AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ಗೂ ಮುನ್ನ ನಿವೃತ್ತಿ ಘೋಷಿಸಿದ ಪಾಕಿಸ್ತಾನ್ ಬ್ಯಾಟರ್..!

Asif Ali retirement: ಪಾಕಿಸ್ತಾನ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಆಸಿಫ್ ಅಲಿ ಇಂಟರ್​ನ್ಯಾಷನಲ್ ಕ್ರಿಕೆಟ್ ಬದುಕಿಗೆ ಗುಡ್ ಬೈ ಹೇಳಿದ್ದಾರೆ. ಪಾಕಿಸ್ತಾನ್ ಪರ 58 ಟಿ20 ಪಂದ್ಯಗಳನ್ನಾಡಿದ್ದ ಆಸಿಫ್ ಅಲಿ ಏಷ್ಯಾಕಪ್​ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಈ ಟೂರ್ನಿಗೆ ಆಯ್ಕೆ ಮಾಡಲಾದ 15 ಸದಸ್ಯರುಗಳ ಪಟ್ಟಿಯಲ್ಲಿ ಆಸಿಫ್ ಹೆಸರು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 02, 2025 | 9:34 AM

Share
ಪಾಕಿಸ್ತಾನ್ ತಂಡದ ಬ್ಯಾಟ್ಸ್​ಮನ್ ಆಸಿಫ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಪಾಕ್ ಪರ 79 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಆಸಿಫ್ 33ನೇ ವಯಸ್ಸಿಗೆ ಇಂಟರ್​ನ್ಯಾಷನಲ್ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ಲೀಗ್​ಗಳಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

ಪಾಕಿಸ್ತಾನ್ ತಂಡದ ಬ್ಯಾಟ್ಸ್​ಮನ್ ಆಸಿಫ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಪಾಕ್ ಪರ 79 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಆಸಿಫ್ 33ನೇ ವಯಸ್ಸಿಗೆ ಇಂಟರ್​ನ್ಯಾಷನಲ್ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ಲೀಗ್​ಗಳಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

1 / 5
ಆಸಿಫ್ ಅಲಿ ಈ ಹಿಂದೆ ಪಾಕಿಸ್ತಾನ್ ಟಿ20 ತಂಡದ ಖಾಯಂ ಸದಸ್ಯರಾಗಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಏಷ್ಯಾಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಆಸಿಫ್​ಗೆ ಸ್ಥಾನ ಸಿಕ್ಕಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಲು ಅವಕಾಶವಿತ್ತು.

ಆಸಿಫ್ ಅಲಿ ಈ ಹಿಂದೆ ಪಾಕಿಸ್ತಾನ್ ಟಿ20 ತಂಡದ ಖಾಯಂ ಸದಸ್ಯರಾಗಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಏಷ್ಯಾಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಆಸಿಫ್​ಗೆ ಸ್ಥಾನ ಸಿಕ್ಕಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಲು ಅವಕಾಶವಿತ್ತು.

2 / 5
ಆದರೆ ಇದೀಗ ಏಷ್ಯಾಕಪ್​ ಟೂರ್ನಿ ಆರಂಭಕ್ಕೂ ಮುನ್ನವೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಆಸಿಫ್ ಅಲಿ, ಪಾಕಿಸ್ತಾನದ ಜೆರ್ಸಿ ಧರಿಸಿರುವುದು ನನ್ನ ಜೀವನದ ಅತ್ಯಂತ ದೊಡ್ಡ ಗೌರವ. ಅಲ್ಲದೆ ಕ್ರಿಕೆಟ್ ಮೈದಾನದಲ್ಲಿ ನನ್ನ ದೇಶಕ್ಕೆ ಸೇವೆ ಸಲ್ಲಿಸುವುದು ನನ್ನ ಹೆಮ್ಮೆಯ ಅಧ್ಯಾಯವಾಗಿದೆ.  ಈ ಅಧ್ಯಾಯಕ್ಕೆ ವಿರಾಮವಿಡಲು ನಿರ್ಧರಿಸಿದ್ದೇನೆ ಎಂದು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಆದರೆ ಇದೀಗ ಏಷ್ಯಾಕಪ್​ ಟೂರ್ನಿ ಆರಂಭಕ್ಕೂ ಮುನ್ನವೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಆಸಿಫ್ ಅಲಿ, ಪಾಕಿಸ್ತಾನದ ಜೆರ್ಸಿ ಧರಿಸಿರುವುದು ನನ್ನ ಜೀವನದ ಅತ್ಯಂತ ದೊಡ್ಡ ಗೌರವ. ಅಲ್ಲದೆ ಕ್ರಿಕೆಟ್ ಮೈದಾನದಲ್ಲಿ ನನ್ನ ದೇಶಕ್ಕೆ ಸೇವೆ ಸಲ್ಲಿಸುವುದು ನನ್ನ ಹೆಮ್ಮೆಯ ಅಧ್ಯಾಯವಾಗಿದೆ.  ಈ ಅಧ್ಯಾಯಕ್ಕೆ ವಿರಾಮವಿಡಲು ನಿರ್ಧರಿಸಿದ್ದೇನೆ ಎಂದು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

3 / 5
2018 ರಲ್ಲಿ ಪಾಕಿಸ್ತಾನ್ ಪರ ಪಾದಾರ್ಪಣೆ ಮಾಡಿದ ಆಸಿಫ್ ಅಲಿ 21 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 16 ಇನಿಂಗ್ಸ್ ಆಡಿರುವ ಅವರು 3 ಅರ್ಧಶತಕಗಳೊಂದಿಗೆ 382 ರನ್ ಕಲೆಹಾಕಿದ್ದಾರೆ. ಹಾಗೆಯೇ 58 ಟಿ20 ಪಂದ್ಯಗಳಲ್ಲಿ 51 ಇನಿಂಗ್ಸ್ ಆಡಿರುವ ಆಸಿಫ್ 577 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

2018 ರಲ್ಲಿ ಪಾಕಿಸ್ತಾನ್ ಪರ ಪಾದಾರ್ಪಣೆ ಮಾಡಿದ ಆಸಿಫ್ ಅಲಿ 21 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 16 ಇನಿಂಗ್ಸ್ ಆಡಿರುವ ಅವರು 3 ಅರ್ಧಶತಕಗಳೊಂದಿಗೆ 382 ರನ್ ಕಲೆಹಾಕಿದ್ದಾರೆ. ಹಾಗೆಯೇ 58 ಟಿ20 ಪಂದ್ಯಗಳಲ್ಲಿ 51 ಇನಿಂಗ್ಸ್ ಆಡಿರುವ ಆಸಿಫ್ 577 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

4 / 5
ಇದೀಗ 33ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ಆಸಿಫ್ ಅಲಿ ಮುಂಬರುವ ದಿನಗಳಲ್ಲಿ ವಿಶ್ವದ ಪ್ರಮುಖ ಫ್ರಾಂಚೈಸಿ ಲೀಗ್​ಗಳಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ ಮುಂಬರುವ ದಿನಗಳಲ್ಲಿ ಆಸಿಫ್ ಪಾಕಿಸ್ತಾನ್ ಸೂಪರ್ ಲೀಗ್, ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್, ಕೆರಿಬಿಯನ್ ಪ್ರೀಮಿಯರ್​ ಲೀಗ್​ಗಳಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಇದೀಗ 33ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ಆಸಿಫ್ ಅಲಿ ಮುಂಬರುವ ದಿನಗಳಲ್ಲಿ ವಿಶ್ವದ ಪ್ರಮುಖ ಫ್ರಾಂಚೈಸಿ ಲೀಗ್​ಗಳಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ ಮುಂಬರುವ ದಿನಗಳಲ್ಲಿ ಆಸಿಫ್ ಪಾಕಿಸ್ತಾನ್ ಸೂಪರ್ ಲೀಗ್, ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್, ಕೆರಿಬಿಯನ್ ಪ್ರೀಮಿಯರ್​ ಲೀಗ್​ಗಳಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

5 / 5
Follow Us
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು