AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

India vs Pakistan: ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ ತಂಡಗಳು ಸೆಪ್ಟೆಂಬರ್ 2 ರಂದು ಮುಖಾಮುಖಿಯಾಗಲಿದೆ. ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Aug 27, 2023 | 5:28 PM

Share
ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಗೆಲುವಿನೊಂದಿಗೆ ಬಾಬರ್ ಆಝಂ ಪಡೆ ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಗೆಲುವಿನೊಂದಿಗೆ ಬಾಬರ್ ಆಝಂ ಪಡೆ ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

1 / 7
ಏಕದಿನ ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡವು ಒಟ್ಟು 118 ರೇಟಿಂಗ್​ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, 118 ರೇಟಿಂಗ್ ಪಡೆದಿರುವ ಆಸ್ಟ್ರೇಲಿಯಾ ತಂಡವು ದ್ವಿತೀಯ ಸ್ಥಾನದಲ್ಲಿದೆ. ಇನ್ನು ಮೂರನೇ ಸ್ಥಾನದಲ್ಲಿರುವ ಭಾರತ ತಂಡದ ಹೊಂದಿರುವ ರೇಟಿಂಗ್ 113.

ಏಕದಿನ ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡವು ಒಟ್ಟು 118 ರೇಟಿಂಗ್​ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, 118 ರೇಟಿಂಗ್ ಪಡೆದಿರುವ ಆಸ್ಟ್ರೇಲಿಯಾ ತಂಡವು ದ್ವಿತೀಯ ಸ್ಥಾನದಲ್ಲಿದೆ. ಇನ್ನು ಮೂರನೇ ಸ್ಥಾನದಲ್ಲಿರುವ ಭಾರತ ತಂಡದ ಹೊಂದಿರುವ ರೇಟಿಂಗ್ 113.

2 / 7
ಅಂದರೆ ಇಲ್ಲಿ ಭಾರತ ಹಾಗೂ ಪಾಕಿಸ್ತಾನ್ ನಡುವಣ ರೇಟಿಂಗ್ ವ್ಯತ್ಯಾಸ ಕೇವಲ 5 ಮಾತ್ರ. ಹೀಗಾಗಿಯೇ ಏಷ್ಯಾಕಪ್​ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಗ್ರಸ್ಥಾನಕ್ಕೇರುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

ಅಂದರೆ ಇಲ್ಲಿ ಭಾರತ ಹಾಗೂ ಪಾಕಿಸ್ತಾನ್ ನಡುವಣ ರೇಟಿಂಗ್ ವ್ಯತ್ಯಾಸ ಕೇವಲ 5 ಮಾತ್ರ. ಹೀಗಾಗಿಯೇ ಏಷ್ಯಾಕಪ್​ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಗ್ರಸ್ಥಾನಕ್ಕೇರುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

3 / 7
ಅಂದರೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧದ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡರೆ ರ‍್ಯಾಂಕಿಂಗ್​ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಹಾಗೆಯೇ ಏಷ್ಯಾಕಪ್​ನಲ್ಲಿ ಭಾರತ ಗೆಲುವಿನ ನಾಗಾಲೋಟದೊಂದಿಗೆ ಕಪ್​ ಮುಡಿಗೇರಿಸಿಕೊಂಡರೆ ಅಗ್ರಸ್ಥಾನಕ್ಕೇರುವುದು ಖಚಿತ.

ಅಂದರೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧದ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡರೆ ರ‍್ಯಾಂಕಿಂಗ್​ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಹಾಗೆಯೇ ಏಷ್ಯಾಕಪ್​ನಲ್ಲಿ ಭಾರತ ಗೆಲುವಿನ ನಾಗಾಲೋಟದೊಂದಿಗೆ ಕಪ್​ ಮುಡಿಗೇರಿಸಿಕೊಂಡರೆ ಅಗ್ರಸ್ಥಾನಕ್ಕೇರುವುದು ಖಚಿತ.

4 / 7
ಹೀಗಾಗಿಯೇ ಈ ಬಾರಿಯ ಏಷ್ಯಾಕಪ್​ನಲ್ಲಿ ಏಕದಿನ ಕ್ರಿಕೆಟ್​ನ ನಂಬರ್ 1 ತಂಡ ಯಾರು ಎಂಬುದು ನಿರ್ಧಾರವಾಗಲಿದೆ. ಪ್ರಸ್ತುತ ಅಗ್ರಸ್ಥಾನದಲ್ಲಿರುವ ಪಾಕಿಸ್ತಾನ್ ತಂಡವು ಮೊದಲ ಸ್ಥಾನ ಕಾಯ್ದುಕೊಳ್ಳಲು ಹೋರಾಟ ನಡೆಸಿದರೆ, ಭಾರತ ಅಗ್ರಸ್ಥಾನಕ್ಕೇರಲು ಪೈಪೋಟಿ ನಡೆಸಲಿದೆ.

ಹೀಗಾಗಿಯೇ ಈ ಬಾರಿಯ ಏಷ್ಯಾಕಪ್​ನಲ್ಲಿ ಏಕದಿನ ಕ್ರಿಕೆಟ್​ನ ನಂಬರ್ 1 ತಂಡ ಯಾರು ಎಂಬುದು ನಿರ್ಧಾರವಾಗಲಿದೆ. ಪ್ರಸ್ತುತ ಅಗ್ರಸ್ಥಾನದಲ್ಲಿರುವ ಪಾಕಿಸ್ತಾನ್ ತಂಡವು ಮೊದಲ ಸ್ಥಾನ ಕಾಯ್ದುಕೊಳ್ಳಲು ಹೋರಾಟ ನಡೆಸಿದರೆ, ಭಾರತ ಅಗ್ರಸ್ಥಾನಕ್ಕೇರಲು ಪೈಪೋಟಿ ನಡೆಸಲಿದೆ.

5 / 7
ಒಂದು ವೇಳೆ ಏಷ್ಯಾಕಪ್ ಮೂಲಕ ಭಾರತ ತಂಡವು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದರೆ, ಮೂರು ಮಾದರಿಯಲ್ಲೂ ಟೀಮ್ ಇಂಡಿಯಾ ನಂಬರ್ 1 ತಂಡವಾಗಿ ಹೊರಹೊಮ್ಮಲಿದೆ.

ಒಂದು ವೇಳೆ ಏಷ್ಯಾಕಪ್ ಮೂಲಕ ಭಾರತ ತಂಡವು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದರೆ, ಮೂರು ಮಾದರಿಯಲ್ಲೂ ಟೀಮ್ ಇಂಡಿಯಾ ನಂಬರ್ 1 ತಂಡವಾಗಿ ಹೊರಹೊಮ್ಮಲಿದೆ.

6 / 7
ಟಿ20 ತಂಡಗಳ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾ ಈಗಾಗಲೇ ನಂಬರ್ 1 ಸ್ಥಾನದಲ್ಲಿದ್ದರೆ, ಅತ್ತ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡವು 118 ರೇಟಿಂಗ್​ನೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿದೆ. ಇದೀಗ ಏಷ್ಯಾಕಪ್ ಮೂಲಕ ನಂಬರ್ 1 ಏಕದಿನ ತಂಡವಾಗಿ ಹೊರಹೊಮ್ಮುವ ಅವಕಾಶ ಟೀಮ್ ಇಂಡಿಯಾ ಮುಂದಿದ್ದು, ಈ ಗುರಿಯೊಂದಿಗೆ ಭಾರತ ತಂಡ ಏಷ್ಯಾಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ಟಿ20 ತಂಡಗಳ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾ ಈಗಾಗಲೇ ನಂಬರ್ 1 ಸ್ಥಾನದಲ್ಲಿದ್ದರೆ, ಅತ್ತ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡವು 118 ರೇಟಿಂಗ್​ನೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿದೆ. ಇದೀಗ ಏಷ್ಯಾಕಪ್ ಮೂಲಕ ನಂಬರ್ 1 ಏಕದಿನ ತಂಡವಾಗಿ ಹೊರಹೊಮ್ಮುವ ಅವಕಾಶ ಟೀಮ್ ಇಂಡಿಯಾ ಮುಂದಿದ್ದು, ಈ ಗುರಿಯೊಂದಿಗೆ ಭಾರತ ತಂಡ ಏಷ್ಯಾಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

7 / 7
Web contact
Web contact

TV9 Kannada

Read More
Follow Us
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ