ನಿವೃತ್ತಿ ಬೆನ್ನಲ್ಲೇ ಅಶ್ವಿನ್​ರ ವಿಶ್ವ ದಾಖಲೆ ಮುರಿದ ಆಸ್ಟ್ರೇಲಿಯನ್ನರು

Ravichandran Ashwin's Record: ರವಿಚಂದ್ರನ್ ಅಶ್ವಿನ್ ಬರೆದ ವಿಶ್ವ ದಾಖಲೆಯನ್ನು ಆಸ್ಟ್ರೇಲಿಯಾ ಬೌಲರ್​ಗಳು ಮುರಿದಿದ್ದಾರೆ. ಈ ದಾಖಲೆ ಮುರಿಯುವುದರೊಂದಿಗೆ ಪ್ಯಾಟ್ ಕಮಿನ್ಸ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಯಾರಿಂದಲೂ ಸಾಧ್ಯವಾಗದ ವಿಶೇಷ ಮೈಲುಗಲ್ಲನ್ನು ಮುಟ್ಟುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Jan 06, 2025 | 11:57 AM

ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನದಲ್ಲಿದ್ದರು. ಆದರೆ ಇದೀಗ ಆಸ್ಟ್ರೇಲಿಯಾ ಬೌಲರ್​​ಗಳಾದ ಪ್ಯಾಟ್ ಕಮಿನ್ಸ್ ಹಾಗೂ ನಾಥನ್ ಲಿಯಾನ್ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ್ದಾರೆ.

ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್​​ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನದಲ್ಲಿದ್ದರು. ಆದರೆ ಇದೀಗ ಆಸ್ಟ್ರೇಲಿಯಾ ಬೌಲರ್​​ಗಳಾದ ಪ್ಯಾಟ್ ಕಮಿನ್ಸ್ ಹಾಗೂ ನಾಥನ್ ಲಿಯಾನ್ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ್ದಾರೆ.

1 / 6
ಬ್ರಿಸ್ಬೇನ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೂಲಕ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ನೀಡಿದ್ದರು. ಈ ನಿವೃತ್ತಿ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಅಶ್ವಿನ್ ದಾಖಲೆ ಮುರಿಯುವಲ್ಲಿ ಆಸೀಸ್ ಬೌಲರ್​​ಗಳು ಯಶಸ್ವಿಯಾಗಿದ್ದಾರೆ.

ಬ್ರಿಸ್ಬೇನ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೂಲಕ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ನೀಡಿದ್ದರು. ಈ ನಿವೃತ್ತಿ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಅಶ್ವಿನ್ ದಾಖಲೆ ಮುರಿಯುವಲ್ಲಿ ಆಸೀಸ್ ಬೌಲರ್​​ಗಳು ಯಶಸ್ವಿಯಾಗಿದ್ದಾರೆ.

2 / 6
2019 ರಿಂದ 2024 ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಒಟ್ಟು 41 ಪಂದ್ಯಗಳನ್ನಾಡಿರುವ ರವಿಚಂದ್ರನ್ ಅಶ್ವಿನ್ 78 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 1479 ಓವರ್​ಗಳನ್ನು ಎಸೆದಿರುವ ಅಶ್ವಿನ್ ಒಟ್ಟು 195 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು.

2019 ರಿಂದ 2024 ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಒಟ್ಟು 41 ಪಂದ್ಯಗಳನ್ನಾಡಿರುವ ರವಿಚಂದ್ರನ್ ಅಶ್ವಿನ್ 78 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 1479 ಓವರ್​ಗಳನ್ನು ಎಸೆದಿರುವ ಅಶ್ವಿನ್ ಒಟ್ಟು 195 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು.

3 / 6
ಟೀಮ್ ಇಂಡಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಒಂದು ವಿಕೆಟ್ ಕಬಳಿಸುವುದರೊಂದಿಗೆ ನಾಥನ್ ಲಿಯಾನ್, ಅಶ್ವಿನ್ ಅವರ ದಾಖಲೆಯನ್ನು ಮುರಿದಿದ್ದಾರೆ. 2019 ರಿಂದ ವಿಶ್ವ ಟೆಸ್ಟ್ ಚಾಂಪಿಯನ್ಸ್​ ಸರಣಿಯಲ್ಲಿ 85 ಇನಿಂಗ್ಸ್​ಗಳಲ್ಲಿ 1932 ಓವರ್ ಎಸೆದಿರುವ ನಾಥನ್ ಲಿಯಾನ್ ಈವರೆಗೆ 196 ವಿಕೆಟ್ ಕಬಳಿಸಿದ್ದಾರೆ.

ಟೀಮ್ ಇಂಡಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಒಂದು ವಿಕೆಟ್ ಕಬಳಿಸುವುದರೊಂದಿಗೆ ನಾಥನ್ ಲಿಯಾನ್, ಅಶ್ವಿನ್ ಅವರ ದಾಖಲೆಯನ್ನು ಮುರಿದಿದ್ದಾರೆ. 2019 ರಿಂದ ವಿಶ್ವ ಟೆಸ್ಟ್ ಚಾಂಪಿಯನ್ಸ್​ ಸರಣಿಯಲ್ಲಿ 85 ಇನಿಂಗ್ಸ್​ಗಳಲ್ಲಿ 1932 ಓವರ್ ಎಸೆದಿರುವ ನಾಥನ್ ಲಿಯಾನ್ ಈವರೆಗೆ 196 ವಿಕೆಟ್ ಕಬಳಿಸಿದ್ದಾರೆ.

4 / 6
ನಾಥನ್ ಲಿಯಾನ್, ಅಶ್ವಿನ್ ಅವರ ದಾಖಲೆ ಮುರಿದ ಬೆನ್ನಲ್ಲೇ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಇಬ್ಬರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದು ವಿಶೇಷ. ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಒಟ್ಟು 5 ವಿಕೆಟ್ ಪಡೆದ ಪ್ಯಾಟ್ ಕಮಿನ್ಸ್ ವಿಶ್ವ ಟೆಸ್ಟ್ ಚಾಂಪಿಯನ್ಸ್​ ಸರಣಿಯಲ್ಲಿ 200 ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

ನಾಥನ್ ಲಿಯಾನ್, ಅಶ್ವಿನ್ ಅವರ ದಾಖಲೆ ಮುರಿದ ಬೆನ್ನಲ್ಲೇ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಇಬ್ಬರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದು ವಿಶೇಷ. ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಒಟ್ಟು 5 ವಿಕೆಟ್ ಪಡೆದ ಪ್ಯಾಟ್ ಕಮಿನ್ಸ್ ವಿಶ್ವ ಟೆಸ್ಟ್ ಚಾಂಪಿಯನ್ಸ್​ ಸರಣಿಯಲ್ಲಿ 200 ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.

5 / 6
ಪ್ಯಾಟ್ ಕಮಿನ್ಸ್ ಈ ಸಾಧನೆ ಮಾಡಲು ತೆಗೆದುಕೊಂಡಿದ್ದು 47 ಟೆಸ್ಟ್ ಪಂದ್ಯಗಳನ್ನು. 2019 ರಿಂದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿ ಆಡುತ್ತಿರುವ ಕಮಿನ್ಸ್ ಒಟ್ಟು 88 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 1535.5 ಓವರ್​ಗಳನ್ನು ಎಸೆದು ಒಟ್ಟು 200 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇನ್ನೂರು ವಿಕೆಟ್ ಪೂರೈಸಿದ ವಿಶ್ವದ ಮೊದಲ ಬೌಲರ್ ಎಂಬ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ್ದಾರೆ.

ಪ್ಯಾಟ್ ಕಮಿನ್ಸ್ ಈ ಸಾಧನೆ ಮಾಡಲು ತೆಗೆದುಕೊಂಡಿದ್ದು 47 ಟೆಸ್ಟ್ ಪಂದ್ಯಗಳನ್ನು. 2019 ರಿಂದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿ ಆಡುತ್ತಿರುವ ಕಮಿನ್ಸ್ ಒಟ್ಟು 88 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 1535.5 ಓವರ್​ಗಳನ್ನು ಎಸೆದು ಒಟ್ಟು 200 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇನ್ನೂರು ವಿಕೆಟ್ ಪೂರೈಸಿದ ವಿಶ್ವದ ಮೊದಲ ಬೌಲರ್ ಎಂಬ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ್ದಾರೆ.

6 / 6
Follow us
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ