AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ್ಟ್-ಸ್ಟೋನ್ ಸಪ್ಪೆ: RCB​ಗೆ ಚಿಂತೆ ಶುರು..!

IND vs ENG T20I: ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯಲ್ಲಿ ಆರ್​ಸಿಬಿ ತಂಡದ ಮೂವರು ಆಟಗಾರರು ಕಣಕ್ಕಿಳಿದಿದ್ದಾರೆ. ಈ ಮೂವರು ಆಟಗಾರರು ಜೊತೆಯಾಗಿ ಕಲೆಹಾಕಿದ ಒಟ್ಟು ಸ್ಕೋರ್ 24 ರನ್​​ಗಳು. ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಜೇಕಬ್ ಬೆಥೆಲ್ ಅವರನ್ನು 2ನೇ ಪಂದ್ಯದಲ್ಲಿ ಕಣಕ್ಕಿಳಿಸಿರಲಿಲ್ಲ. ಇನ್ನು ಎರಡೂ ಮ್ಯಾಚ್​ನಲ್ಲೂ ಕಾಣಿಸಿಕೊಂಡ ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಕಲೆಹಾಕಿದ ಒಟ್ಟು ಸ್ಕೋರ್​ ಕೇವಲ 17 ರನ್​ಗಳು ಮಾತ್ರ.

ಝಾಹಿರ್ ಯೂಸುಫ್
|

Updated on: Jan 26, 2025 | 1:57 PM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಐಪಿಎಲ್ ಸೀಸನ್​-18 ಕ್ಕಾಗಿ ಬಲಿಷ್ಠ ಪಡೆಯನ್ನೇ ರೂಪಿಸಿದೆ. ಮೆಗಾ ಹರಾಜಿಗೂ ಮುನ್ನ ಮೂವರನ್ನು ಉಳಿಸಿಕೊಂಡಿದ್ದ ಆರ್​​ಸಿಬಿ, ಆಕ್ಷನ್​​ ಮೂಲಕ 19 ಆಟಗಾರರನ್ನು ಖರೀದಿಸಿದೆ. ಈ ಹತ್ತೊಂಬತ್ತು ಆಟಗಾರರಲ್ಲಿ ಇಂಗ್ಲೆಂಡ್​​ನ ಇಬ್ಬರು ಸ್ಪೋಟಕ ದಾಂಡಿಗರು ಕೂಡ ಇದ್ದಾರೆ. ಹೀಗಾಗಿಯೇ ಈ ಬಾರಿ ಆರ್​ಸಿಬಿ ಪರ ಆಂಗ್ಲರ ಆರ್ಭಟವನ್ನು ನಿರೀಕ್ಷಿಸಲಾಗುತ್ತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಐಪಿಎಲ್ ಸೀಸನ್​-18 ಕ್ಕಾಗಿ ಬಲಿಷ್ಠ ಪಡೆಯನ್ನೇ ರೂಪಿಸಿದೆ. ಮೆಗಾ ಹರಾಜಿಗೂ ಮುನ್ನ ಮೂವರನ್ನು ಉಳಿಸಿಕೊಂಡಿದ್ದ ಆರ್​​ಸಿಬಿ, ಆಕ್ಷನ್​​ ಮೂಲಕ 19 ಆಟಗಾರರನ್ನು ಖರೀದಿಸಿದೆ. ಈ ಹತ್ತೊಂಬತ್ತು ಆಟಗಾರರಲ್ಲಿ ಇಂಗ್ಲೆಂಡ್​​ನ ಇಬ್ಬರು ಸ್ಪೋಟಕ ದಾಂಡಿಗರು ಕೂಡ ಇದ್ದಾರೆ. ಹೀಗಾಗಿಯೇ ಈ ಬಾರಿ ಆರ್​ಸಿಬಿ ಪರ ಆಂಗ್ಲರ ಆರ್ಭಟವನ್ನು ನಿರೀಕ್ಷಿಸಲಾಗುತ್ತಿದೆ.

1 / 8
ಆದರೆ ಐಪಿಎಲ್​ ಆರಂಭಕ್ಕೂ ಮುನ್ನ ಭಾರತೀಯ ಪಿಚ್​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ದಾಂಡಿಗರು ವಿಫಲರಾಗುತ್ತಿದ್ದಾರೆ. ಅದರಲ್ಲೂ ಆರ್​ಸಿಬಿಯ ಕಲ್ಲುಪ್ಪು ಜೋಡಿ ಎಂದೇ ಗುರುತಿಸಿಕೊಂಡಿರುವ ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಮೊದಲೆರಡು ಪಂದ್ಯಗಳಲ್ಲೂ ಅತ್ಯಂತ ಕಳಪೆ ಪ್ರರ್ದಶನ ನೀಡಿದ್ದಾರೆ.

ಆದರೆ ಐಪಿಎಲ್​ ಆರಂಭಕ್ಕೂ ಮುನ್ನ ಭಾರತೀಯ ಪಿಚ್​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ದಾಂಡಿಗರು ವಿಫಲರಾಗುತ್ತಿದ್ದಾರೆ. ಅದರಲ್ಲೂ ಆರ್​ಸಿಬಿಯ ಕಲ್ಲುಪ್ಪು ಜೋಡಿ ಎಂದೇ ಗುರುತಿಸಿಕೊಂಡಿರುವ ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಮೊದಲೆರಡು ಪಂದ್ಯಗಳಲ್ಲೂ ಅತ್ಯಂತ ಕಳಪೆ ಪ್ರರ್ದಶನ ನೀಡಿದ್ದಾರೆ.

2 / 8
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ (0) ಅರ್ಷದೀಪ್ ಸಿಂಗ್ ಎಸೆತದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಅದು ಸಹ ಮೊದಲ ಓವರ್​ನ ಮೂರನೇ ಎಸೆತದಲ್ಲಿ ಎಂಬುದು ವಿಶೇಷ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ (0) ಅರ್ಷದೀಪ್ ಸಿಂಗ್ ಎಸೆತದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಅದು ಸಹ ಮೊದಲ ಓವರ್​ನ ಮೂರನೇ ಎಸೆತದಲ್ಲಿ ಎಂಬುದು ವಿಶೇಷ.

3 / 8
ಇದೇ ಪಂದ್ಯದಲ್ಲಿ ಲಿಯಾಮ್ ಲಿವಿಂಗ್​ಸ್ಟೋನ್ ಎದುರಿಸಿದ್ದು ಕೇವಲ 2 ಎಸೆತಗಳನ್ನು ಮಾತ್ರ. ಅಷ್ಟರಲ್ಲಿ ಲಿವಿಂಗ್​ಸ್ಟೋನ್​ಗೆ​ (0) ಪೆವಿಲಿಯನ್​ ಹಾದಿ ತೋರಿಸುವಲ್ಲಿ ವರುಣ್ ಚಕ್ರವರ್ತಿ ಯಶಸ್ವಿಯಾಗಿದ್ದರು. ಅಂದರೆ ಆರ್​ಸಿಬಿ ತಂಡದಲ್ಲಿರುವ ಇಬ್ಬರು ಆಟಗಾರರು ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೊನ್ನೆ ಸುತ್ತಿ ನಿರಾಸೆ ಮೂಡಿಸಿದ್ದರು.

ಇದೇ ಪಂದ್ಯದಲ್ಲಿ ಲಿಯಾಮ್ ಲಿವಿಂಗ್​ಸ್ಟೋನ್ ಎದುರಿಸಿದ್ದು ಕೇವಲ 2 ಎಸೆತಗಳನ್ನು ಮಾತ್ರ. ಅಷ್ಟರಲ್ಲಿ ಲಿವಿಂಗ್​ಸ್ಟೋನ್​ಗೆ​ (0) ಪೆವಿಲಿಯನ್​ ಹಾದಿ ತೋರಿಸುವಲ್ಲಿ ವರುಣ್ ಚಕ್ರವರ್ತಿ ಯಶಸ್ವಿಯಾಗಿದ್ದರು. ಅಂದರೆ ಆರ್​ಸಿಬಿ ತಂಡದಲ್ಲಿರುವ ಇಬ್ಬರು ಆಟಗಾರರು ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೊನ್ನೆ ಸುತ್ತಿ ನಿರಾಸೆ ಮೂಡಿಸಿದ್ದರು.

4 / 8
ಇನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲೂ ಉಭಯ ದಾಂಡಿಗರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಈ ಪಂದ್ಯದಲ್ಲೂ ಆರಂಭಿಕನಾಗಿ ಕಣಕ್ಕಿಳಿದ ಸಾಲ್ಟ್ ಅರ್ಷದೀಪ್ ಸಿಂಗ್ ಎಸೆತದಲ್ಲಿ ಒಂದು ಫೋರ್​ ಬಾರಿಸಿ ವಿಕೆಟ್ ಒಪ್ಪಿಸಿದ್ದಾರೆ. ಅದು ಕೂಡ ಮೊದಲ ಓವರ್​ನಲ್ಲೇ ಎಂಬುದು ಉಲ್ಲೇಖಾರ್ಹ.

ಇನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲೂ ಉಭಯ ದಾಂಡಿಗರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಈ ಪಂದ್ಯದಲ್ಲೂ ಆರಂಭಿಕನಾಗಿ ಕಣಕ್ಕಿಳಿದ ಸಾಲ್ಟ್ ಅರ್ಷದೀಪ್ ಸಿಂಗ್ ಎಸೆತದಲ್ಲಿ ಒಂದು ಫೋರ್​ ಬಾರಿಸಿ ವಿಕೆಟ್ ಒಪ್ಪಿಸಿದ್ದಾರೆ. ಅದು ಕೂಡ ಮೊದಲ ಓವರ್​ನಲ್ಲೇ ಎಂಬುದು ಉಲ್ಲೇಖಾರ್ಹ.

5 / 8
ಇದಾದ ಬಳಿಕ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಲಿಯಾಮ್ ಲಿವಿಂಗ್​ಸ್ಟೋನ್ ಕೂಡ ಬಂದ ವೇಗದಲ್ಲೇ ಪೆವಿಲಿಯನ್​ಗೆ ಹಿಂತಿರುಗಿದ್ದಾರೆ. 14 ಎಸೆತಗಳನ್ನು ಎದುರಿಸಿದ ಲಿವಿಂಗ್​ಸ್ಟೋನ್ 13 ರನ್​ಗಳಿಸಿ ಅಕ್ಷರ್ ಪಟೇಲ್​ಗೆ ವಿಕೆಟ್ ಒಪ್ಪಿಸಿದ್ದಾರೆ. ಅಂದರೆ ಟೀಮ್ ಇಂಡಿಯಾ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಆರ್​ಸಿಬಿ ದಾಂಡಿಗರು ಸಂಪೂರ್ಣ ವಿಫಲರಾಗಿರುವುದು ಸ್ಪಷ್ಟ.

ಇದಾದ ಬಳಿಕ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಲಿಯಾಮ್ ಲಿವಿಂಗ್​ಸ್ಟೋನ್ ಕೂಡ ಬಂದ ವೇಗದಲ್ಲೇ ಪೆವಿಲಿಯನ್​ಗೆ ಹಿಂತಿರುಗಿದ್ದಾರೆ. 14 ಎಸೆತಗಳನ್ನು ಎದುರಿಸಿದ ಲಿವಿಂಗ್​ಸ್ಟೋನ್ 13 ರನ್​ಗಳಿಸಿ ಅಕ್ಷರ್ ಪಟೇಲ್​ಗೆ ವಿಕೆಟ್ ಒಪ್ಪಿಸಿದ್ದಾರೆ. ಅಂದರೆ ಟೀಮ್ ಇಂಡಿಯಾ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಆರ್​ಸಿಬಿ ದಾಂಡಿಗರು ಸಂಪೂರ್ಣ ವಿಫಲರಾಗಿರುವುದು ಸ್ಪಷ್ಟ.

6 / 8
ಇಂಟ್ರೆಸ್ಟ್ಟಿಂಗ್ ವಿಷಯ ಎಂದರೆ, ಈ ಬಾರಿ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸಲಿರುವುದು ಫಿಲ್ ಸಾಲ್ಟ್. ಇನ್ನು ಲಿಯಾಮ್ ಲಿವಿಂಗ್​ಸ್ಟೋನ್ ಮಧ್ಯಮ ಕ್ರಮಾಂಕದಲ್ಲಿ ಆಲ್​ರೌಂಡರ್ ಆಗಿ ಕಣಕ್ಕಿಳಿಯಲಿದ್ದಾರೆ. ಆದರೀಗ ಭಾರತೀಯ ಪಿಚ್​ನಲ್ಲಿ ರನ್​ಗಳಿಸುವುದಿರಲಿ, ಕ್ರೀಸ್ ಕಚ್ಚಿ ನಿಲ್ಲಲು ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಪರದಾಡುತ್ತಿದ್ದಾರೆ. ಈ ಕಳಪೆ ಪ್ರದರ್ಶನವೇ ಇದೀಗ ಆರ್​ಸಿಬಿ ತಂಡದ ಬಲಿಷ್ಠತೆಯ ಮೇಲೆ ಪ್ರಶ್ನೆಗಳು ಮೂಡುವಂತೆ ಮಾಡಿದೆ.

ಇಂಟ್ರೆಸ್ಟ್ಟಿಂಗ್ ವಿಷಯ ಎಂದರೆ, ಈ ಬಾರಿ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸಲಿರುವುದು ಫಿಲ್ ಸಾಲ್ಟ್. ಇನ್ನು ಲಿಯಾಮ್ ಲಿವಿಂಗ್​ಸ್ಟೋನ್ ಮಧ್ಯಮ ಕ್ರಮಾಂಕದಲ್ಲಿ ಆಲ್​ರೌಂಡರ್ ಆಗಿ ಕಣಕ್ಕಿಳಿಯಲಿದ್ದಾರೆ. ಆದರೀಗ ಭಾರತೀಯ ಪಿಚ್​ನಲ್ಲಿ ರನ್​ಗಳಿಸುವುದಿರಲಿ, ಕ್ರೀಸ್ ಕಚ್ಚಿ ನಿಲ್ಲಲು ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಪರದಾಡುತ್ತಿದ್ದಾರೆ. ಈ ಕಳಪೆ ಪ್ರದರ್ಶನವೇ ಇದೀಗ ಆರ್​ಸಿಬಿ ತಂಡದ ಬಲಿಷ್ಠತೆಯ ಮೇಲೆ ಪ್ರಶ್ನೆಗಳು ಮೂಡುವಂತೆ ಮಾಡಿದೆ.

7 / 8
ಸದ್ಯ ಎರಡು ಪಂದ್ಯಗಳಲ್ಲಿ ವಿಫಲರಾಗಿರುವ ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಮುಂದಿನ ಮೂರು ಪಂದ್ಯಗಳಲ್ಲೂ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ವೇಳೆ ಅಬ್ಬರಿಸುವ ಮೂಲಕ ಆರ್​ಸಿಬಿ ಅಭಿಮಾನಿಗಳ ನಿರೀಕ್ಷೆಗಳನ್ನು ಉತ್ತುಂಗಕ್ಕೇರಿಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಸದ್ಯ ಎರಡು ಪಂದ್ಯಗಳಲ್ಲಿ ವಿಫಲರಾಗಿರುವ ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಮುಂದಿನ ಮೂರು ಪಂದ್ಯಗಳಲ್ಲೂ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ವೇಳೆ ಅಬ್ಬರಿಸುವ ಮೂಲಕ ಆರ್​ಸಿಬಿ ಅಭಿಮಾನಿಗಳ ನಿರೀಕ್ಷೆಗಳನ್ನು ಉತ್ತುಂಗಕ್ಕೇರಿಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ