AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ ಪ್ರಶಸ್ತಿ ಮೊತ್ತಕ್ಕಿಂತ ಹೆಚ್ಚು ಹಣ ಪಡೆದ ಸ್ಟಾರ್ಕ್, ಕಮಿನ್ಸ್

IPL 2024 KKR vs SRH: ಐಪಿಎಲ್ 2024 ರ ಸೀಸನ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಚೆನ್ನೈನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಫೈನಲ್ ಪಂದ್ಯದಲ್ಲಿ 8 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿ ಮೂರನೇ ಬಾರಿ ಕಿರೀಟ ಮುಡಿಗೇರಿಸಿಕೊಂಡಿತು. ಇದಕ್ಕೂ ಮುನ್ನ ಕೆಕೆಆರ್ 2012 ಮತ್ತು 2014 ರಲ್ಲಿ ಪ್ರಶಸ್ತಿ ಜಯಸಿತ್ತು.

ಝಾಹಿರ್ ಯೂಸುಫ್
|

Updated on: May 27, 2024 | 10:30 AM

Share
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಕ್ಕೆ ತೆರೆ ಬಿದ್ದಿದೆ. ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ (KKR)​ ತಂಡ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸಿ ಕೆಕೆಆರ್ 3ನೇ ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಕ್ಕೆ ತೆರೆ ಬಿದ್ದಿದೆ. ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ (KKR)​ ತಂಡ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸಿ ಕೆಕೆಆರ್ 3ನೇ ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ.

1 / 6
ಈ ಟ್ರೋಫಿಯೊಂದಿಗೆ ಬಹುಮಾನ ಮೊತ್ತವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಕೋಟಿ ರೂ. ಪಡೆದುಕೊಂಡಿದೆ. ಹಾಗೆಯೇ ರನ್ನರ್ ಅಪ್ ತಂಡ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ 12.5 ಕೋಟಿ ರೂ. ಲಭಿಸಿದೆ.

ಈ ಟ್ರೋಫಿಯೊಂದಿಗೆ ಬಹುಮಾನ ಮೊತ್ತವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಕೋಟಿ ರೂ. ಪಡೆದುಕೊಂಡಿದೆ. ಹಾಗೆಯೇ ರನ್ನರ್ ಅಪ್ ತಂಡ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ 12.5 ಕೋಟಿ ರೂ. ಲಭಿಸಿದೆ.

2 / 6
ವಿಶೇಷ ಎಂದರೆ ಈ ಎರಡು ತಂಡಗಳಿಗೆ ಸಿಕ್ಕ ಪ್ರಶಸ್ತಿ ಮೊತ್ತಕ್ಕಿಂತ ಹೆಚ್ಚು ಹಣವನ್ನು ಉಭಯ ಫ್ರಾಂಚೈಸಿಗಳು ಇಬ್ಬರು ಆಟಗಾರರಿಗೆ ನೀಡಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಗರಿಷ್ಠ ಮೊತ್ತಕ್ಕೆ ಬಿಡ್ ಆದ ಇಬ್ಬರು ಆಟಗಾರರು ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದರು.

ವಿಶೇಷ ಎಂದರೆ ಈ ಎರಡು ತಂಡಗಳಿಗೆ ಸಿಕ್ಕ ಪ್ರಶಸ್ತಿ ಮೊತ್ತಕ್ಕಿಂತ ಹೆಚ್ಚು ಹಣವನ್ನು ಉಭಯ ಫ್ರಾಂಚೈಸಿಗಳು ಇಬ್ಬರು ಆಟಗಾರರಿಗೆ ನೀಡಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಗರಿಷ್ಠ ಮೊತ್ತಕ್ಕೆ ಬಿಡ್ ಆದ ಇಬ್ಬರು ಆಟಗಾರರು ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದರು.

3 / 6
ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಿಚೆಲ್ ಸ್ಟಾರ್ಕ್ ಅವರನ್ನು ಬರೋಬ್ಬರಿ 24.75 ಕೋಟಿ ರೂ.ಗೆ ಖರೀದಿಸಿತ್ತು. ಅದರಂತೆ ಇದೀಗ ಸ್ಟಾರ್ಕ್ 24.75 ಪಡೆದುಕೊಂಡರೆ, ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್ ತಂಡಕ್ಕೆ ಸಿಕ್ಕಿರುವುದು 20 ಕೋಟಿ ರೂ. ಮಾತ್ರ.

ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಮಿಚೆಲ್ ಸ್ಟಾರ್ಕ್ ಅವರನ್ನು ಬರೋಬ್ಬರಿ 24.75 ಕೋಟಿ ರೂ.ಗೆ ಖರೀದಿಸಿತ್ತು. ಅದರಂತೆ ಇದೀಗ ಸ್ಟಾರ್ಕ್ 24.75 ಪಡೆದುಕೊಂಡರೆ, ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್ ತಂಡಕ್ಕೆ ಸಿಕ್ಕಿರುವುದು 20 ಕೋಟಿ ರೂ. ಮಾತ್ರ.

4 / 6
ಇನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಪ್ಯಾಟ್ ಕಮಿನ್ಸ್ ಖರೀದಿಗಾಗಿ ವ್ಯಯಿಸಿದ್ದು ಬರೋಬ್ಬರಿ 20.50 ಕೋಟಿ ರೂ. ಅದೇ ಎಸ್​ಆರ್​ಹೆಚ್ ತಂಡಕ್ಕೆ ಸಿಕ್ಕ ಪ್ರಶಸ್ತಿ ಮೊತ್ತ 12.50 ಕೋಟಿ ರೂ. ಮಾತ್ರ.

ಇನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಪ್ಯಾಟ್ ಕಮಿನ್ಸ್ ಖರೀದಿಗಾಗಿ ವ್ಯಯಿಸಿದ್ದು ಬರೋಬ್ಬರಿ 20.50 ಕೋಟಿ ರೂ. ಅದೇ ಎಸ್​ಆರ್​ಹೆಚ್ ತಂಡಕ್ಕೆ ಸಿಕ್ಕ ಪ್ರಶಸ್ತಿ ಮೊತ್ತ 12.50 ಕೋಟಿ ರೂ. ಮಾತ್ರ.

5 / 6
ಅಂದರೆ ಉಭಯ ತಂಡಗಳು ಇಬ್ಬರು ಆಟಗಾರರಿಗೆ ವ್ಯಯಿಸಿದ ಮೊತ್ತಕ್ಕಿಂತ ಐಪಿಎಲ್ ಪ್ರಶಸ್ತಿ ಹಣ ಕಡಿಮೆ ಇರುವುದು ವಿಶೇಷ. ಹೀಗಾಗಿಯೇ ಮುಂಬರುವ ಸೀಸನ್​ಗಳಲ್ಲಿ ಐಪಿಎಲ್ ಪ್ರೈಸ್ ಮನಿ ಹೆಚ್ಚಿಸಬೇಕೆಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ.

ಅಂದರೆ ಉಭಯ ತಂಡಗಳು ಇಬ್ಬರು ಆಟಗಾರರಿಗೆ ವ್ಯಯಿಸಿದ ಮೊತ್ತಕ್ಕಿಂತ ಐಪಿಎಲ್ ಪ್ರಶಸ್ತಿ ಹಣ ಕಡಿಮೆ ಇರುವುದು ವಿಶೇಷ. ಹೀಗಾಗಿಯೇ ಮುಂಬರುವ ಸೀಸನ್​ಗಳಲ್ಲಿ ಐಪಿಎಲ್ ಪ್ರೈಸ್ ಮನಿ ಹೆಚ್ಚಿಸಬೇಕೆಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ