AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ್ಟ್-ಸ್ಟೋನ್ ಸಪ್ಪೆ: RCB​ಗೆ ಚಿಂತೆ ಶುರು..!

IND vs ENG T20I: ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯಲ್ಲಿ ಆರ್​ಸಿಬಿ ತಂಡದ ಮೂವರು ಆಟಗಾರರು ಕಣಕ್ಕಿಳಿದಿದ್ದಾರೆ. ಈ ಮೂವರು ಆಟಗಾರರು ಜೊತೆಯಾಗಿ ಕಲೆಹಾಕಿದ ಒಟ್ಟು ಸ್ಕೋರ್ 24 ರನ್​​ಗಳು. ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಜೇಕಬ್ ಬೆಥೆಲ್ ಅವರನ್ನು 2ನೇ ಪಂದ್ಯದಲ್ಲಿ ಕಣಕ್ಕಿಳಿಸಿರಲಿಲ್ಲ. ಇನ್ನು ಎರಡೂ ಮ್ಯಾಚ್​ನಲ್ಲೂ ಕಾಣಿಸಿಕೊಂಡ ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಕಲೆಹಾಕಿದ ಒಟ್ಟು ಸ್ಕೋರ್​ ಕೇವಲ 17 ರನ್​ಗಳು ಮಾತ್ರ.

ಝಾಹಿರ್ ಯೂಸುಫ್
|

Updated on: Jan 26, 2025 | 1:57 PM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಐಪಿಎಲ್ ಸೀಸನ್​-18 ಕ್ಕಾಗಿ ಬಲಿಷ್ಠ ಪಡೆಯನ್ನೇ ರೂಪಿಸಿದೆ. ಮೆಗಾ ಹರಾಜಿಗೂ ಮುನ್ನ ಮೂವರನ್ನು ಉಳಿಸಿಕೊಂಡಿದ್ದ ಆರ್​​ಸಿಬಿ, ಆಕ್ಷನ್​​ ಮೂಲಕ 19 ಆಟಗಾರರನ್ನು ಖರೀದಿಸಿದೆ. ಈ ಹತ್ತೊಂಬತ್ತು ಆಟಗಾರರಲ್ಲಿ ಇಂಗ್ಲೆಂಡ್​​ನ ಇಬ್ಬರು ಸ್ಪೋಟಕ ದಾಂಡಿಗರು ಕೂಡ ಇದ್ದಾರೆ. ಹೀಗಾಗಿಯೇ ಈ ಬಾರಿ ಆರ್​ಸಿಬಿ ಪರ ಆಂಗ್ಲರ ಆರ್ಭಟವನ್ನು ನಿರೀಕ್ಷಿಸಲಾಗುತ್ತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಐಪಿಎಲ್ ಸೀಸನ್​-18 ಕ್ಕಾಗಿ ಬಲಿಷ್ಠ ಪಡೆಯನ್ನೇ ರೂಪಿಸಿದೆ. ಮೆಗಾ ಹರಾಜಿಗೂ ಮುನ್ನ ಮೂವರನ್ನು ಉಳಿಸಿಕೊಂಡಿದ್ದ ಆರ್​​ಸಿಬಿ, ಆಕ್ಷನ್​​ ಮೂಲಕ 19 ಆಟಗಾರರನ್ನು ಖರೀದಿಸಿದೆ. ಈ ಹತ್ತೊಂಬತ್ತು ಆಟಗಾರರಲ್ಲಿ ಇಂಗ್ಲೆಂಡ್​​ನ ಇಬ್ಬರು ಸ್ಪೋಟಕ ದಾಂಡಿಗರು ಕೂಡ ಇದ್ದಾರೆ. ಹೀಗಾಗಿಯೇ ಈ ಬಾರಿ ಆರ್​ಸಿಬಿ ಪರ ಆಂಗ್ಲರ ಆರ್ಭಟವನ್ನು ನಿರೀಕ್ಷಿಸಲಾಗುತ್ತಿದೆ.

1 / 8
ಆದರೆ ಐಪಿಎಲ್​ ಆರಂಭಕ್ಕೂ ಮುನ್ನ ಭಾರತೀಯ ಪಿಚ್​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ದಾಂಡಿಗರು ವಿಫಲರಾಗುತ್ತಿದ್ದಾರೆ. ಅದರಲ್ಲೂ ಆರ್​ಸಿಬಿಯ ಕಲ್ಲುಪ್ಪು ಜೋಡಿ ಎಂದೇ ಗುರುತಿಸಿಕೊಂಡಿರುವ ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಮೊದಲೆರಡು ಪಂದ್ಯಗಳಲ್ಲೂ ಅತ್ಯಂತ ಕಳಪೆ ಪ್ರರ್ದಶನ ನೀಡಿದ್ದಾರೆ.

ಆದರೆ ಐಪಿಎಲ್​ ಆರಂಭಕ್ಕೂ ಮುನ್ನ ಭಾರತೀಯ ಪಿಚ್​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಟಿ20 ಸರಣಿಯಲ್ಲಿ ಇಂಗ್ಲೆಂಡ್ ದಾಂಡಿಗರು ವಿಫಲರಾಗುತ್ತಿದ್ದಾರೆ. ಅದರಲ್ಲೂ ಆರ್​ಸಿಬಿಯ ಕಲ್ಲುಪ್ಪು ಜೋಡಿ ಎಂದೇ ಗುರುತಿಸಿಕೊಂಡಿರುವ ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಮೊದಲೆರಡು ಪಂದ್ಯಗಳಲ್ಲೂ ಅತ್ಯಂತ ಕಳಪೆ ಪ್ರರ್ದಶನ ನೀಡಿದ್ದಾರೆ.

2 / 8
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ (0) ಅರ್ಷದೀಪ್ ಸಿಂಗ್ ಎಸೆತದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಅದು ಸಹ ಮೊದಲ ಓವರ್​ನ ಮೂರನೇ ಎಸೆತದಲ್ಲಿ ಎಂಬುದು ವಿಶೇಷ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ (0) ಅರ್ಷದೀಪ್ ಸಿಂಗ್ ಎಸೆತದಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಅದು ಸಹ ಮೊದಲ ಓವರ್​ನ ಮೂರನೇ ಎಸೆತದಲ್ಲಿ ಎಂಬುದು ವಿಶೇಷ.

3 / 8
ಇದೇ ಪಂದ್ಯದಲ್ಲಿ ಲಿಯಾಮ್ ಲಿವಿಂಗ್​ಸ್ಟೋನ್ ಎದುರಿಸಿದ್ದು ಕೇವಲ 2 ಎಸೆತಗಳನ್ನು ಮಾತ್ರ. ಅಷ್ಟರಲ್ಲಿ ಲಿವಿಂಗ್​ಸ್ಟೋನ್​ಗೆ​ (0) ಪೆವಿಲಿಯನ್​ ಹಾದಿ ತೋರಿಸುವಲ್ಲಿ ವರುಣ್ ಚಕ್ರವರ್ತಿ ಯಶಸ್ವಿಯಾಗಿದ್ದರು. ಅಂದರೆ ಆರ್​ಸಿಬಿ ತಂಡದಲ್ಲಿರುವ ಇಬ್ಬರು ಆಟಗಾರರು ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೊನ್ನೆ ಸುತ್ತಿ ನಿರಾಸೆ ಮೂಡಿಸಿದ್ದರು.

ಇದೇ ಪಂದ್ಯದಲ್ಲಿ ಲಿಯಾಮ್ ಲಿವಿಂಗ್​ಸ್ಟೋನ್ ಎದುರಿಸಿದ್ದು ಕೇವಲ 2 ಎಸೆತಗಳನ್ನು ಮಾತ್ರ. ಅಷ್ಟರಲ್ಲಿ ಲಿವಿಂಗ್​ಸ್ಟೋನ್​ಗೆ​ (0) ಪೆವಿಲಿಯನ್​ ಹಾದಿ ತೋರಿಸುವಲ್ಲಿ ವರುಣ್ ಚಕ್ರವರ್ತಿ ಯಶಸ್ವಿಯಾಗಿದ್ದರು. ಅಂದರೆ ಆರ್​ಸಿಬಿ ತಂಡದಲ್ಲಿರುವ ಇಬ್ಬರು ಆಟಗಾರರು ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೊನ್ನೆ ಸುತ್ತಿ ನಿರಾಸೆ ಮೂಡಿಸಿದ್ದರು.

4 / 8
ಇನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲೂ ಉಭಯ ದಾಂಡಿಗರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಈ ಪಂದ್ಯದಲ್ಲೂ ಆರಂಭಿಕನಾಗಿ ಕಣಕ್ಕಿಳಿದ ಸಾಲ್ಟ್ ಅರ್ಷದೀಪ್ ಸಿಂಗ್ ಎಸೆತದಲ್ಲಿ ಒಂದು ಫೋರ್​ ಬಾರಿಸಿ ವಿಕೆಟ್ ಒಪ್ಪಿಸಿದ್ದಾರೆ. ಅದು ಕೂಡ ಮೊದಲ ಓವರ್​ನಲ್ಲೇ ಎಂಬುದು ಉಲ್ಲೇಖಾರ್ಹ.

ಇನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲೂ ಉಭಯ ದಾಂಡಿಗರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಈ ಪಂದ್ಯದಲ್ಲೂ ಆರಂಭಿಕನಾಗಿ ಕಣಕ್ಕಿಳಿದ ಸಾಲ್ಟ್ ಅರ್ಷದೀಪ್ ಸಿಂಗ್ ಎಸೆತದಲ್ಲಿ ಒಂದು ಫೋರ್​ ಬಾರಿಸಿ ವಿಕೆಟ್ ಒಪ್ಪಿಸಿದ್ದಾರೆ. ಅದು ಕೂಡ ಮೊದಲ ಓವರ್​ನಲ್ಲೇ ಎಂಬುದು ಉಲ್ಲೇಖಾರ್ಹ.

5 / 8
ಇದಾದ ಬಳಿಕ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಲಿಯಾಮ್ ಲಿವಿಂಗ್​ಸ್ಟೋನ್ ಕೂಡ ಬಂದ ವೇಗದಲ್ಲೇ ಪೆವಿಲಿಯನ್​ಗೆ ಹಿಂತಿರುಗಿದ್ದಾರೆ. 14 ಎಸೆತಗಳನ್ನು ಎದುರಿಸಿದ ಲಿವಿಂಗ್​ಸ್ಟೋನ್ 13 ರನ್​ಗಳಿಸಿ ಅಕ್ಷರ್ ಪಟೇಲ್​ಗೆ ವಿಕೆಟ್ ಒಪ್ಪಿಸಿದ್ದಾರೆ. ಅಂದರೆ ಟೀಮ್ ಇಂಡಿಯಾ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಆರ್​ಸಿಬಿ ದಾಂಡಿಗರು ಸಂಪೂರ್ಣ ವಿಫಲರಾಗಿರುವುದು ಸ್ಪಷ್ಟ.

ಇದಾದ ಬಳಿಕ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಲಿಯಾಮ್ ಲಿವಿಂಗ್​ಸ್ಟೋನ್ ಕೂಡ ಬಂದ ವೇಗದಲ್ಲೇ ಪೆವಿಲಿಯನ್​ಗೆ ಹಿಂತಿರುಗಿದ್ದಾರೆ. 14 ಎಸೆತಗಳನ್ನು ಎದುರಿಸಿದ ಲಿವಿಂಗ್​ಸ್ಟೋನ್ 13 ರನ್​ಗಳಿಸಿ ಅಕ್ಷರ್ ಪಟೇಲ್​ಗೆ ವಿಕೆಟ್ ಒಪ್ಪಿಸಿದ್ದಾರೆ. ಅಂದರೆ ಟೀಮ್ ಇಂಡಿಯಾ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಆರ್​ಸಿಬಿ ದಾಂಡಿಗರು ಸಂಪೂರ್ಣ ವಿಫಲರಾಗಿರುವುದು ಸ್ಪಷ್ಟ.

6 / 8
ಇಂಟ್ರೆಸ್ಟ್ಟಿಂಗ್ ವಿಷಯ ಎಂದರೆ, ಈ ಬಾರಿ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸಲಿರುವುದು ಫಿಲ್ ಸಾಲ್ಟ್. ಇನ್ನು ಲಿಯಾಮ್ ಲಿವಿಂಗ್​ಸ್ಟೋನ್ ಮಧ್ಯಮ ಕ್ರಮಾಂಕದಲ್ಲಿ ಆಲ್​ರೌಂಡರ್ ಆಗಿ ಕಣಕ್ಕಿಳಿಯಲಿದ್ದಾರೆ. ಆದರೀಗ ಭಾರತೀಯ ಪಿಚ್​ನಲ್ಲಿ ರನ್​ಗಳಿಸುವುದಿರಲಿ, ಕ್ರೀಸ್ ಕಚ್ಚಿ ನಿಲ್ಲಲು ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಪರದಾಡುತ್ತಿದ್ದಾರೆ. ಈ ಕಳಪೆ ಪ್ರದರ್ಶನವೇ ಇದೀಗ ಆರ್​ಸಿಬಿ ತಂಡದ ಬಲಿಷ್ಠತೆಯ ಮೇಲೆ ಪ್ರಶ್ನೆಗಳು ಮೂಡುವಂತೆ ಮಾಡಿದೆ.

ಇಂಟ್ರೆಸ್ಟ್ಟಿಂಗ್ ವಿಷಯ ಎಂದರೆ, ಈ ಬಾರಿ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸಲಿರುವುದು ಫಿಲ್ ಸಾಲ್ಟ್. ಇನ್ನು ಲಿಯಾಮ್ ಲಿವಿಂಗ್​ಸ್ಟೋನ್ ಮಧ್ಯಮ ಕ್ರಮಾಂಕದಲ್ಲಿ ಆಲ್​ರೌಂಡರ್ ಆಗಿ ಕಣಕ್ಕಿಳಿಯಲಿದ್ದಾರೆ. ಆದರೀಗ ಭಾರತೀಯ ಪಿಚ್​ನಲ್ಲಿ ರನ್​ಗಳಿಸುವುದಿರಲಿ, ಕ್ರೀಸ್ ಕಚ್ಚಿ ನಿಲ್ಲಲು ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಪರದಾಡುತ್ತಿದ್ದಾರೆ. ಈ ಕಳಪೆ ಪ್ರದರ್ಶನವೇ ಇದೀಗ ಆರ್​ಸಿಬಿ ತಂಡದ ಬಲಿಷ್ಠತೆಯ ಮೇಲೆ ಪ್ರಶ್ನೆಗಳು ಮೂಡುವಂತೆ ಮಾಡಿದೆ.

7 / 8
ಸದ್ಯ ಎರಡು ಪಂದ್ಯಗಳಲ್ಲಿ ವಿಫಲರಾಗಿರುವ ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಮುಂದಿನ ಮೂರು ಪಂದ್ಯಗಳಲ್ಲೂ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ವೇಳೆ ಅಬ್ಬರಿಸುವ ಮೂಲಕ ಆರ್​ಸಿಬಿ ಅಭಿಮಾನಿಗಳ ನಿರೀಕ್ಷೆಗಳನ್ನು ಉತ್ತುಂಗಕ್ಕೇರಿಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಸದ್ಯ ಎರಡು ಪಂದ್ಯಗಳಲ್ಲಿ ವಿಫಲರಾಗಿರುವ ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಮುಂದಿನ ಮೂರು ಪಂದ್ಯಗಳಲ್ಲೂ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ವೇಳೆ ಅಬ್ಬರಿಸುವ ಮೂಲಕ ಆರ್​ಸಿಬಿ ಅಭಿಮಾನಿಗಳ ನಿರೀಕ್ಷೆಗಳನ್ನು ಉತ್ತುಂಗಕ್ಕೇರಿಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

8 / 8
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ