AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೋಟಕ ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ಬಾಂಗ್ಲಾ ಬ್ಯಾಟರ್

United Arab Emirates vs Bangladesh: ಯುಎಇ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ಭರ್ಜರಿ ಜಯ ಸಾಧಿಸಿದೆ. ಶಾರ್ಜಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 197 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಎಇ ತಂಡವು 164 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: May 18, 2025 | 2:04 PM

Share
ಬಾಂಗ್ಲಾದೇಶ್ ತಂಡದ ಯುವ ಆರಂಭಿಕ ದಾಂಡಿಗ ಪರ್ವೇಝ್ ಹೊಸೇನ್ ಎಮೊನ್ (Parvez Hossain Emon) ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಬಾಂಗ್ಲಾದೇಶ್ ಪರ ಅತೀ ವೇಗದ ಟಿ20 ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ಹಾಗೂ ಯುಎಇ ತಂಡಗಳು ಮುಖಾಮುಖಿಯಾಗಿದ್ದವು.

ಬಾಂಗ್ಲಾದೇಶ್ ತಂಡದ ಯುವ ಆರಂಭಿಕ ದಾಂಡಿಗ ಪರ್ವೇಝ್ ಹೊಸೇನ್ ಎಮೊನ್ (Parvez Hossain Emon) ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಬಾಂಗ್ಲಾದೇಶ್ ಪರ ಅತೀ ವೇಗದ ಟಿ20 ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ಹಾಗೂ ಯುಎಇ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಇ ತಂಡದ ನಾಯಕ ಮೊಹಮ್ಮದ್ ವಸೀಮ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡಕ್ಕೆ ಪರ್ವೇಝ್ ಹೊಸೇನ್ ಎಮೊನ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಲ್ಲಿ ತುಸು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಪರ್ವೇಝ್ ಆ ಬಳಿಕ ಬಿರುಸಿನ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಇ ತಂಡದ ನಾಯಕ ಮೊಹಮ್ಮದ್ ವಸೀಮ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡಕ್ಕೆ ಪರ್ವೇಝ್ ಹೊಸೇನ್ ಎಮೊನ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಲ್ಲಿ ತುಸು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಪರ್ವೇಝ್ ಆ ಬಳಿಕ ಬಿರುಸಿನ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು.

2 / 5
ಅಲ್ಲದೆ ಕೇವಲ 54 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ಪರ್ವೇಝ್ ಹೊಸೇನ್ ಎಮೊನ್ ಬ್ಯಾಟ್ ಮೇಲೆತ್ತಿದರು. ಇದರೊಂದಿಗೆ ಬಾಂಗ್ಲಾದೇಶ್ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ದಾಖಲೆ ಪರ್ವೇಝ್ ಹೊಸೇನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ತಮೀಮ್ ಇಕ್ಬಾಲ್ ಹೆಸರಿನಲ್ಲಿತ್ತು.

ಅಲ್ಲದೆ ಕೇವಲ 54 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ಪರ್ವೇಝ್ ಹೊಸೇನ್ ಎಮೊನ್ ಬ್ಯಾಟ್ ಮೇಲೆತ್ತಿದರು. ಇದರೊಂದಿಗೆ ಬಾಂಗ್ಲಾದೇಶ್ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ದಾಖಲೆ ಪರ್ವೇಝ್ ಹೊಸೇನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ತಮೀಮ್ ಇಕ್ಬಾಲ್ ಹೆಸರಿನಲ್ಲಿತ್ತು.

3 / 5
2016 ರಲ್ಲಿ ಒಮಾನ್ ವಿರುದ್ಧದ ಪಂದ್ಯದಲ್ಲಿ ತಮೀಮ್ ಇಕ್ಬಾಲ್ 63 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದು ಟಿ20 ಕ್ರಿಕೆಟ್​ನಲ್ಲಿ ಬಾಂಗ್ಲಾ ಬ್ಯಾಟರ್ ಸಿಡಿಸಿದ ಅತೀ ವೇಗದ ಶತಕವಾಗಿತ್ತು. ಇದೀಗ 8 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ 22 ವರ್ಷದ ಪರ್ವೇಝ್ ಹೊಸೇನ್ ಎಮೊನ್ ಯಶಸ್ವಿಯಾಗಿದ್ದಾರೆ.

2016 ರಲ್ಲಿ ಒಮಾನ್ ವಿರುದ್ಧದ ಪಂದ್ಯದಲ್ಲಿ ತಮೀಮ್ ಇಕ್ಬಾಲ್ 63 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದು ಟಿ20 ಕ್ರಿಕೆಟ್​ನಲ್ಲಿ ಬಾಂಗ್ಲಾ ಬ್ಯಾಟರ್ ಸಿಡಿಸಿದ ಅತೀ ವೇಗದ ಶತಕವಾಗಿತ್ತು. ಇದೀಗ 8 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ 22 ವರ್ಷದ ಪರ್ವೇಝ್ ಹೊಸೇನ್ ಎಮೊನ್ ಯಶಸ್ವಿಯಾಗಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ 54 ಎಸೆತಗಳನ್ನು ಎದುರಿಸಿದ ಪರ್ವೇಝ್ ಹೊಸೇನ್ ಎಮೊನ್ 9 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 100 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 197 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಎಇ ತಂಡವು 20 ಓವರ್​ಗಳಲ್ಲಿ 164 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬಾಂಗ್ಲಾದೇಶ್ ತಂಡವು 27 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ 54 ಎಸೆತಗಳನ್ನು ಎದುರಿಸಿದ ಪರ್ವೇಝ್ ಹೊಸೇನ್ ಎಮೊನ್ 9 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 100 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 197 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಎಇ ತಂಡವು 20 ಓವರ್​ಗಳಲ್ಲಿ 164 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬಾಂಗ್ಲಾದೇಶ್ ತಂಡವು 27 ರನ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ