಟೋಬರ್ 20 ರಂದು ಆಸ್ಟ್ರೇಲಿಯಾ ವಿರುದ್ಧ ಮತ್ತು ನವೆಂಬರ್ 4 ರಂದು ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ.

6 / 7
ಭಾರತ ತಂಡ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಟೀಮ್ ಇಂಡಿಯಾ ಒಟ್ಟು ಒಂತ್ತು ಪಂದ್ಯಗಳನ್ನ ಆಡಲಿದೆ. ಭಾರತ ಹಾಗೂ ಪಾಕ್ ನಡುವಣ ಪಂದ್ಯವು ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

ಭಾರತ ತಂಡ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಟೀಮ್ ಇಂಡಿಯಾ ಒಟ್ಟು ಒಂತ್ತು ಪಂದ್ಯಗಳನ್ನ ಆಡಲಿದೆ. ಭಾರತ ಹಾಗೂ ಪಾಕ್ ನಡುವಣ ಪಂದ್ಯವು ಅಕ್ಟೋಬರ್ 15 ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

7 / 7
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು