AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL​ ಆಡಲು ಮೊಹಮ್ಮದ್ ಅಮಿರ್​ಗೆ ‘ಗ್ರೀನ್ ಸಿಗ್ನಲ್’

ಇಂಡಿಯನ್ ಪ್ರೀಮಿಯರ್ ಲೀಗ್​ನ ಚೊಚ್ಚಲ ಸೀಸನ್​ನಲ್ಲಿ ಪಾಕಿಸ್ತಾನ್ ಆಟಗಾರರು ಕಾಣಿಸಿಕೊಂಡಿದ್ದರು. ಆದರೆ 2008 ರಲ್ಲಿ ಮುಂಬೈ ಮೇಲೆ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಯ ಬಳಿಕ ಪಾಕಿಸ್ತಾನ್ ಆಟಗಾರರನ್ನು ಐಪಿಎಲ್​ನಿಂದ ನಿಷೇಧಿಸಲಾಗಿತ್ತು. ಈ ನಿಷೇಧದ ಹೊರತಾಗಿಯೂ ಪಾಕಿಸ್ತಾನ್ ತಂಡದ ಮಾಜಿ ವೇಗಿ ಐಪಿಎಲ್​ಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: May 21, 2026 | 8:57 AM

Share
ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್ (Mohammad Amir) ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಉತ್ತರ ಸಿಗಲು ಮುಂದಿನ ವರ್ಷದ ಐಪಿಎಲ್ ಮಿನಿ ಹರಾಜುವರೆಗೆ ಕಾಯಲೇಬೇಕು. ಏಕೆಂದರೆ ಐಪಿಎಲ್ 2027ರ ಹರಾಜಿಗೆ ಹೆಸರು ನೊಂದಾಯಿಸಿಕೊಳ್ಳಲು ಪಾಕ್ ವೇಗಿ ತುದಿಗಾಲಲ್ಲಿ ನಿಂತಿದ್ದಾರೆ. (PC: Google)

ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್ (Mohammad Amir) ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಪ್ರಶ್ನೆಗೆ ಉತ್ತರ ಸಿಗಲು ಮುಂದಿನ ವರ್ಷದ ಐಪಿಎಲ್ ಮಿನಿ ಹರಾಜುವರೆಗೆ ಕಾಯಲೇಬೇಕು. ಏಕೆಂದರೆ ಐಪಿಎಲ್ 2027ರ ಹರಾಜಿಗೆ ಹೆಸರು ನೊಂದಾಯಿಸಿಕೊಳ್ಳಲು ಪಾಕ್ ವೇಗಿ ತುದಿಗಾಲಲ್ಲಿ ನಿಂತಿದ್ದಾರೆ. (PC: Google)

1 / 5
ಆದರೆ ಅದು ಪಾಕಿಸ್ತಾನ್ ಆಟಗಾರನಾಗಿ ಅಲ್ಲ. ಬದಲಾಗಿ ಬ್ರಿಟಿಷ್ ಪ್ರಜೆಯಾಗಿ. ಅಂದರೆ ಮೊಹಮ್ಮದ್ ಅಮಿರ್ ಅಧಿಕೃತವಾಗಿ ಬ್ರಿಟಿಷ್ ಪೌರತ್ವವನ್ನು (British Citizenship) ಪಡೆದಿದ್ದಾರೆ. ಅಮಿರ್  2016 ರಲ್ಲಿ ಬ್ರಿಟಿಷ್ ಪ್ರಜೆಯಾದ ನರ್ಜೀಸ್ ಖಾನ್ ಅವರನ್ನು ವಿವಾಹವಾಗಿದ್ದರು. (PC: Google)

ಆದರೆ ಅದು ಪಾಕಿಸ್ತಾನ್ ಆಟಗಾರನಾಗಿ ಅಲ್ಲ. ಬದಲಾಗಿ ಬ್ರಿಟಿಷ್ ಪ್ರಜೆಯಾಗಿ. ಅಂದರೆ ಮೊಹಮ್ಮದ್ ಅಮಿರ್ ಅಧಿಕೃತವಾಗಿ ಬ್ರಿಟಿಷ್ ಪೌರತ್ವವನ್ನು (British Citizenship) ಪಡೆದಿದ್ದಾರೆ. ಅಮಿರ್  2016 ರಲ್ಲಿ ಬ್ರಿಟಿಷ್ ಪ್ರಜೆಯಾದ ನರ್ಜೀಸ್ ಖಾನ್ ಅವರನ್ನು ವಿವಾಹವಾಗಿದ್ದರು. (PC: Google)

2 / 5
ಮದುವೆಯ ನಂತರ ಅವರು 2020 ರಿಂದ ಯುನೈಟೆಡ್ ಕಿಂಗ್‌ಡಮ್‌ನಲ್ಲಿ (UK) ನೆಲೆಸಿದ್ದು, ನಿಯಮಾವಳಿಗಳ ಪ್ರಕಾರ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಯುಕೆ ಪಾಸ್‌ಪೋರ್ಟ್ ಪಡೆದುಕೊಂಡಿದ್ದಾರೆ. ಈ ಪರೌತ್ವದೊಂದಿಗೆ ಅಮಿರ್ ಐಪಿಎಲ್​ನಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. (PC: Google)

ಮದುವೆಯ ನಂತರ ಅವರು 2020 ರಿಂದ ಯುನೈಟೆಡ್ ಕಿಂಗ್‌ಡಮ್‌ನಲ್ಲಿ (UK) ನೆಲೆಸಿದ್ದು, ನಿಯಮಾವಳಿಗಳ ಪ್ರಕಾರ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಯುಕೆ ಪಾಸ್‌ಪೋರ್ಟ್ ಪಡೆದುಕೊಂಡಿದ್ದಾರೆ. ಈ ಪರೌತ್ವದೊಂದಿಗೆ ಅಮಿರ್ ಐಪಿಎಲ್​ನಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. (PC: Google)

3 / 5
ಕಳೆದ ವರ್ಷವೇ ಮೊಹಮ್ಮದ್ ಅಮಿರ್ ಇಂಡಿಯನ್ ಪ್ರೀಮಿಯರ್ ಲೀಗ್ ಆಡಬೇಕೆಂಬ ಇರಾದೆ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಬ್ರಿಟಿಷ್ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿರುವುದನ್ನು ಸಹ ಖಚಿತಪಡಿಸಿದ್ದರು. ಇದೀಗ ಬ್ರಿಟನ್ ಪೌರತ್ವ ಸಿಕ್ಕಿರುವ ಹಿನ್ನಲೆ ಇಂಗ್ಲೆಂಡ್ ಪ್ರಜೆಯಾಗಿ ಅವರು ಐಪಿಎಲ್​ ಹರಾಜಿಗಾಗಿ ಹೆಸರು ರಿಜಿಸ್ಟರ್ ಮಾಡಿಕೊಳ್ಳಬಹುದು. (PC: Google)

ಕಳೆದ ವರ್ಷವೇ ಮೊಹಮ್ಮದ್ ಅಮಿರ್ ಇಂಡಿಯನ್ ಪ್ರೀಮಿಯರ್ ಲೀಗ್ ಆಡಬೇಕೆಂಬ ಇರಾದೆ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಬ್ರಿಟಿಷ್ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿರುವುದನ್ನು ಸಹ ಖಚಿತಪಡಿಸಿದ್ದರು. ಇದೀಗ ಬ್ರಿಟನ್ ಪೌರತ್ವ ಸಿಕ್ಕಿರುವ ಹಿನ್ನಲೆ ಇಂಗ್ಲೆಂಡ್ ಪ್ರಜೆಯಾಗಿ ಅವರು ಐಪಿಎಲ್​ ಹರಾಜಿಗಾಗಿ ಹೆಸರು ರಿಜಿಸ್ಟರ್ ಮಾಡಿಕೊಳ್ಳಬಹುದು. (PC: Google)

4 / 5
2008ರ ಮುಂಬೈ ದಾಳಿಯ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪಾಕಿಸ್ತಾನಿ ಆಟಗಾರರನ್ನು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುವುದನ್ನು ನಿಷೇಧಿಸಿದೆ. ಆದರೆ ಪ್ರಸ್ತುತ ಅಮಿರ್ ಬ್ರಿಟಿಷ್ ಪೌರತ್ವ ಹೊಂದಿರುವುದರಿಂದ, ಅವರು ಬ್ರಿಟಿಷ್ ಪ್ರಜೆಯಾಗಿ ಐಪಿಎಲ್ ಹರಾಜಿನಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ಹೀಗಾಗಿ ಮುಂದಿನ ವರ್ಷ ಅಮಿರ್ ಹರಾಜಿನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ. (PC: Google)

2008ರ ಮುಂಬೈ ದಾಳಿಯ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪಾಕಿಸ್ತಾನಿ ಆಟಗಾರರನ್ನು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುವುದನ್ನು ನಿಷೇಧಿಸಿದೆ. ಆದರೆ ಪ್ರಸ್ತುತ ಅಮಿರ್ ಬ್ರಿಟಿಷ್ ಪೌರತ್ವ ಹೊಂದಿರುವುದರಿಂದ, ಅವರು ಬ್ರಿಟಿಷ್ ಪ್ರಜೆಯಾಗಿ ಐಪಿಎಲ್ ಹರಾಜಿನಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ಹೀಗಾಗಿ ಮುಂದಿನ ವರ್ಷ ಅಮಿರ್ ಹರಾಜಿನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ. (PC: Google)

5 / 5
Follow Us
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!