AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ಗೂ ಮುನ್ನ ನಿವೃತ್ತಿ ಘೋಷಿಸಿದ ಪಾಕಿಸ್ತಾನ್ ಬ್ಯಾಟರ್..!

Asif Ali retirement: ಪಾಕಿಸ್ತಾನ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಆಸಿಫ್ ಅಲಿ ಇಂಟರ್​ನ್ಯಾಷನಲ್ ಕ್ರಿಕೆಟ್ ಬದುಕಿಗೆ ಗುಡ್ ಬೈ ಹೇಳಿದ್ದಾರೆ. ಪಾಕಿಸ್ತಾನ್ ಪರ 58 ಟಿ20 ಪಂದ್ಯಗಳನ್ನಾಡಿದ್ದ ಆಸಿಫ್ ಅಲಿ ಏಷ್ಯಾಕಪ್​ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಈ ಟೂರ್ನಿಗೆ ಆಯ್ಕೆ ಮಾಡಲಾದ 15 ಸದಸ್ಯರುಗಳ ಪಟ್ಟಿಯಲ್ಲಿ ಆಸಿಫ್ ಹೆಸರು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 02, 2025 | 9:34 AM

Share
ಪಾಕಿಸ್ತಾನ್ ತಂಡದ ಬ್ಯಾಟ್ಸ್​ಮನ್ ಆಸಿಫ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಪಾಕ್ ಪರ 79 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಆಸಿಫ್ 33ನೇ ವಯಸ್ಸಿಗೆ ಇಂಟರ್​ನ್ಯಾಷನಲ್ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ಲೀಗ್​ಗಳಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

ಪಾಕಿಸ್ತಾನ್ ತಂಡದ ಬ್ಯಾಟ್ಸ್​ಮನ್ ಆಸಿಫ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಪಾಕ್ ಪರ 79 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಆಸಿಫ್ 33ನೇ ವಯಸ್ಸಿಗೆ ಇಂಟರ್​ನ್ಯಾಷನಲ್ ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ಲೀಗ್​ಗಳಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

1 / 5
ಆಸಿಫ್ ಅಲಿ ಈ ಹಿಂದೆ ಪಾಕಿಸ್ತಾನ್ ಟಿ20 ತಂಡದ ಖಾಯಂ ಸದಸ್ಯರಾಗಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಏಷ್ಯಾಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಆಸಿಫ್​ಗೆ ಸ್ಥಾನ ಸಿಕ್ಕಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಲು ಅವಕಾಶವಿತ್ತು.

ಆಸಿಫ್ ಅಲಿ ಈ ಹಿಂದೆ ಪಾಕಿಸ್ತಾನ್ ಟಿ20 ತಂಡದ ಖಾಯಂ ಸದಸ್ಯರಾಗಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಏಷ್ಯಾಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಆಸಿಫ್​ಗೆ ಸ್ಥಾನ ಸಿಕ್ಕಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಲು ಅವಕಾಶವಿತ್ತು.

2 / 5
ಆದರೆ ಇದೀಗ ಏಷ್ಯಾಕಪ್​ ಟೂರ್ನಿ ಆರಂಭಕ್ಕೂ ಮುನ್ನವೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಆಸಿಫ್ ಅಲಿ, ಪಾಕಿಸ್ತಾನದ ಜೆರ್ಸಿ ಧರಿಸಿರುವುದು ನನ್ನ ಜೀವನದ ಅತ್ಯಂತ ದೊಡ್ಡ ಗೌರವ. ಅಲ್ಲದೆ ಕ್ರಿಕೆಟ್ ಮೈದಾನದಲ್ಲಿ ನನ್ನ ದೇಶಕ್ಕೆ ಸೇವೆ ಸಲ್ಲಿಸುವುದು ನನ್ನ ಹೆಮ್ಮೆಯ ಅಧ್ಯಾಯವಾಗಿದೆ.  ಈ ಅಧ್ಯಾಯಕ್ಕೆ ವಿರಾಮವಿಡಲು ನಿರ್ಧರಿಸಿದ್ದೇನೆ ಎಂದು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಆದರೆ ಇದೀಗ ಏಷ್ಯಾಕಪ್​ ಟೂರ್ನಿ ಆರಂಭಕ್ಕೂ ಮುನ್ನವೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಆಸಿಫ್ ಅಲಿ, ಪಾಕಿಸ್ತಾನದ ಜೆರ್ಸಿ ಧರಿಸಿರುವುದು ನನ್ನ ಜೀವನದ ಅತ್ಯಂತ ದೊಡ್ಡ ಗೌರವ. ಅಲ್ಲದೆ ಕ್ರಿಕೆಟ್ ಮೈದಾನದಲ್ಲಿ ನನ್ನ ದೇಶಕ್ಕೆ ಸೇವೆ ಸಲ್ಲಿಸುವುದು ನನ್ನ ಹೆಮ್ಮೆಯ ಅಧ್ಯಾಯವಾಗಿದೆ.  ಈ ಅಧ್ಯಾಯಕ್ಕೆ ವಿರಾಮವಿಡಲು ನಿರ್ಧರಿಸಿದ್ದೇನೆ ಎಂದು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

3 / 5
2018 ರಲ್ಲಿ ಪಾಕಿಸ್ತಾನ್ ಪರ ಪಾದಾರ್ಪಣೆ ಮಾಡಿದ ಆಸಿಫ್ ಅಲಿ 21 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 16 ಇನಿಂಗ್ಸ್ ಆಡಿರುವ ಅವರು 3 ಅರ್ಧಶತಕಗಳೊಂದಿಗೆ 382 ರನ್ ಕಲೆಹಾಕಿದ್ದಾರೆ. ಹಾಗೆಯೇ 58 ಟಿ20 ಪಂದ್ಯಗಳಲ್ಲಿ 51 ಇನಿಂಗ್ಸ್ ಆಡಿರುವ ಆಸಿಫ್ 577 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

2018 ರಲ್ಲಿ ಪಾಕಿಸ್ತಾನ್ ಪರ ಪಾದಾರ್ಪಣೆ ಮಾಡಿದ ಆಸಿಫ್ ಅಲಿ 21 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 16 ಇನಿಂಗ್ಸ್ ಆಡಿರುವ ಅವರು 3 ಅರ್ಧಶತಕಗಳೊಂದಿಗೆ 382 ರನ್ ಕಲೆಹಾಕಿದ್ದಾರೆ. ಹಾಗೆಯೇ 58 ಟಿ20 ಪಂದ್ಯಗಳಲ್ಲಿ 51 ಇನಿಂಗ್ಸ್ ಆಡಿರುವ ಆಸಿಫ್ 577 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

4 / 5
ಇದೀಗ 33ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ಆಸಿಫ್ ಅಲಿ ಮುಂಬರುವ ದಿನಗಳಲ್ಲಿ ವಿಶ್ವದ ಪ್ರಮುಖ ಫ್ರಾಂಚೈಸಿ ಲೀಗ್​ಗಳಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ ಮುಂಬರುವ ದಿನಗಳಲ್ಲಿ ಆಸಿಫ್ ಪಾಕಿಸ್ತಾನ್ ಸೂಪರ್ ಲೀಗ್, ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್, ಕೆರಿಬಿಯನ್ ಪ್ರೀಮಿಯರ್​ ಲೀಗ್​ಗಳಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಇದೀಗ 33ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿರುವ ಆಸಿಫ್ ಅಲಿ ಮುಂಬರುವ ದಿನಗಳಲ್ಲಿ ವಿಶ್ವದ ಪ್ರಮುಖ ಫ್ರಾಂಚೈಸಿ ಲೀಗ್​ಗಳಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ ಮುಂಬರುವ ದಿನಗಳಲ್ಲಿ ಆಸಿಫ್ ಪಾಕಿಸ್ತಾನ್ ಸೂಪರ್ ಲೀಗ್, ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್, ಕೆರಿಬಿಯನ್ ಪ್ರೀಮಿಯರ್​ ಲೀಗ್​ಗಳಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

5 / 5
Follow Us
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?