AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಿಂದ 7 ಆಟಗಾರರು ಔಟ್..!

India Squad for T20 World Cup 2026: ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ.ಇನ್ನು ಕಳೆದ ಬಾರಿ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆದಿದ್ದ 7 ಆಟಗಾರರು ಈ ಬಾರಿ ತಂಡದಲ್ಲಿ ಕಾಣಿಸಿಕೊಂಡಿಲ್ಲ.

ಝಾಹಿರ್ ಯೂಸುಫ್
|

Updated on: Dec 21, 2025 | 7:24 AM

Share
T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ 7 ಆಟಗಾರರು ಕಾಣಿಸಿಕೊಂಡಿಲ್ಲ. ಅಂದರೆ 2024 ರಲ್ಲಿ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಏಳು ಪ್ಲೇಯರ್ಸ್ ಈ ಬಾರಿ ತಂಡದಲ್ಲಿಲ್ಲ. ಹೀಗೆ ಭಾರತ ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿರುವ ಆಟಗಾರರು ಯಾರೆಂದರೆ...

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ 7 ಆಟಗಾರರು ಕಾಣಿಸಿಕೊಂಡಿಲ್ಲ. ಅಂದರೆ 2024 ರಲ್ಲಿ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಏಳು ಪ್ಲೇಯರ್ಸ್ ಈ ಬಾರಿ ತಂಡದಲ್ಲಿಲ್ಲ. ಹೀಗೆ ಭಾರತ ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿರುವ ಆಟಗಾರರು ಯಾರೆಂದರೆ...

1 / 10
ಯಶಸ್ವಿ ಜೈಸ್ವಾಲ್: 2024 ಟಿ20 ವಿಶ್ವಕಪ್​ ತಂಡದಲ್ಲಿ ಹೆಚ್ಚುವರಿ ಆರಂಭಿಕ ದಾಂಡಿಗನಾಗಿ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದರು. ಎರಡು ವರ್ಷಗಳ ಹಿಂದೆ 15 ಸದಸ್ಯರುಗಳ ಬಳಗದಲ್ಲಿದ್ದ ಜೈಸ್ವಾಲ್​ ಮುಂಬರುವ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿಲ್ಲ.

ಯಶಸ್ವಿ ಜೈಸ್ವಾಲ್: 2024 ಟಿ20 ವಿಶ್ವಕಪ್​ ತಂಡದಲ್ಲಿ ಹೆಚ್ಚುವರಿ ಆರಂಭಿಕ ದಾಂಡಿಗನಾಗಿ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದರು. ಎರಡು ವರ್ಷಗಳ ಹಿಂದೆ 15 ಸದಸ್ಯರುಗಳ ಬಳಗದಲ್ಲಿದ್ದ ಜೈಸ್ವಾಲ್​ ಮುಂಬರುವ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿಲ್ಲ.

2 / 10
ರಿಷಭ್ ಪಂತ್: ಕಳೆದ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿದ್ದ  ರಿಷಭ್ ಪಂತ್ ಅವರನ್ನು ಸಹ ಈ ಬಾರಿ ಕೈ ಬಿಡಲಾಗಿದೆ. ಅವರ ಬದಲಿಗೆ ಈ ಬಾರಿ ಭಾರತ ತಂಡದಲ್ಲಿ ವಿಕೆಟ್ ಕೀಪರ್​​ಗಳಾಗಿ ಆಯ್ಕೆಯಾಗಿರುವುದು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್.

ರಿಷಭ್ ಪಂತ್: ಕಳೆದ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿದ್ದ  ರಿಷಭ್ ಪಂತ್ ಅವರನ್ನು ಸಹ ಈ ಬಾರಿ ಕೈ ಬಿಡಲಾಗಿದೆ. ಅವರ ಬದಲಿಗೆ ಈ ಬಾರಿ ಭಾರತ ತಂಡದಲ್ಲಿ ವಿಕೆಟ್ ಕೀಪರ್​​ಗಳಾಗಿ ಆಯ್ಕೆಯಾಗಿರುವುದು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್.

3 / 10
ಯುಜ್ವೇಂದ್ರ ಚಹಲ್: ಟಿ20 ವಿಶ್ವಕಪ್ 2024 ರಲ್ಲಿ ಭಾರತ ತಂಡದಲ್ಲಿ ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಲ್ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರಿಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸಿರಲಿಲ್ಲ. ಇದೀಗ ಮುಂಬರುವ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಚಹಲ್​ಗೆ ಸ್ಥಾನ ನೀಡಲಾಗಿಲ್ಲ.

ಯುಜ್ವೇಂದ್ರ ಚಹಲ್: ಟಿ20 ವಿಶ್ವಕಪ್ 2024 ರಲ್ಲಿ ಭಾರತ ತಂಡದಲ್ಲಿ ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಲ್ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರಿಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸಿರಲಿಲ್ಲ. ಇದೀಗ ಮುಂಬರುವ ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಲಾದ ತಂಡದಲ್ಲಿ ಚಹಲ್​ಗೆ ಸ್ಥಾನ ನೀಡಲಾಗಿಲ್ಲ.

4 / 10
ಮೊಹಮ್ಮದ್ ಸಿರಾಜ್: 2024ರ ಟಿ20 ವಿಶ್ವಕಪ್​ನಲ್ಲಿ ಜಸ್​ಪ್ರೀತ್ ಬುಮ್ರಾ ಜೊತೆಗೂಡಿ ಮೊಹಮ್ಮದ್ ಸಿರಾಜ್ ಕೂಡ ದಾಳಿ ಸಂಘಟಿಸಿದ್ದರು. ಆದರೆ ಈ ಬಾರಿ ಟೀಮ್ ಇಂಡಿಯಾದ 15 ಸದಸ್ಯರುಗಳ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಿರಾಜ್ ವಿಫಲರಾಗಿದ್ದಾರೆ.

ಮೊಹಮ್ಮದ್ ಸಿರಾಜ್: 2024ರ ಟಿ20 ವಿಶ್ವಕಪ್​ನಲ್ಲಿ ಜಸ್​ಪ್ರೀತ್ ಬುಮ್ರಾ ಜೊತೆಗೂಡಿ ಮೊಹಮ್ಮದ್ ಸಿರಾಜ್ ಕೂಡ ದಾಳಿ ಸಂಘಟಿಸಿದ್ದರು. ಆದರೆ ಈ ಬಾರಿ ಟೀಮ್ ಇಂಡಿಯಾದ 15 ಸದಸ್ಯರುಗಳ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಿರಾಜ್ ವಿಫಲರಾಗಿದ್ದಾರೆ.

5 / 10
ರೋಹಿತ್ ಶರ್ಮಾ: ಟಿ20 ವಿಶ್ವಕಪ್ 2024 ರಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ಹಿಟ್​ಮ್ಯಾನ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿತ್ತು. ಭಾರತ ತಂಡವು ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಈ ಬಾರಿಯ ಭಾರತ ತಂಡದಲ್ಲಿ ಅವರು ಕಾಣಿಸಿಕೊಂಡಿಲ್ಲ.

ರೋಹಿತ್ ಶರ್ಮಾ: ಟಿ20 ವಿಶ್ವಕಪ್ 2024 ರಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ಹಿಟ್​ಮ್ಯಾನ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿತ್ತು. ಭಾರತ ತಂಡವು ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಹೀಗಾಗಿ ಈ ಬಾರಿಯ ಭಾರತ ತಂಡದಲ್ಲಿ ಅವರು ಕಾಣಿಸಿಕೊಂಡಿಲ್ಲ.

6 / 10
ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮತ್ತೋರ್ವ ಆಟಗಾರ ವಿರಾಟ್ ಕೊಹ್ಲಿ. 2024 ರ ಟಿ20 ವಿಶ್ವಕಪ್​ ಫೈನಲ್ ಪಂದ್ಯದೊಂದಿಗೆ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರು ಸಹ ಪ್ರಸ್ತುತ ಟಿ20 ತಂಡದಲ್ಲಿ ಕಾಣಿಸಿಕೊಂಡಿಲ್ಲ.

ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮತ್ತೋರ್ವ ಆಟಗಾರ ವಿರಾಟ್ ಕೊಹ್ಲಿ. 2024 ರ ಟಿ20 ವಿಶ್ವಕಪ್​ ಫೈನಲ್ ಪಂದ್ಯದೊಂದಿಗೆ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರು ಸಹ ಪ್ರಸ್ತುತ ಟಿ20 ತಂಡದಲ್ಲಿ ಕಾಣಿಸಿಕೊಂಡಿಲ್ಲ.

7 / 10
ರವೀಂದ್ರ ಜಡೇಜಾ: ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಬಳಿಕ ಟಿ20 ವಿಶ್ವಕಪ್ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮೂರನೇ ಆಟಗಾರ ರವೀಂದ್ರ ಜಡೇಜಾ. 2024 ರಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಜಡ್ಡು ಸದ್ಯ ಟೆಸ್ಟ್ ಹಾಗೂ ಏಕದಿನ ತಂಡಗಳಲ್ಲಿ ಮಾತ್ರ ಮುಂದುವರೆದಿದ್ದಾರೆ. ಹೀಗಾಗಿ ಅವರು ಸಹ 2026ರ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿಲ್ಲ.

ರವೀಂದ್ರ ಜಡೇಜಾ: ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಬಳಿಕ ಟಿ20 ವಿಶ್ವಕಪ್ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮೂರನೇ ಆಟಗಾರ ರವೀಂದ್ರ ಜಡೇಜಾ. 2024 ರಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಜಡ್ಡು ಸದ್ಯ ಟೆಸ್ಟ್ ಹಾಗೂ ಏಕದಿನ ತಂಡಗಳಲ್ಲಿ ಮಾತ್ರ ಮುಂದುವರೆದಿದ್ದಾರೆ. ಹೀಗಾಗಿ ಅವರು ಸಹ 2026ರ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿಲ್ಲ.

8 / 10
2026ರ ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

2026ರ ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

9 / 10
2024ರ ಟಿ20 ವಿಶ್ವಕಪ್​ನ ಭಾರತ​ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

2024ರ ಟಿ20 ವಿಶ್ವಕಪ್​ನ ಭಾರತ​ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

10 / 10
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ