AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೋಟಕ ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ಬಾಂಗ್ಲಾ ಬ್ಯಾಟರ್

United Arab Emirates vs Bangladesh: ಯುಎಇ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ಭರ್ಜರಿ ಜಯ ಸಾಧಿಸಿದೆ. ಶಾರ್ಜಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 197 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಎಇ ತಂಡವು 164 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: May 18, 2025 | 2:04 PM

Share
ಬಾಂಗ್ಲಾದೇಶ್ ತಂಡದ ಯುವ ಆರಂಭಿಕ ದಾಂಡಿಗ ಪರ್ವೇಝ್ ಹೊಸೇನ್ ಎಮೊನ್ (Parvez Hossain Emon) ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಬಾಂಗ್ಲಾದೇಶ್ ಪರ ಅತೀ ವೇಗದ ಟಿ20 ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ಹಾಗೂ ಯುಎಇ ತಂಡಗಳು ಮುಖಾಮುಖಿಯಾಗಿದ್ದವು.

ಬಾಂಗ್ಲಾದೇಶ್ ತಂಡದ ಯುವ ಆರಂಭಿಕ ದಾಂಡಿಗ ಪರ್ವೇಝ್ ಹೊಸೇನ್ ಎಮೊನ್ (Parvez Hossain Emon) ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಬಾಂಗ್ಲಾದೇಶ್ ಪರ ಅತೀ ವೇಗದ ಟಿ20 ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ಹಾಗೂ ಯುಎಇ ತಂಡಗಳು ಮುಖಾಮುಖಿಯಾಗಿದ್ದವು.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಇ ತಂಡದ ನಾಯಕ ಮೊಹಮ್ಮದ್ ವಸೀಮ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡಕ್ಕೆ ಪರ್ವೇಝ್ ಹೊಸೇನ್ ಎಮೊನ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಲ್ಲಿ ತುಸು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಪರ್ವೇಝ್ ಆ ಬಳಿಕ ಬಿರುಸಿನ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಇ ತಂಡದ ನಾಯಕ ಮೊಹಮ್ಮದ್ ವಸೀಮ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡಕ್ಕೆ ಪರ್ವೇಝ್ ಹೊಸೇನ್ ಎಮೊನ್ ಉತ್ತಮ ಆರಂಭ ಒದಗಿಸಿದ್ದರು. ಆರಂಭದಲ್ಲಿ ತುಸು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಪರ್ವೇಝ್ ಆ ಬಳಿಕ ಬಿರುಸಿನ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು.

2 / 5
ಅಲ್ಲದೆ ಕೇವಲ 54 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ಪರ್ವೇಝ್ ಹೊಸೇನ್ ಎಮೊನ್ ಬ್ಯಾಟ್ ಮೇಲೆತ್ತಿದರು. ಇದರೊಂದಿಗೆ ಬಾಂಗ್ಲಾದೇಶ್ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ದಾಖಲೆ ಪರ್ವೇಝ್ ಹೊಸೇನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ತಮೀಮ್ ಇಕ್ಬಾಲ್ ಹೆಸರಿನಲ್ಲಿತ್ತು.

ಅಲ್ಲದೆ ಕೇವಲ 54 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ಪರ್ವೇಝ್ ಹೊಸೇನ್ ಎಮೊನ್ ಬ್ಯಾಟ್ ಮೇಲೆತ್ತಿದರು. ಇದರೊಂದಿಗೆ ಬಾಂಗ್ಲಾದೇಶ್ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಸೆಂಚುರಿ ಸಿಡಿಸಿದ ದಾಖಲೆ ಪರ್ವೇಝ್ ಹೊಸೇನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ತಮೀಮ್ ಇಕ್ಬಾಲ್ ಹೆಸರಿನಲ್ಲಿತ್ತು.

3 / 5
2016 ರಲ್ಲಿ ಒಮಾನ್ ವಿರುದ್ಧದ ಪಂದ್ಯದಲ್ಲಿ ತಮೀಮ್ ಇಕ್ಬಾಲ್ 63 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದು ಟಿ20 ಕ್ರಿಕೆಟ್​ನಲ್ಲಿ ಬಾಂಗ್ಲಾ ಬ್ಯಾಟರ್ ಸಿಡಿಸಿದ ಅತೀ ವೇಗದ ಶತಕವಾಗಿತ್ತು. ಇದೀಗ 8 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ 22 ವರ್ಷದ ಪರ್ವೇಝ್ ಹೊಸೇನ್ ಎಮೊನ್ ಯಶಸ್ವಿಯಾಗಿದ್ದಾರೆ.

2016 ರಲ್ಲಿ ಒಮಾನ್ ವಿರುದ್ಧದ ಪಂದ್ಯದಲ್ಲಿ ತಮೀಮ್ ಇಕ್ಬಾಲ್ 63 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದು ಟಿ20 ಕ್ರಿಕೆಟ್​ನಲ್ಲಿ ಬಾಂಗ್ಲಾ ಬ್ಯಾಟರ್ ಸಿಡಿಸಿದ ಅತೀ ವೇಗದ ಶತಕವಾಗಿತ್ತು. ಇದೀಗ 8 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ 22 ವರ್ಷದ ಪರ್ವೇಝ್ ಹೊಸೇನ್ ಎಮೊನ್ ಯಶಸ್ವಿಯಾಗಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ 54 ಎಸೆತಗಳನ್ನು ಎದುರಿಸಿದ ಪರ್ವೇಝ್ ಹೊಸೇನ್ ಎಮೊನ್ 9 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 100 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 197 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಎಇ ತಂಡವು 20 ಓವರ್​ಗಳಲ್ಲಿ 164 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬಾಂಗ್ಲಾದೇಶ್ ತಂಡವು 27 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ 54 ಎಸೆತಗಳನ್ನು ಎದುರಿಸಿದ ಪರ್ವೇಝ್ ಹೊಸೇನ್ ಎಮೊನ್ 9 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 100 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 197 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಎಇ ತಂಡವು 20 ಓವರ್​ಗಳಲ್ಲಿ 164 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬಾಂಗ್ಲಾದೇಶ್ ತಂಡವು 27 ರನ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್