AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ಗೂ ಮುನ್ನ ನಿವೃತ್ತಿ ಘೋಷಿಸಿದ ಪಾಕಿಸ್ತಾನ್ ಬ್ಯಾಟರ್..!

Asif Ali retirement: ಪಾಕಿಸ್ತಾನ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಆಸಿಫ್ ಅಲಿ ಇಂಟರ್​ನ್ಯಾಷನಲ್ ಕ್ರಿಕೆಟ್ ಬದುಕಿಗೆ ಗುಡ್ ಬೈ ಹೇಳಿದ್ದಾರೆ. ಪಾಕಿಸ್ತಾನ್ ಪರ 58 ಟಿ20 ಪಂದ್ಯಗಳನ್ನಾಡಿದ್ದ ಆಸಿಫ್ ಅಲಿ ಏಷ್ಯಾಕಪ್​ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಈ ಟೂರ್ನಿಗೆ ಆಯ್ಕೆ ಮಾಡಲಾದ 15 ಸದಸ್ಯರುಗಳ ಪಟ್ಟಿಯಲ್ಲಿ ಆಸಿಫ್ ಹೆಸರು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 02, 2025 | 9:34 AM

Share
ಪಾಕಿಸ್ತಾನ್ ತಂಡದ ಬ್ಯಾಟ್ಸ್​ಮನ್ ಆಸಿಫ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಪಾಕ್ ಪರ 79 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಆಸಿಫ್ 33ನೇ ವಯಸ್ಸಿಗೆ ಇಂಟರ್​ನ್ಯಾಷನಲ್ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ಲೀಗ್​ಗಳಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

ಪಾಕಿಸ್ತಾನ್ ತಂಡದ ಬ್ಯಾಟ್ಸ್​ಮನ್ ಆಸಿಫ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಪಾಕ್ ಪರ 79 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಆಸಿಫ್ 33ನೇ ವಯಸ್ಸಿಗೆ ಇಂಟರ್​ನ್ಯಾಷನಲ್ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ಲೀಗ್​ಗಳಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

1 / 5
ಆಸಿಫ್ ಅಲಿ ಈ ಹಿಂದೆ ಪಾಕಿಸ್ತಾನ್ ಟಿ20 ತಂಡದ ಖಾಯಂ ಸದಸ್ಯರಾಗಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಏಷ್ಯಾಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಆಸಿಫ್​ಗೆ ಸ್ಥಾನ ಸಿಕ್ಕಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಲು ಅವಕಾಶವಿತ್ತು.

ಆಸಿಫ್ ಅಲಿ ಈ ಹಿಂದೆ ಪಾಕಿಸ್ತಾನ್ ಟಿ20 ತಂಡದ ಖಾಯಂ ಸದಸ್ಯರಾಗಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಏಷ್ಯಾಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಆಸಿಫ್​ಗೆ ಸ್ಥಾನ ಸಿಕ್ಕಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಲು ಅವಕಾಶವಿತ್ತು.

2 / 5
ಆದರೆ ಇದೀಗ ಏಷ್ಯಾಕಪ್​ ಟೂರ್ನಿ ಆರಂಭಕ್ಕೂ ಮುನ್ನವೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಆಸಿಫ್ ಅಲಿ, ಪಾಕಿಸ್ತಾನದ ಜೆರ್ಸಿ ಧರಿಸಿರುವುದು ನನ್ನ ಜೀವನದ ಅತ್ಯಂತ ದೊಡ್ಡ ಗೌರವ. ಅಲ್ಲದೆ ಕ್ರಿಕೆಟ್ ಮೈದಾನದಲ್ಲಿ ನನ್ನ ದೇಶಕ್ಕೆ ಸೇವೆ ಸಲ್ಲಿಸುವುದು ನನ್ನ ಹೆಮ್ಮೆಯ ಅಧ್ಯಾಯವಾಗಿದೆ.  ಈ ಅಧ್ಯಾಯಕ್ಕೆ ವಿರಾಮವಿಡಲು ನಿರ್ಧರಿಸಿದ್ದೇನೆ ಎಂದು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಆದರೆ ಇದೀಗ ಏಷ್ಯಾಕಪ್​ ಟೂರ್ನಿ ಆರಂಭಕ್ಕೂ ಮುನ್ನವೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಆಸಿಫ್ ಅಲಿ, ಪಾಕಿಸ್ತಾನದ ಜೆರ್ಸಿ ಧರಿಸಿರುವುದು ನನ್ನ ಜೀವನದ ಅತ್ಯಂತ ದೊಡ್ಡ ಗೌರವ. ಅಲ್ಲದೆ ಕ್ರಿಕೆಟ್ ಮೈದಾನದಲ್ಲಿ ನನ್ನ ದೇಶಕ್ಕೆ ಸೇವೆ ಸಲ್ಲಿಸುವುದು ನನ್ನ ಹೆಮ್ಮೆಯ ಅಧ್ಯಾಯವಾಗಿದೆ.  ಈ ಅಧ್ಯಾಯಕ್ಕೆ ವಿರಾಮವಿಡಲು ನಿರ್ಧರಿಸಿದ್ದೇನೆ ಎಂದು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

3 / 5
2018 ರಲ್ಲಿ ಪಾಕಿಸ್ತಾನ್ ಪರ ಪಾದಾರ್ಪಣೆ ಮಾಡಿದ ಆಸಿಫ್ ಅಲಿ 21 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 16 ಇನಿಂಗ್ಸ್ ಆಡಿರುವ ಅವರು 3 ಅರ್ಧಶತಕಗಳೊಂದಿಗೆ 382 ರನ್ ಕಲೆಹಾಕಿದ್ದಾರೆ. ಹಾಗೆಯೇ 58 ಟಿ20 ಪಂದ್ಯಗಳಲ್ಲಿ 51 ಇನಿಂಗ್ಸ್ ಆಡಿರುವ ಆಸಿಫ್ 577 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

2018 ರಲ್ಲಿ ಪಾಕಿಸ್ತಾನ್ ಪರ ಪಾದಾರ್ಪಣೆ ಮಾಡಿದ ಆಸಿಫ್ ಅಲಿ 21 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 16 ಇನಿಂಗ್ಸ್ ಆಡಿರುವ ಅವರು 3 ಅರ್ಧಶತಕಗಳೊಂದಿಗೆ 382 ರನ್ ಕಲೆಹಾಕಿದ್ದಾರೆ. ಹಾಗೆಯೇ 58 ಟಿ20 ಪಂದ್ಯಗಳಲ್ಲಿ 51 ಇನಿಂಗ್ಸ್ ಆಡಿರುವ ಆಸಿಫ್ 577 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

4 / 5
ಇದೀಗ 33ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ಆಸಿಫ್ ಅಲಿ ಮುಂಬರುವ ದಿನಗಳಲ್ಲಿ ವಿಶ್ವದ ಪ್ರಮುಖ ಫ್ರಾಂಚೈಸಿ ಲೀಗ್​ಗಳಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ ಮುಂಬರುವ ದಿನಗಳಲ್ಲಿ ಆಸಿಫ್ ಪಾಕಿಸ್ತಾನ್ ಸೂಪರ್ ಲೀಗ್, ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್, ಕೆರಿಬಿಯನ್ ಪ್ರೀಮಿಯರ್​ ಲೀಗ್​ಗಳಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಇದೀಗ 33ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ಆಸಿಫ್ ಅಲಿ ಮುಂಬರುವ ದಿನಗಳಲ್ಲಿ ವಿಶ್ವದ ಪ್ರಮುಖ ಫ್ರಾಂಚೈಸಿ ಲೀಗ್​ಗಳಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ ಮುಂಬರುವ ದಿನಗಳಲ್ಲಿ ಆಸಿಫ್ ಪಾಕಿಸ್ತಾನ್ ಸೂಪರ್ ಲೀಗ್, ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್, ಕೆರಿಬಿಯನ್ ಪ್ರೀಮಿಯರ್​ ಲೀಗ್​ಗಳಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

5 / 5
Follow Us
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ