AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಟೂರ್ನಿಗಳಿಗೆ ಭಾರತಕ್ಕೆ ಬರಲ್ಲ ಪಾಕಿಸ್ತಾನ್

Champions trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್​ ಒಪ್ಪಿಗೆ ಸೂಚಿಸಿದೆ. ಅದರಂತೆ ಮುಂಬರುವ ಐಸಿಸಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಆದರೆ ಇದೇ ತಂತ್ರವನ್ನೇ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಬಿಸಿಸಿಐ ವಿರುದ್ಧ ಕೂಡ ಪ್ರಯೋಗಿಸಿದೆ. ಈ ಮೂಲಕ ಐಸಿಸಿ ಟೂರ್ನಿಯಲ್ಲಿ ತಟಸ್ಥ ಸ್ಥಳದಲ್ಲಿ ಕಣಕ್ಕಿಳಿಯಲು ಪಾಕಿಸ್ತಾನ್ ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on:Dec 25, 2024 | 8:08 AM

Share
ಐಸಿಸಿಯ ಮತ್ತೊಂದು ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 19 ರಿಂದ ಪಾಕಿಸ್ತಾನದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಚಾಲನೆ ದೊರೆಯಲಿದೆ. 8 ತಂಡಗಳ ನಡುವಣ ಈ ಕದನಕ್ಕಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ತೆರಳುತ್ತಿಲ್ಲ ಎಂಬುದು ವಿಶೇಷ. ಅಂದರೆ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತಿದೆ.

ಐಸಿಸಿಯ ಮತ್ತೊಂದು ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 19 ರಿಂದ ಪಾಕಿಸ್ತಾನದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಚಾಲನೆ ದೊರೆಯಲಿದೆ. 8 ತಂಡಗಳ ನಡುವಣ ಈ ಕದನಕ್ಕಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ತೆರಳುತ್ತಿಲ್ಲ ಎಂಬುದು ವಿಶೇಷ. ಅಂದರೆ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತಿದೆ.

1 / 7
ಅದರಂತೆ ಟೀಮ್ ಇಂಡಿಯಾದ ಪಂದ್ಯಗಳನ್ನು ದುಬೈನಲ್ಲಿ ನಡೆಯಲಿದೆ. ಉಳಿದ ಪಂದ್ಯಗಳು ಪಾಕಿಸ್ತಾನದಲ್ಲೇ ಜರುಗಲಿದೆ. ಭಾರತೀಯ ಆಟಗಾರರ ಸುರಕ್ಷತಾ ದೃಷ್ಟಿಯಿಂದ ಪಾಕ್​ನಲ್ಲಿ ಪಂದ್ಯಾವಳಿ ಆಡಲು ಬಿಸಿಸಿಐ ಹಿಂದೇಟು ಹಾಕಿತ್ತು. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸುವಂತೆ ಐಸಿಸಿಗೆ ಮನವಿ ಮಾಡಿತ್ತು.

ಅದರಂತೆ ಟೀಮ್ ಇಂಡಿಯಾದ ಪಂದ್ಯಗಳನ್ನು ದುಬೈನಲ್ಲಿ ನಡೆಯಲಿದೆ. ಉಳಿದ ಪಂದ್ಯಗಳು ಪಾಕಿಸ್ತಾನದಲ್ಲೇ ಜರುಗಲಿದೆ. ಭಾರತೀಯ ಆಟಗಾರರ ಸುರಕ್ಷತಾ ದೃಷ್ಟಿಯಿಂದ ಪಾಕ್​ನಲ್ಲಿ ಪಂದ್ಯಾವಳಿ ಆಡಲು ಬಿಸಿಸಿಐ ಹಿಂದೇಟು ಹಾಕಿತ್ತು. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸುವಂತೆ ಐಸಿಸಿಗೆ ಮನವಿ ಮಾಡಿತ್ತು.

2 / 7
ಈ ಮನವಿಯನ್ನು ಒಪ್ಪಿಕೊಳ್ಳುವಂತೆ ಐಸಿಸಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಮನವೊಲಿಸಿದೆ. ಆದರೆ ಈ ಒಪ್ಪಿಗೆಗೂ ಮುನ್ನ ಪಾಕಿಸ್ತಾನ್ ಕೆಲ ಷರತ್ತುಗಳನ್ನು ಮುಂದಿಟ್ಟಿದೆ. ಈ ಷರತ್ತಿನಂತೆ ಭಾರತದಲ್ಲಿ ಮುಂಬರುವ ದಿನಗಳಲ್ಲಿ ನಡೆಯುವ ಐಸಿಸಿ ಟೂರ್ನಿಗಳನ್ನು ಸಹ ಹೈಬ್ರಿಡ್ ಮಾದರಿಯಲ್ಲೇ ಆಯೋಜಿಸಬೇಕೆಂದು ತಿಳಿಸಿದೆ.

ಈ ಮನವಿಯನ್ನು ಒಪ್ಪಿಕೊಳ್ಳುವಂತೆ ಐಸಿಸಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಮನವೊಲಿಸಿದೆ. ಆದರೆ ಈ ಒಪ್ಪಿಗೆಗೂ ಮುನ್ನ ಪಾಕಿಸ್ತಾನ್ ಕೆಲ ಷರತ್ತುಗಳನ್ನು ಮುಂದಿಟ್ಟಿದೆ. ಈ ಷರತ್ತಿನಂತೆ ಭಾರತದಲ್ಲಿ ಮುಂಬರುವ ದಿನಗಳಲ್ಲಿ ನಡೆಯುವ ಐಸಿಸಿ ಟೂರ್ನಿಗಳನ್ನು ಸಹ ಹೈಬ್ರಿಡ್ ಮಾದರಿಯಲ್ಲೇ ಆಯೋಜಿಸಬೇಕೆಂದು ತಿಳಿಸಿದೆ.

3 / 7
ಅಂದರೆ ಇಲ್ಲಿ ಪಾಕಿಸ್ತಾನ್ ತಂಡ ಕೂಡ ಇನ್ಮುಂದೆ ಭಾರತದಲ್ಲಿ ಐಸಿಸಿ ಟೂರ್ನಿಗಳನ್ನು ಆಡಲ್ಲ ಎಂದು ತಿಳಿಸಿದೆ. ಇದಕ್ಕಾಗಿ 2031ರವರೆಗೆ ಭಾರತದಲ್ಲಿ ನಡೆಯುವ ಎಲ್ಲಾ ಐಸಿಸಿ ಟೂರ್ನಿಗಳನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಬೇಕೆಂದು ಬೇಡಿಕೆಯಿಟ್ಟಿದೆ. ಈ ಬೇಡಿಕೆಯನ್ನು ಒಪ್ಪುದಾದರೆ ಮಾತ್ರ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವುದಾಗಿ ಪಿಸಿಬಿ ಹೇಳಿಕೊಂಡಿತ್ತು.

ಅಂದರೆ ಇಲ್ಲಿ ಪಾಕಿಸ್ತಾನ್ ತಂಡ ಕೂಡ ಇನ್ಮುಂದೆ ಭಾರತದಲ್ಲಿ ಐಸಿಸಿ ಟೂರ್ನಿಗಳನ್ನು ಆಡಲ್ಲ ಎಂದು ತಿಳಿಸಿದೆ. ಇದಕ್ಕಾಗಿ 2031ರವರೆಗೆ ಭಾರತದಲ್ಲಿ ನಡೆಯುವ ಎಲ್ಲಾ ಐಸಿಸಿ ಟೂರ್ನಿಗಳನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಬೇಕೆಂದು ಬೇಡಿಕೆಯಿಟ್ಟಿದೆ. ಈ ಬೇಡಿಕೆಯನ್ನು ಒಪ್ಪುದಾದರೆ ಮಾತ್ರ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವುದಾಗಿ ಪಿಸಿಬಿ ಹೇಳಿಕೊಂಡಿತ್ತು.

4 / 7
ಈ ಎಲ್ಲಾ ಬೇಡಿಕೆಗಳಿಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಸ್ತು ಎಂದಿದ್ದು, ಅದರಂತೆ ಮುಂಬರುವ ದಿನಗಳಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ಟೂರ್ನಿಗಳನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವುದಾಗಿ ಭರವಸೆ ನೀಡಿದೆ.

ಈ ಎಲ್ಲಾ ಬೇಡಿಕೆಗಳಿಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಸ್ತು ಎಂದಿದ್ದು, ಅದರಂತೆ ಮುಂಬರುವ ದಿನಗಳಲ್ಲಿ ಭಾರತದಲ್ಲಿ ನಡೆಯಲಿರುವ ಐಸಿಸಿ ಟೂರ್ನಿಗಳನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸುವುದಾಗಿ ಭರವಸೆ ನೀಡಿದೆ.

5 / 7
ಹೀಗಾಗಿ 2025 ರಲ್ಲಿ ಭಾರತದಲ್ಲಿ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್, 2026 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್, 2029 ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ, 2031 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗಾಗಿ ಪಾಕಿಸ್ತಾನ್ ತಂಡವು ಭಾರತಕ್ಕೆ ಬರಲ್ಲ.

ಹೀಗಾಗಿ 2025 ರಲ್ಲಿ ಭಾರತದಲ್ಲಿ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್, 2026 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್, 2029 ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ, 2031 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗಾಗಿ ಪಾಕಿಸ್ತಾನ್ ತಂಡವು ಭಾರತಕ್ಕೆ ಬರಲ್ಲ.

6 / 7
ಬದಲಾಗಿ ಬಿಸಿಸಿಐ ಹೈಬ್ರಿಡ್ ಮಾದರಿಯಲ್ಲಿ ಪಂದ್ಯವನ್ನು ಆಯೋಜಿಸಬೇಕಾಗುತ್ತದೆ. ಅದರಂತೆ ಭಾರತದಲ್ಲಿ ನಡೆಯಲಿರುವ 4 ಐಸಿಸಿ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ಜರುಗಲಿದ್ದು, ಈ ಟೂರ್ನಿಯಲ್ಲಿನ ಪಾಕಿಸ್ತಾನದ ಪಂದ್ಯಗಳಿಗೆ ಶ್ರೀಲಂಕಾ ಅಥವಾ ಯುಎಇ ಆತಿಥ್ಯವಹಿಸುವ ಸಾಧ್ಯತೆ ಹೆಚ್ಚು.

ಬದಲಾಗಿ ಬಿಸಿಸಿಐ ಹೈಬ್ರಿಡ್ ಮಾದರಿಯಲ್ಲಿ ಪಂದ್ಯವನ್ನು ಆಯೋಜಿಸಬೇಕಾಗುತ್ತದೆ. ಅದರಂತೆ ಭಾರತದಲ್ಲಿ ನಡೆಯಲಿರುವ 4 ಐಸಿಸಿ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ಜರುಗಲಿದ್ದು, ಈ ಟೂರ್ನಿಯಲ್ಲಿನ ಪಾಕಿಸ್ತಾನದ ಪಂದ್ಯಗಳಿಗೆ ಶ್ರೀಲಂಕಾ ಅಥವಾ ಯುಎಇ ಆತಿಥ್ಯವಹಿಸುವ ಸಾಧ್ಯತೆ ಹೆಚ್ಚು.

7 / 7

Published On - 8:08 am, Wed, 25 December 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ