AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

India vs Pakistan: ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ ತಂಡಗಳು ಸೆಪ್ಟೆಂಬರ್ 2 ರಂದು ಮುಖಾಮುಖಿಯಾಗಲಿದೆ. ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Aug 27, 2023 | 5:28 PM

Share
ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಗೆಲುವಿನೊಂದಿಗೆ ಬಾಬರ್ ಆಝಂ ಪಡೆ ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಗೆಲುವಿನೊಂದಿಗೆ ಬಾಬರ್ ಆಝಂ ಪಡೆ ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನಕ್ಕೇರಿದೆ.

1 / 7
ಏಕದಿನ ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡವು ಒಟ್ಟು 118 ರೇಟಿಂಗ್​ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, 118 ರೇಟಿಂಗ್ ಪಡೆದಿರುವ ಆಸ್ಟ್ರೇಲಿಯಾ ತಂಡವು ದ್ವಿತೀಯ ಸ್ಥಾನದಲ್ಲಿದೆ. ಇನ್ನು ಮೂರನೇ ಸ್ಥಾನದಲ್ಲಿರುವ ಭಾರತ ತಂಡದ ಹೊಂದಿರುವ ರೇಟಿಂಗ್ 113.

ಏಕದಿನ ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡವು ಒಟ್ಟು 118 ರೇಟಿಂಗ್​ನೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, 118 ರೇಟಿಂಗ್ ಪಡೆದಿರುವ ಆಸ್ಟ್ರೇಲಿಯಾ ತಂಡವು ದ್ವಿತೀಯ ಸ್ಥಾನದಲ್ಲಿದೆ. ಇನ್ನು ಮೂರನೇ ಸ್ಥಾನದಲ್ಲಿರುವ ಭಾರತ ತಂಡದ ಹೊಂದಿರುವ ರೇಟಿಂಗ್ 113.

2 / 7
ಅಂದರೆ ಇಲ್ಲಿ ಭಾರತ ಹಾಗೂ ಪಾಕಿಸ್ತಾನ್ ನಡುವಣ ರೇಟಿಂಗ್ ವ್ಯತ್ಯಾಸ ಕೇವಲ 5 ಮಾತ್ರ. ಹೀಗಾಗಿಯೇ ಏಷ್ಯಾಕಪ್​ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಗ್ರಸ್ಥಾನಕ್ಕೇರುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

ಅಂದರೆ ಇಲ್ಲಿ ಭಾರತ ಹಾಗೂ ಪಾಕಿಸ್ತಾನ್ ನಡುವಣ ರೇಟಿಂಗ್ ವ್ಯತ್ಯಾಸ ಕೇವಲ 5 ಮಾತ್ರ. ಹೀಗಾಗಿಯೇ ಏಷ್ಯಾಕಪ್​ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಗ್ರಸ್ಥಾನಕ್ಕೇರುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

3 / 7
ಅಂದರೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧದ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡರೆ ರ‍್ಯಾಂಕಿಂಗ್​ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಹಾಗೆಯೇ ಏಷ್ಯಾಕಪ್​ನಲ್ಲಿ ಭಾರತ ಗೆಲುವಿನ ನಾಗಾಲೋಟದೊಂದಿಗೆ ಕಪ್​ ಮುಡಿಗೇರಿಸಿಕೊಂಡರೆ ಅಗ್ರಸ್ಥಾನಕ್ಕೇರುವುದು ಖಚಿತ.

ಅಂದರೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧದ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡರೆ ರ‍್ಯಾಂಕಿಂಗ್​ನಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಹಾಗೆಯೇ ಏಷ್ಯಾಕಪ್​ನಲ್ಲಿ ಭಾರತ ಗೆಲುವಿನ ನಾಗಾಲೋಟದೊಂದಿಗೆ ಕಪ್​ ಮುಡಿಗೇರಿಸಿಕೊಂಡರೆ ಅಗ್ರಸ್ಥಾನಕ್ಕೇರುವುದು ಖಚಿತ.

4 / 7
ಹೀಗಾಗಿಯೇ ಈ ಬಾರಿಯ ಏಷ್ಯಾಕಪ್​ನಲ್ಲಿ ಏಕದಿನ ಕ್ರಿಕೆಟ್​ನ ನಂಬರ್ 1 ತಂಡ ಯಾರು ಎಂಬುದು ನಿರ್ಧಾರವಾಗಲಿದೆ. ಪ್ರಸ್ತುತ ಅಗ್ರಸ್ಥಾನದಲ್ಲಿರುವ ಪಾಕಿಸ್ತಾನ್ ತಂಡವು ಮೊದಲ ಸ್ಥಾನ ಕಾಯ್ದುಕೊಳ್ಳಲು ಹೋರಾಟ ನಡೆಸಿದರೆ, ಭಾರತ ಅಗ್ರಸ್ಥಾನಕ್ಕೇರಲು ಪೈಪೋಟಿ ನಡೆಸಲಿದೆ.

ಹೀಗಾಗಿಯೇ ಈ ಬಾರಿಯ ಏಷ್ಯಾಕಪ್​ನಲ್ಲಿ ಏಕದಿನ ಕ್ರಿಕೆಟ್​ನ ನಂಬರ್ 1 ತಂಡ ಯಾರು ಎಂಬುದು ನಿರ್ಧಾರವಾಗಲಿದೆ. ಪ್ರಸ್ತುತ ಅಗ್ರಸ್ಥಾನದಲ್ಲಿರುವ ಪಾಕಿಸ್ತಾನ್ ತಂಡವು ಮೊದಲ ಸ್ಥಾನ ಕಾಯ್ದುಕೊಳ್ಳಲು ಹೋರಾಟ ನಡೆಸಿದರೆ, ಭಾರತ ಅಗ್ರಸ್ಥಾನಕ್ಕೇರಲು ಪೈಪೋಟಿ ನಡೆಸಲಿದೆ.

5 / 7
ಒಂದು ವೇಳೆ ಏಷ್ಯಾಕಪ್ ಮೂಲಕ ಭಾರತ ತಂಡವು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದರೆ, ಮೂರು ಮಾದರಿಯಲ್ಲೂ ಟೀಮ್ ಇಂಡಿಯಾ ನಂಬರ್ 1 ತಂಡವಾಗಿ ಹೊರಹೊಮ್ಮಲಿದೆ.

ಒಂದು ವೇಳೆ ಏಷ್ಯಾಕಪ್ ಮೂಲಕ ಭಾರತ ತಂಡವು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದರೆ, ಮೂರು ಮಾದರಿಯಲ್ಲೂ ಟೀಮ್ ಇಂಡಿಯಾ ನಂಬರ್ 1 ತಂಡವಾಗಿ ಹೊರಹೊಮ್ಮಲಿದೆ.

6 / 7
ಟಿ20 ತಂಡಗಳ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾ ಈಗಾಗಲೇ ನಂಬರ್ 1 ಸ್ಥಾನದಲ್ಲಿದ್ದರೆ, ಅತ್ತ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡವು 118 ರೇಟಿಂಗ್​ನೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿದೆ. ಇದೀಗ ಏಷ್ಯಾಕಪ್ ಮೂಲಕ ನಂಬರ್ 1 ಏಕದಿನ ತಂಡವಾಗಿ ಹೊರಹೊಮ್ಮುವ ಅವಕಾಶ ಟೀಮ್ ಇಂಡಿಯಾ ಮುಂದಿದ್ದು, ಈ ಗುರಿಯೊಂದಿಗೆ ಭಾರತ ತಂಡ ಏಷ್ಯಾಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ಟಿ20 ತಂಡಗಳ ರ‍್ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾ ಈಗಾಗಲೇ ನಂಬರ್ 1 ಸ್ಥಾನದಲ್ಲಿದ್ದರೆ, ಅತ್ತ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡವು 118 ರೇಟಿಂಗ್​ನೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿದೆ. ಇದೀಗ ಏಷ್ಯಾಕಪ್ ಮೂಲಕ ನಂಬರ್ 1 ಏಕದಿನ ತಂಡವಾಗಿ ಹೊರಹೊಮ್ಮುವ ಅವಕಾಶ ಟೀಮ್ ಇಂಡಿಯಾ ಮುಂದಿದ್ದು, ಈ ಗುರಿಯೊಂದಿಗೆ ಭಾರತ ತಂಡ ಏಷ್ಯಾಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

7 / 7
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ