AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸನ್​ರೈಸರ್ಸ್’ ಪರ ಕಣಕ್ಕಿಳಿದ ಪಾಕಿಸ್ತಾನ್ ಆಟಗಾರ..!

Abrar Ahmed: ಅಬ್ರಾರ್ ಅಹ್ಮದ್ ಪಾಕಿಸ್ತಾನ್ ಮೂಲದ ಕ್ರಿಕೆಟಿಗ. ಈ ಹಿಂದೆ ಭಾರತವನ್ನು ಅಣಕಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದರು. ಇತ್ತ ವಿರೋಧಿ ಮನಸ್ಥಿತಿ ಹೊಂದಿದ್ದರೂ ಪಾಕ್ ಮೂಲದ ಆಟಗಾರನನ್ನು ಸನ್​ರೈಸರ್ಸ್ ಹೈದರಾಬಾದ್ ಒಡೆತನದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿ ಖರೀದಿಸಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಝಾಹಿರ್ ಯೂಸುಫ್
|

Updated on: Jul 22, 2026 | 11:54 AM

Share
ಇಂಗ್ಲೆಂಡ್​ನಲ್ಲಿ 100 ಎಸೆತಗಳ ಕ್ರಿಕೆಟ್ ಟೂರ್ನಿ ‘ದಿ ಹಂಡ್ರೆಡ್’ ಲೀಗ್ ಶುರುವಾಗಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲೇ ಪಾಕಿಸ್ತಾನ್ ಆಟಗಾರ ಕಣಕ್ಕಿಳಿದಿದ್ದಾರೆ. ಅದು ಸಹ ಭಾರತೀಯ ಮೂಲದ ಫ್ರಾಂಚೈಸಿ ಸನ್​ರೈಸರ್ಸ್ ಲೀಡ್ಸ್ ತಂಡದ ಪರ ಎಂಬುದು ವಿಶೇಷ. (PC: SL)

ಇಂಗ್ಲೆಂಡ್​ನಲ್ಲಿ 100 ಎಸೆತಗಳ ಕ್ರಿಕೆಟ್ ಟೂರ್ನಿ ‘ದಿ ಹಂಡ್ರೆಡ್’ ಲೀಗ್ ಶುರುವಾಗಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲೇ ಪಾಕಿಸ್ತಾನ್ ಆಟಗಾರ ಕಣಕ್ಕಿಳಿದಿದ್ದಾರೆ. ಅದು ಸಹ ಭಾರತೀಯ ಮೂಲದ ಫ್ರಾಂಚೈಸಿ ಸನ್​ರೈಸರ್ಸ್ ಲೀಡ್ಸ್ ತಂಡದ ಪರ ಎಂಬುದು ವಿಶೇಷ. (PC: SL)

1 / 5
ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಅವರು 2025 ರಲ್ಲಿ ದಿ ಹಂಡ್ರೆಡ್ ಲೀಗ್​ನಲ್ಲಿ ಸನ್​ರೈಸರ್ಸ್ ಲೀಡ್ಸ್ ಹೆಸರಿನ​ ತಂಡವನ್ನು ಖರೀದಿಸಿದ್ದರು. ಅಲ್ಲದೆ ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ಕಾವ್ಯಾ ಮಾರನ್ ಹಾಗೂ ಕೋಚ್ ಡೇನಿಯಲ್ ವೆಟ್ಟೋರಿ ಭಾರಿ ಪೈಪೋಟಿ ನಡೆಸಿ ಪಾಕಿಸ್ತಾನ್ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು 1,90,000 ಪೌಂಡ್ಸ್ (ಸುಮಾರು ₹2.45 ಕೋಟಿ) ನೀಡಿ ತಂಡಕ್ಕೆ ಆಯ್ಕೆ ಮಾಡಿಕೊಂಡಿದ್ದರು. (PC: PCB)

ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಅವರು 2025 ರಲ್ಲಿ ದಿ ಹಂಡ್ರೆಡ್ ಲೀಗ್​ನಲ್ಲಿ ಸನ್​ರೈಸರ್ಸ್ ಲೀಡ್ಸ್ ಹೆಸರಿನ​ ತಂಡವನ್ನು ಖರೀದಿಸಿದ್ದರು. ಅಲ್ಲದೆ ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ಕಾವ್ಯಾ ಮಾರನ್ ಹಾಗೂ ಕೋಚ್ ಡೇನಿಯಲ್ ವೆಟ್ಟೋರಿ ಭಾರಿ ಪೈಪೋಟಿ ನಡೆಸಿ ಪಾಕಿಸ್ತಾನ್ ಸ್ಪಿನ್ನರ್ ಅಬ್ರಾರ್ ಅಹ್ಮದ್ ಅವರನ್ನು 1,90,000 ಪೌಂಡ್ಸ್ (ಸುಮಾರು ₹2.45 ಕೋಟಿ) ನೀಡಿ ತಂಡಕ್ಕೆ ಆಯ್ಕೆ ಮಾಡಿಕೊಂಡಿದ್ದರು. (PC: PCB)

2 / 5
ಕಾವ್ಯ ಮಾರನ್ ಅವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಪಾಕಿಸ್ತಾನ್ ಆಟಗಾರನನ್ನು ಸನ್​ರೈಸರ್ಸ್ ಲೀಡ್ಸ್ ತಂಡದಿಂದ ಕೈ ಬಿಡಬೇಕೆಂಬ ಒತ್ತಾಯಗಳು ಸೋಷಿಯಲ್ ಮೀಡಿಯಾದಲ್ಲಿ ಕೇಳಿ ಬಂದಿತ್ತು. ಹೀಗಾಗಿ ಟೂರ್ನಿ ಆರಂಭಕ್ಕೂ ಮುನ್ನ ಅಬ್ರಾರ್ ಅಹ್ಮದ್ ಅವರನ್ನು SRH ಫ್ರಾಂಚೈಸಿ ಕೈ ಬಿಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. (PC: X.com)

ಕಾವ್ಯ ಮಾರನ್ ಅವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಪಾಕಿಸ್ತಾನ್ ಆಟಗಾರನನ್ನು ಸನ್​ರೈಸರ್ಸ್ ಲೀಡ್ಸ್ ತಂಡದಿಂದ ಕೈ ಬಿಡಬೇಕೆಂಬ ಒತ್ತಾಯಗಳು ಸೋಷಿಯಲ್ ಮೀಡಿಯಾದಲ್ಲಿ ಕೇಳಿ ಬಂದಿತ್ತು. ಹೀಗಾಗಿ ಟೂರ್ನಿ ಆರಂಭಕ್ಕೂ ಮುನ್ನ ಅಬ್ರಾರ್ ಅಹ್ಮದ್ ಅವರನ್ನು SRH ಫ್ರಾಂಚೈಸಿ ಕೈ ಬಿಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. (PC: X.com)

3 / 5
ಅದರೆ ಎಂಐ ಲಂಡನ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್ ಲೀಡ್ಸ್ ಪರ ಅಬ್ರಾರ್ ಅಹ್ಮದ್ ಕಣಕ್ಕಿಳಿದಿದ್ದಾರೆ. ಇದರೊಂದಿಗೆ ‘ಸನ್‌ರೈಸರ್ಸ್’ ಲೋಗೋ ಮತ್ತು ಜೆರ್ಸಿ ಧರಿಸಿ ಕಣಕ್ಕಿಳಿದ ಮೊದಲ ಪಾಕಿಸ್ತಾನಿ ಆಟಗಾರ ಎಂಬ ಹೆಗ್ಗಳಿಕೆಗೆ ಅಬ್ರಾರ್ ಪಾತ್ರರಾಗಿದ್ದಾರೆ.  (PC: PCB)

ಅದರೆ ಎಂಐ ಲಂಡನ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್ ಲೀಡ್ಸ್ ಪರ ಅಬ್ರಾರ್ ಅಹ್ಮದ್ ಕಣಕ್ಕಿಳಿದಿದ್ದಾರೆ. ಇದರೊಂದಿಗೆ ‘ಸನ್‌ರೈಸರ್ಸ್’ ಲೋಗೋ ಮತ್ತು ಜೆರ್ಸಿ ಧರಿಸಿ ಕಣಕ್ಕಿಳಿದ ಮೊದಲ ಪಾಕಿಸ್ತಾನಿ ಆಟಗಾರ ಎಂಬ ಹೆಗ್ಗಳಿಕೆಗೆ ಅಬ್ರಾರ್ ಪಾತ್ರರಾಗಿದ್ದಾರೆ.  (PC: PCB)

4 / 5
ಇನ್ನು ಈ ಪಂದ್ಯದಲ್ಲಿ 3 ಎಸೆತಗಳನ್ನು ಎದುರಿಸಿದ ಅಬ್ರಾರ್ ಅಹ್ಮದ್ ಒಂದು ಸಿಕ್ಸರ್​ನೊಂದಿಗೆ 7 ರನ್​ ಬಾರಿಸಿದ್ದರು. ಹಾಗೆಯೇ 10 ಎಸೆತಗಳಲ್ಲಿ ಬರೋಬ್ಬರಿ 30 ರನ್ ನೀಡಿದ್ದಾರೆ. ಇತ್ತ ಮೊದಲ ಮ್ಯಾಚ್​ನಲ್ಲೇ ದುಬಾರಿಯಾಗಿರುವ ಕಾರಣ ಪಾಕ್ ಸ್ಪಿನ್ನರ್​ನನ್ನು ಮುಂದಿನ ಪಂದ್ಯದಿಂದ ಕೈ ಬಿಡುವ ಸಾಧ್ಯತೆಯಿದೆ. (PC: The Hundred)

ಇನ್ನು ಈ ಪಂದ್ಯದಲ್ಲಿ 3 ಎಸೆತಗಳನ್ನು ಎದುರಿಸಿದ ಅಬ್ರಾರ್ ಅಹ್ಮದ್ ಒಂದು ಸಿಕ್ಸರ್​ನೊಂದಿಗೆ 7 ರನ್​ ಬಾರಿಸಿದ್ದರು. ಹಾಗೆಯೇ 10 ಎಸೆತಗಳಲ್ಲಿ ಬರೋಬ್ಬರಿ 30 ರನ್ ನೀಡಿದ್ದಾರೆ. ಇತ್ತ ಮೊದಲ ಮ್ಯಾಚ್​ನಲ್ಲೇ ದುಬಾರಿಯಾಗಿರುವ ಕಾರಣ ಪಾಕ್ ಸ್ಪಿನ್ನರ್​ನನ್ನು ಮುಂದಿನ ಪಂದ್ಯದಿಂದ ಕೈ ಬಿಡುವ ಸಾಧ್ಯತೆಯಿದೆ. (PC: The Hundred)

5 / 5
Follow Us
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ