AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

48ನೇ ವಯಸ್ಸಿನಲ್ಲಿ 3ನೇ ಮಗುವಿಗೆ ತಂದೆಯಾದ ಪಾಕ್ ಮಾಜಿ ವೇಗಿ ಶೋಯೆಬ್ ಅಖ್ತರ್

Shoaib Akhtar: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ತಮ್ಮ 48ನೇ ವಯಸ್ಸಿನಲ್ಲಿ ಮೂರನೇ ಮಗುವಿಗೆ ತಂದೆಯಾಗಿದ್ದಾರೆ. ಅವರ ಮಡದಿ ರುಬಾಬ್ ಖಾನ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರವನ್ನು ಸ್ವತಃ ಅಖ್ತರ್ ಅವರೇ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಗುವಿನ ಫೋಟೋವನ್ನು ಶೇರ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ಪೃಥ್ವಿಶಂಕರ
|

Updated on: Mar 02, 2024 | 2:58 PM

Share
ಟೀಂ ಇಂಡಿಯಾವನ್ನು ಹಾಗೂ ಭಾರತದ ಮಾಜಿ ಕ್ರಿಕೆಟಿಗರನ್ನು ಟೀಕಿಸುತ್ತಾ ಸೋಶಿಯಲ್ ಮೀಡಿಯಾದಲ್ಲಿ ಸದಾ ಸುದ್ದಿಯಲ್ಲಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಇದೀಗ ತಮ್ಮ ವೈಯಕ್ತಿಕ ಬದುಕಿನ ಸುದ್ದಿಯೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ.

ಟೀಂ ಇಂಡಿಯಾವನ್ನು ಹಾಗೂ ಭಾರತದ ಮಾಜಿ ಕ್ರಿಕೆಟಿಗರನ್ನು ಟೀಕಿಸುತ್ತಾ ಸೋಶಿಯಲ್ ಮೀಡಿಯಾದಲ್ಲಿ ಸದಾ ಸುದ್ದಿಯಲ್ಲಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಇದೀಗ ತಮ್ಮ ವೈಯಕ್ತಿಕ ಬದುಕಿನ ಸುದ್ದಿಯೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ.

1 / 6
ವಾಸ್ತವವಾಗಿ ರಾವಲ್ಪಿಂಡಿ ಎಕ್ಸ್‌ಪ್ರೆಸ್ ಖ್ಯಾತಿಯ ಶೋಯೆಬ್ ಅಖ್ತರ್ ತಮ್ಮ 48ನೇ ವಯಸ್ಸಿನಲ್ಲಿ ಮೂರನೇ ಮಗುವಿಗೆ ತಂದೆಯಾಗಿದ್ದಾರೆ. ಅವರ ಮಡದಿ ರುಬಾಬ್ ಖಾನ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರವನ್ನು ಸ್ವತಃ ಅಖ್ತರ್ ಅವರೇ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಗುವಿನ ಫೋಟೋವನ್ನು ಶೇರ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ವಾಸ್ತವವಾಗಿ ರಾವಲ್ಪಿಂಡಿ ಎಕ್ಸ್‌ಪ್ರೆಸ್ ಖ್ಯಾತಿಯ ಶೋಯೆಬ್ ಅಖ್ತರ್ ತಮ್ಮ 48ನೇ ವಯಸ್ಸಿನಲ್ಲಿ ಮೂರನೇ ಮಗುವಿಗೆ ತಂದೆಯಾಗಿದ್ದಾರೆ. ಅವರ ಮಡದಿ ರುಬಾಬ್ ಖಾನ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರವನ್ನು ಸ್ವತಃ ಅಖ್ತರ್ ಅವರೇ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಗುವಿನ ಫೋಟೋವನ್ನು ಶೇರ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

2 / 6
ಶೋಯೆಬ್‌ಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ಅವರಲ್ಲಿ ಮೊದಲ ಮಗು ಮೊಹಮ್ಮದ್ ಮಿಕೈಲ್ ಅಲಿ 2016 ರಲ್ಲಿ ಜನಿಸಿದರೆ, ಎರಡನೇ ಮಗು  ಮೊಹಮ್ಮದ್ ಮುಜದ್ದದ್ ಅಲಿ 2019 ರಲ್ಲಿ ಜನಿಸಿದ್ದರು. ಇದೀಗ ಹುಟ್ಟಿರುವ ಮೂರನೇ ಮಗುವಿಗೆ ಅಖ್ತರ್ ನೂರಾ ಅಲಿ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ.

ಶೋಯೆಬ್‌ಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ಅವರಲ್ಲಿ ಮೊದಲ ಮಗು ಮೊಹಮ್ಮದ್ ಮಿಕೈಲ್ ಅಲಿ 2016 ರಲ್ಲಿ ಜನಿಸಿದರೆ, ಎರಡನೇ ಮಗು ಮೊಹಮ್ಮದ್ ಮುಜದ್ದದ್ ಅಲಿ 2019 ರಲ್ಲಿ ಜನಿಸಿದ್ದರು. ಇದೀಗ ಹುಟ್ಟಿರುವ ಮೂರನೇ ಮಗುವಿಗೆ ಅಖ್ತರ್ ನೂರಾ ಅಲಿ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ.

3 / 6
ಮಗಳು ಹುಟ್ಟಿರುವ ಸಂತಸವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಶೋಯೆಬ್, ‘ಮೈಕೆಲ್ ಮತ್ತು ಮುಜದ್ದದ್​ಗೆ ಈಗ ಸಹೋದರಿ ಸಿಕ್ಕಿದ್ದಾಳೆ. ಅಲ್ಲಾಹನು ನಮಗೆ ಹೆಣ್ಣು ಮಗುವನ್ನು ಅನುಗ್ರಹಿಸಿದ್ದಾನೆ. ನಾನು ಮತ್ತು ನನ್ನ ಇಡೀ ಕುಟುಂಬ ಮಗಳು ನೂರಾ ಅಲಿ ಅಖ್ತರ್ ಅವರನ್ನು ಬರ ಆತ್ಮೀಯವಾಗಿ ಮಾಡಿಕೊಂಡಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಮಗಳು ಹುಟ್ಟಿರುವ ಸಂತಸವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಶೋಯೆಬ್, ‘ಮೈಕೆಲ್ ಮತ್ತು ಮುಜದ್ದದ್​ಗೆ ಈಗ ಸಹೋದರಿ ಸಿಕ್ಕಿದ್ದಾಳೆ. ಅಲ್ಲಾಹನು ನಮಗೆ ಹೆಣ್ಣು ಮಗುವನ್ನು ಅನುಗ್ರಹಿಸಿದ್ದಾನೆ. ನಾನು ಮತ್ತು ನನ್ನ ಇಡೀ ಕುಟುಂಬ ಮಗಳು ನೂರಾ ಅಲಿ ಅಖ್ತರ್ ಅವರನ್ನು ಬರ ಆತ್ಮೀಯವಾಗಿ ಮಾಡಿಕೊಂಡಿದ್ದೇವೆ ಎಂದು ಬರೆದುಕೊಂಡಿದ್ದಾರೆ.

4 / 6
ರಾವಲ್ಪಿಂಡಿ ಎಕ್ಸ್‌ಪ್ರೆಸ್ ಎಂದೇ ಖ್ಯಾತರಾಗಿರುವ ಶೋಯೆಬ್ ಅಖ್ತರ್, ತಮಗಿಂತ 10 ವರ್ಷ ಕಿರಿಯ ವಯಸ್ಸಿನ ರುಬಾಬ್ ಖಾನ್ ಅವರನ್ನು 11 ನವೆಂಬರ್ 2014 ರಂದು ವರಿಸಿದ್ದರು. ಆ ವೇಳೆ ಶೋಯೆಬ್ ಅಖ್ತರ್ ಅವರ ಕಾಲೆಳೆದವರೆ ಹೆಚ್ಚು. ಪ್ರಸ್ತುತ ಈ ಸುದ್ದಿಯನ್ನು ಕೇಳಿದ ಅಭಿಮಾನಿಗಳು ದಂಪತಿಗಳಿಬ್ಬರನ್ನು ಅಭಿನಂದಿಸಲು ಆರಂಭಿಸಿದ್ದಾರೆ.

ರಾವಲ್ಪಿಂಡಿ ಎಕ್ಸ್‌ಪ್ರೆಸ್ ಎಂದೇ ಖ್ಯಾತರಾಗಿರುವ ಶೋಯೆಬ್ ಅಖ್ತರ್, ತಮಗಿಂತ 10 ವರ್ಷ ಕಿರಿಯ ವಯಸ್ಸಿನ ರುಬಾಬ್ ಖಾನ್ ಅವರನ್ನು 11 ನವೆಂಬರ್ 2014 ರಂದು ವರಿಸಿದ್ದರು. ಆ ವೇಳೆ ಶೋಯೆಬ್ ಅಖ್ತರ್ ಅವರ ಕಾಲೆಳೆದವರೆ ಹೆಚ್ಚು. ಪ್ರಸ್ತುತ ಈ ಸುದ್ದಿಯನ್ನು ಕೇಳಿದ ಅಭಿಮಾನಿಗಳು ದಂಪತಿಗಳಿಬ್ಬರನ್ನು ಅಭಿನಂದಿಸಲು ಆರಂಭಿಸಿದ್ದಾರೆ.

5 / 6
ಇನ್ನು ಶೋಯೆಬ್ ಅಖ್ತರ್ ಅವರ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. 1997 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಅಖ್ತರ್ 2011 ರ ವಿಶ್ವಕಪ್‌ನಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು. ಈ ನಡುವೆ ಪಾಕ್ ಪರ 46 ಟೆಸ್ಟ್, 163 ಏಕದಿನ ಮತ್ತು 15 ಟಿ20 ಪಂದ್ಯಗಳನ್ನಾಡಿದ್ದು, ಇದರಲ್ಲಿ ಕ್ರಮವಾಗಿ 178, 247 ಹಾಗೂ 19 ವಿಕೆಟ್‌ಗಳನ್ನು ಪಡೆದಿದ್ದರು.

ಇನ್ನು ಶೋಯೆಬ್ ಅಖ್ತರ್ ಅವರ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. 1997 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಅಖ್ತರ್ 2011 ರ ವಿಶ್ವಕಪ್‌ನಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು. ಈ ನಡುವೆ ಪಾಕ್ ಪರ 46 ಟೆಸ್ಟ್, 163 ಏಕದಿನ ಮತ್ತು 15 ಟಿ20 ಪಂದ್ಯಗಳನ್ನಾಡಿದ್ದು, ಇದರಲ್ಲಿ ಕ್ರಮವಾಗಿ 178, 247 ಹಾಗೂ 19 ವಿಕೆಟ್‌ಗಳನ್ನು ಪಡೆದಿದ್ದರು.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್