AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಇಂಡಿಯನ್ಸ್ ಸೋತರೆ 2 ತಂಡಗಳು ಔಟ್..!

Ipl 2026 playoff scenarios: ಇಂಡಿಯನ್ ಪ್ರೀಮಿಯರ್ ಲೀಗ್ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 3 ಮೂರು ತಂಡಗಳು ಪ್ಲೇಆಫ್​ಗೇರಿದರೆ, 4 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಪ್ಲೇಆಫ್​ನ ಒಂದು ಸ್ಥಾನಕ್ಕಾಗಿ ಮೂರು ತಂಡಗಳ ನಡುವೆ ಪೈಪೋಟಿ ಇದೆ. ಈ ತಂಡಗಳ ಭವಿಷ್ಯ ನಿರ್ಧರಿಸಲಿರುವುದು ಮುಂಬೈ ಇಂಡಿಯನ್ಸ್ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:May 24, 2026 | 7:32 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಮೂರು ತಂಡಗಳಿಗೆ ನಿರ್ಣಾಯಕ. (PC: IPL)

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಮೂರು ತಂಡಗಳಿಗೆ ನಿರ್ಣಾಯಕ. (PC: IPL)

1 / 6
ಅಂದರೆ ಈ ಮ್ಯಾಚ್​ ಮೂಲಕ ಪ್ಲೇಆಫ್ ಆಡಲಿರುವ 4ನೇ ತಂಡ ಯಾವುದು ಎಂಬುದು ಬಹುತೇಕ ನಿರ್ಧಾರವಾಗಲಿದೆ. ಏಕೆಂದರೆ ಈಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋತರೆ, ಪ್ಲೇಆಫ್​ ರೇಸ್​ನಲ್ಲಿರುವ ಎರಡು ತಂಡಗಳು ಹೊರಬೀಳಲಿದೆ. ಆ ತಂಡಗಳಾವುವು ಎಂದರೆ... (PC: IPL)

ಅಂದರೆ ಈ ಮ್ಯಾಚ್​ ಮೂಲಕ ಪ್ಲೇಆಫ್ ಆಡಲಿರುವ 4ನೇ ತಂಡ ಯಾವುದು ಎಂಬುದು ಬಹುತೇಕ ನಿರ್ಧಾರವಾಗಲಿದೆ. ಏಕೆಂದರೆ ಈಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸೋತರೆ, ಪ್ಲೇಆಫ್​ ರೇಸ್​ನಲ್ಲಿರುವ ಎರಡು ತಂಡಗಳು ಹೊರಬೀಳಲಿದೆ. ಆ ತಂಡಗಳಾವುವು ಎಂದರೆ... (PC: IPL)

2 / 6
ಪಂಜಾಬ್ ಕಿಂಗ್ಸ್​: ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಮುಖಾಮುಖಿಯಲ್ಲಿ ಆರ್​ಆರ್ ಪಡೆ ಗೆದ್ದರೆ 16 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ. ಇತ್ತ 15 ಅಂಕಗಳನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಲಿದೆ. (PC: IPL)

ಪಂಜಾಬ್ ಕಿಂಗ್ಸ್​: ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಮುಖಾಮುಖಿಯಲ್ಲಿ ಆರ್​ಆರ್ ಪಡೆ ಗೆದ್ದರೆ 16 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ. ಇತ್ತ 15 ಅಂಕಗಳನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ತಂಡದ ಐಪಿಎಲ್ ಅಭಿಯಾನ ಅಂತ್ಯವಾಗಲಿದೆ. (PC: IPL)

3 / 6
ಕೊಲ್ಕತ್ತಾ ನೈಟ್ ರೈಡರ್ಸ್​: ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್​ ತಂಡ ಗೆದ್ದರೆ ಮಾತ್ರ ಕೆಕೆಆರ್ ತಂಡಕ್ಕೆ ಪ್ಲೇಆಫ್​ಗೇರಲು ಅವಕಾಶ ಇರಲಿದೆ. ಒಂದು ವೇಳೆ ಆರ್​ಆರ್ ತಂಡ ಜಯ ಸಾಧಿಸಿದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ ಪ್ಲೇಆಫ್​ ರೇಸ್​​ನಿಂದ ಹೊರಬಳಲಿದೆ. (PC: IPL)

ಕೊಲ್ಕತ್ತಾ ನೈಟ್ ರೈಡರ್ಸ್​: ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್​ ತಂಡ ಗೆದ್ದರೆ ಮಾತ್ರ ಕೆಕೆಆರ್ ತಂಡಕ್ಕೆ ಪ್ಲೇಆಫ್​ಗೇರಲು ಅವಕಾಶ ಇರಲಿದೆ. ಒಂದು ವೇಳೆ ಆರ್​ಆರ್ ತಂಡ ಜಯ ಸಾಧಿಸಿದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೂಡ ಪ್ಲೇಆಫ್​ ರೇಸ್​​ನಿಂದ ಹೊರಬಳಲಿದೆ. (PC: IPL)

4 / 6
ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಒಟ್ಟು 14 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ (15 ಅಂಕಗಳು) ತಂಡವನ್ನು ಹಿಂದಿಕ್ಕಿ ಪ್ಲೇಆಫ್​ಗೇರಲಿದೆ. (PC: IPL)

ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಒಟ್ಟು 14 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ (15 ಅಂಕಗಳು) ತಂಡವನ್ನು ಹಿಂದಿಕ್ಕಿ ಪ್ಲೇಆಫ್​ಗೇರಲಿದೆ. (PC: IPL)

5 / 6
ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡವು ಕೊನೆಯ ಮ್ಯಾಚ್​ನಲ್ಲಿ ಗೆದ್ದರೂ ಒಟ್ಟು 15 ಅಂಕಳನ್ನು ಮಾತ್ರ ಪಡೆಯಲಿದೆ. ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡದ ಗೆಲುವುದನ್ನು ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಂಡಗಳು ಎದುರು ನೋಡಲಿದೆ. (PC: IPL)

ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡವು ಕೊನೆಯ ಮ್ಯಾಚ್​ನಲ್ಲಿ ಗೆದ್ದರೂ ಒಟ್ಟು 15 ಅಂಕಳನ್ನು ಮಾತ್ರ ಪಡೆಯಲಿದೆ. ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡದ ಗೆಲುವುದನ್ನು ಪಂಜಾಬ್ ಕಿಂಗ್ಸ್ ಹಾಗೂ ಕೆಕೆಆರ್ ತಂಡಗಳು ಎದುರು ನೋಡಲಿದೆ. (PC: IPL)

6 / 6

Published On - 7:31 am, Sun, 24 May 26

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ನನ್ನ ತಮ್ಮ ಹಾಗೂ ಶಿವಣ್ಣನ ನಂಬಿ ರೈತರು ಸ್ಟೇಡಿಯಂಗೆ ಜಮೀನು ಕೊಟ್ಟಿದ್ದಾರೆ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು?
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್
ಡಾ ರಾಜ್​ಕುಮಾರ್ ಹಾಡಿದ ರಾಯರ ಹಾಡುಗಳ ನೆನೆದ ನಟಿ ತಾರಾ
ಡಾ ರಾಜ್​ಕುಮಾರ್ ಹಾಡಿದ ರಾಯರ ಹಾಡುಗಳ ನೆನೆದ ನಟಿ ತಾರಾ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ