AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azam Khan: ಚಾನ್ಸ್​ ಕೊಡ್ತೀರಾ ಕೊಡಿ, ಇಲ್ದಿದ್ರೆ… ಪಿಸಿಬಿ ವಿರುದ್ಧ ತಿರುಗಿ ನಿಂತ ಪಾಕ್ ಆಟಗಾರ

Azam Khan: ಆಝಂ ಖಾನ್ ಪಾಕಿಸ್ತಾನ್ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಮೊಯೀನ್ ಖಾನ್ ಅವರ ಪುತ್ರ. ತಂದೆಯಂತೆ ಆಝಂ ಖಾನ್ ಕೂಡ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿಯುತ್ತಿದ್ದಾರೆ. ಇದಾಗ್ಯೂ ಕಳೆದ ನಾಲ್ಕು ವರ್ಷಗಳಲ್ಲಿ ತನಗೆ ಪಾಕಿಸ್ತಾನ್ ತಂಡದಲ್ಲಿ ಕೇವಲ 8 ಅವಕಾಶಗಳನ್ನು ಮಾತ್ರ ನೀಡಿದ್ದಾರೆ ಎಂದು ಆಝಂ ಖಾನ್ ಇದೀಗ ಆಕ್ರೋಶ ಹೊರಹಾಕಿದ್ದಾರೆ.

TV9 Web
| Edited By: |

Updated on: Feb 07, 2024 | 12:08 PM

Share
ಪಾಕಿಸ್ತಾನ್ ತಂಡದ ಯುವ ವಿಕೆಟ್ ಕೀಪರ್ ಬ್ಯಾಟರ್ ಆಝಂ ಖಾನ್ ಪಾಕ್ ಕ್ರಿಕೆಟ್ ಮಂಡಳಿ ವಿರುದ್ಧ ತಿರುಗಿ ನಿಂತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸತತ ಅವಕಾಶ ನೀಡುತ್ತಿಲ್ಲ ಎಂಬುದು. ಅಂದರೆ 2021 ರಲ್ಲಿ ಪಾಕಿಸ್ತಾನ್ ತಂಡದ ಪಾದಾರ್ಪಣೆ ಮಾಡಿದ್ದ ಆಝಂಗೆ ಇದುವರೆಗೆ ಸಿಕ್ಕಿದ್ದು ಕೇವಲ 8 ಅವಕಾಶಗಳು ಮಾತ್ರ.

ಪಾಕಿಸ್ತಾನ್ ತಂಡದ ಯುವ ವಿಕೆಟ್ ಕೀಪರ್ ಬ್ಯಾಟರ್ ಆಝಂ ಖಾನ್ ಪಾಕ್ ಕ್ರಿಕೆಟ್ ಮಂಡಳಿ ವಿರುದ್ಧ ತಿರುಗಿ ನಿಂತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸತತ ಅವಕಾಶ ನೀಡುತ್ತಿಲ್ಲ ಎಂಬುದು. ಅಂದರೆ 2021 ರಲ್ಲಿ ಪಾಕಿಸ್ತಾನ್ ತಂಡದ ಪಾದಾರ್ಪಣೆ ಮಾಡಿದ್ದ ಆಝಂಗೆ ಇದುವರೆಗೆ ಸಿಕ್ಕಿದ್ದು ಕೇವಲ 8 ಅವಕಾಶಗಳು ಮಾತ್ರ.

1 / 6
ಇದೇ ಕಾರಣದಿಂದಾಗಿ ಇದೀಗ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ವಿರುದ್ಧ ಆಝಂ ಖಾನ್ ಆಕ್ರೋಶ ಹೊರಹಾಕಿದ್ದಾರೆ. ಚಿಟ್​ ಚಾಟ್​ ಶೋವೊಂದರಲ್ಲಿ ಮಾತನಾಡಿದ ಆಝಂ, ನಾನು ಫ್ರಾಂಚೈಸಿ ಲೀಗ್​ನಲ್ಲಿ ಕಾಣಿಸಿಕೊಂಡಾಗ ನನಗೆ ಉತ್ತಮ ಅವಕಾಶಗಳು ದೊರೆಯುತ್ತವೆ. ಆದರೆ ಪಾಕ್ ತಂಡದಲ್ಲಿ ಮಾತ್ರ ಚಾನ್ಸ್ ನೀಡುತ್ತಿಲ್ಲ.

ಇದೇ ಕಾರಣದಿಂದಾಗಿ ಇದೀಗ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ವಿರುದ್ಧ ಆಝಂ ಖಾನ್ ಆಕ್ರೋಶ ಹೊರಹಾಕಿದ್ದಾರೆ. ಚಿಟ್​ ಚಾಟ್​ ಶೋವೊಂದರಲ್ಲಿ ಮಾತನಾಡಿದ ಆಝಂ, ನಾನು ಫ್ರಾಂಚೈಸಿ ಲೀಗ್​ನಲ್ಲಿ ಕಾಣಿಸಿಕೊಂಡಾಗ ನನಗೆ ಉತ್ತಮ ಅವಕಾಶಗಳು ದೊರೆಯುತ್ತವೆ. ಆದರೆ ಪಾಕ್ ತಂಡದಲ್ಲಿ ಮಾತ್ರ ಚಾನ್ಸ್ ನೀಡುತ್ತಿಲ್ಲ.

2 / 6
ನನ್ನಲ್ಲಿ ಸಾಮರ್ಥ್ಯ ಇಲ್ಲದಿದ್ದರೆ ಫ್ರಾಂಚೈಸಿ ಲೀಗ್​ಗಳಲ್ಲಿ ಅವಕಾಶ ಸಿಗುತ್ತಿರಲಿಲ್ಲ. ನಾನು ಪಂದ್ಯವನ್ನು ಗೆಲ್ಲಿಸಿಕೊಡಬಲ್ಲೇ ಎಂಬ ವಿಶ್ವಾಸ ಇರುವ ಕಾರಣ ನನಗೆ ವಿವಿಧ ಲೀಗ್​ಗಳಲ್ಲಿ ಚಾನ್ಸ್​ ಸಿಗುತ್ತಿದೆ. ಇದಾಗ್ಯೂ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರತಿಭೆ ಪ್ರದರ್ಶಿಸಲು ಪಾಕ್ ಕ್ರಿಕೆಟ್ ಬೋರ್ಡ್ ನನಗೆ​ ನ್ಯಾಯಯುತ ಅವಕಾಶವನ್ನು ನೀಡುತ್ತಿಲ್ಲ ಎಂದು ಆಝಂ ಖಾನ್ ಆಕ್ರೋಶ ಹೊರಹಾಕಿದ್ದಾರೆ.

ನನ್ನಲ್ಲಿ ಸಾಮರ್ಥ್ಯ ಇಲ್ಲದಿದ್ದರೆ ಫ್ರಾಂಚೈಸಿ ಲೀಗ್​ಗಳಲ್ಲಿ ಅವಕಾಶ ಸಿಗುತ್ತಿರಲಿಲ್ಲ. ನಾನು ಪಂದ್ಯವನ್ನು ಗೆಲ್ಲಿಸಿಕೊಡಬಲ್ಲೇ ಎಂಬ ವಿಶ್ವಾಸ ಇರುವ ಕಾರಣ ನನಗೆ ವಿವಿಧ ಲೀಗ್​ಗಳಲ್ಲಿ ಚಾನ್ಸ್​ ಸಿಗುತ್ತಿದೆ. ಇದಾಗ್ಯೂ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರತಿಭೆ ಪ್ರದರ್ಶಿಸಲು ಪಾಕ್ ಕ್ರಿಕೆಟ್ ಬೋರ್ಡ್ ನನಗೆ​ ನ್ಯಾಯಯುತ ಅವಕಾಶವನ್ನು ನೀಡುತ್ತಿಲ್ಲ ಎಂದು ಆಝಂ ಖಾನ್ ಆಕ್ರೋಶ ಹೊರಹಾಕಿದ್ದಾರೆ.

3 / 6
ಕಳೆದ ನಾಲ್ಕು ವರ್ಷಗಳಲ್ಲಿ ನಾನು ಮೂರು ಬಾರಿ ಪಾಕ್ ತಂಡಕ್ಕೆ ಕಂಬ್ಯಾಕ್ ಮಾಡಿದ್ದೇನೆ. ಆದರೆ ಸಂಪೂರ್ಣ ಸರಣಿಯನ್ನು ಆಡಲು ನನಗೆ ಎಂದಿಗೂ ಅವಕಾಶ ಸಿಕ್ಕಿಲ್ಲ. ಒಂದೋ ಪೂರ್ಣ ಸರಣಿಯ ನಂತರ ನನ್ನನ್ನು ಹೊರಹಾಕಿ ಅಥವಾ ನನಗೆ ಅವಕಾಶ ನೀಡಿ. ಇದು ಬಿಟ್ಟು ಸುಮ್ಮನೆ ತನ್ನ ಕೆರಿಯರ್ ಜೊತೆ ಆಟವಾಡಬೇಡಿ ಎಂದು ಆಝಂ ಖಾನ್ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಕಳೆದ ನಾಲ್ಕು ವರ್ಷಗಳಲ್ಲಿ ನಾನು ಮೂರು ಬಾರಿ ಪಾಕ್ ತಂಡಕ್ಕೆ ಕಂಬ್ಯಾಕ್ ಮಾಡಿದ್ದೇನೆ. ಆದರೆ ಸಂಪೂರ್ಣ ಸರಣಿಯನ್ನು ಆಡಲು ನನಗೆ ಎಂದಿಗೂ ಅವಕಾಶ ಸಿಕ್ಕಿಲ್ಲ. ಒಂದೋ ಪೂರ್ಣ ಸರಣಿಯ ನಂತರ ನನ್ನನ್ನು ಹೊರಹಾಕಿ ಅಥವಾ ನನಗೆ ಅವಕಾಶ ನೀಡಿ. ಇದು ಬಿಟ್ಟು ಸುಮ್ಮನೆ ತನ್ನ ಕೆರಿಯರ್ ಜೊತೆ ಆಟವಾಡಬೇಡಿ ಎಂದು ಆಝಂ ಖಾನ್ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

4 / 6
ಪಾಕಿಸ್ತಾನ್ ಪರ ಇದುವರೆಗೆ 8 ಪಂದ್ಯಗಳನ್ನಾಡಿರುವ ಆಝಂ ಖಾನ್ ಕೇವಲ 29	 ರನ್​ ಕಲೆಹಾಕಿದ್ದಾರೆ. ಅಂದರೆ ಪ್ರತಿ ಪಂದ್ಯಗಳ ಅವರ ಸರಾಸರಿ ಸ್ಕೋರ್ 4.83 ರನ್​ಗಳು. ಇದಾಗ್ಯೂ ವಿವಿಧ ಲೀಗ್​ಗಳಲ್ಲಿ ಆಝಂ ಖಾನ್ ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ.

ಪಾಕಿಸ್ತಾನ್ ಪರ ಇದುವರೆಗೆ 8 ಪಂದ್ಯಗಳನ್ನಾಡಿರುವ ಆಝಂ ಖಾನ್ ಕೇವಲ 29 ರನ್​ ಕಲೆಹಾಕಿದ್ದಾರೆ. ಅಂದರೆ ಪ್ರತಿ ಪಂದ್ಯಗಳ ಅವರ ಸರಾಸರಿ ಸ್ಕೋರ್ 4.83 ರನ್​ಗಳು. ಇದಾಗ್ಯೂ ವಿವಿಧ ಲೀಗ್​ಗಳಲ್ಲಿ ಆಝಂ ಖಾನ್ ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ.

5 / 6
ಇತ್ತೀಚೆಗೆ ನಡೆದ ಇಂಟರ್​ನ್ಯಾಷನಲ್ ಟಿ20 ಲೀಗ್​ನಲ್ಲಿ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಆಝಂ ಖಾನ್ ಭರ್ಜರಿ ದಾಖಲೆ ಬರೆದಿದ್ದರು. ಹಾಗೆಯೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಇಸ್ಲಾಮಾಬಾದ್ ಯುನೈಟೆಡ್‌ ಪರ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಹಲವು ಬಾರಿ ಗಮನ ಸೆಳೆದಿದ್ದರು. ಇದಾಗ್ಯೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಝಂ ಖಾನ್ ಸತತ ವೈಫಲ್ಯ ಅನುಭವಿಸಿದ್ದಾರೆ ಎಂಬುದಕ್ಕೆ 8 ಪಂದ್ಯಗಳಲ್ಲಿ ಕೇವಲ 29 ರನ್ ಕಲೆಹಾಕಿರುವುದೇ ಸಾಕ್ಷಿ.

ಇತ್ತೀಚೆಗೆ ನಡೆದ ಇಂಟರ್​ನ್ಯಾಷನಲ್ ಟಿ20 ಲೀಗ್​ನಲ್ಲಿ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಆಝಂ ಖಾನ್ ಭರ್ಜರಿ ದಾಖಲೆ ಬರೆದಿದ್ದರು. ಹಾಗೆಯೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಇಸ್ಲಾಮಾಬಾದ್ ಯುನೈಟೆಡ್‌ ಪರ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಹಲವು ಬಾರಿ ಗಮನ ಸೆಳೆದಿದ್ದರು. ಇದಾಗ್ಯೂ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಝಂ ಖಾನ್ ಸತತ ವೈಫಲ್ಯ ಅನುಭವಿಸಿದ್ದಾರೆ ಎಂಬುದಕ್ಕೆ 8 ಪಂದ್ಯಗಳಲ್ಲಿ ಕೇವಲ 29 ರನ್ ಕಲೆಹಾಕಿರುವುದೇ ಸಾಕ್ಷಿ.

6 / 6
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?