AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಬಿಸಿಸಿಐ ವಾರ್ಷಿಕ ಒಪ್ಪಂದದಿಂದ ಹೊರಬಿದ್ದ 7 ಆಟಗಾರರು

BCCI Central Contract: ಬಿಸಿಸಿಐ ಪ್ರಕಟಿಸಿರುವ ವಾರ್ಷಿಕ ಗುತ್ತಿಗೆ ಒಪ್ಪಂದ ಪಟ್ಟಿಯಿಂದ 7 ಆಟಗಾರರು ಹೊರಬಿದ್ದಿದ್ದಾರೆ. ಅಂದರೆ ಕಳೆದ ವರ್ಷ ವಾರ್ಷಿಕ ವೇತನ ಪಡೆದ ಈ ಆಟಗಾರರನ್ನು ಈ ಬಾರಿ ಗುತ್ತಿಗೆ ಒಪ್ಪಂದಕ್ಕೆ ಪರಿಗಣಿಸಲಾಗಿಲ್ಲ ಎಂಬುದು ವಿಶೇಷ. ಆ ಆಟಗಾರರು ಯಾರೆಲ್ಲಾ, ಕಳೆದ ಬಾರಿ ಎಷ್ಟು ವೇತನ ಪಡೆದಿದ್ದರು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

TV9 Web
| Edited By: |

Updated on: Feb 29, 2024 | 9:38 AM

Share
ಭಾರತೀಯ ಕ್ರಿಕೆಟ್ ಮಂಡಳಿ ತನ್ನ ಆಟಗಾರರೊಂದಿಗಿನ ವಾರ್ಷಿಕ ಒಪ್ಪಂದವನ್ನು ಪ್ರಕಟಿಸಿದೆ. ಈ ಬಾರಿ ಒಟ್ಟು 30 ಆಟಗಾರರೊಂದಿಗೆ ಬಿಸಿಸಿಐ ಗುತ್ತಿಗೆ ಒಪ್ಪಂದ ಮಾಡಿಕೊಂಡಿದೆ. ಈ ಪಟ್ಟಿಯಲ್ಲಿ 11 ಹೊಸ ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ. ಇದೇ ವೇಳೆ 7 ಆಟಗಾರರು ಒಪ್ಪಂದ ಪಟ್ಟಿಯಿಂದ ಹೊರಬಿದ್ದಿದ್ದಾರೆ.

ಭಾರತೀಯ ಕ್ರಿಕೆಟ್ ಮಂಡಳಿ ತನ್ನ ಆಟಗಾರರೊಂದಿಗಿನ ವಾರ್ಷಿಕ ಒಪ್ಪಂದವನ್ನು ಪ್ರಕಟಿಸಿದೆ. ಈ ಬಾರಿ ಒಟ್ಟು 30 ಆಟಗಾರರೊಂದಿಗೆ ಬಿಸಿಸಿಐ ಗುತ್ತಿಗೆ ಒಪ್ಪಂದ ಮಾಡಿಕೊಂಡಿದೆ. ಈ ಪಟ್ಟಿಯಲ್ಲಿ 11 ಹೊಸ ಆಟಗಾರರು ಕಾಣಿಸಿಕೊಂಡಿರುವುದು ವಿಶೇಷ. ಇದೇ ವೇಳೆ 7 ಆಟಗಾರರು ಒಪ್ಪಂದ ಪಟ್ಟಿಯಿಂದ ಹೊರಬಿದ್ದಿದ್ದಾರೆ.

1 / 9
ಅಂದರೆ 2022-23 ರ ಬಿಸಿಸಿಐ ಗುತ್ತಿಗೆ ಒಪ್ಪಂದ ಪಡೆದಿದ್ದ 7 ಆಟಗಾರರನ್ನು ಈ ಬಾರಿ ಕೈ ಬಿಡಲಾಗಿದೆ. ಆ ಆಟಗಾರರು ಯಾರೆಲ್ಲಾ, ಕಳೆದ ಬಾರಿ ವಾರ್ಷಿಕವಾಗಿ ಅವರು ಪಡೆದಿರುವ ಮೊತ್ತವೆಷ್ಟು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಅಂದರೆ 2022-23 ರ ಬಿಸಿಸಿಐ ಗುತ್ತಿಗೆ ಒಪ್ಪಂದ ಪಡೆದಿದ್ದ 7 ಆಟಗಾರರನ್ನು ಈ ಬಾರಿ ಕೈ ಬಿಡಲಾಗಿದೆ. ಆ ಆಟಗಾರರು ಯಾರೆಲ್ಲಾ, ಕಳೆದ ಬಾರಿ ವಾರ್ಷಿಕವಾಗಿ ಅವರು ಪಡೆದಿರುವ ಮೊತ್ತವೆಷ್ಟು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

2 / 9
ಚೇತೇಶ್ವರ ಪೂಜಾರ: ಭಾರತ ಟೆಸ್ಟ್ ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚೇತೇಶ್ವರ ಪೂಜಾರ ಅವರನ್ನು ಈ ಬಾರಿ ಗುತ್ತಿಗೆ ಒಪ್ಪಂದಕ್ಕೆ ಪರಿಗಣಿಸಲಾಗಿಲ್ಲ. ಇದೇ ಪೂಜಾರ ಕಳೆದ ವರ್ಷ ಬಿ ಗ್ರೇಡ್​ನಲ್ಲಿ ಕಾಣಿಸಿಕೊಂಡಿದ್ದರು. ಆ ಮೂಲಕ ವಾರ್ಷಿಕ 3 ಕೋಟಿ ರೂ. ಸಂಭಾವನೆ ಪಡೆದಿದ್ದರು.

ಚೇತೇಶ್ವರ ಪೂಜಾರ: ಭಾರತ ಟೆಸ್ಟ್ ತಂಡದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚೇತೇಶ್ವರ ಪೂಜಾರ ಅವರನ್ನು ಈ ಬಾರಿ ಗುತ್ತಿಗೆ ಒಪ್ಪಂದಕ್ಕೆ ಪರಿಗಣಿಸಲಾಗಿಲ್ಲ. ಇದೇ ಪೂಜಾರ ಕಳೆದ ವರ್ಷ ಬಿ ಗ್ರೇಡ್​ನಲ್ಲಿ ಕಾಣಿಸಿಕೊಂಡಿದ್ದರು. ಆ ಮೂಲಕ ವಾರ್ಷಿಕ 3 ಕೋಟಿ ರೂ. ಸಂಭಾವನೆ ಪಡೆದಿದ್ದರು.

3 / 9
ಶ್ರೇಯಸ್ ಅಯ್ಯರ್: 2022-23 ರ ಗುತ್ತಿಗೆ ಒಪ್ಪಂದದಲ್ಲಿ ಬಿ ಗ್ರೇಡ್​ನಲ್ಲಿ ಕಾಣಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ 3 ಕೋಟಿ ರೂ. ಸಂಭಾವನೆ ಪಡೆದಿದ್ದರು. ಆದರೆ ಈ ಬಾರಿ ಅವರನ್ನು ಈ ಬಾರಿ ಕೈ ಬಿಡಲಾಗಿದೆ.

ಶ್ರೇಯಸ್ ಅಯ್ಯರ್: 2022-23 ರ ಗುತ್ತಿಗೆ ಒಪ್ಪಂದದಲ್ಲಿ ಬಿ ಗ್ರೇಡ್​ನಲ್ಲಿ ಕಾಣಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ 3 ಕೋಟಿ ರೂ. ಸಂಭಾವನೆ ಪಡೆದಿದ್ದರು. ಆದರೆ ಈ ಬಾರಿ ಅವರನ್ನು ಈ ಬಾರಿ ಕೈ ಬಿಡಲಾಗಿದೆ.

4 / 9
ಉಮೇಶ್ ಯಾದವ್: ಕಳೆದ ವರ್ಷ ಉಮೇಶ್ ಯಾದವ್ ಅವರು ಸಿ ಗ್ರೇಡ್ ಒಪ್ಪಂದ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಅದರಂತೆ ವಾರ್ಷಿಕ 1 ಕೋಟಿ ರೂ. ಸಂಭಾವನೆ ಪಡೆದಿದ್ದ ಹಿರಿಯ ವೇಗಿಯನ್ನು ಈ ಬಾರಿ ಬಿಸಿಸಿಐ ಕೈ ಬಿಟ್ಟಿದೆ.

ಉಮೇಶ್ ಯಾದವ್: ಕಳೆದ ವರ್ಷ ಉಮೇಶ್ ಯಾದವ್ ಅವರು ಸಿ ಗ್ರೇಡ್ ಒಪ್ಪಂದ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಅದರಂತೆ ವಾರ್ಷಿಕ 1 ಕೋಟಿ ರೂ. ಸಂಭಾವನೆ ಪಡೆದಿದ್ದ ಹಿರಿಯ ವೇಗಿಯನ್ನು ಈ ಬಾರಿ ಬಿಸಿಸಿಐ ಕೈ ಬಿಟ್ಟಿದೆ.

5 / 9
ಇಶಾನ್ ಕಿಶನ್: ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಇಶಾನ್ ಕಿಶನ್ ಕಳೆದ ವರ್ಷ 1 ಕೋಟಿ ಸಂಭಾವನೆಯ ಗ್ರೇಡ್ ಸಿ ಒಪ್ಪಂದ ಪಟ್ಟಿಯಲ್ಲಿದ್ದರು. ಆದರೆ ಈ ಬಾರಿ ಅವರನ್ನು ಕೇಂದ್ರೀಯ ಗುತ್ತಿಗೆ ಒಪ್ಪಂದಕ್ಕೆ ಪರಿಗಣಿಸಲಾಗಿಲ್ಲ.

ಇಶಾನ್ ಕಿಶನ್: ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಇಶಾನ್ ಕಿಶನ್ ಕಳೆದ ವರ್ಷ 1 ಕೋಟಿ ಸಂಭಾವನೆಯ ಗ್ರೇಡ್ ಸಿ ಒಪ್ಪಂದ ಪಟ್ಟಿಯಲ್ಲಿದ್ದರು. ಆದರೆ ಈ ಬಾರಿ ಅವರನ್ನು ಕೇಂದ್ರೀಯ ಗುತ್ತಿಗೆ ಒಪ್ಪಂದಕ್ಕೆ ಪರಿಗಣಿಸಲಾಗಿಲ್ಲ.

6 / 9
ಶಿಖರ್ ಧವನ್: ಕಳೆದ ವರ್ಷ ಗ್ರೇಡ್ ಸಿ (1 ಕೋಟಿ ರೂ.) ಒಪ್ಪಂದ ಪಟ್ಟಿಯಲ್ಲಿದ್ದ ಶಿಖರ್ ಧವನ್ ಅವರನ್ನೂ ಸಹ ಈ ಬಾರಿ ಕೈ ಬಿಡಲಾಗಿದೆ. ಇದರೊಂದಿಗೆ ಟೀಮ್ ಇಂಡಿಯಾದಲ್ಲಿ ಧವನ್ ಅವರ ಯುಗಾಂತ್ಯವಾಗಿದೆ ಎಂದೇ ಹೇಳಬಹುದು.

ಶಿಖರ್ ಧವನ್: ಕಳೆದ ವರ್ಷ ಗ್ರೇಡ್ ಸಿ (1 ಕೋಟಿ ರೂ.) ಒಪ್ಪಂದ ಪಟ್ಟಿಯಲ್ಲಿದ್ದ ಶಿಖರ್ ಧವನ್ ಅವರನ್ನೂ ಸಹ ಈ ಬಾರಿ ಕೈ ಬಿಡಲಾಗಿದೆ. ಇದರೊಂದಿಗೆ ಟೀಮ್ ಇಂಡಿಯಾದಲ್ಲಿ ಧವನ್ ಅವರ ಯುಗಾಂತ್ಯವಾಗಿದೆ ಎಂದೇ ಹೇಳಬಹುದು.

7 / 9
ದೀಪಕ್ ಹೂಡಾ: 2022-23 ರ ಒಪ್ಪಂದ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಲ್​ರೌಂಡರ್ ದೀಪಕ್ ಹೂಡಾ ಗ್ರೇಡ್-ಸಿ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಅದರಂತೆ 1 ಕೋಟಿ ರೂ. ಸಂಭಾವನೆ ಪಡೆದಿದ್ದ ಹೂಡಾ ಅವರನ್ನು ಈ ಬಾರಿ ಕೈ ಬಿಡಲಾಗಿದೆ.

ದೀಪಕ್ ಹೂಡಾ: 2022-23 ರ ಒಪ್ಪಂದ ಪಟ್ಟಿಯಲ್ಲಿ ಟೀಮ್ ಇಂಡಿಯಾ ಆಲ್​ರೌಂಡರ್ ದೀಪಕ್ ಹೂಡಾ ಗ್ರೇಡ್-ಸಿ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಅದರಂತೆ 1 ಕೋಟಿ ರೂ. ಸಂಭಾವನೆ ಪಡೆದಿದ್ದ ಹೂಡಾ ಅವರನ್ನು ಈ ಬಾರಿ ಕೈ ಬಿಡಲಾಗಿದೆ.

8 / 9
ಯುಜ್ವೇಂದ್ರ ಚಹಲ್: ಕಳೆದ ವರ್ಷ 1 ಕೋಟಿ ರೂ. ಸಂಭಾವನೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಟೀಮ್ ಇಂಡಿಯಾ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಈ ಬಾರಿ ಗ್ರೇಡ್ ಸಿ ಒಪ್ಪಂದಕ್ಕೂ ಪರಿಗಣಿಸಲಾಗಿಲ್ಲ ಎಂಬುದೇ ಅಚ್ಚರಿ.

ಯುಜ್ವೇಂದ್ರ ಚಹಲ್: ಕಳೆದ ವರ್ಷ 1 ಕೋಟಿ ರೂ. ಸಂಭಾವನೆ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಟೀಮ್ ಇಂಡಿಯಾ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಈ ಬಾರಿ ಗ್ರೇಡ್ ಸಿ ಒಪ್ಪಂದಕ್ಕೂ ಪರಿಗಣಿಸಲಾಗಿಲ್ಲ ಎಂಬುದೇ ಅಚ್ಚರಿ.

9 / 9
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ