AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಿಂದ 7 ಆಟಗಾರರು ಔಟ್

India vs West Indies Test: ಏಷ್ಯಾಕಪ್ ಮುಕ್ತಾಯದ ಬೆನ್ನಲ್ಲೇ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಅಕ್ಟೋಬರ್ 2 ರಿಂದ ಶುರುವಾಗಲಿರುವ ಈ ಸರಣಿಗಾಗಿ 15 ಸದಸ್ಯರುಗಳ ಭಾರತ ಟೆಸ್ಟ್ ತಂಡವನ್ನು ಘೋಷಿಸಲಾಗಿದೆ. ಈ ಬಾರಿ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಕೆಲ ಆಟಗಾರರು ವಿಫಲರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 25, 2025 | 2:30 PM

Share
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಘೋಷಿಸಲಾಗಿದೆ. ಶುಭ್​ಮನ್ ಗಿಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಈ ತಂಡದಲ್ಲಿ 7 ಆಟಗಾರರಿಗೆ ಸ್ಥಾನ ಲಭಿಸಿಲ್ಲ. ಅಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದ ಏಳು ಆಟಗಾರರನ್ನು ಈ ಬಾರಿ ಕೈ ಬಿಡಲಾಗಿದೆ. ಅದರಂತೆ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಘೋಷಿಸಲಾಗಿದೆ. ಶುಭ್​ಮನ್ ಗಿಲ್ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಈ ತಂಡದಲ್ಲಿ 7 ಆಟಗಾರರಿಗೆ ಸ್ಥಾನ ಲಭಿಸಿಲ್ಲ. ಅಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದ ಏಳು ಆಟಗಾರರನ್ನು ಈ ಬಾರಿ ಕೈ ಬಿಡಲಾಗಿದೆ. ಅದರಂತೆ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 9
ರಿಷಭ್ ಪಂತ್: ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್ ಕಾಣಿಸಿಕೊಂಡಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಪಂತ್ ಅಲಭ್ಯರಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಗಾಯದ ಸಮಸ್ಯೆ. ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳೆ ಗಾಯಗೊಂಡಿರುವ ಪಂತ್ ಇನ್ನೂ ಸಹ ಸಂಪೂರ್ಣ ಗುಣಮುಖರಾಗಿಲ್ಲ. ಹೀಗಾಗಿ ಮುಂಬರುವ ಸರಣಿಯಿಂದ ಹೊರಗುಳಿದಿದ್ದಾರೆ.

ರಿಷಭ್ ಪಂತ್: ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್ ಕಾಣಿಸಿಕೊಂಡಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಪಂತ್ ಅಲಭ್ಯರಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಗಾಯದ ಸಮಸ್ಯೆ. ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳೆ ಗಾಯಗೊಂಡಿರುವ ಪಂತ್ ಇನ್ನೂ ಸಹ ಸಂಪೂರ್ಣ ಗುಣಮುಖರಾಗಿಲ್ಲ. ಹೀಗಾಗಿ ಮುಂಬರುವ ಸರಣಿಯಿಂದ ಹೊರಗುಳಿದಿದ್ದಾರೆ.

2 / 9
ಕರುಣ್ ನಾಯರ್: ಆಂಗ್ಲರ ವಿರುದ್ಧದ ಸರಣಿಯಲ್ಲಿ 4 ಮ್ಯಾಚ್ ಆಡಿದ್ದ ಕರುಣ್ ನಾಯರ್​ಗೆ ಈ ಬಾರಿ ಅವಕಾಶ ಸಿಕ್ಕಿಲ್ಲ. ಏಕೆಂದರೆ ಇಂಗ್ಲೆಂಡ್ ವಿರುದ್ಧ 8 ಇನಿಂಗ್ಸ್ ಆಡಿದ್ದ ಕರುಣ್ ಕಲೆಹಾಕಿದ್ದು ಕೇವಲ 205 ರನ್​ಗಳು ಮಾತ್ರ. ಹೀಗಾಗಿ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ.

ಕರುಣ್ ನಾಯರ್: ಆಂಗ್ಲರ ವಿರುದ್ಧದ ಸರಣಿಯಲ್ಲಿ 4 ಮ್ಯಾಚ್ ಆಡಿದ್ದ ಕರುಣ್ ನಾಯರ್​ಗೆ ಈ ಬಾರಿ ಅವಕಾಶ ಸಿಕ್ಕಿಲ್ಲ. ಏಕೆಂದರೆ ಇಂಗ್ಲೆಂಡ್ ವಿರುದ್ಧ 8 ಇನಿಂಗ್ಸ್ ಆಡಿದ್ದ ಕರುಣ್ ಕಲೆಹಾಕಿದ್ದು ಕೇವಲ 205 ರನ್​ಗಳು ಮಾತ್ರ. ಹೀಗಾಗಿ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ.

3 / 9
ಶಾರ್ದೂಲ್ ಠಾಕೂರ್: ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಶಾರ್ದೂಲ್ ಠಾಕೂರ್ ಆಲ್​ರೌಂಡರ್ ಆಗಿ ಕಣಕ್ಕಿಳಿದಿದ್ದರು. ಇದಾಗ್ಯೂ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಶಾರ್ದೂಲ್ ಅವರನ್ನು ಹೊರಗಿಡಲಾಗಿದೆ.

ಶಾರ್ದೂಲ್ ಠಾಕೂರ್: ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಶಾರ್ದೂಲ್ ಠಾಕೂರ್ ಆಲ್​ರೌಂಡರ್ ಆಗಿ ಕಣಕ್ಕಿಳಿದಿದ್ದರು. ಇದಾಗ್ಯೂ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಶಾರ್ದೂಲ್ ಅವರನ್ನು ಹೊರಗಿಡಲಾಗಿದೆ.

4 / 9
ಅಭಿಮನ್ಯು ಈಶ್ವರನ್: ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಟೀಮ್ ಇಂಡಿಯಾದ ಬ್ಯಾಕಪ್ ಓಪನರ್ ಆಗಿ ಕಾಣಿಸಿಕೊಂಡಿದ್ದ ಅಭಿಮನ್ಯು ಈಶ್ವರನ್ ಅವರನ್ನು ಸಹ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ.

ಅಭಿಮನ್ಯು ಈಶ್ವರನ್: ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯಲ್ಲಿ ಟೀಮ್ ಇಂಡಿಯಾದ ಬ್ಯಾಕಪ್ ಓಪನರ್ ಆಗಿ ಕಾಣಿಸಿಕೊಂಡಿದ್ದ ಅಭಿಮನ್ಯು ಈಶ್ವರನ್ ಅವರನ್ನು ಸಹ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ.

5 / 9
ಆಕಾಶ್ ದೀಪ್: ಆಂಗ್ಲರ ವಿರುದ್ಧದ ಸರಣಿಯಲ್ಲಿ ಆಕಾಶ್ ದೀಪ್ 3 ಪಂದ್ಯಗಳನ್ನಾಡಿದ್ದರು. ಈ ವೇಳೆ ಉತ್ತಮ ದಾಳಿ ಸಂಘಟಿಸಿದ್ದ ಆಕಾಶ್ ಒಟ್ಟು 13 ವಿಕೆಟ್ ಕಬಳಿಸಿದ್ದರು. ಇದಾಗ್ಯೂ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಆಕಾಶ್ ದೀಪ್ ಅವರನ್ನು ಆಯ್ಕೆ ಮಾಡದಿರುವುದು ಅಚ್ಚರಿ.

ಆಕಾಶ್ ದೀಪ್: ಆಂಗ್ಲರ ವಿರುದ್ಧದ ಸರಣಿಯಲ್ಲಿ ಆಕಾಶ್ ದೀಪ್ 3 ಪಂದ್ಯಗಳನ್ನಾಡಿದ್ದರು. ಈ ವೇಳೆ ಉತ್ತಮ ದಾಳಿ ಸಂಘಟಿಸಿದ್ದ ಆಕಾಶ್ ಒಟ್ಟು 13 ವಿಕೆಟ್ ಕಬಳಿಸಿದ್ದರು. ಇದಾಗ್ಯೂ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಆಕಾಶ್ ದೀಪ್ ಅವರನ್ನು ಆಯ್ಕೆ ಮಾಡದಿರುವುದು ಅಚ್ಚರಿ.

6 / 9
ಅನ್ಶುಲ್ ಕಂಬೋಜ್: ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಅರ್ಷದೀಪ್ ಸಿಂಗ್ ಗಾಯಗೊಂಡ ಕಾರಣ ಯುವ ವೇಗಿ ಅನ್ಶುಲ್ ಕಂಬೋಜ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಲಾಗಿತ್ತು. ಅದರಂತೆ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕಂಬೋಜ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ.

ಅನ್ಶುಲ್ ಕಂಬೋಜ್: ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಅರ್ಷದೀಪ್ ಸಿಂಗ್ ಗಾಯಗೊಂಡ ಕಾರಣ ಯುವ ವೇಗಿ ಅನ್ಶುಲ್ ಕಂಬೋಜ್ ಅವರನ್ನು ಬದಲಿಯಾಗಿ ಆಯ್ಕೆ ಮಾಡಲಾಗಿತ್ತು. ಅದರಂತೆ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕಂಬೋಜ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ.

7 / 9
ಅರ್ಷದೀಪ್ ಸಿಂಗ್: ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಹೆಚ್ಚುವರಿ ವೇಗಿಯಾಗಿ ಕಾಣಿಸಿಕೊಂಡಿದ್ದ ಅರ್ಷದೀಪ್ ಸಿಂಗ್ ಅವರನ್ನು ಈ ಬಾರಿ ಆಯ್ಕೆ ಮಾಡಿಲ್ಲ. ಅಂದರೆ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಮೂವರು ವೇಗಿಗಳೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದೆ. ಹೀಗಾಗಿ ಅರ್ಷದೀಪ್ ಸಿಂಗ್​ಗೆ ಸ್ಥಾನ ಲಭಿಸಿಲ್ಲ.

ಅರ್ಷದೀಪ್ ಸಿಂಗ್: ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಹೆಚ್ಚುವರಿ ವೇಗಿಯಾಗಿ ಕಾಣಿಸಿಕೊಂಡಿದ್ದ ಅರ್ಷದೀಪ್ ಸಿಂಗ್ ಅವರನ್ನು ಈ ಬಾರಿ ಆಯ್ಕೆ ಮಾಡಿಲ್ಲ. ಅಂದರೆ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಮೂವರು ವೇಗಿಗಳೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದೆ. ಹೀಗಾಗಿ ಅರ್ಷದೀಪ್ ಸಿಂಗ್​ಗೆ ಸ್ಥಾನ ಲಭಿಸಿಲ್ಲ.

8 / 9
ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

9 / 9
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!